Headlines

ರಸ್ತೆ ಕಾಮಗಾರಿ ವಿರೋಧಿಸಿ ಗ್ರಾಮಸ್ಥರಿಂದ ಪ್ರತಿಭಟನೆ : ದರ್ಪ ತೋರಿದ ಗುತ್ತಿಗೆದಾರನ ಬೆವರಿಳಿಸಿದ ಗ್ರಾಮಸ್ಥರು

ರಿಪ್ಪನ್‌ಪೇಟೆ: ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂಡ್ಲಿ, ಆನೆಗದ್ದೆ ಸಂಪರ್ಕ ರಸ್ತೆಯ 125ಮೀ. ಉದ್ದದ ಕಾಂಕ್ರೀಟ್ ರಸ್ತೆ ಮತ್ತು ಡಾಂಬರೀಕರಣ ರಸ್ತೆಯ ಕಾಮಗಾರಿಗೆ ಸರ್ಕಾರ ಮಂಜುರಾತಿ ಆದೇಶ ನೀಡಿದ್ದು ಆದರೆ ಕಾಮಗಾರಿಯ ಗುತ್ತಿಗೆದಾರರು ಮೂಡ್ಲಿ ರಸ್ತೆಯನ್ನು ಮಾಡದೆ ಬೇರೆ ಕಡೆ ರಸ್ತೆ ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕಾಮಗಾರಿ ತಡೆದು ಇಂದು ಮೂಡ್ಲಿ ಗ್ರಾಮದ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಇಂದು ಮೂಡ್ಲಿ ಗ್ರಾಮಕ್ಕೆ ಮಂಜೂರಾದ ರಸ್ತೆಯನ್ನು ಬೇರೆಡೆ ಮಾಡುತ್ತಿರುವುದನ್ನು ಗಮನಿಸಿದ ಗ್ರಾಮಸ್ಥರು ಕೆಲಸ ನಿಲ್ಲಿಸುವಂತೆ ಹೇಳಿದಾಗ ಗುತ್ತಿಗೆದಾರನು…

Read More

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ :

ಹೊಸನಗರ ತಾಲೂಕಿನ ಎಂ.ಗುಡ್ಡೇಕೊಪ್ಪದ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್-1 ಹೆಚ್ಚುವರಿ ಪ್ರಭಾರ ಪಿಡಿಒ ಮುರುಗೇಶ್ ಎಸಿಬಿ ಬಲೆಗೆ ಬಿದ್ದಿದ್ದಾನೆ. ಇಂದು ಬೆಳಿಗ್ಗೆ ತಾಲೂಕಿನ ಕೋಡೂರಿನ ಕುಸಗುಂಡಿಯ ಸಿದ್ದಗಿರಿ ನಿವಾಸಿ ಸತೀಶ್ ರವರ ಬಳಿ ಪಿಡಿಒ ಮುರುಗೇಶ್ 30 ಸಾವಿರ ರೂ ಲಂಚ ಪಡೆಯುವಾಗ ಎಸಿಬಿ ಬಲೆಗೆ‌ಬಿದ್ದಿದ್ದಾನೆ. ಸತೀಶ್ ರವರು ತಮ್ಮ ಭೂ ಪರಿವರ್ತನೆಗೊಂಡ 10 ಗುಂಟೆ ಜಾಗಕ್ಕೆ ಪ್ಲಾನ್ ಅಪ್ರೂವಲ್, ಮುಟೇಷನ್ ಮತ್ತು‌ 9  ಮತ್ತು 11 ಅರ್ಜಿ ಅನುಮತಿ ಮಾಡಿಕೊಡಲು ಎಂ.ಗುಡ್ಡೇಕೊಪ್ಪಕ್ಕೆ ಅರ್ಜಿ ಸಲ್ಲಿಸಿದ್ದರು. ಸತೀಶ್…

Read More

2023 ರ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದಿಂದ ಸ್ಪರ್ಧೆ ಮಾಡ್ತಾರಾ ಕಿಮ್ಮನೆ ರತ್ನಾಕರ್ !?

ತೀರ್ಥಹಳ್ಳಿ : ವಿಧಾನಸಭಾ ಚುನಾವಣೆ 2023 ರಲ್ಲಿ ನೆಡೆಯಲಿದ್ದು ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪಕ್ಷ ಸ್ಪರ್ಧೆ ಮಾಡಲಿದೆ. ದೆಹಲಿಯ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದು ಅದರಲ್ಲಿ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಸ್ಪರ್ಧೆ ಮಾಡಲಿದ್ದಾರ ಎಂಬ ಪ್ರೆಶ್ನೆ ಮೂಡಿದೆ..!?  ಕಾರಣ ತೀರ್ಥಹಳ್ಳಿಯ ಕಾಂಗ್ರೆಸ್ ಪಕ್ಷದಲ್ಲಿ ಈಗ ಆರ್ ಎಂ ಮಂಜುನಾಥ ಗೌಡರು ಸಹ ಇದ್ದು ಕಿಮ್ಮನೆ…

Read More

ರಿಪ್ಪನ್ ಪೇಟೆ ಮೆಸ್ಕಾಂ ಇಲಾಖೆಯ ದಿವ್ಯ ನಿರ್ಲಕ್ಷ್ಯಕ್ಕೆ ಗೋವುಗಳ ಬಲಿ : ನರ ಬಲಿಯಾಗುವವರೆಗೂ ಕಾಯುತ್ತಿದೆಯೋ ಮೆಸ್ಕಾಂ ಇಲಾಖೆ

ರಿಪ್ಪನ್ ಪೇಟೆ : ಮೆಸ್ಕಾಂ ಇಲಾಖೆಯ ನಿರ್ಲಕ್ಷ್ಯದಿಂದ ಕೆದಲುಗುಡ್ಡೆ ಗ್ರಾಮದಲ್ಲಿ ಜಾನುವಾರುಗಳು ಸಾವನ್ನಪ್ಪುತ್ತಿದ್ದು ಮೆಸ್ಕಾಂ ಇಲಾಖೆ ಅಧಿಕಾರಿಗಳು ಜಾಣ ಕುರುಡುತನ ತೋರಿಸುತ್ತಿದ್ದಾರೆ ಎಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಆರೋಪಿಸಿದ್ದಾರೆ  ಕೆದಲು ಗುಡ್ಡೆಯ ಗಣೇಶ್ ಎಂಬುವವರಿಗೆ ಸೇರಿದ ಹಸುವೊಂದು ಮೊನ್ನೆ ಕೆದಲು ಗುಡ್ಡೆ ಗ್ರಾಮದಲ್ಲಿ ಅಳವಡಿಸಿರುವ ಟ್ರಾನ್ಸ್ ಫರ್ಮ್ ಶಾರ್ಟ್ ಸರ್ಕ್ಯೂಟ್ ಆಗಿ ಅರ್ಥಿಂಗ್ ಆಗಿರುವುದರಿಂದ ಮೃತಪಟ್ಟಿದೆ.ಈ ಬಗ್ಗೆ ಮೆಸ್ಕಾಂ ಇಲಾಖೆಯ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿರುವುದಿಲ್ಲ. ರೈತರು ಕಷ್ಟಪಟ್ಟು ಸಾಕಿ…

Read More

ಶಿವಮೊಗ್ಗದ ಮಾರಿ ಜಾತ್ರೆಯಲ್ಲಿ ಮುಸ್ಲಿಮರಿಗೆ ವ್ಯಾಪಾರ ಬೇಡ ಎಂದ ಬಿಜೆಪಿ ಯವರು ನಗರದ ಸಿಟಿ ಮಾಲ್​ನಲ್ಲಿ ಮುಸ್ಲಿಂ ಉದ್ಯಮಿಯ ಫನ್​-ಗೇಮ್​ ಉದ್ಘಾಟಿಸುತ್ತಾರೆ : ಯಮುನಾ ರಂಗೇಗೌಡ

ಶಿವಮೊಗ್ಗ : ನಾಗರಿಕರಿಗೆ ಉತ್ತಮ ಆಡಳಿತ ಕೊಡಲು ಸಾಧ್ಯವಿಲ್ಲದಿದ್ದರೂ ನಾಗರಿಕರ ಹಿತಕಾಯುವಲ್ಲಿ ವಿಫಲರಾದರೂ ನಕಲಿ ಹಿಂದುತ್ವದ ಘೋಷಣೆ ಕೂಗುತ್ತಾ ಬಡ ಮುಸ್ಲಿಂ ವ್ಯಾಪಾರಿಗಳನ್ನು ದ್ವೇಷ ಮಾಡಿ, ಅವರ ದಿನನಿತ್ಯದ ಕೂಲಿಯನ್ನು ಕಿತ್ತುಕೊಂಡು ಕಾರ್ಪೊರೇಟ್ ಬಂಡವಾಳಶಾಹಿ ಮುಸ್ಲಿಮರೊಂದಿಗೆ ಕೈಜೋಡಿಸುತ್ತಿರುವ ನಕಲಿ ಹಿಂದುತ್ವವಾದಿಗಳು ಈ ಬಿಜೆಪಿ ಯವರು ಎಂದು ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ವಾಗ್ದಾಳಿ ನಡೆಸಿದ್ದಾರೆ. ಕಳೆದವಾರ ನಡೆದ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವದಲ್ಲಿ ಯಾವುದೇ ಮುಸ್ಲಿಮರಿಗೆ ವ್ಯಾಪಾರ ಕೊಡಬಾರದೆಂದು ರೋಷಾವೇಷ ತೋರಿದ್ದ…

Read More

ಪರೀಕ್ಷೆಯಲ್ಲಿ ನಕಲು ಮಾಡಿದ್ದಕ್ಕೆ ವಿದ್ಯಾರ್ಥಿಯ ಕೈಯನ್ನು ಕಚ್ಚಿದ ಉಪನ್ಯಾಸಕ;

ಹೊಸನಗರ :  ಪರೀಕ್ಷೆಯಲ್ಲಿ ನಕಲು ಮಾಡಿದ ಎನ್ನುವ ಕಾರಣಕ್ಕೆ ವಿದ್ಯಾರ್ಥಿಯೊಬ್ಬನ ಕೈಯನ್ನು ಉಪನ್ಯಾಸಕನೊಬ್ಬರು ಕಚ್ಚಿರುವ ಘಟನೆ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನಲ್ಲಿ ನಡೆದಿದೆ. ಅಂತಿಮ ಬಿಎ ಪದವಿ ಓದುತ್ತಿರುವ ಕೀರ್ತೇಶ್ ಎಂಬ ವಿದ್ಯಾರ್ಥಿ  ಇಂದು ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದಾಗ ಪರೀಕ್ಷಾ ಮೇಲ್ವಿಚಾರಕರಾದ ಅಂಜನ್ ಕುಮಾರ್ ವಿದ್ಯಾರ್ಥಿಯನ್ನು ಪ್ರಶ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಬಳಿ ಇದ್ದ ಮೊಬೈಲ್ ನ್ನು ಕಿತ್ತುಕೊಳ್ಳಲು ಅಂಜನ್ ಕುಮಾರ್ ಪ್ರಯತ್ನಿಸಿದ್ದಾರೆ.ಈ ಸಂದರ್ಭದಲ್ಲಿ ವಿದ್ಯಾರ್ಥಿ ಕೀರ್ತೆಶ್ ಪರೀಕ್ಷಾ ಮೇಲ್ವಿಚಾರಕ  ಅಂಜನ್ ಕುಮಾರ್ ರವರಿಗೆ ಉಡಾಫೆ…

Read More

ಹರತಾಳು ಹಾಲಪ್ಪ ಓರ್ವ ಗೂಂಡಾ ಹಾಗೂ ದುಷ್ಟ ಶಾಸಕ : ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು

ಸಾಗರ ; ಹಲ್ಲೆ ಎನ್ನುವುದು ನಡೆಯಬಾರದು. ಅದು ಸಹ ಶಾಸಕರ‌ ಸಮ್ಮುಖದಲ್ಲಿ ನಡೆದಂತಹ ಹಲ್ಲೆಗಳು ಖಂಡಿಸಬೇಕಾಗಿದೆ. ಇತ್ತಿಚೆಗೆ ಸಾಗರದ ಪ್ರತಿಷ್ಟಿತ ವಿದ್ಯಾ ಸಂಸ್ಥೆಗಳ ಜನಕವಾಗಿರುವ ಮಲೆನಾಡು ಅಭಿವೃದ್ಧಿ ಪ್ರತಿಷ್ಟಾನದ  ಸರ್ವ ಸದಸ್ಯರ ಸಭೆಯಲ್ಲಿ ನಡೆದ ಶಾಸಕರು ಮತ್ತು ಬೆಂಬಲಿಗರು ಮಾಡಿದ ಹಲ್ಲೆ ಮಾನವ ಸಮಾಜ ತಲೆ ತಗ್ಗಿಸುವಂತದ್ದು ಎಂದು ಮಾಜಿ ಸಾಗರ ಕ್ಷೇತ್ರ ಶಾಸಕ ಮತ್ತು ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಾಸಕರನ್ನು ಆಹ್ವಾನ ಮಾಡಿದ್ದರು‌ ಅದಕ್ಕೆ ಅವರು ಅರ್ಹರಾದರೂ…

Read More

ಶಾಸಕರ ಸರ್ಕಾರಿ ಮಾದರಿ ಶಾಲೆಯಲ್ಲಿ ಹಿಂದಿ ಶಿಕ್ಷಕಕನ ಬೇಜವಬ್ದಾರಿ ನಡೆ : ಸ್ಥಳೀಯರ ಹಾಗೂ ಪೋಷಕರ ಆಕ್ರೋಶ

ಶಿಕ್ಷಣ ಎಂದರೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಓದು ಬರಹ ಹಾಗೂ ಶಿಸ್ತುಬದ್ಧವಾಗಿರುವಂತೆ ಮಾಡುವುದಕ್ಕೆ ಶಿಕ್ಷಣ ಎಂದು ಹೇಳಲಾಗುವುದು. ಗುರುಗಳಾದವರು ತಮ್ಮ ತಮ್ಮ ವಿದ್ಯಾರ್ಥಿಗಳು ಸರಿಯಾಗಿ ಶಿಕ್ಷಣ ಪಡೆಯದಿದ್ದಲ್ಲಿ, ಏನಾದರು ತಪ್ಪು ಮಾಡಿದಲ್ಲಿ ಅವರನ್ನು ತಿದ್ದಿ ತೀಡಿ ಸರಿದಾರಿಯಲ್ಲಿ ನಡೆಸುವ ಅಥವಾ ಅವರಿಗೆ ಶೈಕ್ಷಣಿಕವಾಗಿ ತಮ್ಮನ್ನು ತಾವು ಬೆಳೆಸಿಕೊಳ್ಳುವ ದಾರಿ ತೋರುವುದಲ್ಲದೇ, ವಿದ್ಯಾರ್ಥಿಗಳಿಗೆ ದೇಶದ ಸದ್ಪ್ರಜೆಯಾಗಿಸುವುದು ಶಿಕ್ಷಕರ ಹೊಣೆಯಾಗಿದೆ. ಇಂತಹ ಮಹತ್ವದ ಶಿಕ್ಷಣ ನೀಡುವ ಶಿಕ್ಷಕರೇ ಶಾಲೆಯ ಶಿಸ್ತನ್ನು ಪ್ರತಿಪಾದಿಸಿದ್ದರೆ ಆ ಶಾಲೆಯ ವಿದ್ಯಾರ್ಥಿಗಳು ಶಿಸ್ತನ್ನು ಹಾಗೂ ಶಿಕ್ಷಣ…

Read More

ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More

ಕಲ್ಲೂರು ಗ್ರಾಮದಲ್ಲಿ ಶಾಂತವೇರಿ ಗೋಪಾಲಗೌಡರ ಜನ್ಮಶತಮಾನೋತ್ಸವ:

ಲಕ್ಷಾಂತರ ಜನರ ಬದುಕಿಗೆ ಭರವಸೆ  ತುಂಬಿದ, ಭೂಮಿ ಹಕ್ಕು ಕೊಡಿಸಲು ಮಲೆನಾಡಿನಲ್ಲಿ ಹೊತ್ತಿಸಿದ ಕಿಡಿ ರಾಜ್ಯಾದ್ಯಂತ ಹರಡಿ ಸಮ ಸಮಾಜದ ಬದುಕಿಗೆ ಕಟ್ಟಿದ ಹೊಸ ಕನಸನ್ನು ನನಸು ಮಾಡಲು ಸಾಧ್ಯ ಎಂದು ತೋರಿಸಿಕೊಟ್ಟ ಕರ್ನಾಟಕ ರಾಜಕಾರಣದಲ್ಲಿ ತಮ್ಮದೇ ಆದ ವಿಶೇಷ ಛಾಪು ಮೂಡಿಸಿರುವ ಶಾಂತವೇರಿ ಗೋಪಾಲಗೌಡರ ಚಿಂತನೆಗಳು ಇಂದಿಗೂ ಪ್ರಸ್ತುತ ಎಂದು ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದರು.  ಭಾನುವಾರ ಸಂಜೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಲೂರು ಗ್ರಾಮದಲ್ಲಿ ನಡೆದ ಶಾಂತವೇರಿ…

Read More