Headlines

ರಿಪ್ಪನ್ ಪೇಟೆ : ಸ್ವಾಮಿ ವಿವೇಕಾನಂದ ಜಯಂತಿ ಆಚರಣೆ : ರಾಷ್ಟ್ರೀಯ ಯುವ ದಿನದ ಇತಿಹಾಸ

ರಿಪ್ಪನ್ ಪೇಟೆ : ರಾಷ್ಟ್ರೋತ್ಥಾನ ಬಳಗದ ವತಿಯಿಂದ ಇಲ್ಲಿಯ ರಾಷ್ಟ್ರೋತ್ಥಾನ ಶಿಶು ಮಂದಿರದಲ್ಲಿ ಸ್ವಾಮಿ ವಿವೇಕಾನಂದರ 159ನೇ ಜಯಂತಿ ಆಚರಿಸಲಾಯಿತು. ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಆರೆಸ್ಸೆಸ್ ಪ್ರಮುಖರಾದ ಬೆಳ್ಳೂರು ತಿಮ್ಮಪ್ಪ ಮಾತನಾಡಿ  ಯುವಕರು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು. 18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ ಅವರ 159ನೇ ಜನ್ಮಜಯಂತಿ ದಿನವನ್ನು ಇಂದು ನಾವು ರಾಷ್ಟ್ರೀಯ…

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ಶಿವಮೊಗ್ಗ ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ಡಾ. ಸೆಲ್ವಮಣಿ ಅಧಿಕಾರ ಸ್ವೀಕಾರ

ಜಿಲ್ಲೆಯಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸಿದ ಕೆ ಬಿ ಶಿವಕುಮಾರ್ ಅವರನ್ನು ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಮಾಡಿದ್ದು , ಅವರ ಸ್ಥಾನಕ್ಕೆ ಕೋಲಾರದ ಜಿಲ್ಲಾಧಿಕಾರಿಯಾಗಿದ್ದ ಸೆಲ್ವಮಣಿ (2013 ನೇ ಬ್ಯಾಚಿನ ಐಎಎಸ್ ಅಧಿಕಾರಿ)ರವರನ್ನು ಸರ್ಕಾರ ವರ್ಗಾಯಿಸಿ ಆದೇಶ ನೀಡಿದ್ದು .ಇಂದು ಬೆಳಿಗ್ಗೆ  ನೂತನ ಜಿಲ್ಲಾಧಿಕಾರಿಗಳು ಹಿಂದಿನ ಜಿಲ್ಲಾಧಿಕಾರಿ ಅವರಿಂದ  ಅಧಿಕಾರವನ್ನು ಸ್ವೀಕರಿಸಿದ್ದಾರೆ. ಹಿಂದಿನ ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ನಿಷ್ಠೆ, ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿದ್ದು ಕೆಲವು ಮಾಫಿಯಾಗಳು ಅದರಲ್ಲೂ ಮುಖ್ಯವಾಗಿ ಹುಣಸೋಡು ಕ್ರಷರ್ ಮತ್ತು…

Read More

ರಿಪ್ಪನ್ ಪೇಟೆ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗೆ ಕೊರೊನಾ ಪಾಸಿಟಿವ್ : ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ

ರಿಪ್ಪನ್ ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯೊರ್ವನಿಗೆ ಕೋವಿಡ್ ಪಾಸಿಟಿವ್ ಬಂದಿದ್ದು,ಯುವಕನನ್ನು ಹೋಂ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ವಿದ್ಯಾರ್ಥಿಗೆ ಆರೋಗ್ಯದಲ್ಲಿ ವ್ಯತ್ಯಯ ಕಂಡುಬಂದ ಹಿನ್ನಲೆಯಲ್ಲಿ ರಿಪ್ಪನ್ ಪೇಟೆಯ ಪಿಹೆಚ್ ಸಿಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದಾನೆ ಕೋವಿಡ್ ಪರೀಕ್ಷೆಯ ವರದಿಯು ಇಂದು ಪಾಸಿಟಿವ್ ಎಂದು ಬಂದಿದೆ.ವಿದ್ಯಾರ್ಥಿಗೆ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಕಾಲೇಜಿನ 2nd ಬಿಕಾಂ ನ ಎಲ್ಲಾ ವಿದ್ಯಾರ್ಥಿಗಳ ಸ್ಲ್ಯಾಬ್ ಪರೀಕ್ಷೆಗೆ ಒಳಪಡಿಸಲಾಗಿದೆ.  ಕೂಡಲೇ ಎಚ್ಚೆತ್ತುಕೊಂಡ ಕಾಲೇಜಿನ ಆಡಳಿತ…

Read More

70 ಸಾವಿರ ರೂ. ಲಂಚ ಪಡೆಯುತ್ತಿದ್ದ ಪಿಡಿಒ ಮೇಲೆ ಎಸಿಬಿ ದಾಳಿ

ಬಿಳಕಿ ಗ್ರಾಮಪಂಚಾಯಿತಿ ಪಿಡಿಒ ಭ್ರಷ್ಟಾಚಾರ ನಿಗ್ರಹದಳದ (ACB) ಬಲೆಗೆ ಬಿದ್ದಿದ್ದಾನೆ. ಪಿಡಿಒ ಕೇಶವ ಮೂರ್ತಿ 70 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಪೊಲೀಸರ ಕೈಗೆ ಸಿಕ್ಕಿಬಿದ್ದಾನೆ. ಇ-ಸ್ವತ್ತಿನಲ್ಲಿ ರಿಲೀಸಿಂಗ್ ಡೀಡ್ ಮಾಡಿಕೊಡಲು ಹರೀಶ್ ಎಂಬುವರ ಬಳಿ ಪಿಡಿಒ ಕೇಶವ ಮೂರ್ತಿ 1 ಲಕ್ಷ ರೂ ಹಣದ ಬೇಡಿಕೆ ಇಟ್ಟಿದ್ದನು.  ಈ ಕುರಿತು 5 ಸಾವಿರ ರೂ ಮುಂಗಡವಾಗಿ ಹಣ ಪಡೆದು ಉಳಿದ ಹಣ ಕೆಲಸ ಮುಗಿದ ಮೇಲೆ ನೀಡುವಂತೆ ಬೇಡಿಕೆ ಇಟ್ಟಿದ್ದರು. ಇಂದು ಶಿವಮೊಗ್ಗ…

Read More

ಮೇಕೆದಾಟು ಪಾದಯಾತ್ರೆಗೆ ಜಿಲ್ಲೆಯಿಂದ ಎರಡು ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ : ಹೆಚ್ ಎಸ್ ಸುಂದರೇಶ್

ಶಿವಮೊಗ್ಗ: ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಜ.19 ರಂದು ಶಿವಮೊಗ್ಗ ಜಿಲ್ಲೆಯಿಂದ ಸುಮಾರು 2000 ಕ್ಕೂ ಹೆಚ್ಚು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಲಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಹೇಳಿದರು. ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಯೋಜನೆ ಜಾರಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಪಾದಯಾತ್ರೆ ನಡೆಯುತ್ತಿದ್ದು, ಜ.19ರಂದು ಬೆಳಿಗ್ಗೆ 8.30ಕ್ಕೆ ಶಿವಮೊಗ್ಗ ಜಿಲ್ಲೆಯವರು ಕೆಪಿಸಿಸಿ ಕಚೇರಿ ಬಳಿ ಹಾಜರಿರುವಂತೆ ವರಿಷ್ಠರು ಸೂಚನೆ…

Read More

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಗೆ ಕೊರೊನಾ ಸೋಂಕು ಧೃಡ :

ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಕೊರೋನ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ತಮ್ಮ ಸೋಂಕು ದೃಢಪಡಿಸಿದ್ದಾರೆ. ಮೂರನೇ ಅಲೆಯ ಹೊಸ್ತಿಲಿನಲ್ಲಿರುವ ಕೊರೋನ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಈ ವೇಳೆ ಸಿಎಂ ಬೊಮ್ಮಾಯಿ ಸಣ್ಣಪ್ರಮಾಣದ ಲಕ್ಷಣ ಕಾಣಿಸಿಕೊಂಡ ಬೆನ್ನಲ್ಲಿ ಕೊರೋನ‌ ಪರೀಕ್ಷೆಗೆ ಒಳಪಟ್ಟಿದ್ದು, ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ. ಕೊರೋನ‌ ಪಾಸಿಟಿವ್ ಕಾಣಿಸಿಕೊಂಡ ಬೆನ್ನಲ್ಲಿ ನಾನು ಹೋಂ‌ಕ್ಯಾರಂಟೈನ್ ಆಗಿರುವುದಾಗಿ ತಿಳಿಸಿರುವ ಸಿಎಂ ನನ್ನೊಂದಿಗೆ ಸಂಪರ್ಕದಲ್ಲಿರುವವರು ಪರೀಕ್ಷೆಗೆ ಒಳಪಡುವಂತೆ ಹಾಗೂ ಐಸೋಲೇಷನ್…

Read More

ರಿಪ್ಪನ್ ಪೇಟೆ : ಐಟಿಐ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸುವಂತೆ ಬಿ ಪಿ ರಾಮಚಂದ್ರ ಆಗ್ರಹ

ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಕೆದಲುಗುಡ್ಡ ಗ್ರಾಮದಲ್ಲಿ ನೂತನ ಸರಕಾರಿ ಐಟಿಐ ಕಾಲೇಜು ಕಟ್ಟಡ ಸಂಪೂರ್ಣವಾಗಿ ನಿರ್ಮಾಣವಾಗಿದ್ದು, ಉದ್ಘಾಟನೆ ಭಾಗ್ಯ ಕಾಣದೆ ಐಟಿಐ ವಿದ್ಯಾರ್ಥಿಗಳು ಪರಿತಪಿಸುತಿದ್ದಾರೆ, ಆದಷ್ಟು ಬೇಗ ನೂತನ ಕಟ್ಟಡ ಉದ್ಘಾಟನೆ ಮಾಡಿ ಐಟಿಐ ವಿದ್ಯಾರ್ಥಿಗಳಿಗೆ ಅನುಕೂಲಕರ ಮಾಡಿಕೊಡುವಂತೆ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಬಿ ಪಿ ರಾಮಚಂದ್ರ ಆಗ್ರಹಿಸಿದ್ದಾರೆ.  ಇಂದು ಕೆದಲುಗುಡ್ಡೆ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಐಟಿಐ ಕಾಲೇಜಿನ ಕಟ್ಟಡವನ್ನು ವೀಕ್ಷಿಸಿ ನಂತರ ಮಾತನಾಡಿದ ಅವರು ಕಾಗೋಡು ತಿಮ್ಮಪ್ಪ ರವರ ಅವಧಿಯಲ್ಲಿ  ಸುಮಾರು…

Read More

ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ : ಕಿಮ್ಮನೆ ಸವಾಲು

ಶಿವಮೊಗ್ಗ : ದೇಶದ ಗೃಹಮಂತ್ರಿ ಅಮಿತ್ ಶಾ ಹಾಗೂ ರಾಜ್ಯದ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ, ಸಾಮರ್ಥ್ಯ ಇದ್ದರೆ ನಂದಿತಾ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ. ಆರು ತಿಂಗಳಲ್ಲಿ ಫಲಿತಾಂಶ ಕೊಡಿ. ಇದರಲ್ಲಿ ನನ್ನ ಹಸ್ತಕ್ಷೇಪವೆಗಿರುವುದು ಗುಲಗಂಜಿಯಷ್ಟು ಸಾಬೀತಾದರೆ ನಾನು ಸಾರ್ವಜನಿಕ ಕ್ಷೇತ್ರದಿಂದ ನಿವೃತ್ತಿಯಾಗುತ್ತೇನೆ. ಇಲ್ಲದಿರೆ ರಾಜ್ಯದ ಗೃಹಮಂತ್ರಿಗಳು ತೀರ್ಥಹಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಆಗ್ರಹಿಸಿದರು. ಅವರಿಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ 01-11-2014 ರಿಂದ 2018 ರವರೆಗೆ ಸತತವಾಗಿ ಆರಗ ಜ್ಞಾನೇಂದ್ರ…

Read More

ಕೋವಿಡ್ ಬೂಸ್ಟರ್ ಡೋಸ್ ಲಸಿಕಾಕರಣ :: ಸಚಿವ ಈಶ್ವರಪ್ಪ ಚಾಲನೆ

ಶಿವಮೊಗ್ಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಶಿವಮೊಗ್ಗ(ಸಿಮ್ಸ್) ನಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್.ಈಶ್ವರಪ್ಪ ಇವರು ಕೋವಿಡ್-19 ಮುನ್ನೆಚ್ಚರಿಕೆ(ಬೂಸ್ಟರ್)ಡೋಸ್ ಲಸಿಕಾಕರಣಕ್ಕೆ ಚಾಲನೆ ನೀಡಿದರು. ಈ ವೇಳೆ ಅವರು ಮಾತನಾಡಿ, ಭಾರತ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಜ.10 ರಿಂದ ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ(ಕೋಮಾರ್ಬಿಡಿಟಿ) ಹೊಂದಿರುವ ಫಲಾನುಭವಿಗಳಿಗೆ ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ನೀಡಲಾಗುತ್ತಿದ್ದು ಎಲ್ಲ ಅರ್ಹರು ಈ ಬೂಸ್ಟರ್ ಡೋಸ್ ಪಡೆಯಬೇಕೆಂದು ಕರೆ ನೀಡಿದರು….

Read More