ಜಿಲ್ಲಾ ಸುದ್ದಿ:
ಲಾಕ್ ಡೌನ್ ಗೆ ವಿರೋಧ ವ್ಯಕ್ತಪಡಿಸಿದ ಸಚಿವ ಕೆ ಎಸ್ ಈಶ್ವರಪ್ಪ
ಶಿವಮೊಗ್ಗ : ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಿರುವ ಬೆಂಗಳೂರಿನ ಕಠಿಣ ನಿಯಮಗಳು ಕೋವಿಡ್ ಕಡಿಮೆ ಇರುವ ಇತರೆ ಜಿಲ್ಲೆಗಳಿಗೆ ಬೇಡ ಎಂದು ಸಿಎಂಗೆ ಮನವಿ ಮಾಡುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕೊರೊನಾ ಪಾಸಿಟಿವಿ ಸಂಖ್ಯೆ ಹೆಚ್ಚಿದೆ. ಆದರೆ, ಇತರೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ ಎರಡು, ಐದು ಹೆಚ್ಚಿದ್ರೆ ಹತ್ತು ಇರಬಹುದು. ಬೆಂಗಳೂರಿನಲ್ಲಿ ಕೊರೊನಾ ಕಂಟ್ರೋಲ್ ಮಾಡುವುದು ಎಲ್ಲರ ಜವಾಬ್ದಾರಿ ಇದೆ. ಬೆಂಗಳೂರಿನಲ್ಲಿ ಕೊರೊನಾ ಜಾಸ್ತಿ…
ಡಿ.ಕೆ. ಸುರೇಶ್ ವಿರುದ್ಧ ಸಾಗರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಪ್ರತಿಭಟನೆ…! ಡಿ.ಕೆ. ಸುರೇಶ್ ಪ್ರತಿಕೃತಿ ದಹನ…!
ಸಾಗರ: ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್, ಕಾಂಗ್ರೆಸ್ ಎಂಎಲ್ಸಿ ರವಿ ಅವರು ಸಚಿವ ಅಶ್ವಥ್ ನಾರಾಯಣ್ ಅವರ ಭಾಷಣಕ್ಕೆ ಅಡ್ಡಿ ಪಡಿಸಿ, ಗೂಂಡಾ ವರ್ತನೆ ತೋರಿದ್ದಾರೆಂದು ಆರೋಪಿಸಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು ಮಂಗಳವಾರ ನಗರ ಸಾಗರ್ ಹೋಟೆಲ್ ವೃತ್ತದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಡಿ.ಕೆ.ಸುರೇಶ್ ಅವರ ಭಾವಚಿತ್ರವನ್ನು ಧಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಿ.ಕೆ.ಸುರೇಶ್ ಹಾಗೂ ಎಂಎಲ್ಸಿ ರವಿ ಇಬ್ಬರಿಗೂ ಕಾಂಗ್ರೆಸ್ ಪಕ್ಷ ಶಿಸ್ತು ಕ್ರಮ ಜರುಗಿಸಬೇಕು.ಹಾಗೂ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು…
ಶಿವಮೊಗ್ಗದ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಭೂಪರಿವರ್ತನೆಗೆ ಉದ್ದೇಶ ಪೂರಕ ವಿಳಂಭ : ರಿಪ್ಪನ್ ಪೇಟೆ ಗ್ರಾಪಂ ಸದಸ್ಯನಿಂದ ಏಕಾಂಗಿ ಧರಣಿ
ರಿಪ್ಪನ್ ಪೇಟೆ : ಭೂ ಪರಿಪರ್ವತನೆಗಾಗಿ ಒತ್ತಾಯಿಸಿ ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಸದಸ್ಯ ನಿರೂಪ್ ಕುಮಾರ್ ಆರ್.ವಿ. ಶಿವಮೊಗ್ಗದ ಕೆಎಸ್ ಆರ್ ಟಿ ಸಿ ಬಸ್ ಡಿಪೋ ಹಿಂಭಾಗದ ಆನಂದರಾವ್ ಬಡಾವಣೆಯಲ್ಲಿರುವ ನಗರ ಮತ್ತು ಗ್ರಾಮಾಂತರ ಯೋಜನೆ ಕಚೇರಿಯಲ್ಲಿ ಏಕಾಂಗಿ ಹೋರಾಟ ನಡೆಸಿದ್ದಾರೆ. ಹೊಸನಗರ ತಾ. ಬೆನವಳ್ಳಿ ಸರ್ವೆ ನಂಬರ್158 2 ಎಕರೆ ಜಮೀನಿಗೆ ಸೈಟ್ ನಿರ್ಮಿಸಲು ಭೂಪರಿವರ್ತನೆಗೆ ನಿರೂಪ್ ಕುಮಾರ್ ಅಕ್ಟೋಬರ್ ತಿಂಗಳಲ್ಲಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಭೂ ಪರಿವರ್ತನೆಯನ್ನು…
ತುಂಗಾ ನದಿಯಲ್ಲಿ ತೇಲುತ್ತಿದ್ದ ಅರ್ಧಂಬರ್ಧ ಸುಟ್ಟ ಶವ : ಹಲವು ಅನುಮಾನಕ್ಕೆ ಎಡೆ
ಶಿವಮೊಗ್ಗದ ತುಂಗನದಿಯಲ್ಲಿ ಅರ್ಧಂಬರ್ಧ ಸುಟ್ಟ ಶವವೊಂದು ದೊರೆತಿದೆ. ಇಷ್ಟುದಿನ ಗಂಗಾನದಿಯಲ್ಲಿ ಇಂತಹ ಅರ್ದಂಬರ್ಧ ಸುಟ್ಟ ಹೆಣ ದೊರೆಯುವ ದೃಶ್ಯಾವಳಿಗಳು ಕಂಡುಬರುತ್ತಿದ್ದವು ಆದರೆ ತುಂಗ ನದಿಯಲ್ಲಿ ಈ ಶವ ದೊರೆತಿರುವುದು ಚರ್ಚೆಗೆ ಗ್ರಾಸವಾಗಿದೆ. ಇಂದು ಸಂಜೆ 6 ಗಂಟೆಯ ವೇಳೆಗೆ ರೋಟರಿ ಚಿತಾಗಾರದಿಂದ ತುಂಗಾನದಿಗೆ ಹೋಗುವ ಜಾಗದಲ್ಲಿ ಈ ಶವ ಪತ್ತೆಯಾಗಿದೆ. ಈ ಶವ ಸೊಂಟದ ಕೆಳಭಾಗ ಪೂರ್ತಿ ಸುಟ್ಟು ಹೋಗಿದೆ. ಆದರೆ ಇದು ಗಂಡೋ ಹೆಣ್ಣೋ ಎಂಬುದು ಮರಣೋತ್ತರ ಪರೀಕ್ಷೆಯ ನಂತರ ತಿಳಿದು ಬರಬೇಕಿದೆ. ಜೊತೆಗೆ ಯಾವ…
ರಿಪ್ಪನ್ ಪೇಟೆ : ಅತ್ಯಂತ ಯಶಸ್ವಿಯಾಗಿ ನಡೆದ ಸಾಮೂಹಿಕ ಗಣಹೋಮ ಮತ್ತು ಸುಮಂಗಲಿ ಪೂಜೆ
ರಿಪ್ಪನ್ ಪೇಟೆ :ಮನುಷ್ಯ ತಂತ್ರಜ್ಞಾನದ ಮೂಲಕ ಸಂಚರಿಸುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳೆಂದರೆ ಮನೆಯಲ್ಲಿ ಭಜನೆಗಳು,ದೇವತಾ ಆರಾಧನೆಗಳು, ಮಕ್ಕಳಿಗೆ ವಿಶೇಷವಾಗಿರುವಂತಹ ಧರ್ಮ ಚಿಂತನೆಗಳನ್ನು ಕಡಿಮೆ ಮಾಡುತ್ತಿದ್ದೇವೆ.ಮಕ್ಕಳನ್ನು ಸಧ್ರಡವಾದ ವ್ಯಕ್ತಿಗಳನ್ನು ಮಾಡಬೇಕಾದರೆ ತಂದೆ ತಾಯಿಗಳಾದವರು ಒಳ್ಳೆಯ ಸಂಸ್ಕಾರವಂತರಾಗಬೇಕಾಗಿದೆ. ಇಂದು ರಾಜಮಹಾರಾಜರ ಚರಿತ್ರೆಯನ್ನು ಹೇಳಬೇಕಾದರೆ ಅವರ ಹಿಂದೆ ಅವರ ತಾಯಿಯ ಪರಿಶ್ರಮ ಎಷ್ಟಿರಬಹುದು ಎಂಬುದನ್ನು ಊಹಿಸಬೇಕಾಗುತ್ತದೆ. ನಾವು ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಿದಾಗ ಸಮಾಜಕ್ಕೆ ಒಳ್ಳೆಯ ವ್ಯಕ್ತಿಯನ್ನು ಕೊಟ್ಟಂತಾಗುತ್ತದೆ, ಸಮಾಜಕ್ಕೆ ಒಳ್ಳೆಯ ವ್ಯಕ್ತಿಗಳನ್ನು ಕೊಟ್ಟಾಗ ಸಮಾಜ ಸದೃಢವಾಗುತ್ತದೆ. ಅಂತಹ ಸದೃಡವಾದ…
ಪುನೀತ್ ರಾಜ್ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ
ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…
ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ ಯುವಕ ಯುವತಿ ಒಂದೇ ಹೋಗುತ್ತಿದ್ದ ಒಂದೇ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…
ಖ್ಯಾತ ಅಂಕಣಕಾರ,ಲೇಖಕ ಕೆ ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆ :
ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಯಡೇಹಳ್ಳಿಯಲ್ಲಿ ಉದ್ಯಮದಲ್ಲೇ ಹೊಸ ಅಲೆಯನ್ನೇ ಎಬ್ಬಿಸಿದಂತಹ ಖ್ಯಾತ ಉದ್ಯಮಿ, ಅಂಕಣಕಾರ, ಲೇಖಕ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಕೆ, ಅರುಣ್ ಪ್ರಸಾದ್ ರವರ ಎರಡನೇ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಥಾ ಪುಸ್ತಕವಾದ ” ಭಟ್ಟರ ಬೊಂಡಾದ ಬಾಂಡ್ಲಿಯಲ್ಲಿ ಬಿಲಾಲಿ ಬಿಲ್ಲಿ ಅಭ್ಯಂಜನ” ಪುಸ್ತಕವನ್ನು ಖ್ಯಾತ ಜಲತಜ್ಞ ಶಿವಾನಂದ ಕಳವೆ ಬಿಡುಗಡೆ ಮಾಡಿದರು. ಇನ್ನೂ ಈ ಪುಸ್ತಕದಲ್ಲಿ ಆನಂದಪುರ ಕೇಂದ್ರವಾಗಿಸಿ ಗ್ರಾಮೀಣ ಬದುಕಿನ ಅನುಭವವನ್ನು ಕಥಾ ರೂಪದಲ್ಲಿ ಬರೆದಿದ್ದಾರೆ ಈ…
ಮಾರುತಿಪುರದ ಯುವತಿ ನಾಪತ್ತೆ : ಸುಳಿವು ಪತ್ತೆಗೆ ಮನವಿ
ಮಾರುತಿಪುರ : ಇಲ್ಲಿನ ಸಮೀಪದ ಗುಬ್ಬಿನಜೆಡ್ಡು ಪುಣಜೆ ಗ್ರಾಮದ ವಾಸಿ ಕುಮಾರಿ ಅನುಷಾ ತಂದೆ ದೇವೇಂದ್ರ, 22 ವರ್ಷ, ಈ ಯುವತಿಯು ಡಿಸೆಂಬರ್ 24 ರ ಬೆಳಿಗ್ಗೆ 8.30 ಕ್ಕೆ ಎಂದಿನಂತೆ ಮಾರುತಿಪುರ ಒಕ್ಕೂಟ ಸಂಘದ ಕೆಲಸಕ್ಕೆ ಹೋದವಳು ಮನೆಗೆ ವಾಪಸ್ ಬಂದಿರುವುದಿಲ್ಲ. ಈಕೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು ಪರಿಚಯದವರು, ಸಂಬಂಧಿಕರಲ್ಲಿ ವಿಚಾರಿಸಿದರೂ ಈಕೆಯ ಸುಳಿವು ಇರುವುದಿಲ್ಲ. ನಾಪತ್ತೆಯಾದ ಯುವತಿ ಸುಮಾರು 05 ಅಡಿ ಎತ್ತರ, ಕೋಲುಮುಖ, ತೆಳುವಾದ ಮೈಕಟ್ಟು, ಗೋಧಿ ಮೈಬಣ್ಣ, ತಲೆಯಲ್ಲಿ 15…
ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್ ಕಿತ್ತವನಿಗೆ ಬಿತ್ತು ಗೂಸಾ
ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್ ರಾಜಕುಮಾರ್ ಅವರ ಬೃಹತ್ ಫ್ಲೆಕ್ಸ್ ಹಾಕಲಾಗಿತ್ತು. ಈ ವೇಳೆ ಆನಂದ್ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್ರ ಫ್ಲೆಕ್ಸ್ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….