ಜಿಲ್ಲಾ ಸುದ್ದಿ:
ದನಗಳ್ಳರಿಗೆ ಸಹಕರಿಸುವ ಪೊಲೀಸರ ವಿರುದ್ದ ಕಿಡಿಕಾರಿದ ಗೃಹ ಸಚಿವ ಆರಗ ಜ್ಞಾನೇಂದ್ರ :ಸ್ವಪಕ್ಷದ ಕಾರ್ಯಕರ್ತರಿಂದಲೇ ವೈರಲ್ ಆಯ್ತಾ ವಿಡಿಯೋ :
ಕರ್ನಾಟಕ ರಾಜ್ಯದ ಗೃಹ ಸಚಿವರಾದ ಆರಗ ಜ್ಞಾನೇಂದ್ರ ರವರು ತಮ್ಮ ನಿವಾಸದ ಕಚೇರಿಯಿಂದ ಪಕ್ಷದ ಕಾರ್ಯಕರ್ತರ ಎದುರಲ್ಲೇ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಅಧಿಕಾರಿಗೆ ಕರೆ ಮಾಡಿ ದನಕಳ್ಳತನದ ಬಗ್ಗೆ ಹಿಗ್ಗಾಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ. ಪೊಲೀಸರಿಗೆ ಸರ್ಕಾರದಿಂದ ಕೈ ತುಂಬಾ ಸಂಬಳ ಕೊಡಲಾಗಿದೆ. ಆದರೂ ನಾಯಿ ಎಂಜಲು ಕಾಸನ್ನು ತಿಂದು ಹಾಗೆ ಬಿದ್ದಿರ್ತಾರೆ. ಯೋಗ್ಯತೆ ಇಲ್ಲವೆಂದರೆ ಯೂನಿಫಾರ್ಮ್ ಬಿಚ್ಚಿಟ್ಟು ಮನೆಗೆ ಹೋಗಲಿ. ಮಣ್ಣು ಹೊರಲಿ ಎಂದು ಕೂಗಾಡಿದ್ದಾರೆ. ಪ್ರತಿನಿತ್ಯ ಗೋವು ಸಾಗಾಟ ಮಾಡುವವರು ಯಾರೆಂದು ಪೊಲೀಸರಿಗೆ. ಆದರೂ ಲಂಚ…
ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್
ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…
ಸಾಗರದಲ್ಲಿ ಫೀಲ್ಡ್ ಗೆ ಇಳಿದ ನೂತನ ಎಎಸ್ಪಿ ರೋಹನ್ ಜಗದೀಶ್:: ಸಾಗರದಲ್ಲಿ ಗಾಂಜಾ ಮಾಫಿಯಾ ಸಂಪೂರ್ಣ ಫಿನಿಷ್ ಫಿನಿಷ್ !!
ನೂತನ ಸ್ಮಾರ್ಟ್ ಐಪಿಎಸ್ ಆಫೀಸರ್ ರೋಹನ್ ಜಗದೀಶ್ ಇದೀಗ ಸಾಗರಕ್ಕೆ ಬಂದದ್ದೇ ತಡ ಅಪರಾಧಗಳನ್ನು ತಡೆಯುವಲ್ಲಿ ಪ್ರಾಮಾಣಿಕವಾಗಿ ಕಾರ್ಯವನ್ನು ನಿರ್ವಹಿಸುತ್ತಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಇಂದು ಗಾಂಜಾ ಸೇವನೆ ಮಾಡುತ್ತಿದ್ದ 3 ಜನರನ್ನು ಹಾಗೂ ಮಾರಾಟ ಮಾಡುತ್ತಿದ್ದ ಇಬ್ಬರನ್ನು ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಾಗರದ ವಿವಿಧೆಡೆ ದಾಳಿ ನಡೆಸಿದ ಎಎಸ್ ಪಿ ತಂಡ 15000 ಸಾವಿರ ರೂ ಹಾಗೂ 250 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದು ಎನ್ ಡಿ ಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ….
ಬಿಜೆಪಿಯ ಏಜೆಂಟ್ ರೀತಿ ಕಾರ್ಯ ನಿರ್ವಹಿಸುತ್ತಿರುವ ನಾಗೇಶ್ ಡೋಂಗ್ರೆ ಯನ್ನು ಕೂಡಲೇ ವಜಾ ಮಾಡಿ : ಗೋಪಾಲಕೃಷ್ಣ ಬೇಳೂರು
ಶಿವಮೊಗ್ಗ: ಸಹಕಾರ ಕ್ಷೇತ್ರದಲ್ಲಿ ನಾಗೇಶ್ ಡೋಂಗ್ರೆ ಎಂಬ ಭ್ರಷ್ಟ ಅಧಿಕಾರಿ ಸೇರಿಕೊಂಡಿದ್ದು, ಈತನನ್ನು ತಕ್ಷಣವೇ ಅಮಾನತು ಮಾಡಬೇಕು ಎಂದು ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆಗ್ರಹಿಸಿದರು. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕ ನಾಗೇಶ್ ಡೋಂಗ್ರೆ ಬಿಜೆಪಿ ಏಜೆಂಟರಂತೆ ಕೆಲಸ ಮಾಡುತ್ತಿದ್ದಾನೆ. ಡಿಸಿಸಿ ಬ್ಯಾಂಕ್ ನ ನಿರ್ದೇಶಕರನ್ನು ವಜಾ ಮಾಡಲು ಹೊರಟಿದ್ದಾನೆ. ಹಾಲು ಒಕ್ಕೂಟದ ಚುನಾವಣೆಯಲ್ಲಿ ಮಾಡಲೇ ಇಲ್ಲ. ಈ ಹಿಂದೆ ಈತನ ಮೇಲೆ ಭ್ರಷ್ಟಾಚಾರದ ಆರೋಪ ಕೂಡ ಇದೆ. ಮುಂಬಡ್ತಿ…
ಕೇರಳದಿಂದ ಬಂದ 23 ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೋವಿಡ್ ಪತ್ತೆ : ನಂಜಪ್ಪ ನರ್ಸಿಂಗ್ ಕಾಲೇಜ್ ಸೀಲ್ ಡೌನ್
ಶಿವಮೊಗ್ಗ: ನಂಜಪ್ಪ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ಈ ವಿದ್ಯಾರ್ಥಿಗಳೆಲ್ಲರೂ ಕೇರಳದಿಂದ ವಾಪಸ್ಸಾಗಿದ್ದರು ಎಂದು ತಿಳಿದುಬಂದಿದೆ. ಕೋವಿಡ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಕೋವಿಡ್ ಕೇರ್ ಸೆಂಟರ್ನಲ್ಲಿ ಇರಿಸಲಾಗಿದೆ. ನಂಜಪ್ಪ ಲೈಫ್ ಕೇರ್ ಹಾಗೂ ನಂಜಪ್ಪ ನರ್ಸಿಂಗ್ ಕಾಲೇಜನ್ನು ಸೀಲ್ಡೌನ್ ಮಾಡಲಾಗಿದೆ. ಉಳಿದ ವಿದ್ಯಾರ್ಥಿಗಳ ಪರೀಕ್ಷಾ ವರದಿಗಾಗಿ ಕಾಯಲಾಗುತ್ತಿದೆ. ಜಿಲ್ಲೆಯಲ್ಲಿ ಶೂನ್ಯಕ್ಕೆ ಬಂದಿದ್ದ ಕೊರೊನಾ ಪ್ರಕರಣ ಇತ್ತೀಚಿನ ಪ್ರಕರಣಗಳಿಂದ ಏರಿಕೆಯಾಗುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ.
ಶಿವಮೊಗ್ಗದ ಕವಯತ್ರಿ ನಿತ್ಯಶ್ರೀ ಗೆ ಒಲಿದ ರಾಜ್ಯ ಮಟ್ಟದ ಉತ್ತಿಷ್ಟ ಸಾಧಕ ಪ್ರಶಸ್ತಿ :
ಮಲೆನಾಡಿನ ಮಡಿಲಾದ ಶಿವಮೊಗ್ಗ ಜಿಲ್ಲೆ ಅನೇಕ ಕವಿ ಸಾಹಿತಿಗಳನ್ನು ನೀಡಿ ಕರ್ನಾಟಕ ರಾಜ್ಯದಲ್ಲಿ ತನ್ನದೇ ಆದಂತಹ ಛಾಪು ಮೂಡಿಸಿದೆ. ಅದರಂತೆ ಶಿವಮೊಗ್ಗದ ಉದಯೋನ್ಮುಖ ಯುವ ಕವಯಿತ್ರಿ ಅಂಕಣಗಾರ್ತಿ, ಲೇಖಕಿ ಹಲವು ಜಿಲ್ಲೆಗಳ ಪತ್ರಿಕೆಯ ಬರಹಗಾರ್ತಿ ಕು. ನಿತ್ಯಶ್ರೀ ಆರ್ ಇವರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ ವತಿಯಿಂದ ಸಾಹಿತ್ಯ ಕ್ಷೇತ್ರದಲ್ಲಿ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಶ್ರೀಮತಿ ಸುಜಾತಾ, ಗೌರಧ್ಯಕ್ಷರು ಶ್ರೀ…
ಶಿವಮೊಗ್ಗದ ಅಕ್ರಮ ಕಸಾಯಿಖಾನೆಗಳ ಮೇಲೆ ಪೊಲೀಸರ ಕಾರ್ಯಚರಣೆ :15 ಕೆಜಿ ಗೋಮಾಂಸ ವಶ :
ಶಿವಮೊಗ್ಗ : ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದ ಅಕ್ರಮ ಗೋಸಾಗಾಣಿಕೆ ಹಾಗೂ ಗೋರಕ್ಷಕರ ಪ್ರತಿಭಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಭರ್ಜರಿ ಸಂಚಲನ ಮೂಡಿಸಿದೆ. ಪೊಲೀಸರ ಕಾರ್ಯಾಚರಣೆಯಲ್ಲಿ ಅಕ್ರಮ ಕಸಾಯಿ ಖಾನೆಗಳನ್ನು ಬಂದ್ ಮಾಡಿಸಲಾಗಿದೆ. ಶಿವಮೊಗ್ಗದ ಎಲ್ಲಾ ಕಸಾಯಿ ಖಾನೆಗಳು ಅಕ್ರಮವಾಗಿದ್ದರೂ ಅವುಗಳು ಇದುವರೆಗೂ ರಾಜಕೀಯ ಪ್ರೇರಣೆಯಿಂದ ಎಗ್ಗಿಲ್ಲದೆ ನಡೆಯುತ್ತಿದ್ದವು. ದೊಡ್ಡಪೇಟೆ ಪೊಲೀಸರು ಅಕ್ರಮ ಕಸಾಯಿ ಖಾನೆಗಳ ಮೇಲೆ ದಾಳಿ ನಡೆಸುತ್ತಿದ್ದಂತೆ ನಗರದ ಇತರೆ ಅಕ್ರಮ ಕಸಾಯಿ ಖಾನೆಗಳು ಬಂದ್ ಆಗಿವೆ. ಇಲಿಯಾಸ್ ನಗರ 100 ಅಡಿ ರಸ್ತೆಯಲ್ಲಿರುವ ಎಸ್,ಎಫ್, ಕಾರ್…
ಗೃಹಸಚಿವರ ತವರೂರಲ್ಲಿ ಹಿಂದೂ ಸಂಘಟನೆಗಳ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ: ಗೋಕಳ್ಳರ ಹೆಡೆಮುರಿ ಕಟ್ಟುವಂತೆ ಆಗ್ರಹ
ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರವಾದ ತೀರ್ಥಹಳ್ಳಿಯಲ್ಲಿ ಇಂದು ಹಿಂದೂ ಪರ ಸಂಘಟನೆಗಳು ಗೋ ಕಳ್ಳರ ಬೆನ್ನಟ್ಟಿ ಹಲ್ಲೆಗೊಳಗಾದ ಕಾರ್ಯಕರ್ತರು ಆಸ್ಪತ್ರೆಗೆ ಸೇರಿದ್ದು ಈ ರೀತಿ ಮುಂದೆ ಆಗಬಾರದು ಎಂಬ ಕಾರಣಕ್ಕೆ ರಸ್ತೆ ತಡೆ ನಡೆಸಿ ಹೋರಾಟ ನಡೆಸಿದ್ದು ಇದು ಇಡೀ ಮಲೆನಾಡಲ್ಲಿ ಸಂಚಲನ ಮೂಡಿಸಿದೆ ಘಟನೆಯನ್ನು ಖಂಡಿಸಿ ಹಾಗೂ ಕೆಲವು ಪೊಲೀಸರ ವಿರುದ್ಧವೇ ಕ್ರಮ ಕೈಗೊಳ್ಳಬೇಕು ಎಂದು ಅಗ್ರಹಿಸಿ ಬೃಹತ್ ಹೋರಾಟ ಮಾಡಲಾಯಿತು. ಭಜರಂಗ ದಳ, ವಿಶ್ವ ಹಿಂದೂ ಪರಿಷತ್…
ಅನುದಾನ ಕೊರತೆ: ಗೃಹ ಸಚಿವರ ತವರು ಕ್ಷೇತ್ರದಲ್ಲಿಯೇ ವಿಧಾನ ಪರಿಷತ್ ಚುನಾವಣೆ ಬಹಿಷ್ಕಾರ
ತೀರ್ಥಹಳ್ಳಿ : ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಕ್ಷೇತ್ರದ ಗ್ರಾಮ ಪಂಚಾಯತಿ ಸದಸ್ಯರು ವಿಧಾನ ಪರಿಷತ್ ಚುನಾವಣೆ ಬಹಿಷ್ಕರಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ನಾಲೂರು ಕೊಳಿಗೆ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸೇರಿದಂತೆ ಏಳು ಜನರು ಈ ಬಾರಿ ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ನಾಲೂರು ಕೊಳಿಗೆ ಗ್ರಾಮ ಪಂಚಾಯತಿಗೆ ಈವರೆಗೆ 1.68 ಕೋಟಿ ರೂಪಾಯಿ ಸರ್ಕಾರದ ಅನುದಾನ ಬಂದಿಲ್ಲ. ನಾಲೂರು ಕೊಳಿಗೆ ವ್ಯಾಪ್ತಿಯ ಮೂರು ಮರಳು ಕ್ವಾರಿಗಳು ಸರ್ಕಾರಕ್ಕೆ ಕೋಟಿಗಟ್ಟಲೆ ಆದಾಯ…
ತೀರ್ಥಹಳ್ಳಿ ದನಗಳ್ಳರ ಹಿಟ್ & ರನ್ ನಿಂದ ಇಬ್ಬರು ಯುವಕರಿಗೆ ಗಂಭೀರ ಗಾಯ!! ಆಸ್ಪತ್ರೆಗೆ ಆಗಮಿಸಿದ ಗೃಹಸಚಿವ ಆರಗ ಜ್ಞಾನೇಂದ್ರ:
ತೀರ್ಥಹಳ್ಳಿ: ಮಲೆನಾಡ ಭಾಗದಲ್ಲಿ ದನಗಳ್ಳರ ಹಾವಳಿ ಮಿತಿ ಮೀರಿದ್ದು ಅದರಲ್ಲೂ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜೆಲ್ಲೆಯಲ್ಲಿ ದನ ಕಳ್ಳರ ಕೇಸ್ ದಾಖಲಾಗುತ್ತಲೇ ಇರುತ್ತಿದೆ. ತೀರ್ಥಹಳ್ಳಿಯ ಮೇಳಿಗೆಯಿಂದ ಅಕ್ರಮವಾಗಿ ದನಗಳನ್ನು ಸಾಗಣೆ ಮಾಡುತ್ತಿರುವ ಕಳ್ಳರನ್ನು ತಡೆಯಲು ಯತ್ನಿಸಿದ ಇಬ್ಬರು ಯುವಕರ ಮೇಲೆ ಪಿಕ್ ಅಪ್ ವಾಹನವನ್ನು ಹತ್ತಿಸಿದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ತಾಲೂಕಿನ ಮೇಳಿಗೆಯಿಂದ ಅಪ್ ವಾಹನವನ್ನು ಫಾಲೋ ಮಾಡಿದ ಯುವಕರ ಮೇಲೆ ಬೆಜ್ಜವಳ್ಳಿಯಲ್ಲಿ ಪಿಕ್…