ಜಿಲ್ಲಾ ಸುದ್ದಿ:
ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಯಾವುದೇ ಸಂಘಟನೆಯನ್ನು ರಾಜ್ಯದಲ್ಲಿ ಸಕ್ರೀಯವಾಗಿರಲು ಬಿಡಬಾರದು : ವೀರೇಶ್ ಆಲುವಳ್ಳಿ
ರಿಪ್ಪನ್ ಪೇಟೆ : ರಾಜ್ಯದಲ್ಲಿ ಮಹಾರಾಷ್ಟ್ರ ಏಕೀಕರಣ ಸಂಘಟನೆಯನ್ನು ನಿಷೇಧಿಸಬೇಕು, ಕನ್ನಡ ಬಾವುಟವನ್ನು ಸುಟ್ಟುಹಾಕುವ, ಕನ್ನಡ ಭಾಷೆಗೆ ಧಕ್ಕೆಯನ್ನುಂಟುಮಾಡುವ ಸಂಘಟನೆಯನ್ನು ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಸಕ್ರಿಯವಾಗಿರಲು ಬಿಡಬಾರದು ಎಂದು ತಾಪಂ ಮಾಜಿ ಅಧ್ಯಕ್ಷರಾದ ವೀರೇಶ್ ಆಲುವಳ್ಳಿ ಹೇಳಿದರು. ಪೋಸ್ಟ್ ಮ್ಯಾನ್ ನ್ಯೂಸ್ ತಂಡದೊಂದಿಗೆ ಮಾತನಾಡಿದ ಅವರು ಬೆಳಗಾವಿಯಲ್ಲಿ ಕೆಲವು ಸಮಾಜಘಾತುಕ ಪುಂಡರು ಕನ್ನಡಿಗರ ಮೇಲೆ ದಾಳಿ ಮಾಡುತ್ತಿದ್ದಾರೆ ಕನ್ನಡಿಗರ ವಾಹನಗಳನ್ನು ಅಡ್ಡಗಟ್ಟಿ ತೊಂದರೆ ನೀಡುತ್ತಿದ್ದಾರೆ, ಅಪಾರ ಪ್ರಮಾಣದ ಸರ್ಕಾರಿ ವಾಹನ ಹಾಗೂ ಆಸ್ತಿ ಪಾಸ್ತಿಗಳನ್ನು ನಷ್ಟ ಮಾಡುತ್ತಿದ್ದಾರೆ …
ಶಿವಮೊಗ್ಗದ ಕವಯತ್ರಿ ಕುಮಾರಿ ನಿತ್ಯಶ್ರೀ ಗೆ ರಾಜ್ಯೋತ್ಸವ ಪ್ರಶಸ್ತಿ : ಸತತ ಮೂರು ಪ್ರಶಸ್ತಿ ಮುಡಿಗೇರಿಸಿಕೊಂಡ ಯುವ ಬರಹಗಾರ್ತಿ
ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು ನಿತ್ಯಶ್ರೀ ಆರ್ ಇವರಿಗೆ ಡಿಸೆಂಬರ್ 18ರಂದು ಮಂಡ್ಯದ ಗಾಂಧಿ ಭವನದಲ್ಲಿ ಕಸ್ತೂರಿ ಸಿರಿಗನ್ನಡ ವೇದಿಕೆಯ ಕವಿಗೋಷ್ಠಿಯಲ್ಲಿ ಭಾಗಿಯಾಗಿ ನಂತರ ಈ ವೇದಿಕೆಯಲ್ಲಿ ರಾಜ್ಯಾಧ್ಯಕ್ಷರು ಪೋತೆರಾ ಮಹಾದೇವು ಮತ್ತು ಮುಖ್ಯ ಅತಿಥಿಗಳಾದ ಹುಲಿಯೂರು ದುರ್ಗ ಲಕ್ಷ್ಮಿನಾರಾಯಣರವರು ಡಾ. ಶಿವಕುಮಾರ್ ಮತ್ತು ಗುರುಪ್ರಸಾದ್ ವಕೀಲರು ಹಾಗೂ ಇನ್ನಿತರ ಅತಿಥಿ ಗಣ್ಯರ ಸಮ್ಮುಖದಲ್ಲಿ ಉದಯೋನ್ಮುಖ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಈ ವರ್ಷದಲ್ಲಿ ಸತತ ಮೂರು…
ತೀರ್ಥಹಳ್ಳಿಯಲ್ಲಿ ಈ ಬಾರಿ ಸಂಭ್ರಮದ ಅದ್ದೂರಿ ಎಳ್ಳಮಾವಾಸ್ಯೆ ಜಾತ್ರಾ ಮಹೋತ್ಸವ
ತೀರ್ಥಹಳ್ಳಿ: ಮಲೆನಾಡಿನ ಸುಪ್ರಸಿದ್ದ ಜಾತ್ರೆಗಳಲ್ಲಿ ಒಂದಾಗಿರುವ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಜನವರಿ 2,3,4 ರಂದು ನಡೆಯಲಿದ್ದು ಈ ಬಾರಿ ತೀರ್ಥಹಳ್ಳಿ ಶ್ರೀ ರಾಮೇಶ್ವರ ದೇವರ ಎಳ್ಳಮಾವಾಸ್ಯೆಜಾತ್ರೆಯನ್ನು ಸಂಭ್ರಮ ಹಾಗೂ ವೈಭವಯುತವಾಗಿ ಆಚರಿಸುವುದಾಗಿ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಅಂದಾಜು 12 ಲಕ್ಷ ರೂ ಮೊತ್ತದ ಬಜೆಟ್ ನೊಂದಿಗೆ 3 ದಿನಗಳ ಕಾಲ ನೆಡೆಯಲಿರುವ ಅದ್ದೂರಿ ಜಾತ್ರೆಗೆ ಸಮಿತಿ ಸಂಚಾಲಕರಾಗಿರುವ ಸೊಪ್ಪುಗುಡ್ಡೆ ರಾಘವೇಂದ್ರ ಸರ್ವರನ್ನು ಸ್ವಾಗತಿಸಿದ್ದಾರೆ.
ರಿಪ್ಪನ್ ಪೇಟೆ : ಆಲುವಳ್ಳಿ,ಕೆಂಚನಾಲ ಸುತ್ತಮುತ್ತ ಆಕಾಶದಲ್ಲಿ ವಿಚಿತ್ರ ಕೌತುಕ : ಬೆಚ್ಚಿಬಿದ್ದ ಜನರು
ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಆಲುವಳ್ಳಿ ಹಾಗೂ ಕೆಂಚನಾಲ ಗ್ರಾಮದಲ್ಲಿ ಇಂದು ಸರಿಯಾಗಿ ಆಕಾಶದಲ್ಲಿ ಸಾಲು ಸಾಲಾಗಿ ಸಣ್ಣ ಸಣ್ಣ ದೀಪಗಳು ಹಾದು ಹೋಗಿ ಅಚ್ಚರಿ ಮೂಡಿಸಿವೆ. ಬಾಹ್ಯಾಕಾಶದಲ್ಲಿ ನಡೆಯುವ ಕೌತುಕಗಳಿಗೆ ಕೊನೆಯೇ ಇಲ್ಲ. ಆಕಾಶದಲ್ಲಿ ಅದೇ ನಕ್ಷತ್ರ, ಅದೇ ಚಂದ್ರ, ಅದೇ ಸೂರ್ಯ ಇದ್ದಿದ್ದರೆ ಯಾವ ಕುತೂಹಲವೂ ಅನುಸುತ್ತಿರಲಿಲ್ಲ. ಆದರೆ ಬಾಹ್ಯಾಕಾಶದಲ್ಲಿ ಏಕಾಏಕಿ ಲೈಟ್ ಗಳ ಸರಣಿ ಹಾದು ಹೋದರೆ ನಿಮ್ಮನ್ನ ಅಚ್ಚರಿ ಪಡಿಸದೆ ಇರದು. ಇಂತಹ ಒಂದು ಕೌತುಕಕ್ಕೆ ಹೊಸನಗರ ತಾಲೂಕಿನ ಕೆಂಚನಾಲ,ಆಲುವಳ್ಳಿ…
ಕ್ಷುಲ್ಲಕ ಕಾರಣಕ್ಕೆ ಪದವಿ ಕಾಲೇಜು ವಿದ್ಯಾರ್ಥಿನಿ ನೇಣಿಗೆ ಶರಣು
ಕೊಪ್ಪ: ಇಲ್ಲಿನ ಪ್ರಥಮ ಧರ್ಜೆ ಕಾಲೇಜಿನಲ್ಲಿ ದ್ವಿತೀಯ ಬಿ.ಕಾಂ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಸುಮಾ (20) ಸೋಮವಾರ ಬೆಳಿಗ್ಗೆ ಕುದುರೆಗುಂಡಿಯಲ್ಲಿರುವ ಮನೆಯಲ್ಲಿ ವೇಲ್ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ಮನೆಯಲ್ಲಿ ಮೃತ ಸುಮಾ ಅವರು ನೀರನ್ನು ಬಿಸಿ ಮಾಡಿ ತಂದಿಟ್ಟಿದ್ದರು. ಈ ವೇಳೆ ಅಕ್ಕನ ಏಳು ತಿಂಗಳ ಮಗುವು ಬಿಸಿ ನೀರನ್ನು ಮುಟ್ಟಿದ ಪರಿಣಾಮ ಮಗುವಿನ ಮೈಯಲ್ಲಿ ಗುಳ್ಳೆಗಳು ಬಂದಿದ್ದವು. ತಕ್ಷಣ ಮಗುವಿನ ಪೋಷಕರು ಕೊಪ್ಪ ಸರ್ಕಾರ ಆಸ್ಪತ್ರೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದರು. ಮಗುವಿಗೆ…
ಜಾತಿ ಪದ್ದತಿಯನ್ನು ವಿನಾಶಗೊಳಿಸಬೇಕು : ಡಾ.ಸತೀಶಕುಮಾರ ಹೊಸಮನಿ
ಶಿವಮೊಗ್ಗ : ವರ್ಣಾಶ್ರಮವನ್ನು ತಿದ್ದುವುದಲ್ಲ. ಅದನ್ನು ಸಂಪೂರ್ಣವಾಗಿ ತೊಲಗಿಸಬೇಕು. ಎಲ್ಲಾ ದೇಶಗಳಲ್ಲಿ ಮತ್ತು ಎಲ್ಲಾ ಮತಗಳಲ್ಲಿರುವ ಜಾತಿ ಪದ್ಧತಿಯನ್ನು ಸಂಪೂರ್ಣವಾಗಿ ನಿರಾಕರಿಸಿ, ವಿನಾಶಗೊಳಿಸಬೇಕು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕರಾದ ಡಾ.ಸತೀಶಕುಮಾರ ಹೊಸಮನಿ ನುಡಿದರು. ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ, ಕವಿಶೈಲದ ಹೆಮಾಂಗಣ ಸಭಾಂಗಣದಲ್ಲಿ ಡಿ. 19 ರ ಭಾನುವಾರ ಕುವೆಂಪು ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಸ್ಥೆ ಇವರು ಹಮ್ಮಿಕೊಂಡಿದ್ದ ಕುವೆಂಪುರವರ ಕನ್ನಡ ಡಿಂಡಿಮವ ಮತ್ತು ಸಾಧಕರಿಗೆ ಪ್ರಶಸ್ತಿ ಪ್ರದಾನ…
ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಓಮಿಕ್ರಾನ್ ಸೋಂಕು ಪತ್ತೆ : ಮಲೆನಾಡಿಗೂ ಕಾಲಿಟ್ಟ ವಿಶ್ವವನ್ನೇ ಕಾಡುತ್ತಿರುವ ಹೆಮ್ಮಾರಿ
ಶಿವಮೊಗ್ಗ : ಹಲವು ದೇಶದಲ್ಲಿ ಆರ್ಭಟ ನೆಡೆಸುತ್ತಿರುವ ಕೊರೋನಾ ವೈರಸ್ ನ ಹೊಸ ತಳಿ ಒಮಿಕ್ರಾನ್ ಶಿವಮೊಗ್ಗ ಜಿಲ್ಲೆಗೆ ಎಂಟ್ರಿ ಕೊಟ್ಟಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 20 ವರ್ಷದ ಯುವತಿಯೊಬ್ಬರಿಗೆ ಒಮಿಕ್ರಾನ್ ಸೊಂಕು ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಮಾಹಿತಿ ನೀಡಿದ್ದಾರೆ. ಡಿಸೆಂಬರ್ 7ರಂದು ಭದ್ರಾವತಿ ಖಾಸಗಿ ನರ್ಸಿಂಗ್ ಕಾಲೇಜಿನ 27 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಗಂಟಲ ದ್ರವವನ್ನು ಹೆಚ್ಚಿನ ಪರೀಕ್ಷೆಗಾಗಿ ಬೆಂಗಳೂರಿಗೆ ಕಳುಹಿಸಲಾಗಿತ್ತು. ಈ ಪೈಕಿ ಓರ್ವ ವಿದ್ಯಾರ್ಥಿನಿಯಲ್ಲಿ ಓಮಿಕ್ರಾನ್…
ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಹರಿಹಾಯ್ದ ಶಾಸಕ ಹರತಾಳು ಹಾಲಪ್ಪ :
ಸಾಗರ : ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ನನ್ನನ್ನು ವಲಸಿಗ ಎಂದು ಟೀಕೆ ಮಾಡಿದ್ದು ನಿಜಕ್ಕೂ ಹಾಸ್ಯಾಸ್ಪದ ಸಂಗತಿ. ರಾಜಕಾರಣದಲ್ಲಿ ವಲಸೆ ಸಹಜ. ಕಾಂಗ್ರೇಸ್ ಪಕ್ಷದಲ್ಲಿ ರಾಹುಲ್ ಗಾಂಧಿ ಕೇರಳಕ್ಕೆ ಬಂದಿದ್ದು, ಡಿ.ಕೆ.ಶಿವಕುಮಾರ್ ಸಾತನೂರಿನಲ್ಲಿ ಸ್ಪರ್ಧೆ ಮಾಡಿದ್ದು, ಸಿದ್ದರಾಮಯ್ಯ ಬಾದಮಿಯಿಂದ ಸ್ಪರ್ಧೆ ಮಾಡಿದ್ದು ವಲಸೆ ರಾಜಕಾರಣವಲ್ಲವೇ ಎಂದು ಬೇಳೂರಿಗೆ ಟಾಂಗ್ ನೀಡಿದ ಹಾಲಪ್ಪ, ನಮ್ಮ ಪಕ್ಷದಲ್ಲೂ ಸಹ ತಮ್ಮ ಕ್ಷೇತ್ರ ಬಿಟ್ಟು ಮತ್ತೊಂದು ಕಡೆ ಹೋಗಿ ಸ್ಪರ್ಧೆ ಮಾಡಿದ ಉದಾಹರಣೆ ಇದೆ. ಮಾಜಿ…
ವಲಸೆ ಬಂದು ಹೋಗುವ ಶಾಸಕರಿಗೆ ಸಾಗರ ತಾಲೂಕಿನ ಬಗ್ಗೆ ಏನು ಗೊತ್ತು : ಬೇಳೂರು ಗೋಪಾಲಕೃಷ್ಣ
ಸಾಗರ. ಇಂದು ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರೀಕಾ ಗೋಷ್ಟಿಯಲ್ಲಿ ಸಾಗರದ ಮಾಜಿ ಶಾಸಕರಾದ ಗೋಪಾಲ ಕೃಷ್ಣ ಬೇಳೂರು ಶಾಸಕ ಹಾಲಪ್ಪನವರ ವಿರುದ್ಧ ಹರಿಹಾಯ್ದಿದ್ದಾರೆ ಶಾಸಕ ಹಾಲಪ್ಪ ತುಮರಿ ಭಾಗದ ಆರೋಗ್ಯ ಕೇಂದ್ರಕ್ಕೆ ಆಂಬುಲೆನ್ಸ್ ನೀಡುವಲ್ಲಿ ವಿಫಲವಾಗಿದ್ದಾರೆ. ಕ್ರಿಕೇಟ್ ನೋಡುತ್ತ ಕುಳಿತ ಶಾಸಕ ಹಾಲಪ್ಪ ಸರಿಯಾದ ಸಮಯಕ್ಕೆ ತುಮರಿ ಗ್ರಾಮಕ್ಕೆ ಹೋಗಿದ್ದರೆ ಎರಡು ಜೀವ ಉಳಿಯುತ್ತಿತ್ತು ಇವರಿಗೆ ಎರಡು ಜೀವಕ್ಕಿಂತ ಕ್ರಿಕೆಟ್ ನೋಡುವುದೆ ಮುಖ್ಯವಾಗಿದೆ. ಆಕ್ಸಿಜನ್ ವ್ಯವಸ್ಥೆ ಇಲ್ಲದ ಸೆಕೆಂಡ್ ಹ್ಯಾಂಡ್ ಆಂಬುಲೆನ್ಸ್ ನೀಡಿ ಪ್ರಚಾರಕ್ಕಾಗಿ ನಗರಸಭೆಯಲ್ಲಿ ಸಮಾರಂಭ…
ರಾಷ್ಟ್ರೀಯ ಯುವ ಕಾಂಗ್ರೆಸ್ ವಕ್ತಾರರಾಗಿ ಆದರ್ಶ್ ಹುಂಚದ ಕಟ್ಟೆ ನೇಮಕ :
ರಾಷ್ಟ್ರೀಯ ಯುವ ಕಾಂಗ್ರೆಸ್ ನ ವಕ್ತಾರನ್ನಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ್ ಹುಂಚದಕಟ್ಟೆ ರವರನ್ನು ಆಯ್ಕೆ ಮಾಡಲಾಗಿದೆ. 27 ಜನರನ್ನ ಯುವ ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರನ್ನಾಗಿ ಆಯ್ಕೆ ಮಾಡಲಾಗಿದ್ದು, ಕರ್ನಾಟಕದಿಂದ ಇಬ್ಬರನ್ನು ಆಯ್ಕೆ ಮಾಡಲಾಗಿದ್ದು, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಆದರ್ಶ ಹುಂಚದ ಕಟ್ಟೆ ಮತ್ತು ಮಂಗಳೂರಿನ ಸುರಯ್ಯ ಅಂಜುಂ ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ವಕ್ತಾರರ ಪಟ್ಟಿ ಬಿಡುಗಡೆ ಮಾಡಿರುವ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಪಕ್ಷದ ರಾಷ್ಟ್ರೀಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್…