ಜಿಲ್ಲಾ ಸುದ್ದಿ:
ಶಿವಮೊಗ್ಗದಲ್ಲಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ!
ಶಿವಮೊಗ್ಗ: ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ್ದು, ಈ ಘಟನೆ ಶಿವಮೊಗ್ಗದ ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಶಾಲೆಯಲ್ಲಿ ನಡೆದಿದೆ. ಸದ್ಯ ವಿದ್ಯಾರ್ಥಿಗಳು ಪ್ರಾಥಮಿಕ ಚಿಕಿತ್ಸೆ ಪಡೆದು ಪರೀಕ್ಷೆಗೆ ಹಾಜರಾಗಿದ್ದಾರೆ. ಹೆಜ್ಜೇನು ದಾಳಿಗೊಳಗಾದ ಪೋಷಕರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಿವಮೊಗ್ಗ ಡಿಡಿಪಿಐ ರಮೇಶ್, ಪರೀಕ್ಷೆಗೆ ಬರೆಯಲು ಬಂದ ಐದು ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ನಡೆದಿದೆ. ಪರೀಕ್ಷೆ ಕೇಂದ್ರದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಹೆಜ್ಜೇನು ದಾಳಿಗೊಳಗಾದ…
ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂರಕ : ಆರಗ ಜ್ಞಾನೇಂದ್ರ.
ರಿಪ್ಪನ್ ಪೇಟೆ: ಸರಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಅದರಲ್ಲೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಕರ್ನಾಟಕ ಪಬ್ಲಿಕ್ ಶಾಲೆಗಳ ತೆರೆಯುವಿಕೆಯಿಂದ ಗುಣಮಟ್ಟದ ಶಿಕ್ಷಣ ಪಡೆಯುವುದರ ಜೊತೆಗೆ ಇಂಗ್ಲಿಷ್ ಭಾಷೆಯ ಬಳಕೆಯ ದುರುಪಯೋಗ ಸಿಗುತ್ತದೆ ಎಂದು ರಾಜ್ಯ ಗೃಹ ಸಚಿವ ಹಾಗೂ ತೀರ್ಥಳ್ಳಿ ಕ್ಷೇತ್ರದ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಅಮೃತ ಗ್ರಾಮದಲ್ಲಿ ಶನಿವಾರ ಆಯೋಜಿಸಲಾಗಿದ್ದ ಎರಡು ಕೋಟಿ ರೂ ವೆಚ್ಚದ ಕರ್ನಾಟಕ ಪಬ್ಲಿಕ್ ಸ್ಕೂಲಿನ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆಯನ್ನು ನೆರವೇರಿಸಿ ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ…
ರಿಪ್ಪನ್ಪೇಟೆ ಸಮೀಪದ ಬಾಳೂರು ಗ್ರಾಮದ ಬಡ ರೋಗಿಯ ಚಿಕಿತ್ಸೆಗೆ ನೆರವಾಗಿ :
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಾಳೂರೂ ವಾಸಿಯಾದ ರಾಜೇಶ್ 34 ವರ್ಷ ಇವರು (GBS syndrome )ಕಾಯಿಲೆಗೆ ತುತ್ತಾಗಿದ್ದು ಇವರ ಚಿಕಿತ್ಸೆಗೆ ಸುಮಾರು 15 ಲಕ್ಷದ ಅವಶ್ಯಕತೆಯಿದ್ದು,ಕೂಲಿ ಮಾಡಿ ಬದುಕುವ ಇವರ ಆರ್ಥಿಕ ಪರಿಸ್ಥಿತಿ ತೀರಾ ಹದಗೆಟ್ಟಿದ್ದು ಚಿಕಿತ್ಸೆಯ ಹಣಕ್ಕಾಗಿ ನಮ್ಮ ಮಾದ್ಯಮದ ಮೂಲಕ ದಾನಿಗಳ ಮುಂದೆ ಬಂದಿದ್ದಾರೆ. ಈ ಖಾಯಿಲೆಯಿಂದ ಬಳಲುತ್ತಿರುವ ಇವರಿಗೆ ಸುಮಾರು ಐದಾರು ತಿಂಗಳುಗಳಿಂದ ಮಂಗಳೂರಿನ ಎನಪೋಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ್ದರು ಈಗಾಗಲೇ 6 ರಿಂದ 7 ಲಕ್ಷ ಹಣ ಖರ್ಚಾಗಿದ್ದು ಹಣದ…
ಕೊಡಚಾದ್ರಿ ಬೆಟ್ಟಕ್ಕೆ ಕೇಬಲ್ ಕಾರ್ ಗೆ ಅನುಮೋದನೆ : ಸಂಸದ ಬಿ ವೈ ರಾಘವೇಂದ್ರ
1200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ಕೇಬಲ್ ಕಾರ್ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಶುಕ್ರವಾರ ಅನುಮೊದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 20 ಕೋಟಿ ರೂ. ನೀಡಿದ್ದರು.ಆದರೆ, ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಶುಕ್ರವಾರ ದೆಹಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ…
ಮಲೆನಾಡಿನಲ್ಲಿ ಮತ್ತೆ ಶುರುವಾಯಿತಾ ಮಂಗನ ಕಾಯಿಲೆ ಆತಂಕ..!
ತೀರ್ಥಹಳ್ಳಿ ತಾಲೂಕಿನ ಕನ್ನಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಮಹಿಳೆಯರಿಗೆ ಮಂಗನ ಕಾಯಿಲೆ (ಕೆಎಫ್ಡಿ) ಸೋಂಕು ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ಕಾಡಿನಲ್ಲಿ ದರಗು ತರಲು ಹೋಗಿದ್ದು ಅಲ್ಲಿಯೇ ಸೋಂಕು ತಗುಲಿದೆ. ಕುಡುವಳ್ಳಿ ಗ್ರಾಮದ ಸುಶೀಲಮ್ಮ (69) ಹಾಗೂ ಹಿರೇಬೈಲು ಗ್ರಾಮದ ಉಷಾ (47) ಸೋಂಕಿತರು. ಈ ಇಬ್ಬರೂ ಸ್ಥಳೀಯರೇ ಆಗಿದ್ದಾರೆ. ಒಬ್ಬರನ್ನು ಇಲ್ಲಿನ ಸರ್ಕಾರಿ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಿಂದ ತಾಲೂಕಿನಲ್ಲಿ ಈ ವರ್ಷದ ಸೋಂಕಿತರ ಸಂಖ್ಯೆ 18ಕ್ಕೆ ಏರಿದೆ….
ಬಿಜೆಪಿಯವರ ಮಾತನ್ನು ಕೇಳುವ ಪೊಲೀಸರು ಕೇಸರಿ ಸಮವಸ್ತ್ರ ತೊಡಲಿ : ಮಾಜಿ ಸಚಿವ ಕಿಮ್ಮನೆ ರತ್ನಾಕರ್
ತೀರ್ಥಹಳ್ಳಿ:ಕೇಂದ್ರ ಮತ್ತು ರಾಜ್ಯ ಎರಡು ಕಡೆಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷ ಸಮಾಜದ ಸ್ವಾಸ್ಥ್ಯ ಕಾಪಾಡುವ ಬದಲಿಗೆ ಪ್ರತಿದಿನ ಜನರ ಹೃದಯ ಕೊಲ್ಲುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ತಿಳಿಸಿದರು. ಶುಕ್ರವಾರ ಪಟ್ಟಣದ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಹಿಜಾಬ್ ನಿಂದ ಪ್ರಾರಂಭವಾದ ಘಟನೆ ಇಂದು ವ್ಯಾಪಾರಕ್ಕೆ ನಿರ್ಬಂಧ ಹಾಕುವ ಮಟ್ಟಕ್ಕೆ ಬಂದು ನಿಂತಿದೆ.ಸಮಾಜವನ್ನು ಒಟ್ಟಿಗೆ ತೆಗೆದುಕೊಂಡು ಹೋಗುವ ಒಬ್ಬ ನಾಯಕರು ಬಿಜೆಪಿ ಪಕ್ಷದಲ್ಲಿ ಇಲ್ಲ ಮೋದಿಗೂ ಪುಟಿನ್…
ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ
ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…
ಸಾಗರದಲ್ಲಿ ಆರ್ಸಿಬಿ ಕ್ರೇಜ್ ಜೋರು..! ಈ ಸಲ ಕಪ್ ನಮ್ದೇ ಎಂದ RCB ಅಭಿಮಾನಿ ಸಂತೋಷ್ ಸದ್ಗುರು…! ವಿಶೇಷ ಕಾರನ್ನು ಉದ್ಘಾಟಿಸಿದ ಕಿರುತೆರೆ ನಟಿ ರಜನಿ
ಸಾಗರ :ಈ ಸಲ ಕಪ್ ನಮ್ದೆ’ ಈಗಾಗಲೇ ಈ ವಾಕ್ಯ ನಿಮ್ಮ ಮನದಲ್ಲೂ ಗುಣುಗುಡುತ್ತಿರಬಹುದು. ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್ಶಿಪ್, ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಿರೀಟ ಗೆಲ್ಲಲು ಪಣತೊಟ್ಟಿದೆ.ಅಭಿಮಾನಿಗಳಂತೂ ಈ ಬಾರಿ ಕಪ್ ಗೆದ್ದೇ ಗೆಲ್ತೀವಿ ಎಂಬ ಅಚಲ ಆತ್ಮವಿಶ್ವಾಸದಲ್ಲಿದ್ದಾರೆ. ಇದರಂತೆ ಸಾಮಾಜಿಕ ಜಾಲತಾಣಗಳಲ್ಲಿ ‘ಈ ಸಲ ಕಪ್ ನಮ್ದೆ’ ಎಂಬ ಹ್ಯಾಶ್ಟ್ಯಾಗ್ ಗಳು ಕೂಡ ವೈರಲ್ ಆಗಿ ಹರಡುತ್ತಿದೆ. ಈ ಡೈಲಾಗ್ ಮೂಲಕ ಆರ್ಸಿಬಿ ಫ್ಯಾನ್ಸ್ಗಳು ಒಂದಲ್ಲ ಒಂದು ರೀತಿ…
ಮನೆ ಮಾರಾಟ ಮಾಡಿ ನಂತರ ನಕಲಿ ದಾಖಲೆ ಎಂದು ಪೊಲೀಸರಿಗೆ ಯಾಮಾರಿಸುತ್ತಿರುವ ಮನೆ ಒಡತಿ :
ಭದ್ರಾವತಿ : ಇಲ್ಲಿನ ಬೊಮ್ಮನಕಟ್ಟೆಯ ಲಕ್ಷ್ಮಮ್ಮ ಎಂಬುವವರು ಕಳೆದ ವರ್ಷ ನವೆಂಬರ್ ನಲ್ಲಿ ಹೊಳೆಸಿದ್ದಾಪುರ ವಾಸಿ ಕೌಶಿಕ್ ಎಂಬುವವರಿಗೆ ಬೊಮ್ಮನಕಟ್ಟೆಯಲ್ಲಿರುವ ಮನೆಯನ್ನು ಮಾರಾಟ ಮಾಡಿ ಹಣವನ್ನು ಪಡೆದು ಈಗ ಹೈಡ್ರಾಮ ನಡೆಸುತ್ತಿರುವ ಘಟನೆ ನಡೆದಿದೆ. ಹೌದು !! ಮನೆಯನ್ನು ಕಾನೂನು ಪ್ರಕಾರವಾಗಿ 31ಲಕ್ಷ 32000 ಸಾವಿರ ರೂಗಳಿಗೆ ವ್ಯಾಪಾರ ಮಾಡಿ ಹಣ ಪಡೆದು ಭದ್ರಾವತಿ ನೋಂದಣಿ ಕಛೇರಿಯಲ್ಲಿ ಸ್ವತಃ ಅವರೇ ನೋಂದಣಿ ಮಾಡಿಕೊಟ್ಟು ಈಗ ಹೈಡ್ರಾಮ ನಡೆಸಿ ದೇಶಕ್ಕಾಗಿ 20 ವರ್ಷ ಸೈನ್ಯದಲ್ಲಿ ಕಾರ್ಯ ನಿರ್ವಹಿಸಿ ಈಗ…
ಸಾಗರದ ಮಹಾಗಣಪತಿ ಜಾತ್ರೆಯಲ್ಲಿ ಹಿಂದೂ ಸಮಾಜದ ವ್ಯಾಪಾರಿಗಳಿಗೆ ಮಾತ್ರ ಜಾತ್ರಾ ಮಳಿಗೆ ನೀಡಲು ಒತ್ತಾಯ:
ಏಪ್ರಿಲ್ 5 ರಿಂದ ನಡೆಯುವ ಇತಿಹಾಸ ಪ್ರಸಿದ್ಧವಾದ ನಗರದ ಮಹಾಗಣಪತಿ ಜಾತ್ರೆ ವ್ಯಾಪಾರ ಮಳಿಗೆಗಳನ್ನು ಹಿಂದೂ ಸಮಾಜದ ವ್ಯಾಪಾರಿಗಳಿಗೆ ನೀಡುವಂತೆ ಒತ್ತಾಯಿಸಿ ಗುರುವಾರ ವಿಶ್ವಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜಾತ್ರೆಯಲ್ಲಿ ಮಹಾಗಣಪತಿ ರಸ್ತೆಯ ಇಕ್ಕೆಲಗಳಲ್ಲಿ ಹಣ್ಣುಕಾಯಿ, ಆಟಿಕೆ, ತಿಂಡಿತಿನಿಸು ಇತ್ಯಾದಿ ವ್ಯಾಪಾರಿ ಮಳಿಗೆಗಳನ್ನು ನಿರ್ಮಿಸಿ ತಮ್ಮ ಕಡೆಯಿಂದ ಹರಾಜು ಹಾಕಿ ಹೆಚ್ಚು ಹರಾಜು ಹಿಡಿದವರಿಗೆ ನೀಡಲಾಗುತ್ತಿದೆ. ದೇವಸ್ಥಾನವು ಮುಜರಾಯಿಗೆ ಸೇರಿದ್ದು, ಅನ್ಯಧರ್ಮಿಯರಿಗೆ ನೀಡಲು ಅವಕಾಶ ಇರುವುದಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ. ಪ್ರಸ್ತುತ ಮುಸ್ಲೀಂರು ಈ…