Headlines

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More

ಆನೆಗಳ ಉಪಟಳ ನಿಯಂತ್ರಣಕ್ಕೆ ಕ್ರಮ : ಗೃಹಸಚಿವ ಆರಗ ಜ್ಞಾನೇಂದ್ರ

ತೀರ್ಥಹಳ್ಳಿ ಸಮೀಪದ ಶಿಂಗನಬಿದರೆ, ತಳಲೆ, ಕೀಗಡಿ ಮತ್ತು ಮಂಡಗದ್ದೆ ಗ್ರಾಮಗಳ ಸುತ್ತಮುತ್ತಲಿನ ತೋಟಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರು ಬೆಳೆದ ಅಡಿಕೆ ಗಿಡಗಳು ಹಾನಿಗೊಳಗಾಗಿದ್ದು, ಅದರ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ ಎಂದು ರಾಜ್ಯ ಗೃಹ ಸಚಿವ ಆರಗಜ್ಞಾನೇಂದ್ರ ಅವರು ಹೇಳಿದರು. ಅವರು ಇಂದು ಆನೆಗಳಿಂದ ಹಾನಿಗೊಳಗಾದ ಕೀಗಡಿ ಗ್ರಾಮದ ರೈತರ ತೋಟಕ್ಕೆ ಅರಣ್ಯಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಿದ ಅವರು, ಈಗಾಗಲೇ ಆನೆಗಳನ್ನು ಅರಣ್ಯಕ್ಕೆ ಹಿಂದಿರುಗಿಸಲು ಅರಣ್ಯಾಧಿಕಾರಿಗಳು ಕಳೆದ ೨ವಾರಗಳಿಂದ ಕಾರ್ಯಾಚರಣೆ ನಡೆಸಿದ್ದಾರೆ. ಈ…

Read More

ಹೊಸನಗರದ ದಕ್ಷ ಪಿಎಸ್ ಐ ರಾಜೇಂದ್ರನಾಯ್ಕ್ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಬೃಹತ್ ಪ್ರತಿಭಟನೆ:

ಹೊಸನಗರ :- ತಾಲ್ಲೂಕಿನಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆಗೆ‌ ಹೆಸರಾಗಿರುವ ಪಿ.ಎಸ್.ಐ ರಾಜೇಂದ್ರನಾಯ್ಕ್ ರವರನ್ನು ಯಾವುದೇ ಕಾರಣಕ್ಕೂ ವರ್ಗಾಯಿಸಬಾರದು ಎಂದು ಸಾರ್ವಜನಿಕರಿಂದ ತಾಲ್ಲೂಕು ದಂಡಾಧಿಕಾರಿ (ತಹಶಿಲ್ದಾರ್) ಮೂಲಕ ಜಿಲ್ಲಾ ವರಿಷ್ಠಾಧಿಕಾರಿ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸಾರ್ವಜನಿಕರಿಂದ ತಾಲ್ಲೂಕು ಕಛೇರಿಯಲ್ಲಿ ತಹಶೀಲ್ದಾರ್ ರವರಿಗೆ ಸಲ್ಲಿಸಿದ ಮನವಿಯಲ್ಲಿ ತಾಲ್ಲೂಕಿನಾಧ್ಯಂತ ಮರಳು ಮಾಫಿಯವಾಗಲಿ, ಡ್ರಕ್ಸ್ ಮಾಫಿಯಾ, ಹೆಣ್ಣುಮಕ್ಕಳಿಗೆ ಕೆಲಸದ ಆಮಿಷ ತೋರಿಸಿ ಅನೈತಿಕ ಸಂಬಂಧಗಳಿಗೆ ಬಳಸುವಂತಹಾ ಕ್ರೂರಿಗಳಿಗೆ, ಕಲ್ಲು ಕೋರೆ, ಗಾಂಜಾ ಸೇರಿದಂತೆ ವಿವಿಧ ರೀತಿಯ ಕಳ್ಳ ದಂದೆಯಲ್ಲಿ ತೊಡಗಿದವರಿಗೆ…

Read More

25ಕ್ಕೂ ಅಧಿಕ ಗೋವುಗಳಿಗೆ ವಿಷವಿಕ್ಕಿ ಹತ್ಯೆಗೈದ ಯಡೂರಿನ ನಟೋರಿಯಸ್ ಗೋಹಂತಕ…….!!!!!!?

ಹೊಸನಗರ ತಾಲ್ಲೂಕಿನ ಯಡೂರು ಗ್ರಾಮದಲ್ಲಿ ನಟೋರಿಯಸ್ ಗೋಹಂತಕನೊಬ್ಬ ಗೋವುಗಳನ್ನು ವಿಷವುಣಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಲಸಿನ ಹಣ್ಣಿನ ಒಳಗೆ ವಿಷ ಹಾಕಿ ಅಮಾಯಕ ಮೂಕಪ್ರಾಣಿಗಳನ್ನು ಹತ್ಯೆ ಮಾಡಿರುವ ದಾರುಣ್ಯ ಘಟನೆ ಮಲೆನಾಡಿನ ಯಡೂರು ಗ್ರಾಪಂ ವ್ಯಾಪ್ತಿಯ ಸುಳುಕೋಡು ಗ್ರಾಮದಲ್ಲಿ ನಡೆದಿದೆ. ಜಾನುವಾರು ನುಗ್ಗಿದೆ ಎಂದು ತೋಟದ ಮಾಲೀಕನೊಬ್ಬ ನಮ್ಮ ಜಾನುವಾರಿಗೆ ವಿಷ ಹಾಕಿದ್ದಾರೆ  ಎಂಬುದಾಗಿ ಜಾನುವಾರು ಮಾಲೀಕರಾದ ಯಡೂರು ಗ್ರಾಮದ ಲತಾ ಎಂಬುವವರು  ಆರೋಪಿಸಿದ್ದಾರೆ. ಈಗಾಗಲೇ ನಾಲ್ಕೈದು ದನಗಳು  ಸಾವನ್ನಪ್ಪಿದ್ದು  ಕೆಲವು 2ದಿನಗಳಿಂದ ವಿಷ ಉಂಡು…

Read More

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…

Read More

ಕಾಡಾನೆ ಹಾವಳಿ ತಪ್ಪಿಸುವಂತೆ ಅರಣ್ಯಾಧಿಕಾರಿಗಳಿಗೆ ಕಿಮ್ಮನೆ ರತ್ನಾಕರ್ ಎಚ್ಚರಿಕೆ

ರಿಪ್ಪನ್‍ಪೇಟೆ: ಹಲವು ದಿನಗಳಿಂದ ಕಾಡಾನೆ ದಾಳಿಗೆ ಒಳಗಾಗಿ ರೈತರು ಸಂಕಷ್ಟ ಎದುರಿಸುತ್ತಿದ್ದರೂ ನಿರ್ಲಕ್ಷ್ಯ ತೋರಿದ್ದ ಅರಣ್ಯ ಇಲಾಖೆಯ ನಡೆ ಸರಿಯಲ್ಲ. ಇನ್ನು ಒಂದುವಾರದೊಳಗಾಗಿ ಕಾಡಾನೆ ಹಾವಳಿಯಿಂದ ರೈತರಿಗೆ ಮುಕ್ತಿ ನೀಡದಿದ್ದಲ್ಲಿ ಮೂಗುಡ್ತಿ ವನ್ಯಜೀವಿ ವಲಯ ಕಛೇರಿ ಎದುರು ರೈತರೊಂದಿಗೆ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ ಅರಣ್ಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಸಾರ್ವಜನಿಕರೊಂದಿಗೆ ಮಾಜಿ ಸಚಿವರು ಅರಣ್ಯಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆಗೆ ಆಗಮಿಸಿದ ಸಂದರ್ಭದಲ್ಲಿ ಅರಣ್ಯ ಇಲಾಖಾ ಹಿರಿಯ ಅಧಿಕಾರಿಗಳಿಂದ ಆನೆ ಹಿಮ್ಮೆಟ್ಟಿಸುವ…

Read More

ಸಾಗರದ ಎಲ್​ಬಿ ಕಾಲೇಜಿನಲ್ಲಿ ಶಿಮುಲ್​ ಅಧ್ಯಕ್ಷ ಶ್ರೀಪಾದ್​ ಹೆಗೆಡೆ ಮೇಲೆ ಸಾಗರ ಶಾಸಕ ಹರತಾಳು ಹಾಲಪ್ಪ & ಬೆಂಬಲಿಗರಿಂದ ನಡೆಯಿತಾ ಹಲ್ಲೆ!? ಇಲ್ಲಿದೇ ನೋಡಿ ಎಕ್ಸ್ ಕ್ಲೂಸಿವ್ ವೀಡಿಯೋ

ಸಾಗರದ ಎಲ್ ಬಿ ಕಾಲೇಜಿನಲ್ಲಿ ನಡೆಯುತ್ತಿದ್ದ ಜನರಲ್ ಬಾಡಿ ಮೀಟಿಂಗ್ ನಡೆಯುತ್ತಿದ್ದ ಸಂಧರ್ಭದಲ್ಲಿ ಶಾಸಕ ಹರತಾಳು ಹಾಲಪ್ಪ ಹಾಗೂ ಅವರ ಬೆಂಬಲಿಗರು ಅವರ ಮೇಲೆ ಹಲ್ಲೆ ಮಾಡಿದ್ದಾರೆ  ಆರೋಪವನ್ನ ಶ್ರೀಪಾದ್ ಹೆಗೆಡೆಯವರು ಮಾಡಿದ್ದಾರೆ.  ಶಿಮುಲ್​ ಅಧ್ಯಕ್ಷರಾದ ಶ್ರೀಪಾದ್​ ಹೆಗೆಡೆ ರವರು ಎಲ್​ಬಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾಗಿದ್ದಾರೆ .ಸದ್ಯ ಅವರು ಸಾಗರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವತ್ತು ಎಲ್​ಬಿ ಕಾಲೇಜಿನಲ್ಲಿ ಜನರಲ್​ ಬಾಡಿ ಮೀಟಿಂಗ್​ ನಡೆಸುತ್ತಿದ್ದ ಸಂದರ್ಭದಲ್ಲಿ, ಸ್ಥಳಕ್ಕೆ ಬಂದ ಸಾಗರ ಶಾಸಕ ಹರತಾಳು ಹಾಲಪ್ಪ…

Read More

ಶಿವಮೊಗ್ಗದಲ್ಲಿ ಮುಸ್ಲಿಂ ಸಂಘಟನೆಗಳು ಕರೆಕೊಟ್ಟಿದ್ದ ಒಕ್ಕೂಟ ಬಂದ್ ಬಹುತೇಕ ಯಶಸ್ವಿ :

ಮುಸ್ಲಿಂ ಸಂಘಟನೆಗಳ ಒಕ್ಕೂಟ ಇಂದು ಬಂದ್ ಗೆ ಕರೆಕೊಟ್ಟ ಹಿನ್ನಲೆಯಲ್ಲಿ ಮುಸ್ಲಿಂ ಅಂಗಡಿ ಮತ್ತು ಮಳಿಗೆಗಳು ಬಹುತೇಕ ಬಂದ್ ಮಾಡಲಾಗಿದೆ. ಹಿಜಬ್ ಬೆಂಬಲಿಸಿ ಕರೆಯಲಾದ ಬಂದ್ ಹಿನ್ನಲೆಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಲಾಗಿತ್ತು. ರಾಜ್ಯಾದ್ಯಂತ ಬಂದ್ ಗೆ ಕರೆ ನೀಡಲಾಗಿತ್ತು. ಶಿವಮೊಗ್ಗದಲ್ಲಿಯೂ ಸಹ‌ 19 ಮುಸ್ಲಿಂ ಸಂಘನೆಗಳು ಬಂದ್ ನಡೆಸಲು ತೀರ್ಮಾನಿಸಿತ್ತು‌. ತೀರ್ಮಾನದಂತೆ ಹಲವಾರು ಉದ್ಯಮಗಳ ಅಂಗಡಿಗಳನ್ನ ಬಂದ್ ಮಾಡಲಾಗಿದೆ. ಶಾಲಾ ಕಾಲೇಜುಗಳಲ್ಲಿ ಬಹುತೇಕ ವಿದ್ಯಾರ್ಥಿಗಳು ಗೈರು ಹಾಜರಿದ್ದರು. ಅಮೀರ್ ಅಹ್ಮದ್ ವೃತ್ತ, ಓಟಿ ರಸ್ತೆ ಕೆ.ಆರ್ ಪುರಂ,…

Read More

ಲವ್ ಜಿಹಾದ್ ಗೆ ಬಲಿಯಾದ ಗೃಹಿಣಿ | ಕುಟುಂಬಸ್ಥರ ಆರೋಪ

ಶಿವಮೊಗ್ಗ: ಗೃಹಿಣಿಯೋರ್ವಳು ಹೆರಿಗೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದು, ಆಕೆಯ ಸಾವಿಗೆ ಲವ್ ಜಿಹಾದ್ ಕಾರಣ ಎಂದು ಕುಟಂಬಸ್ಥರು ಆರೋಪಿಸಿದ್ದಾರೆ. 19 ವರ್ಷದ ಗೃಹಿಣಿ ಭೂಮಿಕಾ ಅಲಿಯಾಸ್ ಮುಸ್ಕಾನ್ ಭಾನು ಮೃತ ದುರ್ದೈವಿ. ಜಿಲ್ಲೆಯ ಸೊರಬದ ನಿವಾಸಿಯಾಗಿದ್ದ ಭೂಮಿಕಾ ಅಂತರ್ ಧರ್ಮೀಯನನ್ನು ಪ್ರೀತಿಸಿ ವಿವಾಹವಾಗಿದ್ದರು. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದವರಾದ ಭೂಮಿಕಾ ಪೋಷಕರು ಕಳೆದ ಎರಡು ವರ್ಷದ ಹಿಂದೆ ಮೃತಪಟ್ಟಿದ್ದರು. ಬಳಿಕ ಭೂಮಿಕಾ ಸೊರಬದ ತನ್ನ ಅಜ್ಜಿ ಮನೆಯಲ್ಲಿ ಆಶ್ರಯ ಪಡೆದಿದ್ದರು. ಅಜ್ಜಿ ಮನೆಯಲ್ಲಿದ್ದುಕೊಂಡು ಪಿಯುಸಿ ವ್ಯಾಸಂಗ ಮಾಡುತ್ತಿದ್ದಾಗ…

Read More