ಶಿವಮೊಗ್ಗ ಬಾಪೂಜಿ ಕಾಲೇಜು ಆವರಣದಲ್ಲಿ ಕಲ್ಲು ತೂರಾಟ :
ಶಿವಮೊಗ್ಗ : ರಾಜ್ಯದಾದ್ಯಂತ ಹಿಜಾಬ್-ಕೇಸರಿ ವಿವಾದ ತಾರಕಕ್ಕೆ ಏರಿರುವಂತೆಯೇ ನಗರದ ಬಾಪೂಜಿ ಕಾಲೇಜಿನಲ್ಲಿ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ. ಇಂದು ಬಾಪೂಜಿ ನಗರ ಸರ್ಕಾರಿ ಕಾಲೇಜು ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಕಿಡಿಗೇಡಿಗಳು ಏಕಾಏಕಿ ಕಲ್ಲು ತೂರಾಟ ನಡೆಸಿದ್ದಾರೆ. ಪರಿಣಾಮವಾಗಿ ಕೇಸರಿ ಶಾಲು ಧರಿಸಿದ್ದ ವಿದ್ಯಾರ್ಥಿಯೊಬ್ಬ ಗಾಯಗೊಂಡಿದ್ದಾನೆ. ವಿದ್ಯಾರ್ಥಿಗಳು ಕೇಸರಿ ಧ್ವಜವನ್ನು ಧ್ವಜಸ್ತಂಭಕ್ಕೆ ಕಟ್ಟಲು.ಮುಂದಾಗಿದ್ದಾರೆ. ಇದಕ್ಕೂ ಮುನ್ನವೇ ಕಾಲೇಜು ಕಟ್ಟಡ ಏರಿದ್ದ ಕೆಲವು ವಿದ್ಯಾರ್ಥಿಗಳು ಕಿಡಿಗೇಡಿಗಳ ಕುಮ್ಮಕ್ಕಿನಿಂದ ಮೇಲಿನಿಂದ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ….