ಜಿಲ್ಲಾ ಸುದ್ದಿ:
ಹೊಸನಗರ ತಾಲೂಕಿನ ಮರಳು ಮಾಫ಼ಿಯಾದ ಗರ್ಭಗುಡಿ – “ರಿಪಬ್ಲಿಕ್ ಆಫ್ ಹರಿದ್ರಾವತಿ”
ಹೊಸನಗರ ತಾಲೂಕಿನ ಹರಿದ್ರಾವತಿ ಗ್ರಾಮದಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೇ ನಡೆಯುತ್ತಿದ್ದು,ಸ್ಥಳೀಯ ಪ್ರಭಾವಿ ವ್ಯಕ್ತಿಯೊಬ್ಬ “ರಿಪಬ್ಲಿಕ್ ಆಫ್ ಹರಿದ್ರಾವತಿ” ಅಧಿಪತ್ಯ ಘೋಷಣೆ ಮಾಡಿಕೊಂಡಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿದೆ. ಹೌದು ಮಲೆನಾಡಿನಾದ್ಯಂತ ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರು ಅಲ್ಪ ಮಟ್ಟಿಗೆ ಅದಕ್ಕೆ ಕಡಿವಾಣ ಹಾಕುವಲ್ಲಿ ಜಿಲ್ಲೆಯ ಪೊಲೀಸ್ ಇಲಾಖೆ ಹಾಗೂ ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಯಶಸ್ವಿಯು ಆಗಿದೆ.ಆದರೆ ಹೊಸನಗರ ತಾಲೂಕಿನ ಹರಿದ್ರಾವತಿ ಎಂಬ ಸುಸಂಸ್ಕೃತ ಗ್ರಾಮದ ಶರಾವತಿ ಹಿನ್ನೀರಿನ ಕೆರೆಹಳ್ಳಿ ಪಾಯಿಂಟ್ ನಲ್ಲಿ ಸ್ಥಳೀಯ ಪ್ರಭಾವಿ…
ಹಾಕಿ ಕ್ರೀಡೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಮಿಂಚುತ್ತಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪೂಜಿತಾ
ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ, ಸತತ ಪರಿಶ್ರಮ, ನಿಖರ ಗುರಿ ಇದ್ದಲ್ಲಿ ಎಲ್ಲವೂ ಸಾಧ್ಯವೆಂದು ರಿಪ್ಪನ್ ಪೇಟೆಯ ಬರುವೆ ಗ್ರಾಮದ ಯುವತಿ ಹಾಕಿ ಕ್ಷೇತ್ರದಲ್ಲಿ ಸಾಧಿಸಿ ತೋರಿಸಿದ್ದಾಳೆ. ರಿಪ್ಪನ್ಪೇಟೆ ಬರುವೆ ಗ್ರಾಮದ ನಿವಾಸಿಗಳಾದ ನಾಗೇಶ್ ಗೌಡ ಹಾಗೂ ಪೂರ್ಣಿಮಾ ದಂಪತಿಗಳ ಮಗಳಾದ ಪೂಜಿತ ರಾಷ್ಟ್ರ ಮಟ್ಟದಲ್ಲಿ ಹಾಕಿ ಕ್ರೀಡೆಯಲ್ಲಿ ಮಿಂಚುತ್ತಿದ್ದಾಳೆ. ಕುಮಾರಿ ಪೂಜಿತ ಪ್ರಸ್ತುತ ಕರ್ನಾಟಕ ಮಹಿಳಾ ಹಾಕಿ ತಂಡದ ಸಹ ಆಟಗಾರ್ತಿಯಾಗಿದ್ದಾಳೆ. ಮಧ್ಯ ಪ್ರದೇಶದ ಭೂಫಾಲ್ ನಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕರ್ನಾಟಕ…
ತೀರ್ಥಹಳ್ಳಿಯ ನೂತನ ಸಿಪಿಐ ಆಗಿ ಅಶ್ವಥ್ ಗೌಡ ನೇಮಕ :
ತೀರ್ಥಹಳ್ಳಿ ಸರ್ಕಲ್ ಇನ್ಸ್ ಪೆಕ್ಟರ್ ಆಗಿ ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ.ಜೆ ರವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಈಗಿನ ಸರ್ಕಲ್ ಇನ್ಸ್ ಪೆಕ್ಟರ್ ಆಗಿದ್ದ ಸಂತೋಷ್ ಕುಮಾರ್ ರವರ ಸ್ಥಾನಕ್ಕೆ ನೂತನ ಸಿಪಿಐ ಆಗಿ ಅಶ್ವಥ್ ಗೌಡ ರವರು ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಲಾಗಿದೆ. ರಾಜ್ಯ ಗುಪ್ತಚರ ಇಲಾಖೆಯಲ್ಲಿದ್ದ ಅಶ್ವಥ್ ಗೌಡ ತೀರ್ಥಹಳ್ಳಿ ಸಿಪಿಐ ಆಗಿ ವರ್ಗಾವಣೆಗೊಂಡಿದ್ದಾರೆ. ಸಂತೋಷ್ ಕುಮಾರ್ ಕಳೆದೆರಡು ವರ್ಷಗಳಿಂದ ತೀರ್ಥಹಳ್ಳಿ ಸಿಪಿಐ…
ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಾಟ : ಲಾರಿಗಳು ಸೀಜ಼್ !!!!!!
ತೀರ್ಥಹಳ್ಳಿ ತಾಲೂಕಿನ ಹಲವು ಮರಳು ಕ್ವಾರೆಗಳಲ್ಲಿ ನಿರಂತರವಾಗಿ ಮರಳು ಅಕ್ರಮ ಸಾಗಾಣಿಕೆ ಆಗುತ್ತಿದ್ದರೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಮತ್ತು ಪೊಲೀಸ್ ಇಲಾಖೆಗಳು ಕಣ್ಣುಮುಚ್ಚಿ ಮೌನವಸ್ಥೆಯಲ್ಲಿ ಇರುವುದಕ್ಕೆ ಗೃಹಸಚಿವರ ತವರೂರಿನ ಅಕ್ರಮ ಮರಳು ಸಾಗಾಟ ಪ್ರಕರಣವೇ ಸಾಕ್ಷಿಯಾಗಿದೆ. ಭಾನುವಾರ ಸಂಜೆಯ ವೇಳೆ ಮರಳನ್ನ ಡಬ್ಲಿಂಗ್ ಮಾಡಿಕೊಂಡು ಬರುತ್ತಿದ್ದ ಲಾರಿಯನ್ನ ಯಾರೋ ಒಬ್ಬರು ಪೊಲೀಸ್ ಇಲಾಖೆ ಮಾಹಿತಿ ನೀಡಿ ಅದನ್ನು ಕುಶಾವತಿ ಬಳಿ ಹಿಡಿಸುವ ಸ್ಥಿತಿ ಬಂದಿದೆ ಎಂದರೆ ಗೃಹಸಚಿವರ ತವರಿನಲ್ಲಿ ಎಂತಹ ಸ್ಥಿತಿ ನಿರ್ಮಾಣವಾಗಿದೆ ಎಂದು ಅರ್ಥವಾಗುತ್ತದೆ. ತಾಲೂಕಿನ…
ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಲ್ಲರಿಗೂ ಭಾವ..!!!: ಬೇಳೂರು ಗೋಪಾಲ ಕೃಷ್ಣ ವ್ಯಂಗ್ಯ…
ರಿಪ್ಪನ್ ಪೇಟೆ: ರಾಜ್ಯದ ಬಿಜೆಪಿ ಸರಕಾರದ ಆಡಳಿತ ಕಳಪೆಯಾಗಿದ್ದು ಜನಸಾಮಾನ್ಯರ ಬದುಕು ದುಸ್ತರವಾಗಿದೆ.ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಲ್ಲರಿಗೂ ಭಾವ ಅನ್ನೋ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಉತ್ತಮ ಆಡಳಿತವನ್ನು ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಕ್ತಾರ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದಲ್ಲಿ ಇಂದು ಸಂಜೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಬೆಲೆ ಏರಿಕೆಯಿಂದ ರಾಜ್ಯದಲ್ಲಿ ಜನಸಾಮಾನ್ಯರ ಬದುಕುವುದು ದುಸ್ತರವಾಗಿದೆ. ಕೂಲಿ ಕಾರ್ಮಿಕರು ಬಡವರು ಹಾಗೂ ಮಧ್ಯಮವರ್ಗದವರು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದು ಕೇಂದ್ರ ಹಾಗೂ ರಾಜ್ಯದ…
ಡಿ ಕೆ ಶಿವಕುಮಾರ್ ಜನ್ಮದಿನದ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ :
ಡಿ.ಕೆ.ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಭಾನುವಾರ ಹಮ್ಮಿಕೊಂಡಿದ್ದ ಡಿ ಕೆ ಶಿವಕುಮಾರ್ ಜನ್ಮದಿನ ಆಚರಣೆ ಪ್ರಯುಕ್ತ ಸಾಗರದ ತಾಯಿ ಮಗು ಆಸ್ಪತ್ರೆಯಲ್ಲಿ ದಾಖಲಾದವರಿಗೆ ಹಣ್ಣು ಬ್ರೆಡ್ ನ್ನು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ವಿತರಿಸಿದರು. ನಂತರ ಮಾತನಾಡಿದ ಅವರು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ವಿರುದ್ಧ ಟ್ವೀಟ್ ಮಾಡಿರುವ ಮಾಜಿ ಸಂಸದೆ ರಮ್ಯ ಅವರ ಕ್ರಮ ಖಂಡನೀಯ. ಪಕ್ಷದ ವರಿಷ್ಠರು ರಮ್ಯಾ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಡಿಕೆಶಿ ಅವರ…
ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದು ಲಕ್ಷಾಂತರ ಹಣ ಕಳೆದುಕೊಂಡ ಯುವಕ :
ವರ್ಕ್ ಫ್ರಂ ಹೋಮ್ ಕೆಲಸದ ಆಮಿಷಕ್ಕೆ ಬಿದ್ದ ಯುವಕನೊಬ್ಬ ಸುಮಾರು 5 ಲಕ್ಷ ರೂ. ಕಳೆದುಕೊಂಡಿರುವ ಘಟನೆ ಭದ್ರಾವತಿ ತಾಲೂಕಿನ ಬದನೆಹಾಳ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲೇ ಕುಳಿತು ಲಕ್ಷಾಂತರ ರೂಪಾಯಿ ಆದಾಯ ಗಳಿಸಲು ಮುಂದಾದ ಯುವಕನೊಬ್ಬ ಬೋನಸ್ ಮತ್ತು ಕಮೀಷನ್ ಆಸೆಗೆ ಬರೋಬ್ಬರಿ 4.92 ಲಕ್ಷ ರೂ. ಕಳೆದುಕೊಂಡಿದ್ದಾನೆ. ವಂಚನೆಗೆ ಒಳಗಾಗಿದ್ದು ಹೇಗೆ ??? 32 ವರ್ಷದ ಯುವಕ ಮನೆಯಲ್ಲೇ ಕುಳಿತು ಕೆಲಸ ಮಾಡಲು ನಿರ್ಧರಿಸಿ ಅಂತಹ ಅವಕಾಶಗಳನ್ನು ಕಂಡುಕೊಳ್ಳಲು ಗೂಗಲ್ ಮೊರೆ ಹೋಗಿದ್ದ. ಹೀಗೆ ಗೂಗಲ್…
ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್
ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…
ದೆಹಲಿಗೆ ತೆರಳಿದ್ದು ವೈಯಕ್ತಿಕ ಕೆಲಸಕ್ಕಾಗಿ : ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಗೃಹ ಸಚಿವ ಆರಗ ಜ್ಞಾನೇಂದ್ರ
ಸಚಿವ ಸಂಪುಟ ವಿಚಾರವಾಗಿ ಸಿಎಂ ದೆಹಲಿಗೆ ಹೋದ ಬೆನ್ನಲ್ಲೆ , ಗೃಹಸಚಿವ ಆರಗ ಜ್ಞಾನೇಂದ್ರರವರು ಸಹ ದೆಹಲಿ ವಿಮಾನ ಹತ್ತಿದ್ದರು. ಇದು ಸಾಕಷ್ಟು ಕುತೂಹಲ ಮೂಡಿಸಿತ್ತು. ಅಲ್ಲದೆ, ಆಪ್ತ , ಸಂಘ ಪರಿವಾರ, ಬಿಜೆಪಿ ಮತ್ತು ದೆಹಲಿಯ ಮೂಲಗಳಲ್ಲಿ ವಿಭಿನ್ನ ಅಭಿಪ್ರಾಯಗಳು ಕೇಳಿಬಂದಿದ್ದವು. ಹಂಗಾಮಿ ಸಿಎಂ ಅಥವಾ ನಾಲ್ಕು ಡಿಸಿಎಂ ಸ್ಥಾನದಲ್ಲಿ ಒಂದು ಇವರಿಗೆ ಸಿಗಲಿದೆ ಎಂಬ ಮಾತು ಒಂದು ಕಡೆಯಾಗಿದ್ದರೇ, ಗೃಹಸಚಿವ ಸ್ಥಾನವನ್ನು ಉಳಿಸಿಕೊಳ್ಳಲು ತೆರಳಿದ್ದರು ಎಂಬ ಅಭಿಪ್ರಾಯವೂ ವ್ಯಕ್ತವಾಗಿತ್ತು. ಇದರ ನಡುವೆ, ತಮ್ಮ ಖಾಸಗಿ…
ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :
ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ. ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಆಮ್ ಆದ್ಮಿ ಪಕ್ಷದ ಸಂಚಾಲಕ ಅಮೃತರಾಜ್ ಮಾತನಾಡಿ…