ಜಿಲ್ಲಾ ಸುದ್ದಿ:
ಪಿಎಫ಼್ ಐ & ಎಸ್ ಡಿಪಿಐ ನಿಷೇದಕ್ಕೆ ಎಲ್ಲಾ ತಯಾರಿ ನಡೆದಿದೆ : ಶಿಕ್ಷಣ ಸಚಿವ ಡಾ| ಅಶ್ವತ್ ನಾರಾಯಣ್
ಶಿವಮೊಗ್ಗ: ಪಿಎಫ್ಐ, ಎಸ್ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್ಐ, ಎಸ್ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್ ಹಿಂಪಡೆದು ಈಗ…
ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ : ಗೃಹ ಸಚಿವ ಆರಗ ಜ್ಞಾನೇಂದ್ರ
ರಿಪ್ಪನ್ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…
ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ
ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…
ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!
ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ. ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ
ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…
ನೂತನ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಲಗೋಡು ರತ್ನಾಕರ್ ರವರಿಗೆ ಹುಟ್ಟೂರಿನಲ್ಲಿ ಆತ್ಮೀಯ ಸನ್ಮಾನ :
ರಿಪ್ಪನ್ಪೇಟೆ: ಜಿ.ಪಂ. ಮಾಜಿ ಅಧ್ಯಕ್ಷರಾದ ಕಲಗೋಡು ರತ್ನಾಕರರವರನ್ನು ಕಾಂಗ್ರೇಸ್ ಪಕ್ಷ ಕೆಪಿಸಿಸಿ ರಾಜ್ಯ ಪ್ರಧಾನಕಾರ್ಯದರ್ಶಿಯನ್ನಾಗಿ ನಿಯೋಜನೆ ಮಾಡಿರುವ ಹಿನ್ನೆಲೆಯಲ್ಲಿ ಕೋಡೂರಿನ ಗ್ರಾಮಸ್ಥರು ಮತ್ತು ಹಿತೈಷಿಗಳು ಸನ್ಮಾನಿಸಿ ಗೌರವಿಸಿದರು. ಕೋಡೂರಿನ ಶ್ರೀಶಂಕ್ರೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಮಂಗಳವಾರ ಸಂಜೆ ಆಯೋಜಿಸಲಾಗಿದ್ದ, ಕಾರ್ಯಕ್ರಮದಲ್ಲಿ ಕಲಗೋಡು ರತ್ನಾಕರರವರು ಸನ್ಮಾನ ಸ್ವೀಕರಿಸಿ ಮಾತನಾಡಿ ನನ್ನ ಬೆಳವಣಿಗೆಗೆ ಗ್ರಾಮದ ಎಲ್ಲಾ ಹಿರಿಯರ ಆಶೀರ್ವಾದ, ಕಿರಿಯರ ಸಹಕಾರವಿದೆ. ಕಾಂಗ್ರೇಸ್ ಪಕ್ಷದಲ್ಲಿ ಭೂತ್ ಮಟ್ಟದ ಕಾರ್ಯದರ್ಶಿಯಿಂದ ರಾಜ್ಯ ಮಟ್ಟದ ಪ್ರಧಾನಕಾರ್ಯದರ್ಶಿಯವರೆಗೆ ಬೆಳೆಸಿದವರು ನಮ್ಮೂರಿನ ಜನ. ಪಕ್ಷನಿಷ್ಠೆ, ಸಂಘಟನೆ ಮತ್ತು…
ಪಕ್ಷ ಅವಕಾಶ ನೀಡಿದರೆ ಸಚಿವ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುವೆ : ಶಾಸಕ ಹರತಾಳು ಹಾಲಪ್ಪ
ನಾನು ಸಚಿವ ಸ್ಥಾನಕ್ಕಾಗಿ ಬೇಡಿಕೆ ಇರಿಸಿಲ್ಲ. ಆದರೆ ಸಚಿವ ಸ್ಥಾನವನ್ನು ಪಕ್ಷ ನೀಡಿದರೆ ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಶಾಸಕ, ಎಂಎಸ್ಐಎಲ್ ಅಧ್ಯಕ್ಷ ಎಚ್.ಹಾಲಪ್ಪ ಹರತಾಳು ತಿಳಿಸಿದರು. ಇಲ್ಲಿನ ತಹಶೀಲ್ದಾರ್ ಕಚೇರಿ ಸಮುಚ್ಛಯವನ್ನು ಮಂಗಳವಾರ ಪರಿಶೀಲನೆ ನಡೆಸಿ ಪತ್ರಕರ್ತರ ಜೊತೆ ನಡೆಸಿ ಮಾತನಾಡಿದ ಅವರು, ಅಂತಿಮವಾಗಿ ನಾನು ಪಕ್ಷದ ತೀರ್ಮಾನಕ್ಕೆ ಬದ್ಧವಾಗಿದ್ದೇನೆ ಎಂದರು. ಜಿಲ್ಲೆಯಲ್ಲಿ ಆರಗ ಜ್ಞಾನೇಂದ್ರ ಮತ್ತು ಕೆ.ಎಸ್.ಈಶ್ವರಪ್ಪರಂತಹ ಇಬ್ಬರು ದಕ್ಷ ಸಚಿವರು ಇದ್ದರು. ಆದರೆ ರಾಜಕೀಯ ಮೇಲಾಟ ಮತ್ತು ವಿರೋಧಿಗಳ ಷಡ್ಯಂತ್ರದಿಂದ ಈಶ್ವರಪ್ಪ ಅವರು…
ಮಸೀದಿಯಲ್ಲಿ ಸತ್ಯನಾರಾಯಣ ಪೂಜೆ ನಡೆಯುತ್ತದೆಯೋ??? ಇನ್ನೂ ಎಷ್ಟು ಕಾಲ ಅಂತ ನಾವು ತಗ್ಗಿಬಗ್ಗಿ ಇರಬೇಕು : ಪೇಜಾವರ ಶ್ರೀ
ಯಾವುದೇ ಕಾಲದಲ್ಲಿ ಬದಲಾವಣೆ ಒಂದೇ ಬದಿಯಿಂದ ಅಗಬಾರದು. ನಮ್ಮ ಗುರುಗಳು ಮುಸ್ಲಿಮರನ್ನು ಮಠಕ್ಕೆ ಕರೆದೂ ಸ್ವಾಗತ ಮಾಡಿದ್ದರು. ಆದರೆ ಯಾವುದೇ ಮಸೀದಿಗೆ ಯಾವ ಮಠಾಧೀಶರನ್ನು ಕರೆದು ಒಂದು ಸತ್ಯನಾರಾಯಣ ಪೂಜೆಯೋ, ಇನ್ನೋಂದು ಎಲ್ಲೂ ನಡೆದೇ ಇಲ್ಲ. ಹೀಗೆ ಯಾಕೆ ಒಂದೇ ಬದಿಯಲ್ಲಿ ಇನ್ನೂ ತಗ್ಗಬೇಕು, ಇನ್ನೂ ಬಗ್ಗಬೇಕು ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮೀಜಿ ಹೇಳಿದರು. ಮಾಜಿ ಸಚಿವ ಈಶ್ವರಪ್ಪರ ಮನೆಗೆ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲರೂ ಸಮಾಜದಲ್ಲಿ ಶಾಂತಿ- ಸೌಹಾರ್ದತೆ ಬಯಸುವವರು….
ಮಧು ಬಂಗಾರಪ್ಪ ರಿಪ್ಪನ್ ಪೇಟೆಗೆ ದಿಢೀರ್ ಭೇಟಿ : ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷೋಲ್ಲಾಸ
ರಿಪ್ಪನ್ ಪೇಟೆ : ರಾಜ್ಯ ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷರು ಹಾಗೂ ಸೊರಬ ಕ್ಷೇತ್ರದ ಮಾಜಿ ಶಾಸಕರಾದ ಮಧು ಬಂಗಾರಪ್ಪನವರು ಕಾರ್ಯನಿಮಿತ್ತ ಶೃಂಗೇರಿಗೆ ತೆರಳುವಾಗ ದಿಡೀರ್ ರಿಪ್ಪನ್ ಪೇಟೆಯ ವಿನಾಯಕ ವೃತ್ತದಲ್ಲಿ ಕಾರ್ಯಕರ್ತರನ್ನು ಭೇಟಿಯಾದರು. ಈ ಭೇಟಿಯಿಂದ ಸಂತಸ ಗೊಂಡ ರಿಪ್ಪನ್ ಪೇಟೆ ಕಾಂಗ್ರೆಸ್ ಕಾರ್ಯಕರ್ತರು ವಿನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಭೇರಿ ಬಾರಿಸಿ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಕಾರ್ಯಕರ್ತರು…
ಗೂಂಡಾ ಪ್ರವೃತ್ತಿ ಯಾವ ಮಟ್ಟಕ್ಕಿದೆ ಎನ್ನುವುದಕ್ಕೆ ಇದೇ ತಾಜಾ ಉದಾಹರಣೆ: ಬಿ ಎಸ್ ಯಡಿಯೂರಪ್ಪ
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಯಾರ್ಯಾರು ಗಲಭೆಗೆ ಕಾರಣರಾಗಿದ್ದಾರೋ ಬಹುತೇಕ ಎಲ್ಲರ ಬಂಧನವಾಗಿದೆ. ಈ ಬಗ್ಗೆ ಸಮಗ್ರವಾಗಿ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ ಗಲಭೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಕಾರಣಕ್ಕಾಗಿ ಗಲಭೆ ಉಂಟುಮಾಡ್ತಿದ್ದಾರೆ. ಕೋಮು ಸೌಹಾರ್ದತೆ ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ. ಅಂತಹವರ ಮೇಲೆ ಉಗ್ರವಾದ ಕ್ರಮ ಕೈಗೊಳ್ಳಬೇಕು ಅಂತ ಒತ್ತಾಯ ಮಾಡ್ತೇನೆ. ರಾಜ್ಯದ ಮುಖ್ಯಮಂತ್ರಿಗಳು ಸೂಕ್ತವಾದ ಹಾಗೂ ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಮುಂದೆ ಇಂತಹ ಘಟನೆಗಳು ನಡೆಯಬಾರದು. ಆ ರೀತಿಯ ಬಿಗಿ…