ಜಿಲ್ಲಾ ಸುದ್ದಿ:
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ.
ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಗ್ರಾಮೀಣ ಮಕ್ಕಳ ಪ್ರತಿಭೆಗೆ ಪ್ರೋತ್ಸಾಹ ಅಗತ್ಯ – ಚೇತನ ಆರ್.ಪಿ. ರಿಪ್ಪನ್ ಪೇಟೆ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಶೈಕ್ಷಣಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಆಸಕ್ತಿ ಮತ್ತು ಪ್ರತಿಭೆ ಅಪಾರವಾಗಿದೆ. ಪೋಷಕರು ಹಾಗೂ ಶಿಕ್ಷಕರು ಅವರಿಗೆ ಸೂಕ್ತ ಪ್ರೋತ್ಸಾಹ ನೀಡಿದರೆ, ಮುಂದಿನ ದಿನಗಳಲ್ಲಿ ಅವರು ಉತ್ತಮ ಪ್ರಜೆಗಳಾಗಿ ಬೆಳೆದು ಬರುವರು ಎಂದು ಕ್ಷೇತ್ರ ಶಿಕ್ಷಣ ಅಧಿಕಾರಿ ಚೇತನ ಆರ್.ಪಿ. ಹೇಳಿದರು. ಪಟ್ಟಣದ ಗುಡ್ ಶೆಪರ್ಡ್ ಶಾಲೆಯಲ್ಲಿ ಬಾಳೂರು ಮತ್ತು ರಿಪ್ಪನ್ ಪೇಟೆ ಗ್ರಾಮ…
ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ!
ರಸ್ತೆಯಲ್ಲಿ ಒಂಟಿ ಸಲಗ ಪ್ರತ್ಯಕ್ಷ : ಹೆದ್ದಾರಿಯಲ್ಲಿ ಆತಂಕ! ಶಿವಮೊಗ್ಗ: ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಮಂಡಗದ್ದೆ ಸಮೀಪ ರಸ್ತೆಯಲ್ಲೇ ಒಂಟಿ ಸಲಗವೊಂದು ಪ್ರತ್ಯಕ್ಷವಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಮಂಡಗದ್ದೆ ಬಳಿ ವೇಗವಾಗಿ ಬರುತ್ತಿದ್ದ ಬಸ್ಗೆ ಕಾಡಾನೆ ದಿಢೀರ್ ಎದುರಾಗಿದೆ. ಅನಿರೀಕ್ಷಿತವಾಗಿ ಆನೆಯನ್ನು ನೋಡಿದ ಬಸ್ ಚಾಲಕ ತಕ್ಷಣವೇ ಬಸ್ ಅನ್ನು ನಿಲ್ಲಿಸಿ ಅಪಾಯವನ್ನು ತಪ್ಪಿಸಿದ್ದಾರೆ. ಈ ಘಟನೆಯಿಂದಾಗಿ ಬಸ್ನಲ್ಲಿದ್ದ ಪ್ರಯಾಣಿಕರು ಒಮ್ಮೆಲೆ ಆತಂಕಕ್ಕೊಳಗಾದರು. ಹಲವರು ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ಆನೆಯ ಚಿತ್ರಗಳನ್ನು ಸೆರೆಹಿಡಿದರೆ, ಇನ್ನು ಕೆಲವರು ಗಾಬರಿಯಾಗಿದ್ದರು….
RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ
RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…
SHIVAMOGGA | ‘ಅಕ್ಕ ಪಡೆ’ ತಂಡ ರಚನೆಗೆ ಮಹಿಳೆಯರಿಂದ ಅರ್ಜಿಆಹ್ವಾನ
SHIVAMOGGA | ಅಕ್ಕ ಪಡೆ ತಂಡ ರಚನೆಗೆ ಮಹಿಳೆಯರಿಂದ ಅರ್ಜಿಆಹ್ವಾನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಉದ್ದೇಶದಿಂದ ಜಿಲ್ಲೆಯಲ್ಲಿ ಅಕ್ಕ ಪಡೆ ತಂಡ ರಚನೆ ಮಾಡಲು ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ತಂಡಕ್ಕೆ ಎನ್ ಸಿ ಸಿ ‘ಸಿ’ ಪ್ರಮಾಣ ಪತ್ರ ಹೊಂದಿರುವ 5 ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳು 35 ರಿಂದ 45 ವರ್ಷದೊಳಗಿನವರಾಗಿದ್ದು,…
ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು
ರಿಪ್ಪನ್ ಪೇಟೆಯಲ್ಲಿ ತಂಬಾಕು ನಿಯಂತ್ರಣ ಕಾಯ್ದೆ ಜಾರಿಗೆ ವಿಶೇಷ ದಾಳಿ – 40 ಪ್ರಕರಣ ದಾಖಲು ರಿಪ್ಪನ್ಪೇಟೆ : ಪಟ್ಟಣದಲ್ಲಿ ತಂಬಾಕು ನಿಯಂತ್ರಣ ಕಾಯ್ದೆ (COTPA) ಉಲ್ಲಂಘನೆ ವಿರುದ್ಧ ಆರೋಗ್ಯ ಇಲಾಖೆ ವತಿಯಿಂದ ವಿಶೇಷ ದಾಳಿ ನಡೆಯಿತು. ಈ ಸಂದರ್ಭದಲ್ಲಿ ಒಟ್ಟು 40 ಪ್ರಕರಣಗಳನ್ನು ದಾಖಲಿಸಿ, ₹5000 ದಂಡವನ್ನು ಸಂಗ್ರಹಿಸಲಾಯಿತು. ಈ ದಾಳಿ ಕಾರ್ಯಾಚರಣೆಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಸುರೇಶ್ ನೇತೃತ್ವ ವಹಿಸಿದ್ದರು. ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರರಾದ ಹೇಮಂತ್ ರಾಜ್…
ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ
ನಿಟ್ಟೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ – 6.5 ಕೋಟಿ ಅನುದಾನ ನೀಡಿದ ಶಾಸಕರಿಗೆ ಧನ್ಯವಾದ, ಹೊಸ ಪದಾಧಿಕಾರಿಗಳಿಗೆ ಸನ್ಮಾನ ಹೊಸನಗರ, ನವೆಂಬರ್ 3: ಹೊಸನಗರ ತಾಲೂಕಿನ ನಿಟ್ಟೂರಿನಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಘಟಕದ ವತಿಯಿಂದ ಕಾರ್ಯಕರ್ತರ ಸಭೆ ಜರುಗಿತು. ನಿಟ್ಟೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಾದ ಹಸಿರೆಮಕ್ಕಿ–ಕೆ.ಬಿ. ಸರ್ಕಲ್ ರಸ್ತೆ, ರಾಮೇಶ್ವರ, ಮಹಾಗಣಪತಿ ಹಾಗೂ ವೀರಭದ್ರ ದೇವಸ್ಥಾನಗಳ ರಸ್ತೆ, ಕಾಲುಸಂಕ ನಿರ್ಮಾಣ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ವಿಶೇಷ…
ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ
ಸಮಟಗಾರು ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ “ಗೋವಿಂದ ಬಾಬು ಪೂಜಾರಿಯಂತಹ ಹೃದಯವಂತರು ಸಮಾಜದ ನಿಜವಾದ ಶಕ್ತಿ” — ಆರಗ ಜ್ಞಾನೇಂದ್ರ ಹುಂಚ : ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮಟಗಾರಿನಲ್ಲಿ ಇಂದು ಶ್ರೀ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ (ರಿ) ಉಪ್ಪುಂದ ಅವರ ಆಶ್ರಯದಲ್ಲಿ ಸ್ಥಾಪಿಸಲಾದ ಸುಸಜ್ಜಿತ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆಯ ಉದ್ಘಾಟನಾ ಸಮಾರಂಭ ಭವ್ಯವಾಗಿ ನೆರವೇರಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾನ್ಯ ಶಾಸಕರಾದ ಆರಗ ಜ್ಞಾನೇಂದ್ರರವರು, “ಗೋವಿಂದ ಬಾಬು ಪೂಜಾರಿಯವರ ಸಾಮಾಜಿಕ ಸೇವಾ ಮನೋಭಾವ…
ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್
ನೆತ್ತಿಗೇರಿದ ಅಧಿಕಾರದ ಅಮಲು – ಸಾಗರ ನಗರಸಭೆ ಆಯುಕ್ತ ನಾಗಪ್ಪರಿಂದ ಬೀದಿ ವ್ಯಾಪಾರಿಗಳಿಗೆ ಅವಾಚ್ಯ ನಿಂದನೆ – ವಿಡಿಯೋ ವೈರಲ್ ಸಾಗರ: ನಗರಸಭೆ ಆಯುಕ್ತ ನಾಗಪ್ಪನವರು ಬೀದಿ ಬದಿ ವ್ಯಾಪಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಸಾಗರದ ರಾಣಿ ಚೆನ್ನಮ್ಮ ವೃತ್ತದ ಬಳಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ನಿಮಿತ್ತ ಸ್ಥಳ ಖಾಲಿ ಮಾಡಿಸುವ ವೇಳೆ ನಾಗಪ್ಪನವರು ಸ್ಥಳಕ್ಕೆ ಬಂದು ವ್ಯಾಪಾರಿಗಳಿಗೆ ಜಾಗ ತೆರವುಗೊಳಿಸಲು ಸೂಚಿಸಿದ್ದಾರೆ. ಈ…
ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ
ಉದ್ಯೋಗದಲ್ಲಿ ಕನ್ನಡಿಗರಿಗೆ ಶೇಕಡಾ ತೊಂಬತ್ತರಷ್ಟು ಮೀಸಲಾತಿ ನೀಡಲಿ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಕರ್ನಾಟಕ ರಾಜ್ಯದಲ್ಲಿ ಹಲವು ಕ್ಷೇತ್ರಗಳಲ್ಲಿ ಕನ್ನಡಿಗರಿಗೆ ಅವಕಾಶಗಳು ಕಡಿಮೆಯಾಗುತ್ತಿವೆ. ಹೊರ ರಾಜ್ಯದವರು ಕೆಲಸ ಪಡೆಯುತ್ತಿರುವುದಕ್ಕೆ ಕಾರಣ ನಮ್ಮದೇ ನಿರ್ಲಕ್ಷ್ಯ. ಸರ್ಕಾರದ ನಿಯಮಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಶಿಫಾರಸು ಈಗಾಗಲೇ ಮಾಡಲಾಗಿದೆ. ಕೈಗಾರಿಕೆ, ಬ್ಯಾಂಕ್, ಶಿಕ್ಷಣ, ಆರೋಗ್ಯ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ಸ್ಥಳೀಯ ಯುವಕರಿಗೆ ಶೇ. 90 ಉದ್ಯೋಗಾವಕಾಶ ಒದಗಿಸಿದರೆ ನಾಡು ನಿಜವಾದ ಅರ್ಥದಲ್ಲಿ ಅಭಿವೃದ್ಧಿಯಾಗುತ್ತದೆ,” ಎಂದು ಸಾಗರ…
ರಿಪ್ಪನ್ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು
ರಿಪ್ಪನ್ಪೇಟೆಯಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಅದ್ದೂರಿ ಮೆರವಣಿಗೆ | ಮನಸೆಳೆದ ಜಾನಪದ ಕಲಾ ಮೆರುಗು ರಿಪ್ಪನ್ಪೇಟೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವದ ಅಂಗವಾಗಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ಕನ್ನಡ ತಾಯಿ ಭುವನೇಶ್ವರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಭವ್ಯವಾಗಿ ನಡೆಯಿತು. ಕನ್ನಡ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಪಟ್ಟಣದ ಪಿಎಸ್ಐ ರಾಜುರೆಡ್ಡಿ ಚಾಲನೆ ನೀಡಿದರು. ನೂರಾರು ಪುಟಾಣಿ ಮಕ್ಕಳು ಭುವನೇಶ್ವರಿ ವೇಷದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿ ಜನರ ಮನಸೆಳೆದರು. ಡೊಳ್ಳು ಕುಣಿತ, ಪಟಾಕಿ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರಗು ನೀಡಿದವು….