Headlines

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ

ಹೊಸನಗರಕ್ಕೆ ಖಡಕ್ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ವರ್ಗಾವಣೆ ಹೊಸನಗರದ ನೂತನ ಸರ್ಕಲ್ ಇನ್ಸ್‌ಪೆಕ್ಟರ್ ಆಗಿ ಹಾವೇರಿ ಡಿಎಸ್ ಬಿ ಘಟಕದ ಖಡಕ್ ಹಾಗೂ ಜನಸ್ನೇಹಿ ಸರ್ಕಲ್ ಇನ್ಸ್ ಪೆಕ್ಟರ್ ಮುತ್ತನಗೌಡ ಗೌಡಪ್ಪಗೌಡರ್  ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ. ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗುರಣ್ಣ ಹೆಬ್ಬಾಳ್ ಸೇರಿದಂತೆ ಜಿಲ್ಲೆಯ ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿತ್ತು. ಗುರಣ್ಣ ಹೆಬ್ಬಾಳ್ ರವರು ಬೆಂಗಳೂರಿನ‌ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡಿದ್ದಾರೆ. ಅಗಸ್ಟ್ 2023 ರಿಂದ ಹೊಸನಗರದ ಸರ್ಕಲ್ ಇನ್ಸ್…

Read More

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ

ಶಾಲೆಗಳ ದಸರಾ ರಜೆ ಅ.18ರವರೆಗೆ ವಿಸ್ತರಣೆ ಬೆಂಗಳೂರು: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಪೂರ್ಣಗೊಳಿಸಲು ಅ.18ರವರೆಗೆ ಸರ್ಕಾರಿ, ಅನುದಾನಿತ ಶಾಲೆಗಳಿಗೆ ದಸರಾ ರಜೆ ವಿಸ್ತರಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ಸಾಮಾಜಿಕ ಮತ್ತು ಶೈಕ್ಷಣಿಕ ಆಯೋಗವು ನಡೆಸುತ್ತಿರುವ ಸಮೀಕ್ಷೆ ಪ್ರಗತಿ ಕುರಿತು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸೌಧದಲ್ಲಿ ಮಂಗಳವಾರ ಸಭೆ ನಡೆಸಿದರು. ಸಭೆಯ ಬಳಿಕ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸೆಪ್ಟೆಂಬರ್‌ 22 ರಿಂದ ಸಾಮಾಜಿಕ…

Read More

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಹೊಸನಗರ ಸಿಪಿಐ ಗುರಣ್ಣ ಹೆಬ್ಬಾಳ್ ವರ್ಗಾವಣೆ | ಜಿಲ್ಲೆಯ ಹಲವು ಸರ್ಕಲ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ , ಶಿವಮೊಗ್ಗ: ರಾಜ್ಯ ಸರ್ಕಾರವು ಇಂದು ಹಲವು ವರ್ಗಾವಣೆ ಆದೇಶವನ್ನು ಹೊರಡಿಸಿದ್ದು, 27 ಡಿವೈಎಸ್‌ಪಿ ಮತ್ತು 131 ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ನಡೆದಿದೆ. ಈ ಪಟ್ಟಿಯಲ್ಲಿ ಹೊಸನಗರ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್ ಅವರಿಗೂ ಬದಲಾವಣೆ ಆದೇಶ ಹೊರಡಿಸಲಾಗಿದೆ. ಹೊಸನಗರದ ಸಿಪಿಐ ಆಗಿದ್ದ ಗುರಣ್ಣ ಹೆಬ್ಬಾಳ್ ಅವರನ್ನು ಕರ್ನಾಟಕ ಲೋಕಾಯುಕ್ತ ಇಲಾಖೆಗೆ ವರ್ಗಾಯಿಸಲಾಗಿದೆ, ಅವರ ಸ್ಥಾನಕ್ಕೆ ಹಾವೇರಿ ಜಿಲ್ಲೆಯ…

Read More

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ

ಸಾಮಾಜಿಕ ಕಳಕಳಿ, ಕೊಡುಗೈದಾನಿ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜಭಾಂದವರ ಭಾವಪೂರ್ಣ ಶ್ರದ್ದಾಂಜಲಿ ರಿಪ್ಪನ್‌ಪೇಟೆ;-ವ್ಯಕ್ತಿ ಜೀವಂತವಾಗಿದ್ದಾಗ ಮಾಡಿದ ಸಮಾಜಮುಖಿ  ಕಾರ್ಯಗಳ ಬಗ್ಗೆ ಜನ ಮಾತನಾಡುವುದಿಲ್ಲ. ಅದೇ ವ್ಯಕ್ತಿ ಮರಣ ಹೊಂದಿದಾಗ ಅವರು ಮಾಡಿದ ಸಾಮಾಜಿಕ ಸತ್ಕಾರ್ಯಗಳು ಮಾತನಾಡುವಂತೆ ಮಾಡುತ್ತವೆ ಎಂಬುದಕ್ಕೆ ಬೆಳಕೋಡು ಹಾಲಸ್ವಾಮಿಗೌಡರೇ ಸಾಕ್ಷಿಯಾಗಿದ್ದಾರೆಂದು ಶ್ರೀಶೈಲ ಜಗದ್ಗುರುಗಳು ಮತ್ತು ಆನಂದಪುರ ಮುರುಘಾರಾಜೇಂದ್ರ ಮಠದ ಜಗದ್ಗುರು ಹೇಳಿದರು. ಇತ್ತೀಚೇಗೆ ನಿಧನರಾದ ರಿಪ್ಪನ್‌ಪೇಟೆ ಸಮೀಪದ ಬೆಳಕೋಡು ಗ್ರಾಮದ ಹಾಲಸ್ವಾಮಿಗೌಡರಿಗೆ ವೀರಶೈವ ಸಮಾಜ ಭಾಂದವರು ಮತ್ತು ಕುಟುಂಬದವರು ಆಯೋಜಿಸಲಾದ ಭಾವಪೂರ್ಣ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ದೂರವಾಣಿಯಲ್ಲಿ…

Read More

ಶಿವಮೊಗ್ಗ ಜಿಲ್ಲೆಯ ಹಲವು ಸಬ್ ಇನ್ಸ್ ಪೆಕ್ಟರ್ ಗಳು ವರ್ಗಾವಣೆ

Many sub-inspectors in Shivamogga district transferred ಶಿವಮೊಗ್ಗ : ಪೂರ್ವ ವಲಯ ವ್ಯಾಪ್ತಿಯ ೩೫ ಸಬ್‌ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ, ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇಗೌಡ ಆದೇಶ ಹೊರಡಿಸಿದ್ದಾರೆ. ಈ ವರ್ಗಾವಣೆಯ ಮೂಲಕ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದ ಪಿಎಸ್‌ಐಗಳಿಗೆ ಹೊಸ ನಿಯೋಜನೆ ದೊರೆತಿದೆ. ಟಿ.ಎಂ. ನಾಗರಾಜು : ಸಾಗರ ಟೌನ್‌ನಿಂದ ಹಾವೇರಿ ಟೌನ್ ಪೊಲೀಸ್ ಠಾಣೆಗೆ ಆರ್.ಹೆಚ್. ಸಂಗೊಳ್ಳಿ : ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್‌ನಿಂದ ಭದ್ರಾವತಿ ಟ್ರಾಫಿಕ್ ಠಾಣೆಗೆ ಅಕ್ಬರ್…

Read More

ರಿಪ್ಪನ್‌ಪೇಟೆ – ದಸರಾ ಕುಸ್ತಿ ಪಂದ್ಯಾವಳಿ | ಸಿರಿ , ಪರಶುರಾಮ್ ಅದ್ಬುತ ಆಟಕ್ಕೆ ಪ್ರೇಕ್ಷಕರು ಫಿದಾ

ರಿಪ್ಪನ್‌ಪೇಟೆ;-ಇತ್ತೀಚಿನ ವರ್ಷಗಳಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕುಸ್ತಿ ವಿನಾಶದತ್ತ ಸಾಗುತ್ತಿದೆ.ಕುಸ್ತಿ ಅಭ್ಯಾಸದಿಂದ ದೇಹದಲ್ಲಿನ ಸ್ನಾಯುಗಳು ಸದೃಡವಾಗುವ ಮೂಲಕ ದೈಹಿಕ ಸಾಮರ್ಥ್ಯವನ್ನು  ವೃದ್ದಿಯಾಗುವುದರೊಂದಿಗೆ ಅರೋಗ್ಯವಂತರನ್ನಾಗಿಸುತ್ತದೆ ಎಂದು ಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಜೀರ್ಣೋದ್ದಾರ ಸಮಿತಿಯ ಅಧ್ಯಕ್ಷ ಎನ್.ಸತೀಶ್ ಹೇಳಿದರು. ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟçಸೇನಾ ಸಮಿತಿಯ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ  ವಿಜಯ ದಶಮಿಯ ಅಂಗವಾಗಿ ಏರ್ಪಡಿಸಲಾಗಿದ್ದ  ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಮಾತನಾಡಿದರು. ಕುಕ್ಕಳಲೇ ಮುಗುಟಿಕೊಪ್ಪ ಸಿರಿ ಮತ್ತು ರಾಣೆಬೆನ್ನೂರು ಮಾರುತಿ,ಹಾಗೂ ಕೆರೆಹಳ್ಳಿ ಪರಶುರಾಮ ಮತ್ತು ಹನುಮಂತ ಇವರ ಕುಸ್ತಿ  ಪ್ರದರ್ಶನ …

Read More

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ

ರಿಪ್ಪನ್‌ಪೇಟೆ; ಶರನ್ನವರಾತ್ರಿ ಸಂಭ್ರಮಾಚರಣೆಯೊಂದಿಗೆ ಸಂಪನ್ನ ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀ ಸಿದ್ದಿವಿನಾಯಕ ಸ್ವಾಮಿ ಮತ್ತು ಜಗನ್ಮಾತೆ ಆನ್ನಪೂರ್ಣೇಶವರಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ವಿಶೇಷ ಪೂಜಾ ಕಾರ್ಯಕ್ರಮ ಮತ್ತು ಆಯುಧ ಪೂಜೆ ಹಾಗೂ ವಿಜಯದಶಮಿಯ  ಪ್ರಯುಕ್ತ ಲೋಕಕಲ್ಯಾಣಾರ್ಥವಾಗಿ  `ಚಂಡಿಕಾ ಹೋಮ’ಇನ್ನಿತರ ಪೂಜಾ ಕೈಂಕರ್ಯಗಳು ಸಂಭ್ರಮಾಚರಣೆಯೊಂದಿಗೆ ಸಂಪನ್ನಗೊಂಡಿತು. ದೇವಸ್ಥಾನದ ಪ್ರಧಾನ ಅರ್ಚಕ ಗುರುರಾಜ ಭಟ್ ಇವರ ನೇತೃತ್ವದಲ್ಲಿ ನಿತ್ಯ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಪಾರಾಯಣ ಮತ್ತು ವಿಶೇಷ ಪೂಜಾ ಕಾರ್ಯಗಳು ನಡೆದು ವಿಜಯ ದಶಮಿಯಂದು ಲೋಕಕಲ್ಯಾಣಾರ್ಥವಾಗಿ “ಚಂಡಿಕಾ ಹೋಮ’’ ನಂತರ ತೀರ್ಥಪ್ರಸಾದ…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ

ಗಾಂಧೀಜಿಯ ಆದರ್ಶಗಳೇ ದೇಶದ ಶಕ್ತಿ – ಬಿ‌ ಜಿ ಚಂದ್ರಮೌಳಿ ಹೊಸನಗರ: ಸತ್ಯ, ಪ್ರಾಮಾಣಿಕತೆ ಹಾಗೂ ಜನಪರ ಹೋರಾಟದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮಾ ಗಾಂಧೀಜಿ ತತ್ತ್ವ–ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು ಎಂದು ಹೊಸನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಬಿಜಿ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಗಾಂಧೀಜಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಅಹಿಂಸೆಯೇ ಗಾಂಧೀಜಿಯವರ ಮಹಾಸ್ತ್ರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಅವರು ನೀಡಿದ ಅಪಾರ ಕೊಡುಗೆಯನ್ನು ಸ್ಮರಿಸಲು ಅಕ್ಟೋಬರ್ 2 ಅನ್ನು ರಾಷ್ಟ್ರದಾದ್ಯಂತ…

Read More

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ

HUMCHA | ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ – ಸ್ವಚ್ಛತಾ ಕಾರ್ಯಕ್ರಮ ಅಕ್ಟೋಬರ್‌ 2 ರಂದು ಮಹಾತ್ಮ ಗಾಂಧಿ ಹಾಗೂ ಭಾರತದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸ್ಮರಿಸುವ ಹಿನ್ನೆಲೆಯಲ್ಲಿ ದೇಶದಾದ್ಯಂತ ವಿವಿಧ ಕಾರ್ಯಕ್ರಮಗಳು ನಡೆಯುತ್ತವೆ. ಇದೇ ಅಂಗವಾಗಿ ಇಂದು ಸ್ವಗ್ರಾಮ ಹಿತರಕ್ಷಣಾ ವೇದಿಕೆ ವತಿಯಿಂದ ಹುಂಚ ಭಾಗದಲ್ಲಿ ವಿಶೇಷ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಕಾರ್ಯಕ್ರಮದ ಭಾಗವಾಗಿ ಹುಂಚ ಪ್ರಾಥಮಿಕ ಆರೋಗ್ಯ ಕೇಂದ್ರ, ಹುಂಚ ಆಸ್ಪತ್ರೆಯ ಮುಂಭಾಗದ ಬಸ್…

Read More