Headlines

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More

ಕಾಲೇಜು ಆವರಣದಲ್ಲಿ ಹಿಜಾಬ್, ಕೇಸರಿ ಶಾಲು ನಡೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಏನೇನೋ ವೇಷ ಧರಿಸಿಕೊಂಡು ಬರುತ್ತೇವೆ, ನನ್ನ ಧರ್ಮ ಇದು, ನನ್ನ ಧರ್ಮ ಅದು ಎಂದು ಹೇಳಿದರೆ ಆಗಲ್ಲ. ಹಿಜಾಬ್ ಮತ್ತು ಕೇಸರಿ ಶಾಲು ಧರಿಸುವುದು ಕಾಲೇಜು ಆವರಣದಲ್ಲಿ ನಡೆಯವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಾಲೇಜು ಆಡಳಿತ ನಿರ್ಧರಿಸಿರುವ ಸಮವಸ್ತ್ರವನ್ನೇ ಕಾಲೇಜಿನಲ್ಲಿ ಧರಿಸಬೇಕು. ಇದನ್ನು ಕಡ್ಡಾಯ ಮಾಡಿ ಶಿಕ್ಷಣ ಇಲಾಖೆ ನಿನ್ನೆ ಆದೇಶ ಹೊರಡಿಸಿದೆ. ಈ ಆದೇಶವನ್ನು ಎಲ್ಲರೂ ಪಾಲಿಸಲೇಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ…

Read More

ಶಿವಮೊಗ್ಗಕ್ಕೂ ಕಾಲಿಟ್ಟ ಹಿಜಾಬ್​ ವಿವಾದ: ಕೇಸರಿ ಶಾಲು ಧರಿಸಿ ಬಂದ ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು

 ಶಿವಮೊಗ್ಗಕ್ಕೂ ಹಿಜಾಬ್ ಹಾಗೂ ಕೇಸರಿ ಶಾಲು​ ವಿವಾದ ಕಾಲಿಟ್ಟಿದ್ದು, ಇಂದು ಸಹ್ಯಾದ್ರಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಆಗಮಿಸಿದ್ದಾರೆ. ಶಿವಮೊಗ್ಗದ ವಿದ್ಯಾನಗರದಲ್ಲಿರುವ ಸಹ್ಯಾದ್ರಿ ವಾಣಿಜ್ಯ ಕಾಲೇಜಿನಲ್ಲಿ ಹಿಜಾಬ್​​ಗೆ ಅವಕಾಶ ನೀಡದಂತೆ, ಹಾಗೂ ಹಿಜಾಬ್ ಧರಿಸಿ ಬರುವ ವಿದ್ಯಾರ್ಥಿಗಳ ಹೊರಗಿಡುವಂತೆ ಕೇಸರಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ವಿದ್ಯಾರ್ಥಿಗಳ ಮನವೊಲಿಸಲು ಕಾಲೇಜಿನ ಪ್ರಾಂಶುಪಾಲರು ಪ್ರಯತ್ನಿಸಿದ್ದು, ಈ ವೇಳೆ ವಿದ್ಯಾರ್ಥಿಳು ವಂದೇ ಮಾತರಂ ಹಾಗೂ ಜೈ ಶ್ರೀರಾಮ್ ಘೋಷಣೆ ಕೂಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಹ್ಯಾದ್ರಿ ವಾಣಿಜ್ಯ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಸರ್ಕಾರಿ ಕಾಲೇಜಿನಲ್ಲಿ ಕೇಸರಿ ಶಾಲು-ಹಿಜಾಬ್ ಸಂಘರ್ಷ ..!!

ಕರಾವಳಿ,ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾರಕಕ್ಕೇರಿರುವ ಕೇಸರಿ ಶಾಲು,ಹಿಜಾಬ್ ಧರಿಸುವ ಕುರಿತಾದ ಪ್ರಕರಣ ಇದೀಗ ರಾಜ್ಯದ ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತವರು ಕ್ಷೇತ್ರ ತೀರ್ಥಹಳ್ಳಿ ಬಾಳೆಬೈಲು ಸರ್ಕಾರಿ  ಡಿಗ್ರಿ ಕಾಲೇಜಿಗೂ ತಟ್ಟಿದೆ. ಇಂದು ಬೆಳಗ್ಗೆ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಾಲು ಧರಿಸಿಕೊಂಡು ಹೊಂದಿದ್ದು ಶಾಲೆಯ ಆಡಳಿತ ಇದಕ್ಕೆ ಅವಕಾಶ ಕಲ್ಪಿಸಿಲ್ಲ ಕೂಡಲೆ ವಿದ್ಯಾರ್ಥಿಗಳು ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಪ್ರಾಂಶುಪಾಲರಿಗೆ ಮನವಿ ಯನ್ನು ನೀಡಿದ್ದು ಕೆಲವು ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೂರುತ್ತಿರುವುದರಿಂದ…

Read More

ಅಪ್ರಾಪ್ತ ನಾದಿನಿಯನ್ನ ಲೈಂಗಿಕವಾಗಿ ಬಳಸಿ ವಿಕೃತಿ ಮೆರೆದ ಕ್ರೂರಿ ಬಾವ! ಪ್ರಸವಪೂರ್ವ ಹೆರಿಗೆಯಾದ ಮಗು ಸಾವು

ನಾದಿನಿ ಮೇಲೆ ಕಳೆದ ಒಂದು ವರ್ಷದಿಂದ ಲೈಂಗಿಕ ದೌರ್ಜನ್ಯ ನಡೆಸಿ ಮಗು ಕರುಣಿಸಿದ್ದ ಕ್ರೂರಿ ಬಾವನನ್ನು ಪೊಲೀಸರು ಬಂದಿಸಿದ್ದಾರೆ. ದುರಾದೃಷ್ಟವಶಾತ್ ಪ್ರಸವಪೂರ್ವ ಹೆರಿಗೆಯಾದ ಬಳಿಕ ಮಗು ಮೃತಪಟ್ಟಿದೆ. ಕುಂಸಿ ಗ್ರಾಪಂ ವ್ಯಾಪ್ತಿಯ ಕ್ಯಾಂಟೀನ್‌ವೊಂದರ ಮಾಲೀಕ ಪ್ರವೀಣ್ ಬಂಧಿತ ಆರೋಪಿ. ಪತ್ನಿ ಮನೆಯಲ್ಲಿ ಇಲ್ಲದಾಗ ಆಕೆಯ ತಂಗಿ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದ. ಅಪ್ರಾಪ್ತೆ 6ನೇ ತರಗತಿಯಿಂದ ಅಕ್ಕನ ಮನೆಯಲ್ಲಿದ್ದುಕೊಂಡು ಓದುತ್ತಿದ್ದಳು. ಎಸ್ಸೆಸ್ಸೆಲ್ಸಿವರೆಗೆ ಓದಿದ್ದ ಅಪ್ರಾಪ್ತೆ ಮೇಲೆ ಬಾವನ ಕಣ್ಣು ಬಿದ್ದಿತ್ತು. ಹಲವು ಬಾರಿ ಲೈಂಗಿಕವಾಗಿ ಬಳಸಿಕೊಂಡಿದ್ದ. ತದನಂತರ…

Read More

ನೆಟ್ ವರ್ಕ್ ಅರಸುತ್ತಾ ಮನೆ ಬಿಟ್ಟಿದ್ದ ಯುವತಿಯ ಮೊಬೈಲ್ ಕಳ್ಳತನ !!!

ರಾಜ್ಯದ ಗ್ರಾಮೀಣ ಭಾಗದಲ್ಲಿ ಶೌಚಾಲಯಗಳ ಕೊರತೆಯಿಂದ ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ನಡುವೆ ಮಲೆನಾಡಿನ ಮಹಿಳೆಯರು ಹೊಸದೊಂದು ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ನೆಟ್ವರ್ಕ್ ಸಮಸ್ಯೆ. ತುಮರಿ ಗ್ರಾಪಂ ವ್ಯಾಪ್ತಿಯ ಮಾರಲಗೋಡು ಗ್ರಾಮದ ಯುವತಿ ಆನ್ ಲೈನ್ ಶಿಕ್ಷಣ ಪಡೆಯುವ ಸಲುವಾಗಿ ಮೊಬೈಲ್ ಅನ್ನು ಅವಲಂಬಿಸಿದ್ದಳು.ಗ್ರಾಮದಲ್ಲಿ ಇಂಟರ್ನೆಟ್ ಸಂಪರ್ಕದ ಸಮಸ್ಯೆಯಿಂದಾಗಿ ತರಗತಿಗಳಿಗೆ ಹಾಜರಾಗುವುದೇ ದುಸ್ತರವಾಗಿತ್ತು. ಹೀಗಾಗಿ ಇಂಟರ್ನೆಟ್ ಸಂಪರ್ಕ ಸಿಗುವ ಪ್ರದೇಶಕ್ಕಾಗಿ ಮನೆಯಿಂದ ಹೊರಗೆ ಹುಡುಕಬೇಕಾಗಿದ್ದಿತು. ಈ ವೇಳೆ ಯುವತಿಯನ್ನು ಓರ್ವ ಯುವಕ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಹೊಂಚು ಹಾಕಿ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಿ ಪ್ರತಿಭಟನೆ :

ಹೊಸನಗರ ವಿಧಾನಸಭಾ ಕ್ಷೇತ್ರವು ತಾಲ್ಲೂಕಿನಲ್ಲಿ 2001 ರ ಹಿಂದೆ ಅಸ್ತಿತ್ವದಲ್ಲಿತ್ತು. ಆದರೆ ನಂತರದ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣೆಯ ಸಮಯದಲ್ಲಿ ಹೊಸನಗರ ಕ್ಷೇತ್ರವನ್ನು ತೀರ್ಥಹಳ್ಳಿ ಮತ್ತು ಸಾಗರ ಕ್ಷೇತ್ರಕ್ಕೆ ಸೇರಿಸಿ ಹೊಸನಗರ ತಾಲ್ಲೂಕು ವಿಧಾನಸಭಾ ಕ್ಷೇತ್ರವನ್ನು ಕೈಬಿಡಲಾಗಿತ್ತು. ಇಂದು ಹೊಸನಗರ ತಾಲ್ಲೂಕಿನ ಎಲ್ಲ ಪಕ್ಷದ ನಾಯಕರು ಪಕ್ಷಾತೀತವಾಗಿ ಪಾಲ್ಗೊಂಡು ಮಾಜಿ ಶಾಸಕ ಬಿ.ಸ್ವಾಮಿರಾವ್‌ ರವರ ನೇತೃತ್ವದಲ್ಲಿ ಹಳೇ ಕೋರ್ಟ್ ರಸ್ತೆಯಲ್ಲಿ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿ ಹೊಸನಗರದ ತಹಶೀಲ್ದಾರ್‌ ಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಪತ್ರವನ್ನು ಸಲ್ಲಿಸಿದರು….

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಬಿದರಹಳ್ಳಿಯಲ್ಲಿ ಮಗು ಸಮೇತ ತಾಯಿ ಆತ್ಮಹತ್ಯೆ ಪ್ರಕರಣ : ಅಮಾಯಕ ಮಗುವಿನ ಹತ್ಯೆಗೆ ಹೊಣೆ ಯಾರು……!?

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯಿತಿಯ ಬಿದರಹಳ್ಳಿ ಗ್ರಾಮದ ಸಮೀಪದ ಚಿಟ್ಟೆ ಗೆದ್ದೆಯ ಮುದ್ದುಮುಖದ ನಾಲ್ಕು ವರ್ಷದ  ತನ್ವಿ ಎಂಬ ಪುಟ್ಟ ಮುದ್ದು ಕಂದಮ್ಮನ ಹತ್ಯೆಗೆ ಹೊಣೆ ಯಾರು. ಅಜ್ಜ-ಅಜ್ಜಿಯೋ?. ತಂದೆಯೋ?  ಅಥವಾ ಲೋಕದ ಅರಿವಿಲ್ಲದ ಚಂದದ ಮುಗ್ಧ ಬಾಲಕಿಯನ್ನು ವೇಲಿನಿಂದ ಸೊಂಟಕ್ಕೆ ಕಟ್ಟಿ ಬಾವಿಗೆ ಹಾರಿದ ತಾಯಿ ವಿದ್ಯಾ ಕಾರಣವಾದರೆ ??? 2014 ರಲ್ಲಿ ಚಿಟ್ಟೆಗೆದ್ದೆ ಯ ಲೋಹಿತ ಎಂಬುವರೊಂದಿಗೆ ಮದುವೆಯಾಗಿದ್ದ  ವಿದ್ಯಾ ಅತ್ತೆ ಮಾವ ಮತ್ತು ಗಂಡನ ಕಿರುಕುಳದಿಂದ ಬೇಸತ್ತು ಮೇಲಿನಿಂದ…

Read More

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ : ವಿಡಿಯೋ ಈಗ ವೈರಲ್

ಚಲಿಸುವ ಬಸ್ಸನ್ನು ಓಡಿಹೋಗಿ ಹತ್ತಲು ಹೋಗಿ ಬಸ್ ನಿಂದ ವಿದ್ಯಾರ್ಥಿಯೋರ್ವ ಕೆಳಗೆ ಬಿದ್ದ ವಿಡಿಯೋ ಈಗ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಪಟ್ಟಣದಲ್ಲಿ ಈ ಘಟನೆ  ನಡೆದಿದ್ದು, ಬಸ್ ನಿಲ್ದಾಣದಿಂದ ಹೊರಟ ಬಸ್ಸನ್ನು ಓಡಿ ಹೋಗಿ ಹತ್ತಲು ವಿದ್ಯಾರ್ಥಿ ಯತ್ನಿಸಿದ್ದಾನೆ. ಆದರೆ ಬಸ್ಸು ಸ್ಪೀಡ್ ಇದ್ದಿದ್ದರಿಂದ ವಿದ್ಯಾರ್ಥಿಗೆ ಹತ್ತಲು ಸಾಧ್ಯವಾಗದೆ ಕೆಳಗೆ ಬಿದ್ದಿದ್ದಾನೆ. ಕಾರ್ಗಲ್ ನ ಇಡುವಾಣಿಯ ಚಿಪ್ಪಲಮಕ್ಕಿಯ ಒಂಭತ್ತನೇ ತರಗತಿ ವಿದ್ಯಾರ್ಥಿ ವೈಭವ್ ಎಂಬಾತ ಬಸ್ ನಿಂದ ಕೆಳಗೆ ಬಿದ್ದ ವಿದ್ಯಾರ್ಥಿ….

Read More