ಜಿಲ್ಲಾ ಸುದ್ದಿ:
ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್
ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…
ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ
ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…
ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :
ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ. ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷದ ಸಂಚಾಲಕ ಅಮೃತರಾಜ್ ಮಾತನಾಡಿ…
ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಅಗರ್ ವುಡ್ ಬೆಳೆ ಸಹಕಾರಿ : ಶಂಕರಣ್ಣ
ಮಲೆನಾಡಿನಲ್ಲಿ ಅಡಿಕೆ ಕೃಷಿಯೇ ಪ್ರಧಾನ. ಹಲವು ತಲೆಮಾರುಗಳಿಂದಲೂ ಇಲ್ಲಿನ ಬಹುತೇಕ ಕೃಷಿಕರು ಅಡಿಕೆಯನ್ನೇ ಪ್ರಧಾನ ಬೆಳೆಯನ್ನಾಗಿ ನಂಬಿಕೊಂಡಿದ್ದಾರೆ.ನಿಟ್ಟಿನಲ್ಲಿ ಅಡಿಕೆ ರಬ್ಬರ್ ಕಾಳು ಮೆಣಸು ಮತ್ತು ಶುಂಠಿ ಹೀಗೆ ಹತ್ತು ಹಲವು ಬೆಳೆಗಳನ್ನು ಬೆಳೆಯುವುದು ಇತ್ತೀಚೆಗೆ ಅಗತ್ಯವಾಗಿದೆ ಅದರೊಂದಿಗೆ ತಮ್ಮ ಜಮೀನಿನಲ್ಲಿ ಅಗರ್ವುಡ್ ಬೆಳೆಯನ್ನು ಹಾಕುವುದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚು ಬೇಡಿಕೆ ಇದೆ ಇದರಿಂದ ರೈತರು ಆರ್ಥಿಕವಾಗಿ ಉನ್ನತಿ ಹೊಂದಲು ಸಹಕಾರಿಯಾಗುವುದೆಂದು ಸಾಗರ ತಾಲ್ಲೂಕು ಅಗರ್ವುಡ್ ಪ್ರವರ್ತಕ ಶಂಕರಣ್ಣ ಅಭಿಪ್ರಾಯಪಟ್ಟರು. ಇಲ್ಲಿನ ಸುಳಕೋಡು ಗ್ರಾಮದ ಪ್ರಗತಿಪರ ರೈತ ಶೃಂಗೇರಿ…
ಹೈಕಮಾಂಡ್ ಬುಲಾವ್ ಹಿನ್ನಲೆ ಗೃಹ ಸಚಿವ ಆರಗ ಜ್ಞಾನೇಂದ್ರ ದಿಡೀರ್ ದೆಹಲಿಗೆ : ಕೈ ತಪ್ಪುತ್ತಾ ಗೃಹ ಸಚಿವ ಸ್ಥಾನ ??????
ರಾಜ್ಯ ರಾಜಕಾರಣ ದೆಹಲಿ ಅಂಗಳಕ್ಕೆ ಶಿಫ್ಟ್ ಆಗಿದೆ. ಮಹತ್ವದ ಬೆಳವಣಿಗೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇವತ್ತು ದಿಢೀರ್ ದೆಹಲಿಗೆ ತೆರಳಿದ್ದಾರೆ. ಸಂಜೆ ವೇಳೆಗೆ ಅವರು ದೆಹಲಿಗೆ ವಿಮಾನ ಹತ್ತಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ಆರಗ ಜ್ಞಾನೇಂದ್ರ ಅವರು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ಪುನರ್ ರಚನೆಯ ವೇಳೆ ಗೃಹ ಸಚಿವರ ಕುರ್ಚಿ ಅಲುಗಾಡುವ…
ಟೊಮ್ಯಾಟೊ ಪ್ಲೂ (ಟೊಮ್ಯಾಟೊ ಜ್ವರ) ಎಂಬ ಹೊಸ ವೈರಸ್ ಪತ್ತೆ : ಚಿಕ್ಕ ಮಕ್ಕಳೇ ಈ ವೈರಸ್ ನ ಟಾರ್ಗೆಟ್
ಕೊರೊನಾ ನಾಲ್ಕನೇ ಅಲೆಯ ಭೀತಿಯ ನಡುವೆ ಹೊಸ ಜ್ವರವೊಂದು ಕಾಣಿಸಿಕೊಂಡಿದ್ದು, ವಿಶೇಷವಾಗಿ ಚಿಕ್ಕ ಮಕ್ಕಳ ಪೋಷಕರಲ್ಲಿ ಆತಂಕ ಮೂಡಿಸಿದೆ. ಮಾಧ್ಯಮ ವರದಿಗಳ ಪ್ರಕಾರ, ಕೇರಳದಲ್ಲಿ ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ 80 ಕ್ಕೂ ಹೆಚ್ಚು ಮಕ್ಕಳು ವೈರಸ್ನಿಂದ ಸೋಂಕಿಗೆ ಒಳಗಾಗಿದ್ದಾರೆ ಮತ್ತು ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಕೇರಳದಲ್ಲಿ ಎಲ್ಲಾ ವಾಹನಗಳ ಪ್ರಯಾಣಿಕರನ್ನು, ವಿಶೇಷವಾಗಿ ಮಕ್ಕಳನ್ನು ಪರೀಕ್ಷಿಸಲು ಇಬ್ಬರು ವೈದ್ಯಕೀಯ ಅಧಿಕಾರಿಗಳು ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಲ್ಲದೆ, ಅಂಗನವಾಡಿಗಳಲ್ಲಿ ಐದು ವರ್ಷಕ್ಕಿಂತ ಕಡಿಮೆ…
ಬೈಂದೂರು – ರಾಣೆಬೆನ್ನೂರು ದ್ವಿಪಥ ರಸ್ತೆ ನಿರ್ಮಾಣ : ಸಂಸದ ಬಿ ವೈ ರಾಘವೇಂದ್ರ…. ಸಂಪೆಕಟ್ಟೆಯಿಂದ – ಹೊಸನಗರದ ಮಾವಿನಕೊಪ್ಪ ವೃತ್ತಕ್ಕೆ ಬೈಪಾಸ್ ರಸ್ತೆ :
ಬೈಂದೂರು-ರಾಣೆಬೆನ್ನೂರು ರಸ್ತೆ ಹಾಗೂ ಶಿಕಾರಿಪುರ ಪಟ್ಟಣದ ಬೈಪಾಸ್ ರಸ್ತೆ ನಿರ್ಮಾಣವಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಸುಮಾರು 203 ಕಿಮೀ ಉದ್ದದ ರಾಷ್ಟ್ರೀಯ ಹೆದ್ದಾರಿ 766(2) ಬೈಂದೂರು – ರಾಣೇ ಬೆನ್ನೂರು ರಸ್ತೆ ರಾಜ್ಯದ ಮಧ್ಯ ಭಾಗ ಹಾಗು ಕರಾವಳಿ ಭಾಗವನ್ನು ಸಂಪರ್ಕಿಸುವ ಏಕಪಥ ಹಾಗೂ ಮದ್ಯಂತರ ಪಥದ ರಸ್ತೆಗಳಾಗಿವೆ. ಇವುಗಳನ್ನು ದ್ವಿಪಥ ರಸ್ತೆಯನ್ನಾಗಿ ಅಭಿವೃದ್ಧಿಗೊಳಿಸಲು ಕೋರಿದ ಫಲವಾಗಿ ಕೊಲ್ಲೂರು ಪಟ್ಟಣ, ನಾಗೋಡಿ, ಜಯನಗರದಿಂದ ಹೊಸನಗರ ಬಟ್ಟೆ ಮಲ್ಲಪ್ಪದಿಂದ ಯಡೇಹಳ್ಳಿ, ಕಿಟ್ಟದ ಹಳ್ಳಿಯಿಂದ ಮಾಸೂರು ರಟ್ಟಿ…
ಕಿಮ್ಮನೆ ರತ್ನಾಕರ್ ಗೆ ಕಾಂಗ್ರೆಸ್ ಸಮಾವೇಶದಲ್ಲಿ ಅವಮಾನ…?!!!!! ಜಿಲ್ಲಾ ಕಾಂಗ್ರೆಸ್ ನ ಗುಂಪುಗಾರಿಕೆಗೆ ಕಿಮ್ಮನೆ ಬೆಂಬಲಿಗರ ಆಕ್ರೋಶ
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ ಇದೀಗ ರಾಜ್ಯ ನಾಯಕರ ಅಂಗಳಕ್ಕೆ ತಲುಪಿದೆ.ತೀರ್ಥಹಳ್ಳಿ ಕ್ಷೇತ್ರದಲ್ಲಿದ್ದ ಅಸಮಾಧಾನ, ಭಿನ್ನಮತ ಇದೀಗ ಜಿಲ್ಲಾ ನಾಯಕತ್ವದಲ್ಲೂ ಹೊರ ಬಿದ್ದಿದೆ. ನಡೆದಿದ್ದೇನು?? ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿಯ ಗುಡ್ಡೆಕೊಪ್ಪದಿಂದ ಶಿವಮೊಗ್ಗಕ್ಕೆ ಪಾದಯಾತ್ರೆ ನಡೆಸಿ ಸಾವಿರಾರು ಕಾರ್ಯಕರ್ತರೊಂದಿಗೆ ಶಿವಮೊಗ್ಗದ ಸಮಾವೇಶಕ್ಕೆ ಹಾಜರಾಗಿದ್ದರು. ಈ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ ಸಾವಿರಾರು ಮಂದಿ ಕಾರ್ಯಕರ್ತರು ಬಂದಿದ್ದರು. ಸಭಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ನಾಯಕರಾದ ಹರಿಪ್ರಸಾದ್, ಕಾಗೋಡು ತಿಮ್ಮಪ್ಪ, ಕಿಮ್ಮನೆ, ಮಂಜುನಾಥ ಗೌಡ, ಸುಂದರೇಶ್ ಇತರರು…
ಮೇ 13 ರಿಂದ ಹೊಸನಗರ ತಾಲೂಕಿನ ನಗರ ಮಾಅಸುಂಷಾ ವಲಿಯುಲ್ಲಾ ದರ್ಗಾದಲ್ಲಿ ಉರೂಸ್ ಸಮಾರಂಭ :
ಹೊಸನಗರ: ತಾಲೂಕಿನ ಐತಿಹಾಸಿಕ ಬಿದನೂರು ನಗರದ ಶಾಂತಿಕೆರೆ ಸಮೀಪ ಇರುವ ಹಜರತ್ ಶೇಖುಲ್ಅಕ್ಬರ್ಅನ್ವರ್ ಮಾಅಸುಂಷಾ ವಲೀಯುಲ್ಲಾ ದರ್ಗಾದ 48ನೇ ಉರೂಸ್ ಸಮಾರಂಭ ಮೇ 13ರಿಂದ ಪ್ರಾರಂಭಗೊಳ್ಳಲಿದೆ ಎಂದು ದರ್ಗಾ ಸಮಿತಿ ಸದಸ್ಯ ಅರ್ ಎ ಚಾಬುಸಾಬ್ ತಿಳಿಸಿದರು. ನಗರದ ದರ್ಗಾ ಆವರಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಮೇ 13ರಂದು ನಗರ ವೆಂಕಟರಮಣಉಡುಪ ನೇತೃತ್ವದಲ್ಲಿ ಚಾಲನೆಗೊಳ್ಳಲಿರುವ ಉರೂಸ್ನ್ನು ಕಾರ್ಗಲ್ನ ಜನಾಬ್ ಎಸ್.ಇ.ಸಿರಾಜ್ ತಂಗಳ್ ಉದ್ಘಾಟಿಸಲಿರುವರು. ಮೇ 14ರಂದು ಮಗರಿಬ್ ನಮಾಜ್ ಬಳಿಕ ಮೌಲೂದ್, ಸಲಾತ್ ನಡೆಯಲಿದ್ದು, ಧಾರ್ಮಿಕ…
ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :
ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್ಪೇಟೆಯ ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…