Headlines

ಮನೆ ಮೇಲೆ ಬಿದ್ದ ಮರ : ಅದೃಷ್ಟವಶಾತ್ ಪ್ರಾಣಾಪಾಯದಿಂದ ತಾಯಿ ಮತ್ತು ಮಗು ಪಾರು

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಚಿಕ್ಕ ಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇ ಮೈತಿ ಎಂಬ ಗ್ರಾಮದಲ್ಲಿ ಮೊನ್ನೆ ಸುರಿದ ವಿಪರೀತ ಗಾಳಿ ಸಿಡಿಲು ಮಳೆಗೆ ಮನೆಯ ಪಕ್ಕದಲ್ಲೇ ಇದ್ದ ಬೃಹದಾಕಾರವಾದ ಮರವೊಂದು ಮಧ್ಯರಾತ್ರಿ ಮನೆಯ ಮೇಲೆ ಬಿದ್ದು ಅದೃಷ್ಟವಶಾತ್ ಮನೆಯಲ್ಲಿ ಮಲಗಿದ್ದ ಚಿಕ್ಕ ಮಗು ತಾಯಿ ಅವಘಡದಿಂದ ಪಾರಾಗಿದ್ದಾರೆ. ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಬಡಕುಟುಂಬ ನಾಗರತ್ನ ಎಂಬುವರ ಮನೆ ಈ ದುರಂತಕ್ಕೆ ಕಾರಣವಾಗಿದೆ.ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಟ್ಟು ಸ್ಥಳ…

Read More

ಪಂಚರತ್ನ ಕಾರ್ಯಕ್ರಮ ನೆರವೇರಿಸದೆ ಇದ್ದರೆ ಜೆಡಿಎಸ್ ಪಕ್ಷ ವಿಸರ್ಜನೆ ಮಾಡುತ್ತೇನೆ : ಹೆಚ್ ಡಿ ಕುಮಾರಸ್ವಾಮಿ

ನಮ್ಮಪಕ್ಷದ ಪಂಚರತ್ನ ಕಾರ್ಯಕ್ರಮವನ್ನ ಅಧಿಕಾರಕ್ಕೆ ಬಂದ ಮೇಲೆ ನೆರವೇರಿಸದಿದ್ದರೆ ನನ್ನ ಪಕ್ಷವನ್ನ ವಿಸರ್ಜಿಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರ ಸ್ವಾಮಿ ಘೋಷಿಸಿದ್ದಾರೆ. ಅವರು ತಾಲೂಕಿನ ಕೂಡ್ಲಿ ಜನತಾ ಜಲಧಾರೆ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿ, ಶಿಕ್ಷಣ,ಆರೋಗ್ಯ ವಸತಿ ಉದ್ಯೋಗ ಮತ್ತು ಸ್ವಾಲಂಬಿ ಜೀವನಕ್ಕೆ ರೂಪು ರೇಷ ಹಮ್ಮಿಕೊಂಡಿದ್ದೇನೆ. ಈ ಕಾರ್ಯಕ್ರಮವನ್ನ ಜನತಾ ಜಲಧಾರೆಯ ನಂತರ ಪ್ರಕಟಿಸುವೆ ಎಂದರು. ಯಾವುದೇ ಖಾಯಿಲೆ ಕಾಣಿಸಿಕೊಂಡರೂ ಗ್ರಾಪಂ ವ್ಯಾಪ್ತಿಯಲ್ಲಿ 24 ಗಂಟೆ ವೈದ್ಯರ ಸೇವೆ, ಮತ್ತು ಆಸ್ಪತ್ರೆ ವ್ಯವಸ್ಥೆ ಮಾಡಲಾಗುತ್ತದೆ. ರೈತ…

Read More

ದೇಶದಲ್ಲಿ ಹಿಂದೂ ಮುಸ್ಲಿಂ ಇಬ್ಬರೂ ಸಹೋದರರಂತೆ ಬಾಳಬೇಕು ಎನ್ನುವುದು ಎಲ್ಲರ ಆಶಯ : ಶಾಸಕ ಹರತಾಳು ಹಾಲಪ್ಪ

ಸಾಗರ: ಪಾಕಿಸ್ತಾನಕ್ಕೆ ಜೈಕಾರ ಹಾಕಿದರೆ ನೀವು ಪಾಕ್‌ಗೆ ಹೋಗಿ ಎನ್ನುವುದು ಅನಿವಾರ್ಯವಾಗುತ್ತದೆ. ಹಿಂದೂ ಮುಸ್ಲಿಂ ಇಬ್ಬರ ಬಾಂಧವ್ಯ ಬೆಸೆಯಬೇಕಾದರೆ ಭಾರತ ನಮ್ಮ ಮಾತೃಭೂಮಿ ಎಂದು ಒಪ್ಪಿಕೊಳ್ಳುವುದು ಅಗತ್ಯ ಎಂದು ಶಾಸಕ, ಎಂಎಸ್‌ಐಎಲ್ ಅಧ್ಯಕ್ಷ ಎಚ್. ಹಾಲಪ್ಪ ಹರತಾಳು ಹೇಳಿದ್ದಾರೆ. ನಗರಸಭೆ ರಂಗಮಂದಿರದಲ್ಲಿ ಶುಕ್ರವಾರ ಪ್ರಧಾನಮಂತ್ರಿ ಆವಾಜ್ ಯೋಜನೆಯಡಿ ಫಲಾನುಭವಿಗಳಿಗೆ ವಸತಿ ಕಾಮಗಾರಿ ಕಾರ್ಯಾದೇಶ ಮತ್ತು ಶೇ. 5 ಯೋಜನೆಯಡಿ ಬುದ್ಧಿಮಾಂದ್ಯ ಮಕ್ಕಳ ಪೋಷಕರಿಗೆ ಭದ್ರತಾ ಠೇವಣಿ ಬಾಂಡ್ ವಿತರಣೆ ಮಾಡಿ ಅವರು ಮಾತನಾಡಿದರು. ಮೋದಿಯವರು ದೇಶದ ಸಮಗ್ರತೆಗಾಗಿ…

Read More

ಮಳೆ ಬಂದಾಗ ಕೆಸರು ಗದ್ದೆಯಂತಾಗುವ ಬೆನವಳ್ಳಿ – ಮಸರೂರು ರಸ್ತೆ : ಜನಪ್ರತಿನಿಧಿಗಳೇ ಇನ್ನಾದರೂ ಇತ್ತ ಗಮನಹರಿಸಿ!!!!!

ಹೊಸನಗರ ತಾಲೂಕು ರಿಪ್ಪನ್‌ಪೇಟೆ ಸಮೀಪದ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬೆನವಳ್ಳಿ-ಮಸರೂರು-ಆಚಾಪುರ ಸಂಪರ್ಕದ ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಪಂಚಾಯ್ತಿ ರಸ್ತೆಮಳೆ ಬಂದಾಗ ಕೆಸರು ಗದ್ದೆಯಂತಾಗಿ ಸಾರ್ವಜನಿಕರು ಓಡಾಡದ ಸ್ಥಿತಿ ನಿರ್ಮಾಣವಾಗುತ್ತಿದೆ.  ಬೆನವಳ್ಳಿಯಿಂದ ಮಸರೂರು, ಮಾಣಿಕರೆ, ಹಾಲಬಾವಿ, ಕೆಂಚನಾಲ, ಆಲುವಳ್ಳಿ, ಗಾಳಿಬೈಲು, ವಿರಕ್ತಮಠ, ಕಮದೂರು, ಮಾದಾಪುರ, ಕುರುಬರಜಡ್ಡು, ಲಕ್ಕವಳ್ಳಿ, ಕೆರೆಹಿತ್ತಲು, ಗಿಳಾಲಗುಂಡಿ, ಮುರುಘಾಮಠ ಆಚಾಪುರ ಇಸ್ಲಾಂಪುರ ಅಂದಾಸುರ ಹೀಗೆ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿಯ ಸಂಪರ್ಕದ ರಸ್ತೆಯಾಗಿದ್ದು ಈ ರಸ್ತೆಯನ್ನು ಕಳೆದ ಹಲವಾರು ವರ್ಷಗಳಿಂದ ಈ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More

ಪಿಎಫ಼್ ಐ & ಎಸ್ ಡಿಪಿಐ ನಿಷೇದಕ್ಕೆ ಎಲ್ಲಾ ತಯಾರಿ ನಡೆದಿದೆ : ಶಿಕ್ಷಣ ಸಚಿವ ಡಾ| ಅಶ್ವತ್ ನಾರಾಯಣ್

ಶಿವಮೊಗ್ಗ: ಪಿಎಫ್‌ಐ, ಎಸ್‌ ಡಿಪಿಐ ಸಂಘಟನೆ ನಿಷೇಧ ಮಾಡುವ ದಿಕ್ಕಿನಲ್ಲಿ ಎಲ್ಲಾ ರೀತಿಯ ಪ್ರಯತ್ನ ನಡೆದಿದೆ. ಅದಕ್ಕೆ ಬೇಕಾದ ಪೂರ್ವಭಾವಿ ತಯಾರಿ, ದಾಖಲೆಗಳ ಸಂಗ್ರಹ ಆಗುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ್ ನಾರಾಯಣ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಫ್‌ಐ, ಎಸ್‌ಡಿಪಿಐ ಸಂಸ್ಥೆಗಳು ಸಮಾಜದಲ್ಲಿ ಸಾಕಷ್ಟು ಗೊಂದಲ ನಿರ್ಮಾಣ ಮಾಡ್ತಿವೆ. ಈ ಬಗ್ಗೆ ಮೇಲ್ನೋಟಕ್ಕೆ ಹೇಳಿಕೆ ಕೊಡೋದಲ್ಲ. ಕಾಂಗ್ರೆಸ್‌ ಸರಕಾರವಿದ್ದಾಗ ಅವರ ಬದ್ಧತೆ ಏನಿತ್ತು. ಅಧಿಕಾರದಲ್ಲಿ ಇದ್ದಾಗ ಅವರ ಮೇಲಿದ್ದ ಕೇಸ್‌ ಹಿಂಪಡೆದು ಈಗ…

Read More

ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ ಕಿಮ್ಮನೆ ಜಿಜ್ಞಾಸೆಯಿಂದ ಹತಾಶೆಯ ಹೇಳಿಕೆ ನೀಡುತಿದ್ದಾರೆ‌ : ಗೃಹ ಸಚಿವ ಆರಗ ಜ್ಞಾನೇಂದ್ರ

ರಿಪ್ಪನ್‌ಪೇಟೆ : ತೀರ್ಥಹಳ್ಳಿ ಕ್ಷೇತ್ರದಲ್ಲಿ ನನ್ನ ಅಭಿವೃದ್ಧಿಯ ಪರ್ವ ನೋಡಿ   ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ರವರಿಗೆ ಸಹಿಸಲು ಸಾಧ್ಯವಿಲ್ಲದೇ ಇತಿ-ಮಿತಿ ಮೀರಿ ಆರೋಪಿಸುತ್ತಿದ್ದಾರೆ.ಆರ್.ಎಂ.ಮಂಜುನಾಥ ಗೌಡರಿಂದಾಗಿ ಮುಂದಿನ ಭಾರಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೇಟ್ ಸೀಗುತ್ತದೋ? ಎಂಬ ಜಿಜ್ಞಾಸೆಯಿಂದ ಈ ರೀತಿಯಲ್ಲಿ ಹತಾಶೆಯ ಹೇಳಿಕೆ ನೀಡುತ್ತಿದ್ದಾರೆಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅರೋಪಿಸಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಕ್ಷೇತ್ರದಲ್ಲಿ ಕೇವಲ ಐದು ವರ್ಷದ ಅವಧಿಯಲ್ಲಿ 1000 ಸಾವಿರ ಕೋಟಿಗೂ ಅಧಿಕ ಅನುದಾನವನ್ನು ತರಲಾಗಿದೆ.ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಭ್ರಷ್ಟಾಚಾರವಾಗಿದೆ…

Read More

ಶಾಂತ ರೀತಿಯಲ್ಲಿದ್ದ ಕರ್ನಾಟಕದಲ್ಲಿ ಗಲಭೆ,ದೊಂಬಿ ಎಬ್ಬಿಸುವ ಷಡ್ಯಂತ್ರ ನಡೆಯುತ್ತಿದೆ,ಇದು ಖಂಡನಾರ್ಹ : ಮಾಜಿ ಸಚಿವ ಕೆ ಎಸ್ ಈಶ್ವರಪ್ಪ

 ಶಾಂತಿಯಲ್ಲಿದ್ದ ರಾಜ್ಯದಲ್ಲಿ ಕೊಲೆ, ದೊಂಬಿ ಮೂಲಕ ಗಲಭೆ ನಿರ್ಮಾಣದ ಷಡ್ಯಂತ್ರ ನಡೆಯುತ್ತಿದೆ. ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ ಎಂದು ಮಾಜಿ ಸಚಿವ ಕೆ.ಎಸ್​ ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದ ಖಾಸಗಿ ಹೋಟೆಲ್​ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಒಬ್ಬ ಮೌಲ್ವಿ ಪೊಲೀಸ್ ಜೀಪ್ ಮೇಲೆ ನಿಂತು ಪ್ರಚೋದನೆ ಕೊಡುತ್ತಾನೆ.ತಲೆಗಳನ್ನು ಕತ್ತರಿಸಿ, ರುಂಡಗಳನ್ನು ಬೇರೆ ಮಾಡಿ ಎಂದು ಪ್ರಚೋಧಿಸುವ ಹೇಳಿಕೆ‌ ಕೊಡುತ್ತಾರೆ. ಕಾಂಗ್ರೆಸ್ ನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ್ ಮೌಲ್ವಿ ಪಕ್ಕದಲ್ಲಿ ನಿಂತು ಕಲ್ಲು ಹೊಡಿಯುವುದನ್ನು ನೋಡುತ್ತಿದ್ದಾರೆ. ಆಸ್ಪತ್ರೆ,…

Read More

ಕೊಚ್ಚೆ ಗುಂಡಿಯಲ್ಲಿ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ ನಲ್ಲಿ !!!!

ತೀರ್ಥಹಳ್ಳಿ : ದೇಶದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಹಳ್ಳಿಗಳ ಜನರ ಪ್ರತಿಯೊಬ್ಬರ ಆರೋಗ್ಯ ದೃಷ್ಠಿಯಿಂದ  ಶುದ್ಧ ನೀರು ಕುಡಿಯಬೇಕ್ಕೆನ್ನುವ ವಿಶೇಷ ಕಾಳಜಿಯಿಂದ ಕೋಟ್ಯಂತರ ರೂ ವೆಚ್ಚದಲ್ಲಿ ಪ್ರತಿ ಮನೆ ಮನೆಗೆ,, ಗಂಗೆ ( ಜೆ ಜೆ ಎಂ ) ಶುದ್ಧ ಕುಡಿಯುವ ನಲ್ಲಿ ನೀರಿನ ಯೋಜನೆ ನೀಡಿರುತ್ತಾರೆ.  ತಾಲೂಕಿನ ಎಲ್ಲಾ ಗ್ರಾಮಪಂಚಾಯಿತಿಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರ ವಿಶೇಷ ಪರಿಶ್ರಮದಿಂದ ಕೋಟ್ಯಂತರ ರೂಪಾಯಿಗಳ ಅನುದಾನ ಹರಿದು ಬಂದಿದ್ದು ಕಾಮಗಾರಿಗಳು ಭರದಿಂದ ನೆಡೆಯುತ್ತಿದೆ. ಆದರೆ ಕೆಲವು ಗ್ರಾಮೀಣ…

Read More

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ ಎಸ್ ಯಡಿಯೂರಪ್ಪ ರವರ ಹೆಸರು ನಾಮಕರಣ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಣೆ

ಶಿವಮೊಗ್ಗ: ನಗರದಲ್ಲಿನ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಸಂಬಂಧ ವಿವಿಧ ಹೆಸರು ಇಡುವ ಬಗ್ಗೆ ಒತ್ತಾಯ ಕೇಳಿ ಬಂದಿತ್ತು. ಆದ್ರೇ ಕೊನೆಗೂ ಶಿವಮೊಗ್ಗ ಏರ್ ಪೋರ್ಟ್ ಗೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ  ಅವರ ಹೆಸರನ್ನೇ ಇಡಲಾಗುತ್ತಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಹಲವು ದಿನಗಳಿಂದ ಇದ್ದಂತ ಏರ್ಪೋರ್ಟ್ ಹೆಸರಿನ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಇಂದು ಅವರು ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದಂತ ಅವರು, ವಿಮಾನ ನಿಲ್ದಾಣಕ್ಕೆ…

Read More