ಜಿಲ್ಲಾ ಸುದ್ದಿ:
ರೈಲಿಗೆ ಸಿಲುಕಿ 30ಕ್ಕೂ ಹೆಚ್ಚು ಕುರಿಗಳು ಸಾವು :
ಭದ್ರಾವತಿ ನಗರದ ಅಪ್ಪಾಜಿ ಗೌಡ ಪೆಟ್ರೋಲ್ ಪಂಪ್ ಹಿಂಭಾಗದಲ್ಲಿರುವ ರೈಲ್ವೆ ಹಳಿಯಲ್ಲಿ 30 ಕ್ಕೂ ಹೆಚ್ಚು ಕುರಿಗಳ ಮಾರಣ ಹೋಮ ನಡೆದಿದೆ. ರೈಲಿಗೆ ಸಿಲುಕಿ ಕುರಿಗಳು ಸಾವನ್ನಪ್ಪಿವೆ. ತಾಳಗುಪ್ಪ ಮೈಸೂರು ರೈಲು ಬರುವ ವೇಳೆ ಹಳಿ ದಾಟುವಾಗ ಕುರಿಗಳ ಮೇಲೆ ರೈಲು ಹರಿದಿದೆ. 30ಕ್ಕೂ ಹೆಚ್ಚು ಕುರಿಗಳು ಸ್ಥಳದಲ್ಲಿಯೇ ಸತ್ತಿದ್ದು, ಕೆಲ ಕುರಿಗಳು ಜೀವನ್ಮರಣಗಳ ನಡುವೆ ಬಿದ್ದು ಒದ್ದಾಡುತ್ತಿದ್ದವು. ತಾಳಗುಪ್ಪದಿಂದ ಮೈಸೂರಿಗೆ ಹೊರಟಿದ್ದ ಎಕ್ಸಪ್ರೆಸ್ ರೈಲಿಗೆ ಕುರಿಗಳು ಸಿಲುಕಿವೆ.ಹಾವೇರಿ ಸವಣೂರಿನ ವ್ಯಕ್ತಿಯೋರ್ವರಿಗೆ ಈ ಕುರಿಗಳು ಸೇರಿದ್ದು ಎನ್ನಲಾಗಿದೆ.
ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಗೃಹಸಚಿವರಿಂದ ಸಭೆ :
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಮಾದಕ ವಸ್ತುಗಳ ನಿಗ್ರಹದ ಬಗ್ಗೆ ಸಭೆ ನಡೆಸಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಸ್ಥೆ ಪದಾಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.ಮಾದಕ ವಸ್ತುಗಳ ಮಾಫಿಯಾ ವಿರುದ್ಧ ಕಾರ್ಯಕ್ರಮ ಯೋಜನೆ ರೂಪಿಸುವುದು, ಬಗರ್ ಹುಕುಂ ಜಾಗದಲ್ಲಿ ಗಾಂಜಾ ಬೆಳೆಸುವುದನ್ನ ನಿಯಂತ್ರಿಸುವುದರ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮಾದಕ ವಸ್ತುಗಳ ದಾಳಿ ವಿಚಾರವನ್ನ ಪೊಲೀಸ್ ಇಲಾಖೆಯಿಂದಲೇ ಲೀಕ್ ಆಗುವುದರಿಂದ ಮಾದಕ ವಸ್ತು ಮಾರುವವನು ಎಚ್ಚರಗೊಳ್ಳುತ್ತಿದ್ದಾರೆ ಎಂಬ ಮಾಹಿತಿ ಸಭೆಯಲ್ಲಿ ಕೇಳಿಬಂದಿತು. ಈ ಬಗ್ಗೆ ಪ್ರತಿಕ್ರಿಯಿಸಿದ…
ಸಾಧಕ ವಿದ್ಯಾರ್ಥಿಗಳನ್ನು ಸನ್ಮಾನಿಸಿದ ಗೃಹಸಚಿವ ಆರಗ ಜ್ಞಾನೇಂದ್ರ
ತೀರ್ಥಹಳ್ಳಿ: ಪಟ್ಟಣದಲ್ಲಿ ಈ ಬಾರಿ ಅನೇಕ ವಿದ್ಯಾರ್ಥಿಗಳು ಸಾಧನೆ ಮಾಡಿ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ಆಡಳಿತವು ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್ ನಲ್ಲಿ ಹೆಚ್ಚು ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದ ವಿದ್ಯಾರ್ಥಿಗಳಿಗೆ ಶಾಂತವೇರಿ ಗೋಪಾಲಗೌಡ ರಂಗಮಂದಿರದಲ್ಲಿ ಗೃಹಸಚಿವ ಆರಗ ಜ್ಞಾನೇಂದ್ರರವರ ಉಪಸ್ಥಿತಿಯಲ್ಲಿ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮ ದಲ್ಲಿ ಸುಮಾರು 60 ಮಂದಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೃಹಸಚಿವ ಆರಗ ಜ್ಞಾನೇಂದ್ರ ಒಂದು ಲಕ್ಷ ಐವತ್ತಾರು…
ಸಕ್ರೆಬೈಲಿನಲ್ಲಿ ಬೋಟಿಂಗ್ ಸ್ಪೋರ್ಟ್ಸ್ ಆರಂಭ : ಏನೆಲ್ಲಾ ಇರಲಿದೆ ಗೊತ್ತಾ…??? ಈ ಸುದ್ದಿ ನೋಡಿ
ಸಕ್ರೆಬೈಲು ಆನೆ ಬಿಡಾರದ ತುಂಗಾ ಹಿನ್ನೀರಿನಲ್ಲಿ ಜಂಗಲ್ ರೇಸಾರ್ಟ್ ವತಿಯಿಂದ ಇಂದು ಬೋಟ್ ವ್ಯವಸ್ಥೆಗೆ ಚಾಲನೆ ನೀಡಲಾಯಿತು. ಸಂಸದ ಬಿ.ವೈ.ರಾಘವೇಂದ್ರ ರವರು ನೂತನ ಬೋಟ್ ಗೆ ಚಾಲನೆ ನೀಡಿದರು. ನಂತರ ಸಂಸದರು, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಜಂಗಲ್ ರೇಸಾರ್ಟ್ ನ ನಿರ್ದೆಶಕ ರಾಜೇಶ್ ಕಾಮತ್ ಸೇರಿದಂತೆ ಇತರರು ಬೋಟ್ ನಲ್ಲಿ ವಿಹರಿಸಿದರು. ನಂತರ ಮಾತನಾಡಿದ ಸಂಸದರು ಶಿವಮೊಗ್ಗ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡುವ ನಿಟ್ಟಿನಲ್ಲಿ ಬೋಟಿಂಗ್ ವ್ಯವಸ್ಥೆ ಉಪಯುಕ್ತವಾಗಲಿದೆ ಎಂದರು. ಸಕ್ರೆಬೈಲು…
ಬಿದರಹಳ್ಳಿ ಶಾಲೆಗೆ ಜಿಲ್ಲಾ ಮಟ್ಟದ ಸ್ವಚ್ಚತಾ ಶಾಲಾ ಪ್ರಶಸ್ತಿ :
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಈ ಬಾರಿಯ ಶಿವಮೊಗ್ಗ ಜಿಲ್ಲಾ ಮಟ್ಟದ “ಸ್ವಚ್ಚತಾ ವಿದ್ಯಾಲಯ” ಪ್ರಶಸ್ತಿ ಲಭಿಸಿದೆ. ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ರವರು ತಮ್ಮ ಕಛೇರಿಯಲ್ಲಿ ಬಿದರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ದೇವೆಂದ್ರಪ್ಪರವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂಧರ್ಭದಲ್ಲಿ ಬಿದರಹಳ್ಳಿ ಶಾಲೆಯ ಎಸ್ ಡಿಎಂಸಿ ಅಧ್ಯಕ್ಷರಾದ ಪದ್ಮರಾಜ್, ಶಾಲೆಯ ಶಿಕ್ಷಕರಾದ ಮಧುಕುಮಾರ್,ದಿನೇಶ್ ರವರು ಉಪಸ್ಥಿತರಿದ್ದರು. ಬಿದರಹಳ್ಳಿ ಶಾಲೆಯ ಹಿನ್ನೋಟ :…
ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಶಿವಮೊಗ್ಗದಲ್ಲಿ 18 ಕಡೆ ದಾಳಿ ನಡೆಸಿದ NIA
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ ತಂಡ ಮತ್ತೆ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ಎನ್ಐಎ ತಂಡ ನಿನ್ನೆ ರಾತ್ರಿ ಶಿವಮೊಗ್ಗಕ್ಕೆ ಭೇಟಿ ನೀಡಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳನ್ನೊಳಗೊಂಡ ತಂಡ ಇಂದು ಬೆಳಗ್ಗೆ ಐದು ಗಂಟೆಯಿಂದ ತನಿಖೆ ಆರಂಭಿಸಿದ್ದು, ಜಿಲ್ಲೆಯ 18 ಕಡೆಗಳಲ್ಲಿ ದಾಳಿ ನಡೆಸಿ ವಿಚಾರಣೆ ನಡೆಸಿದ್ದಾರೆ. ಮುಂಜಾನೆಯಿಂದ ನಿರಂತರವಾಗಿ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ…
ಜುಲೈ 4 ರ ಸೋಮವಾರ ಕಾಂಗ್ರೆಸ್ ಪಕ್ಷದ ವತಿಯಿಂದ ರಿಪ್ಪನ್ಪೇಟೆಯಲ್ಲಿ ಪಾದಯಾತ್ರೆ ಮತ್ತು ಬೃಹತ್ ಪ್ರತಿಭಟನೆ :
ರಿಪ್ಪನ್ ಪೇಟೆ : ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಪರಿವರ್ತನೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ರವರ ನೇತೃತ್ವದಲ್ಲಿ ಜುಲೈ 4 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ ಗವಟೂರು ಗ್ರಾಮದಲ್ಲಿ ಸಮುದಾಯ ಆಸ್ಪತ್ರೆಗೆ ಕಾಯ್ದಿರಿಸಿರುವ ಸ್ಥಳದಿಂದ ರಿಪ್ಪನ್ ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದವರೆಗೆ ಪಾದಯಾತ್ರೆ ನಡೆಸಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಹೇಳಿದರು. ಪಟ್ಟಣದಲ್ಲಿ ಇಂದು ಪೂರ್ವಭಾವಿ…
ಪಂಪ್ ಹೌಸ್ ನಲ್ಲಿ ಪ್ರತ್ಯಕ್ಷವಾದ 13 ಅಡಿ ಉದ್ದದ ಕಿಂಗ್ ಕೋಬ್ರಾ :
ಸುಮಾರು 13 ಅಡಿ ಉದ್ದದ ಅಂದಾಜು 12 ವರ್ಷದ ಕಿಂಗ್ ಕೋಬ್ರಾ ಹಾವು ಪಂಪ್ ಹೌಸ್ ನಲ್ಲಿ ಕಾಣಿಸಿಕೊಂಡಿದ್ದು ಕೆಲಕಾಲ ಆತಂಕ ಉಂಟು ಮಾಡಿತ್ತು. ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಕಿಮ್ಮನೆ ಗಾಲ್ಫ್ ಕ್ಲಬ್ ನಲ್ಲಿ 13 ಅಡಿ ಕಿಂಗ್ ಕೋಬ್ರಾವೊಂದು ಕಾಣಿಸಿಕೊಂಡಿದೆ. ಗಾಲ್ಫ್ ಕ್ಲಬ್ ನ ಪಂಪ್ ಹೌಸ್ ನಲ್ಲಿ ಈ ಕಿಂಗ್ ಕೋಬ್ರಾ ಕಾಣಿಸಿಕೊಂಡಿತ್ತು.ತಕ್ಷಣವೇ ಸ್ನೇಕ್ ಕಿರಣ್ ರವರಿಗೆ ಕರೆ ಮಾಡಿದ ಹಿನ್ನಲೆಯಲ್ಲಿ ಅರಣ್ಯ ಅಧಿಕಾರಿಗಳ ಅನುಮತಿ ಮೇರೆಗೆ ಸ್ನೇಕ್ ಕಿರಣ್ ಸೆರೆ ಹಿಡಿದು ಶೆಟ್ಟಿಹಳ್ಳಿ…
ಮನುಕುಲದ ವಿರೋಧಿ ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು : ಹರತಾಳು ಹಾಲಪ್ಪ
ಸಾಗರ: ರಾಜಸ್ಥಾನದ ಉದಯಪುರದಲ್ಲಿ ನಡೆದ ಟೈಲರ್ ಕನ್ನಯ್ಯ ಕೊಲೆ ಪ್ರಕರಣ ಖಂಡಿಸಿ ಸಾಗರ ನಗರ ಬಿಜೆಪಿಯಿಂದ ಸಾಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಶಾಸಕ ಹರತಾಳು ಹಾಲಪ್ಪ ಇಂತಹ ಅಮಾನವೀಯ ಘಟನೆ ಮಾನವ ಕುಲ ಒಪ್ಪುವಂತಹದಲ್ಲ,ಎಲ್ಲೇ ಆಗಲಿ ಇಂತಹ ವಾತವರಣ ನಿರ್ಮಾಣವಾದಲ್ಲಿ ಜಾತಿ,ಮತ,ಪಕ್ಷ ಭೇದ ಮರೆತು ಅಂತಹ ಮತಾಂಧರನ್ನು ಹೆಕ್ಕಿ ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು.ಸಮಾಜದಲ್ಲಿ ಇಂತಹ ಮನುಕುಲದ ವಿರೋಧಿಗಳನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡುವುದರ ಮೂಲಕ ಅವರ ನೆಲೆಯನ್ನು ಧ್ವಂಸಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಹೇಡಿಗಳ…
ಯುವ ಕಾಂಗ್ರೆಸ್ ವತಿಯಿಂದ ರಾಜಭವನ ಮುತ್ತಿಗೆ ಯತ್ನ : ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ -ಜಿಲ್ಲಾ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ಬಂಧನ
ಕರ್ನಾಟಕ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಕೇಂದ್ರ ಬಿಜೆಪಿ ಸರ್ಕಾರದ ಅಗ್ನಿಪಥ್ ಯೋಜನೆ ವಿರೋಧಿಸಿ ರಾಜಭವನ್ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೊಸನಗರ ತಾಲೂಕಿನ ಯುವ ಕಾಂಗ್ರೆಸ್ ಅಧ್ಯಕ್ಷ ಮಹೇಂದ್ರ ಬುಕ್ಕಿವರೆ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಮೊಹಮ್ಮದ್ ನಿಹಾಲ್ ರವರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು. ಬೆಂಗಳೂರು ಕೆಪಿಸಿಸಿ ಕಛೇರಿಯಿಂದ ರಾಜಭವನಕ್ಕೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ನಲಪಾಡ್ ರವರ ನೇತೃತ್ವದಲ್ಲಿ ಕಾರ್ಯಕರ್ತರು ಪ್ರತಿಭಟನೆ ಮಾಡಿ ರಾಜಭವನ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಯುವ ಕಾಂಗ್ರೆಸ್ ನ ಹಲವಾರು ನಾಯಕರನ್ನು…