Headlines

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…

Read More

ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ ಮೂಲಕ ತನಿಖೆ ನಡೆಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ…

ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಡಳಿತ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಫೆಬ್ರವರಿ 5 ರಂದು ಉಡುಪಿ ಜಿಲ್ಲೆಯಲ್ಲಿ ಪ್ರಾರಂಭವಾದ ಹಿಜಾಬ್ ವಿವಾದ ಇಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿ ಆಗಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ. ಹಿಜಾಬ್ ಒಂದು ಪ್ರಕರಣ ಮಾತ್ರವಲ್ಲ, ಇದೊಂದು ಜಿಹಾದಿನ ಷಡ್ಯಂತ್ರ. ಮುಸಲ್ಮಾನ ವಿಧ್ಯಾರ್ಥಿಗಳ ಮೂಲಕ ಶಾಲಾ -ಕಾಲೇಜುಗಳನ್ನು ಉಪಯೋಗಿಸಿ…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ವಿಷ ಕುಡಿಯುತ್ತೇವೆ ಹೊರತು ಹಿಜಬ್ ತೆಗೆಯುವುದಿಲ್ಲ : ಕಾಲೇಜನ್ನು ಬಹಿಷ್ಕರಿಸಿ ಹೊರನಡೆದ 25 ಪಿಯು ವಿದ್ಯಾರ್ಥಿನಿಯರು

ಇಂದಿನಿಂದ ಪದವಿ ಮತ್ತು ಪದವಿ ಪೂರ್ವ ಕಾಲೇಜು  ಆರಂಭವಾದ ಬೆನ್ನಲ್ಲೇ ಶಿವಮೊಗ್ಗದ ಡಿವಿಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಹಿಜಬ್ ತೆಗೆಯಲು ವಿದ್ಯಾರ್ಥಿನಿಯರು ನಿರಾಕರಿಸಿ ಕಾಲೇಜ್ ನ್ನು ಬಹಿಷ್ಕರಿಸಿ ವಾಪಾಸಾಗಿದ್ದಾರೆ. ಇಂದು ಬೆಳಿಗ್ಗೆ ಕಾಲೇಜು ಆರಂಭಗೊಳ್ಳುತ್ತಿದ್ದಂತೆ ಹಿಜಬ್ ಧರಿಸಿ ಅನೇಕ ವಿದ್ಯಾರ್ಥಿನಿಯರು ಗೇಟ್ ಒಳಗೆ ಪ್ರವೇಶಿಸಿದ್ದಾರೆ. ಆದರೆ ಕಾಲೇಜ್ ಒಳಗೆ ಹೋದವರಿಗೆ ಡಿವಿಎಸ್ ಆಡಳಿತ ಮಂಡಳಿ ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ಸೂಚಿಸಿದ್ದಾರೆ.ಹಿಜಬ್ ಕಳಚಿ ತರಗತಿಯಲ್ಲಿ ಕೂರಲು ವಿದ್ಯಾರ್ಥಿನಿಯರು ನಿರಾಕರಿಸಿದ ಕಾರಣ 25 ಜನ ವಿದ್ಯಾರ್ಥಿನಿಯರು ವಾಪಾಸಾಗಿದ್ದಾರೆ. ಹಿಜಬ್…

Read More

ಹೊಸನಗರದಲ್ಲಿ ಯಶಸ್ವಿಯಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಹೊಸನಗರ ಪಟ್ಟಣದ ಮಾವಿನಕೊಪ್ಪ ಬಳಿ ಇಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯುತ್ತಿದ್ದು, ಈ ಶಿಬಿರದಲ್ಲಿ ಹಲವಾರು ಜನರು ಸ್ವ ಪ್ರೇರಣೆಯಿಂದ ರಕ್ತದಾನ ಮಾಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಬಾಲ ಗಣಪತಿ ಸೇವಾ ಸಮಿತಿ ಹೊಸನಗರ, ಜೆಸಿಐ ಡೈಮೆಂಡ್ ಸಂಸ್ಥೆ ಹೊಸನಗರ  ಸ್ಪಂದನ ಹೆಲ್ತ್ ಫೌಂಡೇಷನ್ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಡೆಸಲಾದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ಜನರು ರಕ್ತದಾನ ಮಾಡಿದ್ದಾರೆ ಎನ್ನಲಾಗಿದೆ. ಮೊಬೈಲ್ ಬ್ಲಡ್ ಡೊನೇಷನ್ ವ್ಯಾನ್ ಮೂಲಕ…

Read More

ಮಾನವೀಯತೆ ಮೆರೆದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಬೈಕ್ ಸವಾರನೊಬ್ಬ ಆನಂದಪುರ ಸಮೀಪದ ಹೊಸೂರು ಬಳಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದರು, ಅದೇ ದಾರಿಯಲ್ಲಿ ಸಾಗುತ್ತಿದ್ದ ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಅವರು ಅಪಘಾತಕ್ಕೀಡಾದ ವ್ಯಕ್ತಿಯನ್ನು ಉಪಚರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಂದು ಮಾಜಿ ಶಾಸಕರು ಸಾಗರದಿಂದ ಆನಂದಪುರ ಬರುವಾಗ ಹೊಸೂರು ಬಳಿ ರಸ್ತೆಯಲ್ಲಿ ಬೈಕ್ ಸವಾರ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದನು.ತಕ್ಷಣ ಕಾರಿನಿಂದ ಇಳಿದು ಸ್ಥಳಕ್ಕೆ ಧಾವಿಸಿದ ಮಾಜಿ ಶಾಸಕರು ಸಹಾಯಕರ ಸಹಾಯಕ್ಕೂ ಕಾಯದೇ ತಾವೇ ಬೈಕ್ ಎತ್ತಿ ನಿಲ್ಲಿಸಿ,…

Read More

ಹೊಸನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ರೀನಿವಾಸಚಾರಿ ವರದಿ ಅನುಷ್ಠಾನಕ್ಕೆ ಒತ್ತಾಯಿಸಿ ಹೊರಗುತ್ತಿಗೆ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಸಾಂಕೇತಿಕ ಮುಷ್ಕರ

ಹೊಸನಗರ : ಸರ್ಕಾರವೇ ರಚಿಸಿದ ಶ್ರೀನಿವಾಸಾಚಾರಿ ಸಮಿತಿ ವರದಿ ಅನುಷ್ಠಾನ ಹಾಗೂ ಗುತ್ತಿಗೆ, ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದು ಹೊಸನಗರ ತಾಲ್ಲೂಕಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಪ್ಪು ಪಟ್ಟಿ ಕಟ್ಟಿಕೊಂಡು ಕರ್ತವ್ಯ ನಿರ್ವಹಿಸುವುದರ ಮೂಲಕ ಹೊರಗುತ್ತಿಗೆದಾರರು ಸಾಂಕೇತಿಕವಾಗಿ ಮುಷ್ಕರಕ್ಕೆ ಕರೆ ನೀಡಿದ ಘಟನೆ ಇಂದಿನಿಂದ ನಡೆಯುತ್ತಿದೆ. 2019 -20, 2020-21ರ ಸಮಯದಲ್ಲಿ ಕೋವೀಡ್-19 ವಿರುದ್ಧ ಹೋರಾಟಕ್ಕಾಗಿ ಗುತ್ತಿಗೆ, ಹೊರಗುತ್ತಿಗೆ ನೌಕರರನ್ನು ನಿಯೋಜನೆ ಮಾಡಿಸಿಕೊಂಡ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ…

Read More

ಹಿಜಾಬ್ ಧರಿಸಲು ಅವಕಾಶ ನಿರಾಕರಿಸಿದ್ದಕ್ಕೆ ಪರೀಕ್ಷೆಯನ್ನೆ ಬಹಿಷ್ಕರಿಸಿದ ವಿದ್ಯಾರ್ಥಿಗಳು :

ಶಿವಮೊಗ್ಗದಲ್ಲಿ ತಾರಕಕ್ಕರೇರಿದ ಹಿಜಾಬ್ ವಿವಾದ.ಶಾಲೆಯಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಹೊರನಡೆದಿದ್ದಾರೆ. ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ  ಎಸ್ ಎಸ್ ಎಲ್ ಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಯುತ್ತಿದ್ದು  ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಬಿಡಲಿಲ್ಲ ಎಂಬ ಕಾರಣಕ್ಕೆ 13 ವಿದ್ಯಾರ್ಥಿ ನಿಯರಿಂದ ಪರೀಕ್ಷೆ ಬಹಿಷ್ಕಾರಿಸಿದ್ದಾರೆ. ಅದರಂತೆ ತುಂಗನಗರ ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬಳು ಹಿಜಬ್ ತೆಗೆದು ತರಗತಿಯಲ್ಲಿ ಕೂರಲು ಸಾಧ್ಯವಿಲ್ಲವೆಂದು ತರಗತಿ ಬಹಿಷ್ಕರಿಸಿ ಹೊರನಡೆದಿದ್ದಾಳೆ, ಶಿಕಾರಿಪುರ ಮತ್ತು ಸಾಗರದಲ್ಲಿಯೂ ಇದೇ…

Read More

ಪ್ರತಾಪ್ ಸಿಂಹ ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ : ಕಿಮ್ಮನೆ ರತ್ನಾಕರ್ ವಾಗ್ದಾಳಿ

ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಮಾತೆತ್ತಿದರೆ ಪಾಕಿಸ್ತಾನಕ್ಕೆ ಹೋಗಿ ಎನ್ನುತ್ತಾರೆ. ನೀವೇ ಯಾಕೆ ಪಾಕಿಸ್ತಾನಕ್ಕೆ ಹೋಗಬಾರದು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ವಾಗ್ದಾಳಿ ನಡೆಸಿದರು. ಅವರು ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಭೇಟಿ ಹಿನ್ನಲೆಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಮಾತನಾಡಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಹಿಜಬ್ ಮತ್ತು ಕೇಸರಿ ಶಾಲಿನ ವಿಚಾರದಲ್ಲಿ ಬಿಜೆಪಿ ನಡೆದುಕೊಳ್ಳುತ್ತಿರುವ ವಿಚಾರ ಈಗ ಅಂತರಾಷ್ಟ್ರದ ಮಟ್ಟಕ್ಕೆ ಹೋಗಿ ತಲುಪಿದೆ. ಜನರಿಗೆ ಕಾರ್ಯಕ್ರಮ ಕೊಟ್ಟು ಆ ಆಧಾರದ ಮೇಲೆ…

Read More

ಮರಳು ಲಾರಿ ಮಾಲೀಕರಿಂದ ಶಾಸಕ ಹಾಲಪ್ಪ ಹಣ ಪಡೆದಿದ್ದಾರೆ ಎಂದು ಧರ್ಮಸ್ಥಳದ ಸನ್ನಿಧಿಯಲ್ಲಿ ಪ್ರಮಾಣ ಮಾಡಿದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ !!!

ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣ ಶಾಸಕ ಹರತಾಳು ಹಾಲಪ್ಪನವರು ಮರಳು ಲಾರಿ ಮಾಲೀಕರಿಂದ ಅಕ್ರಮವಾಗಿ ಹಣ ಪಡೆದಿರುವುದು ಖಂಡಿತವಾಗಿಯೂ ನಿಜ ಎಂದು ಆಣೆ ಪ್ರಮಾಣ ಮಾಡಿದರು. ಲಾರಿಯವರು ನನಗೆ ಕರೆ ಮಾಡಿ ಹಣವನ್ನು ನೀಡಿದ್ದೇವೆಂದು ಹೇಳಿದ್ದಾರೆ.ಇವರು 300  ಮರಳು ಲಾರಿ ಮಾಲೀಕರಿಂದ ಹಣ ಪಡೆದಿದ್ದಾರೆ. ಮರಳು ನೀತಿಯನ್ನು ಸಡಿಲೀಕರಣ ಮಾಡುವುದಕ್ಕೆ ನಿಮಗೆ ಏನು ರೋಗ ಎಂದು ಹರಿಹಾಯ್ದರು. ಕೋರೆ ಮಾಲೀಕರ ಹತ್ತಿರವೂ ಕೂಡ ಮಾಮೂಲಿ ಪಡೆಯುತ್ತಿದ್ದು ನನಗೆ ವರ್ಷಕ್ಕೆ ಇಂತಿಷ್ಟು ಹಣವನ್ನು…

Read More