ಜಿಲ್ಲಾ ಸುದ್ದಿ:
ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ, ಶುಶ್ರೂಷಕಿಯರಿಗೆ ವೈದ್ಯರಿಂದ ಮಾನಸಿಕ ಕಿರುಕುಳ : ಗ್ರಾಮ ಪಂಚಾಯಿತಿಗೆ ದೂರು……!!!!!
ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ. ಆಂಜನೇಯರವರು ನಮಗೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಶುಶ್ರೂಷಕಿಯರು ಗ್ರಾಮ ಪಂಚಾಯತ್ ನ ಆರೋಗ್ಯ ರಕ್ಷಾ ಸಮಿತಿಗೆ ದೂರು ನೀಡಿರುವ ಘಟನೆ ಇಂದು ನಡೆದಿದೆ. ಆಸ್ಪತ್ರೆಯ ವೈದ್ಯರು ಹೆಚ್ಚುವರಿ ಕೆಲಸ ನೀಡಿದಾಗ ವಿರೋದ ವ್ಯಕ್ತಪಡಿಸಿದರೆ ಏಕವಚನದಲ್ಲಿ ನಿಂದಿಸುವುದಲ್ಲದೇ ಸಾರ್ವಜನಿಕರ ಸಮ್ಮುಖದಲ್ಲಿ ಅಗೌರವ ಸೂಚಕ ಪದದಲ್ಲಿ ನಿಂದಿಸಿ,ಸಂಬಳ ಹಾಜರಾತಿಗೆ ಸಹಿ ಹಾಕುವುದಿಲ್ಲ ಎಂದು ಬೆದರಿಕೆ ಹಾಕುವ ಮೂಲಕ ಮಾನಸಿಕ ಕಿರುಕುಳ ನೀಡುತಿದ್ದಾರೆ. ಆದ್ದರಿಂದ ಗ್ರಾಮ…
ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ!!!!! ನಿಜವಾಗಲೂ ನಡೆದಿದ್ದೇನು ಗೊತ್ತಾ??? ಈ ಸುದ್ದಿ ನೋಡಿ
ಸಾಗರ:ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ಸಚಿವ.ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪರವರ ಪುತ್ರಿ ರಾಜನಂದಿನಿಗೆ ಕೊಲೆ ಬೆದರಿಕೆ ಹಾಕಿ ಅವರ ಕಾರು ಚಾಲಕನಿಗೆ ಹಲ್ಲೆ ಮಾಡಲು ಯತ್ನಿಸಿದ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಈ ಘಟನೆ ಮಂಜು ಅಂಡ್ ಟೀಂ ನಿಂದ ನಡೆದಿದೆ.ಎಂದು ತಿಳಿದು ಬಂದಿದೆ. ರಾಜನಂದಿನಿ ಅವರ ಕಾರು ಚಾಲಕ ಪ್ರಕಾಶ್ ಎಂಬುವರಿಗೆ ಅಡ್ಡಕಟ್ಟಿ, ಅವರಿಗೆ ಧಮ್ಕಿ ಹಾಕಿ ರಾಜನಂದಿನಿರವರನ್ನು ಮುಗಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಅಲ್ಲದೆ ಪ್ರಕಾಶ್ ಕಾರನ್ನು ತ್ಯಾಗರ್ತಿಯಿಂದ ಮಳ್ಳಾ ಕ್ರಾಸ್ ವರೆಗೆ ಹಿಂಬಾಲಿಸಿಕೊಂಡು ಬಂದಿರುವ ಪ್ರಸಂಗ ವರದಿಯಾಗಿದೆ….
ರಿಪ್ಪನ್ ಪೇಟೆ ಯಲ್ಲಿ ಸಡಗರ-ಸಂಭ್ರಮದಿಂದ ರಂಜಾನ್ ಆಚರಣೆ : ಪರಸ್ಪರ ಸಾಮರಸ್ಯದಿಂದ ಸಮಾಜದಲ್ಲಿನೆಮ್ಮದಿ ಸಾಧ್ಯ : ಮುನೀರ್ ಸಖಾಫ಼ಿ
ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಹಾಗೂ ಮೆಕ್ಕಾ ಮಸ್ಜಿದ್ ನ ಮುಸ್ಲಿಂ ಬಾಂಧವರುಗಳು ಧರ್ಮಗುರುಗಳಾದ ಮುನೀರ್ ಸಖಾಫಿ ಮತ್ತು ಮೆಹಬೂಬ್ ಆಲಾಮ್ ರವರ ನೇತೃತ್ವದಲ್ಲಿ ರಂಜಾನ್ ಹಬ್ಬವನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಹೊಸನಗರ ರಸ್ತೆಯಿಂದ ಮೆರವಣಿಗೆ ಹೊರಟು ಸಾಗರ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕಳೆದ ಒಂದು ತಿಂಗಳಿನಿಂದ ಉಪವಾಸ ಹಾಗೂ ಧಾರ್ಮಿಕ ಆಚರಣೆಗಳ ವಿಧಿವಿಧಾನಗಳನ್ನು ಪಾಲಿಸಿದ ಅವರುಗಳು ಸೋಮವಾರ ಚಂದ್ರನ ದರ್ಶನ ಆದ ಹಿನ್ನೆಲೆಯಲ್ಲಿ ಇಂದು…
ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :
ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…
ಹಣಗೆರೆಕಟ್ಟೆಯಲ್ಲಿ ಅರಣ್ಯ ಸಿಬ್ಬಂದಿಯ ಮೇಲೆ ಹಲ್ಲೆ !!!! ದೂರು ದಾಖಲು
ತೀರ್ಥಹಳ್ಳಿ : ಹಣಗೆರೆಕಟ್ಟೆ ದರ್ಗಾ ಮತ್ತು ದೇವಸ್ಥಾನಕ್ಕೆ ಬಂದಿದ್ದ ಚನ್ನಗಿರಿ ತಾಲೂಕಿನ ಮೂವರು ಪ್ರವಾಸಿಗರು.ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಸಿಬ್ಬಂದಿಯ ಮೊಬೈಲ್ ನ್ನ ನೆಲಕ್ಕೆ ಕುಟ್ಟಿ ಹಾಳು ಮಾಡಿರುವ ಘಟನೆ ಭಾನುವಾರ ನಡೆದಿದೆ. ಹಣಗೆರೆಕಟ್ಟೆಯಲ್ಲಿನ ಹಜರತ್ ಸೈಯ್ಯದ್ ಸಾದತ್ ದರ್ಗಾ ಹಾಗೂ ಶ್ರೀ ಭೂತರಾಯ ಚೌಡೇಶ್ವರಿ ದೇಗುಲಕ್ಕೆ ಬಂದ ಚನ್ನಗಿರಿ ತಾಲೂಕು ಬೆಂಕಿಕೆರೆ ನಿವಾಸಿಗಳಾದ ಹರೀಶ್, ಸೋಮಣ್ಣ, ಚಂದ್ರಪ್ಪ ಸೇರಿಕೊಂಡು ಅರಣ್ಯ ಜಾಗದಲ್ಲಿ ಮದ್ಯ ಸೇವನೆಗೆ ಮುಂದಾಗಿದ್ದಾರೆ. ಈ ವೇಳೆ ಪ್ಲಾಸ್ಟಿಕ್…
ನಿಟ್ಟೂರಿನ ಶ್ರೀ ರೇಣುಕಾನಂದ ಸ್ವಾಮೀಜಿಯವರಿಗೆ ಮುಖ್ಯ ಮಂತ್ರಿಗಳಿಂದ ಸನ್ಮಾನ :
ರಿಪ್ಪನ್ ಪೇಟೆ : ನಿಟ್ಟೂರು ಶ್ರೀನಾರಾಯಣಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳಿಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಶನಿವಾರ ಸನ್ಮಾನಿಸಿ ಗೌರವಿಸಿದರು. ಬೆಂಗಳೂರಿನ ರಾಮಾನುಜ ಮಠದಲ್ಲಿ ನಡೆದ ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ವತಿಯಿಂದ ಸಮ ಸಮಾಜ ನಿರ್ಮಾಣಕ್ಕೆ ಮಠಗಳ ಸೇವೆಯನ್ನು ಗುರುತಿಸಿ ವಿವಿಧ ದಾಸೋಹಕ್ಕೆ ಸಹಕಾರಿಯಾದ ಮುಖ್ಯಮಂತ್ರಿಗಳಿಗೆ ಆಯೋಜಿಸಿದ್ದ ಕೃತಜ್ಞತಾ ಸಮಾರಂಭದಲ್ಲಿ ಸಮಾರಂಭದ ಯಶಸ್ಸಿಗೆ ಶ್ರಮಿಸಿದ ಹಾಗೂ ಸನ್ಯಾಸ ದೀಕ್ಷೆಯನ್ನು ತೆಗೆದುಕೊಂಡು 20 ವರ್ಷಗಳು ಆದ ನಿಮಿತ್ತ ನಿಟ್ಟೂರಿನ ಶ್ರೀನಾರಾಯಣಗುರು ಮಹಾಸಂಸ್ಥಾನದ ಪರಮಪೂಜ್ಯ ಶ್ರೀ…
ಚಂದ್ರ ದರ್ಶನವಾಗದ ಹಿನ್ನಲೆ ರಾಜ್ಯಾದ್ಯಂತ ಮಂಗಳವಾರ ರಂಜಾನ್ ಹಬ್ಬ ಆಚರಣೆ :
ರಾಜ್ಯಾದ್ಯಂತ ಈದುಲ್ ಫಿತ್ರ್(ರಂಜಾನ್) ಹಬ್ಬವನ್ನು ಮಂಗಳವಾರ (ಮೇ.3) ಆಚರಣೆ ಮಾಡಲಾಗುವುದು ಎಂದು ಚಂದ್ರ ದರ್ಶನ ಸಮಿತಿ ಪ್ರಕಟಿಸಿದೆ. ರಂಜಾನ್ ಹಬ್ಬ ಆಚರಣೆಗೆ ಸಂಬಂಧಿಸಿದಂತೆ ಭಾನುವಾರ ಸಂಜೆ ನಗರದ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿರುವ ರಾಜ್ಯ ವಕ್ಫ್ ಬೋರ್ಡ್ ಕೇಂದ್ರ ಕಚೇರಿಯಲ್ಲಿ ಅಮೀರೆ ಶರೀಯತ್ ಮೌಲಾನ ಸಗೀರ್ ಅಹ್ಮದ್ ಖಾನ್ ರಶಾದಿ ನೇತೃತ್ವದಲ್ಲಿ ನಡೆದ ಚಂದ್ರ ದರ್ಶನ ಸಮಿತಿಯ ಸಭೆಯಲ್ಲಿ ಮಂಗಳವಾರ ಹಬ್ಬ ಆಚರಣೆ ಮಾಡಲಾಗುವುದೆಂದು ಘೋಷಿಸಲಾಯಿತು. ಮಳೆ ಹಾಗೂ ಮೋಡ ಕವಿದ ವಾತಾವರಣ ಹಿನ್ನೆಲೆ ದೇಶದ ಯಾವುದೇ ಭಾಗದಲ್ಲಿ ಚಂದ್ರ…
ವಿಶ್ವ ಪಶುವೈದ್ಯಕೀಯ ದಿನಾಚರಣೆ :
ಮನುಷ್ಯನ ಅಗತ್ಯಗಳಿಗೆ ಎಲ್ಲವನ್ನೂ ನೀಡುವ, ಅವರ ಆರೋಗ್ಯವನ್ನು ವೃದ್ಧಿಸುವ ಹಾಗೂ ರೈತರ ಆರ್ಥಿಕತೆಯನ್ನು ಅಭಿವೃದ್ಧಿಗೊಳಿಸುವ ಗೋಮಾತೆ ಧನ್ಯಳು, ಮಾನ್ಯಳು ಎಂದು ನಿಕಟಪೂರ್ವ ಮುಖ್ಯಮಂತ್ರಿ ಹಾಗೂ ಶಾಸಕ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸ್ವಾತಂತ್ರ್ಯ ಅಮೃತ ಮಹೋತ್ಸವದ ನಿಮಿತ್ತ ಶನಿವಾರ ಸರ್ಕಾರಿ ನೌಕರರ ಸಭಾ ಭವನದಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆ ಹಾಗೂ ಡಾ| ಗೊಯಲ್ ವೆಟ್ ಫಾರ್ಮ ವೆಟರ್ನರಿ ಇನ್ ಹೋಮಿಯೋಪತಿ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪಶುವೈದ್ಯಕೀಯ ದಿನಾಚರಣೆಯನ್ನು ಹಾಗೂ ಜಿಲ್ಲೆಯ ಪಶುವೈದ್ಯರಿಗೆ ಜಿಲ್ಲಾ ಮಟ್ಟದ ತಾಂತ್ರಿಕ…
ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ನೇಮಕ : ಮರಳು ಮಾಫಿಯಾ,ಕಳ್ಳಕಾಕರ ಎದೆಯಲ್ಲಿ ಶುರುವಾಯಿತು ನಡುಕ
ಹೊಸನಗರದ ನೂತನ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಸಾಗರದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಬಿ ಸಿ ಗಿರೀಶ್ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಗಿರೀಶ್ ರವರು ಪ್ರಸ್ತುತ ಸಾಗರ ಗ್ರಾಮಾಂತರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಮಧುಸೂದನ್ ಸೇರಿದಂತೆ ಜಿಲ್ಲೆಯ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಪಿಐ ಮಧುಸೂಧನ್ ಜಿ.ಕೆ ರವರು ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಿ ಸಿ ಗಿರೀಶ್ ರವರು…
ಪಿಂಚಣಿ ಹಣದಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಲ್ಲ : ಹಾಲಿ ಶಾಸಕರಿಗೆ ಮಾಜಿ ಶಾಸಕರ ಟಾಂಗ್
ಸಾಗರ: ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಪಿಂಚಣಿಯಲ್ಲಿ ಬದುಕುತ್ತಿದ್ದಾರೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕರು ನನ್ನನ್ನು ಟೀಕಿಸಿದ್ದಾರೆ. ಅವರು ಹೇಳಿದಂತೆ ನಾನು ಪಿಂಚಣಿಯಲ್ಲಿ ಗಂಜಿ ಕುಡಿದು ಬದುಕುತ್ತೇನೆಯೇ ವಿನಃ ಭ್ರಷ್ಟಾಚಾರ ಮಾಡಿಲ್ಲ. ಭ್ರಷ್ಟಾಚಾರದ ಹಣದಲ್ಲಿ ಬದುಕುತ್ತಿಲ್ಲ. ಇವತ್ತಿಗೂ ಜನರಿಗೆ ಸಹಾಯ ಮಾಡುತ್ತ ಬದುಕುತ್ತಿದ್ದೇನೆ ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಶಾಸಕ ಹಾಲಪ್ಪ ಅವರ ಮಾತಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಶಾಸಕ…