Headlines

ಶಿವಮೊಗ್ಗದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ : ನಗರದಾದ್ಯಂತ ಬಿಗಿ ಪೊಲೀಸ್ ಭದ್ರತೆ

ಶಿವಮೊಗ್ಗ ನಗರದಲ್ಲಿ ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ನಡೆಯಲಿದೆ. ಹೀಗಾಗಿ ನಗರದ್ಯಾಂತ ಗಣಪತಿ ಮರೆವಣಿಗೆ ನಡೆಯುತ್ತಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಇನ್ನು ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಗಾಂಧಿ ಬಜಾರ್‌ ರಸ್ತೆ ಸಂಪೂರ್ಣ ಕೇಸರಿ ಮಯವಾಗಿದೆ. ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆಪ್ಟೆಂಬರ್ 09 ರಂದು ಮೆರವಣಿಗೆ ಮೂಲಕ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಿದ್ದು ಸಾರ್ವಜನಿಕ ಹಿತದೃಷ್ಟಿ ಹಾಗೂ ವಾಹನಗಳ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಕೆಳಕಂಡಂತೆ…

Read More

ಬಿಜೆಪಿ ಪಕ್ಷದ ದೃಷ್ಟಿಯಲ್ಲಿ ದಲಿತರು ಹಿಂದೂಗಳಲ್ಲವೇ : ಕಿಮ್ಮನೆ ರತ್ನಾಕರ್ ಪ್ರಶ್ನೆ

ತೀರ್ಥಹಳ್ಳಿ : ಕಾಂಗ್ರೆಸ್ ಪಕ್ಷ ಎಲ್ಲಾ ಸಮುದಾಯದವರ ಜೊತೆ ಒಟ್ಟಾಗಿ ಹೋಗುತ್ತೇವೆ ಎಂದು ಹೇಳುವ ಕಾರಣಕ್ಕೆ ಜನ ನಂಬದೆ ಇರಬಹುದು ಆದರೆ ಬಿಜೆಪಿ ಪಕ್ಷ ನಮಗೆ ಆ ಸಮುದಾಯದ ಮತವೇ ಬೇಡ ಎಂದು ಹೇಳುತ್ತಾರೆ ಇದರಿಂದಾಗಿ ಕೋಮು ಗಲಭೆ ಹೆಚ್ಚುವುದಿಲ್ಲವೇ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಪ್ರಶ್ನಿಸಿದ್ದಾರೆ. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಪಕ್ಷದವರು ಹೋರಾಟ ಮಾಡುತ್ತಾರೆ ಈದ್ಗಾ ಮೈದಾನದಲ್ಲಿ ಗಣಪತಿ ವಿಚಾರಕ್ಕೆ ಹೋರಾಟ ಮಾಡ್ತಾರೆ ಅದರ ಅವಶ್ಯಕತೆ…

Read More

ಸೆ.11,12ಕ್ಕೆ ಕೋಣಂದೂರಿನ ಬೃಹನ್ಮಠದ ಸಮುದಾಯ ಭವನ ಲೋಕಾರ್ಪಣೆ ಮತ್ತು ಗುರುವಂದನಾ ಕಾರ್ಯಕ್ರಮ

ರಿಪ್ಪನ್‌ಪೇಟೆ;-ಕೋಣಂದೂರು ಬೃಹನ್ಮಠದಲ್ಲಿ ಸುಮಾರು 3 ಕೋಟಿ ರೂ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗಿರುವ ನೂತನ ಶ್ರೀಶಿವಲಿಂಗೇಶ್ವರ ಸಮುದಾಯ ಭವನ ಲೋಕಾರ್ಪಣಿ ಮತ್ತು ಶ್ರೀಶೈಲ ಜಗದ್ಗುರುಗಳ ಪಟ್ಟಾಧಿಕಾರದ ದ್ವಾದಶ ಪೀಠಾರೋಹಣ ಮಹೋತ್ಸವ ಹಾಗೂ ಸನ್ನಿಧಿಯವರ ಐವತ್ತನೇ ವರ್ಷದ ಅಂಗವಾಗಿ ತುಲಾಭಾರ ಮಹೋತ್ಸವ ಮತ್ತು ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆಪ್ಟೆಂಬರ್ ೧೧ ಮತ್ತು ೧೨ ರಂದು ಅಯೋಜಿಸಲಾಗಿದೆ ಎಂದು ಕೋಣಂದೂರು ಬೃಹನ್ಮಠದ ಶ್ರೀ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ  ಹೇಳಿದರು. ರಿಪ್ಪನ್‌ಪೇಟೆಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೆ.11 ರಂದು ಸಂಜೆ ಶ್ರೀಶಿವಲಿಂಗೇಶ್ವರ…

Read More

ಹಡ್ಲುಬೈಲು ಮನೆ ತೆರವು ಪ್ರಕರಣ : ಅಧಿಕಾರಿಗಳ ದುಂಡಾವರ್ತನೆ ನಡೆಗೆ – ಕಿಮ್ಮನೆ ರತ್ನಾಕರ್ ನೇತ್ರತ್ವದಲ್ಲಿ ಪಾದಯಾತ್ರೆ

ರಿಪ್ಪನ್ ಪೇಟೆ ; ಹೊಸನಗರ ತಾಲೂಕಿನ ಹುಂಚ ಹೋಬಳಿಯ ಹಡ್ಲುಬೈಲಿನ ಜೀವನ್ ಎಂಬವರ ಮನೆ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಅಧಿಕಾರಿಗಳ ದುಂಡಾವರ್ತನೆಯನ್ನು ಖಂಡಿಸಿ ಮಂಗಳವಾರ ಕೆಪಿಸಿಸಿ ವಕ್ತಾರ ಹಾಗೂ  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಮ್ಮ ನೂರಾರು  ಬೆಂಬಲಿಗರೊಂದಿಗೆ ಮನೆ  ನೆಲಸಮಗೊಂಡ ಜಾಗದಿಂದ  ಹೊಂಬುಜ ನಾಡ ಕಚೇರಿಯವರೆಗೆ ಸುಮಾರು 7ಕಿಲೋ ಮೀಟರ್ (ನಡಿಗೆ ) ಪಾದಯಾತ್ರೆ ನಡೆಸಿದರು.    ತದ ನಂತರ ನಾಡ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅವರು  ರಾಜ್ಯ ಸರ್ಕಾರ ನಿವೇಶನ…

Read More

ಹಾದಿಗಲ್ಲು ಬಳಿ ರಸ್ತೆ ಅಪಘಾತ – ಮಾನವೀಯತೆ ಮೆರೆದ ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ : ತಾಲೂಕಿನ ಹಾದಿಗಲ್ಲು ಬಳಿ ಅಪಘಾತವೊಂದು ಸಂಭವಿಸಿದ್ದು ಇದೆ ಮಾರ್ಗದಲ್ಲಿ ಬರುತ್ತಿದ್ದ ಗೃಹಸಚಿವ ಆರಗ ಜ್ಞಾನೇಂದ್ರರವರು ಮಾನವೀಯತೆ ಮೆರೆದ ಘಟನೆ ಭಾನುವಾರ ರಾತ್ರಿ ನೆಡೆದಿದೆ. ಹಾದಿಗಲ್ಲಿನ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಕರೆಂಟ್ ಕಂಬಕ್ಕೆ ಗುದ್ದಿ ಪಲ್ಟಿಯಾಗಿತ್ತು. ಅದೇ ಮಾರ್ಗದಲ್ಲಿ ಬಂದ ಗೃಹಸಚಿವರು ಈ ಸನ್ನಿವೇಶ ನೋಡಿದ ಕೂಡಲೇ ಗಾಡಿಯಿಂದ ಇಳಿದು ಅಪಘಾತಕ್ಕೀಡಾದ ಕಾರಿನ ಮೇಲೆ ಕರೆಂಟ್ ವೈರ್ ಬಿದ್ದಿರುವುದನ್ನ ಗಮನಿಸಿ ಮೊದಲು ಕಾರಿನಲ್ಲಿದ್ದವರನ್ನು ಹೊರಗಡೆ ಕರೆ ತರುವಂತೆ ತಮ್ಮ ಸಿಬ್ಬಂದಿಗೆ ಸೂಚಿಸಿದರು.  ನಂತರ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಎಂ.ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ ಭರ್ಜರಿ ಗೆಲುವು

ರಿಪ್ಪನ್ ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘದ ಪದಾಧಿಕಾರಿಗಳ ಚುನಾವಣೆಯಲ್ಲಿ ರಿಪ್ಪನ್ ಪೇಟೆಯ ಎಂ. ಬಿ ಲಕ್ಷ್ಮಣಗೌಡ ನೇತ್ರತ್ವದ ತಂಡಕ್ಕೆ  ಭರ್ಜರಿ ಗೆಲುವು ದೊರೆತಿದೆ. 15 ಜನ ನಿರ್ದೇಶಕರನ್ನು ಹೊಂದಿರುವ ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ಗರ್ತಿಕೆರೆ, ಹೆದ್ದಾರಿಪುರ, ಗುಬ್ಬಿಗ ಮತ ಕ್ಷೇತ್ರದಿಂದ ಮೂರು ಜನ ಅವಿರೋಧವಾಗಿ ಆಯ್ಕೆಯಾಗಿದ್ದರು. ಇನ್ನುಳಿದ 12 ಸ್ಥಾನಗಳಿಗಾಗಿ 27 ಜನ ಸ್ಪರ್ಧಾ ಕಣದಲ್ಲಿ ಉಳಿದುಕೊಂಡಿದ್ದರು. ಹೊಸನಗರ ತಾಲೂಕು ಒಕ್ಕಲಿಗರ ಸಂಘಕ್ಕೆ ಇದು ಪ್ರಥಮ ಚುನಾವಣೆ : ಈ…

Read More

ಹುಂಚ : ಏಕಾಏಕಿ ಮನೆ ತೆರವು ಪ್ರಕರಣ – ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ದ ಕಿಮ್ಮನೆ ನೇತ್ರತ್ವದಲ್ಲಿ ನಾಳೆ ಪಾದಯಾತ್ರೆ ಮತ್ತು ಪ್ರತಿಭಟನೆ

ಹುಂಚ : ದಿನಾಂಕ 6-09-2022ರಂದು ಮಂಗಳವಾರ  ಹುಂಚ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಅಕ್ರಮ ಒತ್ತುವರಿ ತೆರವು ನೆಪದಲ್ಲಿ ಬಡವರ ಜೀವನ ಜತೆ ಆಟವಾಡುತ್ತಿರುವ ಸರ್ಕಾರದ ವಿರುದ್ಧ  ತೀರ್ಥಹಳ್ಳಿ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಸಲು ನಿರ್ಧರಿಸಲಾಗಿದೆ. ಆಧಾರವಿಲ್ಲದೆ ಹುಂಚ ಗ್ರಾಪಂ ವ್ಯಾಪ್ತಿಯ ಹಡ್ಲುಬೈಲ್ ನಿವಾಸಿ ಜೀವನ್ ಅವರ ಮನೆ ನೆಲಸಮಗೊಳಿಸಿದ ಕಂದಾಯ ಅಧಿಕಾರಿಗಳ ವಿರುದ್ಧ ದಿನಾಂಕ  6-9-2022ರಂದು ಮಂಗಳವಾರ ಬೆಳಿಗ್ಗೆ 9ಗಂಟೆಗೆ ಸರಿಯಾಗಿ ಹಡ್ಲುಬೈಲ್ ಜೀವನ್ ಅವರ ಮನೆಯಿಂದ ಪಾದಯಾತ್ರೆ ಆರಂಭವಾಗಿ ಹುಂಚ…

Read More

ಶಿವಮೊಗ್ಗ ಚಾಕು ಇರಿತ ಪ್ರಕರಣದ ಆರೋಪಿಗೆ ಭಯೋತ್ಪಾದಕರ ಲಿಂಕ್ ಬಹಿರಂಗ : ಆರಗ ಜ್ಞಾನೇಂದ್ರ

ಶಿವಮೊಗ್ಗ : ಗಾಂಧಿ ಬಜಾರ್ ನಲ್ಲಿ ಪ್ರೇಮ್​ ಸಿಂಗ್ ಯುವಕನಿಗೆ ಚಾಕು ಇರಿದ ಪ್ರಕರಣ ಸಂಬಂಧಿತ ಆರೋಪಿಗೆ ಜಬೀವುಲ್ಲಾ ಲಿಂಕ್‌ ಭಯಾನಕವಾಗಿದೆ.  ಭಯೋತ್ಪಾದಕರ ಜೊತೆ ಲಿಂಕ್‌ ಇರೋದು ಬಹಿರಂಗವಾಗಿದೆ. ಸದ್ಯದಲ್ಲೇ ಪ್ರಕರಣವನ್ನು ಎನ್‌ಐಎಗೆ ಹಸ್ತಾಂತರಿಸುತ್ತೇವೆ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ ಫೋಟೋ ಹಾಕುವ ವಿಚಾರದಲ್ಲಿ ಎಸ್​ಡಿಪಿಐ ಬೆಂಬಲದಲ್ಲಿ ಕೆಲವರು ಹಿಂಸಾಚಾರ ನಡೆಸಿದ್ದರು. ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದ ಪ್ರಕರಣ ನಡೆದಿತ್ತು. ಪ್ರಕರಣದ ಆರೋಪಿಗೆ ‘ಭಯೋತ್ಪಾದಕರ ಲಿಂಕ್‌ ಭಯಾನಕ’ವಾಗಿದೆ…

Read More

ಮನೆಗೆ ನುಗ್ಗಿದ ನೀರು – ಗೋಡೆ ಕುಸಿತದಿಂದ ನಾಲ್ವರಿಗೆ ಪೆಟ್ಟು

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಾಮನಗದ್ದೆ ನಿವಾಸಿ ಲೋಕೇಶ್ ಎಂಬವರ ಮನೆಯ ಹೊರಭಾಗದ ಗೋಡೆ ಕುಸಿದ ಪರಿಣಾಮ ಮೂವರಿಗೆ ಗಂಭೀರ ಪೆಟ್ಟು ತಗುಲಿದೆ. ಗುರುವಾರ ಸಂಜೆ ಸುರಿದ ಭಾರಿ ಮಳೆಗೆ ಮನೆಯ  ಹೊರಭಾಗದಲ್ಲಿ   ಕೃಷಿ  ಸಾಮಾಗ್ರಿಗಳನ್ನು ದಾಸ್ತಾನಿರಿಸಿದ ಕಡುಮಾಡಿನ ಒಳಗೆ ಪ್ರವಾಹದ ರೀತಿಯಲ್ಲಿ   ಏಕಾಏಕಿ ನೀರು ನುಗ್ಗಿತ್ತು. ಕುಟುಂಬಸ್ಥರು ಸೇರಿ ಅಲ್ಲಿದ್ದ ಕೃಷಿ ಪರಿಕರಗಳನ್ನು ಒಳಗೆ ಸಾಗಿಸುತ್ತಿರುವಾಗ ನೀರಿನ ರಭಸಕ್ಕೆ ಗೋಡೆ  ಸಂಪೂರ್ಣ ಕುಸಿದು ಬಿದ್ದು ಗೋಡೆಯಡಿಯಲ್ಲಿ ನಾಲ್ವರು ಸಿಲುಕಿಕೊಂಡರು….

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More