ಜಿಲ್ಲಾ ಸುದ್ದಿ:
SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ
SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…
ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್
ಸೊರಬದಲ್ಲಿ ಗಣಪತಿ ಮೆರವಣಿಗೆ ವೇಳೆ ಡಿ.ಜೆ. ಸೌಂಡ್ ಗೆ ಇನ್ಸ್ಪೆಕ್ಟರ್ ಅಸ್ವಸ್ಥ – ವೀಡಿಯೋ ವೈರಲ್ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದ ಗಣಪತಿ ಮೆರವಣಿಗೆಯ ಸಮಯದಲ್ಲಿ ಅಚ್ಚರಿಯ ಘಟನೆ ದಾಖಲಾಗಿದೆ. ಡಿ.ಜೆ. ಸದ್ದಿನ ಅಬ್ಬರದ ನಡುವೆ ಡ್ಯೂಟಿಯಲ್ಲಿದ್ದ ಪೊಲೀಸ್ ಇನ್ಸ್ಪೆಕ್ಟರ್ ಸ್ಥಳದಲ್ಲಿಯೇ ಕುಸಿದು ಬಿದ್ದ ಘಟನೆ ಗುರುವಾರ ಸಂಜೆ ನಡೆದಿದ್ದು, ಅದರ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಸೊರಬ ಮುಖ್ಯ ರಸ್ತೆಯಲ್ಲಿ ಗಣಪತಿ ಮೆರವಣಿಗೆ ನಡೆಯುತ್ತಿದ್ದ ವೇಳೆ, ಭಾರೀ ಸೌಂಡ್ ಸಿಸ್ಟಮ್ನ್ನು ಬಳಸಲಾಗಿತ್ತು….
ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ ಆರೋಪ !? – ತನಿಖೆಗೆ ಸಚಿವರ ಆದೇಶ
ಆಗುಂಬೆ ಕಾಳಿಂಗ ಸರ್ಪ ಸಂಶೋಧನಾ ಕೇಂದ್ರದಲ್ಲಿ ಅಕ್ರಮ? – ತನಿಖೆಗೆ ಸಚಿವರ ಆದೇಶ ತೀರ್ಥಹಳ್ಳಿ ತಾಲೂಕಿನ ಆಗುಂಬೆಯ ಕಾಳಿಂಗ ಸರ್ಪ (King Cobra) ಸಂಶೋಧನಾ ಕೇಂದ್ರದಲ್ಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಪರಿಶೀಲನೆ ನಡೆಸಲು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಆದೇಶ ನೀಡಿದ್ದಾರೆ. ಜನ ಸಂಗ್ರಾಮ ಪರಿಷತ್ನ ದೂರು ಸ್ವೀಕರಿಸಿದ ಸಚಿವರು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ನೇತೃತ್ವದ ತಂಡಕ್ಕೆ 10 ದಿನಗಳಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ. ಜನ ಸಂಗ್ರಾಮ ಪರಿಷತ್ ಅಧ್ಯಕ್ಷ ಅಖಿಲೇಶ್ ಚಿಪ್ಲಿ ಅವರು,…
ಮಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ
ಮೊಹಮ್ಮದ್ ಪೈಗಂಬರ್ ಜನ್ಮದಿನಾಚರಣೆ – ಮೆಗ್ಗಾನ್ನಲ್ಲಿ ಸರ್ವಧರ್ಮ ಸೌಹಾರ್ದ ಸಮಾರಂಭ ಶಿವಮೊಗ್ಗ: ವಿಶ್ವ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ೧೫೦೦ನೇ ಜನ್ಮದಿನಾಚರಣೆಯನ್ನು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿ ಇಂದು ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಅನ್ನ ಸಂತರ್ಪಣೆ ಹಾಗೂ ಹಣ್ಣು-ಹಂಪಲು ವಿತರಣೆ ನಡೆಸಲಾಗಿದ್ದು, ಸರ್ವಧರ್ಮ ಸೌಹಾರ್ದತೆಯ ಸಂದೇಶ ಸಾರಲಾಯಿತು. ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕಲೀಮ್ ಪಾಷಾ ಮಾತನಾಡಿ, ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ, ಬಾಂಧವ್ಯ ಹಾಗೂ ಸಹಬಾಳ್ವೆಯನ್ನು…
ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ
ಹೊಸನಗರ ತಾಲ್ಲೂಕಿನ ಅತ್ಯುತ್ತಮ 20 ಶಿಕ್ಷಕರ ಪಟ್ಟಿ ಪ್ರಕಟ ಹೊಸನಗರ ತಾಲ್ಲೂಕಿನ ಅತ್ಯುತ್ತಮ ಶಿಕ್ಷಕರ ಮತ್ತು ಶಿಕ್ಷಕಿಯರ ಪಟ್ಟಿ ಪ್ರಕಟಗೊಂಡಿದೆ. ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಬ್ಲಾಕ್ ಸಮನ್ವಯ ಯೋಜನಾಧಿಕಾರಿಗಳ ಕಚೇರಿಯು ಆಯ್ಕೆಯಾದ ಶಿಕ್ಷಕರ ಹೆಸರುಗಳನ್ನು ಬಹಿರಂಗಪಡಿಸಿದ್ದು, ಸೆಪ್ಟೆಂಬರ್ 6ರಂದು ನಡೆಯಲಿರುವ ಶಿಕ್ಷಕರ ದಿನಾಚರಣೆಯಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಆಯ್ಕೆಯಾದ ಶಿಕ್ಷಕರು: ಮೋಹಿನಿ ಕೆ.ವಿ – ಸ.ಹಿ.ಪ್ರಾ.ಶಾಲೆ ಕೋಟೆಶಿರೂರು, ಸಂಪೆಕಟ್ಟೆ ಗಾಯತ್ರಿ ಶೆಣೈ – ಸ.ಕಿ.ಪ್ರಾ.ಶಾಲೆ ಹೊಸೂರು, ನಗರ ಚಂದ್ರಶೇಖರ ಹೆಚ್ – ಸ.ಕಿ.ಪ್ರಾ.ಶಾಲೆ ಕೊಡಸೆ,…
ನಾಳೆ ರಿಪ್ಪನ್ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …??
ನಾಳೆ ರಿಪ್ಪನ್ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಗಣಪತಿ ವಿಸರ್ಜನ ಪೂರ್ವ ವೈಭವದ ರಾಜಬೀದಿ ಉತ್ಸವ : ಪೊಲೀಸ್ ಬಂದೋಬಸ್ತ್ ಹೇಗಿರುತ್ತೆ ಗೊತ್ತಾ …?? ರಿಪ್ಪನ್ಪೇಟೆ : ಪಟ್ಟಣದ ತಿಲಕ್ ಮಂಟಪದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ವತಿಯಿಂದ ಪ್ರತಿಷ್ಠಾಪಿಸಲಾದ 58ನೇ ವರ್ಷದ ಗಣಪತಿ ವಿಸರ್ಜನ ಪೂರ್ವ ರಾಜಬೀದಿ ಉತ್ಸವ ನಾಳೆ (06-09-2025) ಅದ್ದೂರಿಯಾಗಿ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ವಿಸರ್ಜನಾ ಪೂರ್ವ ಪೂಜೆ ನೆರವೇರಲಿದ್ದು, ಅದಾದ ನಂತರ ವೈವಿಧ್ಯಮಯ ಸಾಂಸ್ಕೃತಿಕ ಮೆರವಣಿಗೆಗೆ ಚಾಲನೆ ದೊರೆಯಲಿದೆ. ಈ ಮೆರವಣಿಗೆಯಲ್ಲಿ…
ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!!
ಬ್ರಾಹ್ಮಣ ವಿದ್ಯಾರ್ಥಿನಿಗೆ ಬಲವಂತವಾಗಿ ಮೊಟ್ಟೆ ತಿನ್ನಿಸಿದ್ದ ಶಿಕ್ಷಕ – ಈಗ ಶಿವಮೊಗ್ಗ ಜಿಲ್ಲೆಯ ಅತ್ಯುತ್ತಮ ಶಿಕ್ಷಕ!! ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಪಾಠ ಬೋಧನೆ, ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಶ್ರಮ, ಹೊಸ ತಾಂತ್ರಿಕ ಜ್ಞಾನ ಹೀಗೆ ಹಲವು ಗುಣಗಳನ್ನು ತೂಗಿ ನೋಡುತ್ತಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ನೀಡುತ್ತಾರೆ ಎಂಬುದು ಕೇವಲ ಕಾಗದದ ಮಾತು ಎಂಬುವುದಕ್ಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕರ್ನಾಟಕ ಪಬ್ಲಿಕ್ ಶಾಲೆಯೊಂದರ ಮಹಾನುಭಾವ ಶಿಕ್ಷಕರು ಪಡೆದಿರುವ ಈ ಬಾರಿಯ ಜಿಲ್ಲಾ ಮಟ್ಟದ ಪ್ರಶಸ್ತಿ ಅದಕ್ಕೆ ನಿದರ್ಶನ….
ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ
ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಜಿಲ್ಲೆಯಿಂದ 40 ಶಿಕ್ಷಕರ ಆಯ್ಕೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಸೆಪ್ಟೆಂಬರ್ 5ರಂದು ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿಯ ವತಿಯಿಂದ 2025-26 ನೇ ಸಾಲಿನ ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತಿದೆ. ಈ ಬಾರಿ ಜಿಲ್ಲೆಯಿಂದ ಒಟ್ಟು 40 ಮಂದಿ ಶಿಕ್ಷಕ/ಶಿಕ್ಷಕಿಯರನ್ನು ಆಯ್ಕೆ ಮಾಡಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಿಸಿದ್ದಾರೆ. ಹೊಸನಗರ ತಾಲೂಕಿನ ಐದು ಜನ ಶಿಕ್ಷಕರು ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಮಂಜಪ್ಪ ಡಿ , ಶಿಲ್ಪ…
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ
HOSANAGARA | ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹ ಹೊಸನಗರ : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2025-26ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕು ಎಂದು ಆಗ್ರಹಿಸಿ ತಾಲೂಕು ಕಚೇರಿ ಎದುರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸಿದರು. ಸರಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಪ್ರತಿ ವರ್ಷ ನೇಮಕಾತಿ ಸಂದರ್ಭದಲ್ಲಿಈ ರೀತಿ ಗೊಂದಲವಾಗುತ್ತಿದ್ದು, ಸರಕಾರ ಶಾಶ್ವತ ಪರಿಹಾರ ಹುಡುಕಬೇಕು. ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿಖಾಲಿ…
HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ
HUMCHA | ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ 12 ಸದಸ್ಯರು ಅವಿರೋಧ ಆಯ್ಕೆ ಹುಂಚ : ಸದಾ ಒಂದಿಲ್ಲೊಂದು ವಿವಾದಗಳಿಂದ ಹೊಸನಗರ ತಾಲ್ಲೂಕಿನ ಬಹು ವಿವಾದಿತ ಸೊಸೈಟಿ ಎಂಬ ಹೆಸರಾಗಿರುವ ಹುಂಚಾ ವ್ಯವಸಾಯ ಸಹಕಾರ ನಿಯಮಿತದ ಚುನಾವಣೆಯಲ್ಲಿ ಎಲ್ಲಾ 12 ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸ್ಪರ್ಧೆ ನಡೆಯದೆ, 12 ಸ್ಥಾನಗಳಿಗೆ ಅವಿರೋಧವಾಗಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಐದು ವರ್ಷಗಳ ಅವಧಿಗೆ ಆಯ್ಕೆಯಾಗಬೇಕಿದ್ದ ಈ…