Headlines

ಚಿಕ್ಕಮಗಳೂರಿನಲ್ಲಿ ನಡೆದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್‌ಪೇಟೆ ಯುವಕನ ಅದ್ವಿತೀಯ ಸಾಧನೆ :

ಭಾನುವಾರ ಚಿಕ್ಕಮಂಗಳೂರಿನ ಅಬ್ಲೇಜ್ ಮೋಟಾರ್ಸ್ ಸ್ಪೋರ್ಟ್ಸ್ ಕ್ಲಬ್ ಹಮ್ಮಿಕೊಂಡಿದ್ದ ಡರ್ಟಿಪ್ರಿಕ್ಸ್ ಆಟೋಕ್ರಾಸ್ ರ‍್ಯಾಲಿಯಲ್ಲಿ ರಿಪ್ಪನ್ ಪೇಟೆಯ ಯುವಕ ನಿತೀಶ್ ಎಂ ಗೌಡ ಅದ್ವಿತೀಯ ಪ್ರದರ್ಶನ ತೋರಿ ರನ್ನರ್ ಅಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾನೆ. ನಿತೀಶ್ ಎಂ ಗೌಡ ರಿಪ್ಪನ್ ಪೇಟೆಯ ಹೊಸನಗರ ರಸ್ತೆ ನಿವಾಸಿಗಳಾದ ಎಂ ಬಿ‌ ಮಂಜುನಾಥ್ ಮತ್ತು ಪ್ರವೀಣಿ ದಂಪತಿಗಳ ಪುತ್ರನಾಗಿದ್ದು ಕಾಫಿನಾಡಿನ ಜನ ಮೂಗಿನ ಮೇಲೆ ಬೆರಳಿಡುವಂತೆ ತನ್ನ ಪ್ರದರ್ಶನ ನೀಡಿ ಎಲ್ಲರ ಮನ ಗೆದ್ದಿದ್ದಾನೆ. ಇವರು ಬಾಲ್ಯದಿಂದಲೇ ದ್ವಿಚಕ್ರ ವಾಹನ ಗಳನ್ನುಓಡಿಸುವಲ್ಲಿ ಆಸಕ್ತಿ…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ಪಾಗಲ್ ಪ್ರೇಮಿಯೊಬ್ಬನ ಕಿರುಕುಳಕ್ಕೆ ಬೇಸತ್ತ ಅಂತಿಮ ಬಿಕಾಂ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ :

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಸವೆ ಗ್ರಾಮದ ಕುಂಟಿಗೆ ವಾಸಿಯಾದ ವಿದ್ಯಾಶ್ರೀ (21) ಎಂಬ ವಿದ್ಯಾರ್ಥಿನಿ ಪಾಗಲ್ ಪ್ರೇಮಿಯೊಬ್ಬನ ಕಾಟಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಸವೆ ಗ್ರಾಮದ ವಿದ್ಯಾಶ್ರೀ ಹೊಸನಗರ ಪಟ್ಟಣದ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಅವಳ ನೆರೆಮನೆಯಾತ  ಶಶಾಂಕ್ ಎಂಬಾತನು ಪ್ರತಿದಿನ ಕಾಲೇಜಿಗೆ ಹೋಗಿ ಬರುವಾಗ ತನ್ನನ್ನು ಪ್ರೀತಿಸುವಂತೆ ಹಾಗೂ ಮದುವೆಯಾಗುವಂತೆ ಪೀಡಿಸುತ್ತಿದ್ದ ಹಾಗೂ ಬೆದರಿಕೆ ಹಾಕುತ್ತಿದ್ದನು ಈ ಹಿನ್ನಲೆಯಲ್ಲಿ ಮನನೊಂದ ವಿದ್ಯಾಶ್ರೀ ಕಳೆದ ತಿಂಗಳು ಏಪ್ರಿಲ್…

Read More

ಹೆದ್ದಾರಿಪುರದಲ್ಲಿ ಪ್ರೋ ಲೀಗ್ ಕಬ್ಬಡ್ಡಿ ಪಂದ್ಯಾವಳಿ: ಗ್ರಾಮೀಣ –ಪ್ರತಿಭೆಯ ಕಾಳಜಿಗೆ ಪ್ರೋತ್ಸಾಹಿಸಿದ ಗ್ರಾಮಸ್ಥರು….!

ಈ ಶತಮಾನದ ಕ್ರೀಡೆ ಯಾವುದು ಎಂದರೆ  ಗಲ್ಲಿಗಲ್ಲಿಗಳಲ್ಲಿ  ಗೋಲಿ ಆಡುವ ಚಿಣ್ಣರಾದಿಯಾಗಿ  ಕ್ರಿಕೆಟ್‌ ಎನ್ನುವ ಮಟ್ಟಿಗೆ ತನ್ನ ಕದಂಬ ಬಾಹು ಚಾಚಿದೆ ಕ್ರಿಕೆಟ್. ಆದರೆ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮದಲ್ಲಿ ಕಬ್ಬಡ್ಡಿಯೇ ತನ್ನ ಜೀವಾಳ ಎನ್ನುವ ಮಟ್ಟಿಗೆ ಬೆಳೆದ ಪ್ರತಿಭಾವಂತ ಆಟಗಾರರಿದ್ದಾರೆ. ಇದೇ ಗ್ರಾಮದ ಪ್ರತಿಭಾವಂತ ಕಬ್ಬಡಿ ಆಟಗಾರ ಸುಷ್ಮಂತ್‌ಗೆ ಕಬಡ್ಡಿ ಆಟವೇ ಆತನ ಎಡಗಾಲಿಗೆ ಮುಳುವಾಗಿ ಕಳೆದ ಎರಡು ವರ್ಷದಿಂದ ತನ್ನ ಒಂದು ಕಾಲನ್ನು ಕಳೆದುಕೊಂಡು ಮನೆಯಲ್ಲಿಯೇ ಕುಳಿತಿರುವ ಆತನ ತಲೆಯಲ್ಲಿ ಗ್ರಾಮೀಣ ಭಾಗದಲ್ಲಿ ಎಲೆ…

Read More

ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ – ಕಿಮ್ಮನೆ ವಾಗ್ದಾಳಿ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ  ಭ್ರಷ್ಟಾಚಾರ ವಿರುದ್ಧ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು  ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ತೀರ್ಥಹಳ್ಳಿ ತಾಲೂಕಿನ ಗುಡ್ಡೆಕೊಪ್ಪದಿಂದ ಶಿವಮೊಗ್ಗದವರೆಗೆ 4 ದಿನಗಳ ಕಾಲ ಪಾದಯಾತ್ರೆ ನೆಡೆಸುತ್ತಿರುವ ಕಿಮ್ಮನೆ ರತ್ನಾಕರ್ ಇಂದು ಮೂರನೇ ದಿನದ ಪಾದಯಾತ್ರೆಗೂ ಮುನ್ನ ಮಾಧ್ಯಮದವರ ಜೊತೆ ಮಾತನಾಡಿ ಆರಗ ಜ್ಞಾನೇಂದ್ರರಿಗೆ ತಲೆ ಕೆಟ್ಟಿದೆ. ಅವರೊಬ್ಬ ಮೆಂಟಲ್ ಎಂದು ವಾಗ್ದಾಳಿ ನೆಡೆಸಿದರು.  ನಾನು ರಸ್ತೆ ಮಾಡಿಸಿದ್ದೀನಿ ಕಿಮ್ಮನೆ ಪಾದಯಾತ್ರೆ ಮಾಡಲಿ ಎಂಬ ಆರಗ ಜ್ಞಾನೇಂದ್ರ ಅವರು ನಿನ್ನೆ ಹೇಳಿದ…

Read More

ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ : ಒಬ್ಬ ಆರೋಪಿ ಅರೆಸ್ಟ್ : ಎಸ್ ಪಿ ಲಕ್ಷ್ಮಿಪ್ರಸಾದ್

ನಿನ್ನೆ ರಾತ್ರಿ ಶಿವಮೊಗ್ಗದ ಸೂಳೆಬೈಲಿನಲ್ಲಿ ಕಾರಿನ ಗಾಜು ಒಡೆದ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನ ಬಂಧಿಸಲಾಗಿದೆ ಎಂದು ಎಸ್​ಪಿ ಲಕ್ಷ್ಮೀಪ್ರಸಾದ್​ ಹೇಳಿಕೆ ನೀಡಿದ್ದಾರೆ.   ನಿನ್ನೆ ರಾತ್ರಿ ಬೈಕಲ್ಲಿ ಕಾರನ್ನು ಹಿಂಬಾಲಿಸಿ ರಾಡಿನಿಂದ ಕಾರಿನ ಹಿಂಬದಿ ಗಾಜು ಒಡೆದ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನ ಗುರುತಿಸಲಾಗಿದ್ದು, ಓರ್ವ ಆರೋಪಿ ಅಜ್ಗರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ರಸ್ತೆ ಕಿರಿಯದಾಗಿದ್ದು ನಿಧಾನವಾಗಿ ಕಾರು ಚಲಿಸುತ್ತಿತ್ತು. ಈ ವೇಳೆ ಬೈಕ್​ನಲ್ಲಿ ಬಂದ ಇಬ್ಬರು  ಕಾರಿನ ಹಿಂಬದಿ ಗಾಜು ಒಡೆದಿದ್ದಾರೆ. ಕುಡಿದ…

Read More

ಕಿಮ್ಮನೆ ರತ್ನಾಕರ್ ರವರ ಜನಜಾಗೃತಿ ಪಾದಯಾತ್ರೆಗೆ ಚಾಲನೆ : ಗೃಹ ಸಚಿವರ ಮನೆ ಮುಂದೆ ಸ್ವ ಪಕ್ಷದ ಕಾರ್ಯಕರ್ತರ ಮೇಲೆ ಗರಂ ಆದ ಕಿಮ್ಮನೆ!!!! ಯಾಕೆ ಗೊತ್ತಾ?????

ಗೃಹಸಚಿವರ ಆಡಳಿತ ವೈಖರಿ ಹಾಗೂ ಹೇಳಿಕೆ ಖಂಡಿಸಿ ಇಂದಿನಿಂದ ನಾಲ್ಕುದಿನದ ಪಾದಯಾತ್ರೆಗೆ ಕಾಗೋಡು ತಿಮ್ಮಪ್ಪನವರ ಪುತ್ರಿ ರಾಜನಂದಿನಿ ಚಾಲನೆ ನೀಡಿದರು. ಗೃಹಸಚಿವರ ಬೇಜವಬ್ದಾರಿ ಹೇಳಿಕೆ ಮತ್ತು, 40% ಕಮಿಷನ್ ಅವ್ಯವಹಾರ, ಪ್ರಾದ್ಯಾಪಕ ಹುದ್ದೆ, ಲೋಕೋಪಯೋಗಿ ಪರೀಕ್ಷೆ, ಪಿಎಸ್ಐ ಪರೀಕ್ಷೆಯಲ್ಲಿ ಹಗರಣ, ದಿನ‌ನಿತ್ಯ ಬೆಲೆ ಏರಿಕೆ ವಿರೋಧಿಸಿ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಜನಜಾಗೃತಿಯ ಪಾದಯಾತ್ರೆಗೆ ಚಾಲನೆ ದೊರೆತಿದೆ. ಕಾಗೋಡು ಪುತ್ರಿ ರಾಜನಂದಿನಿರವರು ಕಾಂಗ್ರೆಸ್ ಬಾವುಟ  ಹಾರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಿಮ್ಮನೆ ರತ್ನಾಕರ್…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ಬಿಜೆಪಿಯ ಮರಿ ಪುಡಾರಿಗಳದ್ದೇ ದರ್ಬಾರ್ : ಆರ್ ಎಂ ಮಂಜುನಾಥ್ ಗೌಡ

ತೀರ್ಥಹಳ್ಳಿ : ಬಿಜೆಪಿ ಸರ್ಕಾರದ ದುರಾಡಳಿತ, ಹಾಗೂ ಈಶ್ವರಪ್ಪನವರ ಕಮಿಷನ್ ವ್ಯವಹಾರ, ಪಿಎಸ್ಐ ನೇಮಕಾತಿ ವಿಚಾರ, ಬೆಲೆ ಏರಿಕೆ, ಗ್ಯಾಸ್ ಬೆಲೆ ಏರಿಕೆ , ಬಗರ್ ಹುಕುಂ ಸೇರಿದಂತೆ ಹಲವು ವಿಷಯಗಳನ್ನು ಖಂಡಿಸಿ ಮೇ 10 ರಂದು ಶಿವಮೊಗ್ಗದಲ್ಲಿ ಪ್ರತಿಭಟನೆ ನೆಡೆಸುವುದಾಗಿ ಆರ್ ಎಂ ಮಂಜುನಾಥ ಗೌಡರು ತಿಳಿಸಿದರು.  ತೀರ್ಥಹಳ್ಳಿಯ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ  ನಡೆಸಿ  ಮಾತನಾಡಿದ ಅವರು ಶಿವಮೊಗ್ಗದಲ್ಲಿ ಮೇ 10 ರಂದು ಶಿವಮೊಗ್ಗದಲ್ಲಿ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ…

Read More

ಶಾಸಕ ಹಾಲಪ್ಪರಿಂದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕಾಮಗಾರಿ ವೀಕ್ಷಣೆ

ರಿಪ್ಪನ್ ಪೇಟೆ : ಸಾಗರ ಹೊಸನಗರ ಕ್ಷೇತ್ರದ ವಿಧಾನಸಭಾ ಸದಸ್ಯ ಹಾಗೂ ಎಂಎಸ್ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ  ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು ಹಾಗೂ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.  ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಕೆರೆಹಳ್ಳಿ  ಹೋಬಳಿಯಲ್ಲಿ ಈಗಾಗಲೇ 200 ಕೋಟಿಗೂ ಅಧಿಕ  ಅಭಿವೃದ್ಧಿ ಕಾಮಗಾರಿಗಳು ನೆರವೇರಿದ್ದು ಈಗಾಗಲೇ  ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಕೆಲವು ಕಾಮಗಾರಿಗಳು ಪ್ರಗತಿಯಲ್ಲಿವೆ. ರಿಪ್ಪನ್ ಪೇಟೆ ಯ ಸರಕಾರಿ ಪ್ರಥಮದರ್ಜೆ  ಕಾಲೇಜಿನಿಂದ  ವಿನಾಯಕ ವೃತ್ತದವರೆಗೆ…

Read More

ಕೊಡಚಾದ್ರಿ ತಪ್ಪಲಿನಲ್ಲೊಬ್ಬ ಭ್ರಷ್ಟ ಪಿಡಿಒ : ಹಣ ಕೊಟ್ಟರೆ ಗ್ರಾಮ ಪಂಚಾಯತ್ ಕೂಡ ಮಾರಾಟ ಮಾಡುವಂತಹ ಭಂಡ ಪಿಡಿಒ

ಹೊಸನಗರ ತಾಲ್ಲೂಕಿನಲ್ಲಿ ಭೂ ಅಕ್ರಮ ಒತ್ತುವರಿದಾರರ ಚಟುವಟಿಕೆಗಳು ಎಗ್ಗಿಲ್ಲದೇ ನಡೆಯುತ್ತಿದ್ದು, ಕೆಲವು ಕಡೆಗಳಲ್ಲಿ ಅಧಿಕಾರಿಗಳೇ ಭೂ ಅಕ್ರಮ ಕಬಳಿಕೆಗೆ ಸಾಥ್ ನೀಡುತ್ತಾ ಸಾರ್ವಜನಿಕರಿಗೆ, ಸರ್ಕಾರಕ್ಕೆ ವಂಚನೆ ಮಾಡುತ್ತಿರುವುದು ವಿಪರ್ಯಾಸದ ಸಂಗತಿ. ಇತ್ತೀಚೆಗೆ ತಾಲ್ಲೂಕಿನ ಮೂಡುಗೊಪ್ಪ ಗ್ರಾಮ ಪಂಚಾಯ್ತಿಯ ಪಿಡಿಓ ಹಣದಾಸೆಗೆ ಬಿದ್ದು, ಬದುಕಿದ್ದವರೇ ಸತ್ತಿದ್ದಾರೆಂದು ವರದಿ ನೀಡಿ ಯಾರದ್ದೋ ಆಸ್ತಿಯನ್ನು ಮತ್ಯಾರಿಗೋ ಬರೆದುಕೊಟ್ಟಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿತ್ತು. ಇದೀಗ ಅಂತಹದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದ್ದು, ಈ ಅಕ್ರಮವನ್ನೂ ಕೂಡಾ ಅದೇ ಪಿಡಿಓ ಮಾಡಿದ್ದಾರೆ ಎನ್ನಲಾಗುತ್ತಿದೆ….

Read More