Headlines

ಲಯನ್ ಸಫಾರಿ ಬಳಿ ಪಿಕಪ್ ಅಪಘಾತ – ಓರ್ವ ಸಾವು , ಮೂವರು ಗಂಭೀರ !!

ಲಯನ್ ಸಫಾರಿ ಬಳಿ ಪಿಕಪ್ ವಾಹನ ಅಪಘಾತ – ಓರ್ವ ಸಾವು , ಮೂವರು ಗಂಭೀರ !!ಜ಼್ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಸಮೀಪದ ಲಯನ್ ಸಫಾರಿ ಬಳಿ ನಡೆದಿರುವ ಬಗ್ಗೆ ವರದಿಯಾಗಿದೆ. ಆಯನೂರು ಕಡೆಯಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಪಿಕಪ್ ವಾಹನ ಲಯನ್ ಸಫಾರಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಸ್ಥಳದಲ್ಲಿಯೇ ಸಾವನ್ನಪಿದ್ದು ,…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಸೇರಿದಂತೆ ವಿವಿಧೆಡೆ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಗ್ರಾಮ ಪಂಚಾಯತ್ , ನಾಡ ಕಛೇರಿ ಸೇರಿದಂತೆ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ…

Read More

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ

ಆನಂದಪುರದಲ್ಲಿ ದಸರಾ ಕವಿಗೋಷ್ಠಿ – ಕಾವ್ಯವೇ ಮಾನವ ಸಂಬಂಧಗಳ ಸೇತುವೆ ಆನಂದಪುರ: “ಕಾವ್ಯಗಳ ಮೂಲಕವೇ ಮಾನವ ಸಂಬಂಧಗಳನ್ನು ಹೆಚ್ಚಿಸಬಹುದು. ಮಾತುಗಳಲ್ಲಿ ಹೇಳಲಾಗದ ವಿಚಾರಗಳನ್ನು ಕಾವ್ಯದ ಮೂಲಕ ವ್ಯಕ್ತಪಡಿಸಲು ಸಾಧ್ಯ,” ಎಂದು ಹಿರಿಯ ಪತ್ರಕರ್ತ ಜಗನ್ನಾಥ್ ಆರ್. ಅಭಿಪ್ರಾಯಪಟ್ಟರು. ಇಲ್ಲಿನ ರಂಗನಾಥ ದೇವಾಲಯದ ಸಭಾಂಗಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಜಿಲ್ಲಾ ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ಪತ್ರಿಕಾ ಬಳಗ ಮತ್ತು ಇತಿಹಾಸ ಪರಂಪರೆ ಉಳಿಸಿ ಅಭಿಯಾನ ಟ್ರಸ್ಟ್‌ಗಳ ಸಂಯುಕ್ತ ಆಶ್ರಯದಲ್ಲಿ ನಡೆದ ದಸರಾ ಕವಿಗೋಷ್ಠಿ…

Read More

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ

ರಿಪ್ಪನ್‌ಪೇಟೆಯಲ್ಲಿ ಅಷ್ಟಲಕ್ಷ್ಮಿ ಹವನ – ನವರಾತ್ರಿ ಧಾರ್ಮಿಕ ವೈಭವ ರಿಪ್ಪನ್‌ಪೇಟೆ: ಪಟ್ಟಣದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀರಾಮ ಮಂದಿರದಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ನವರಾತ್ರಿ ಪ್ರಯುಕ್ತ ಅಷ್ಟಲಕ್ಷ್ಮಿ ಹವನವನ್ನು ಆಯೋಜಿಸಲಾಯಿತು. ಜಿ.ಎಸ್.ಬಿ ಸಮಾಜದ ಅನೇಕ ಬಂಧುಗಳು ಭಾಗವಹಿಸಿ ಭಕ್ತಿಪೂರ್ಣವಾಗಿ ಕಾರ್ಯಕ್ರಮವನ್ನು ನೆರವೇರಿಸಿದರು. ನವರಾತ್ರಿಯ ಸಂದರ್ಭದಲ್ಲಿ ‘ಅಖಂಡ ದೀಪಪ್ರಜ್ವಲನೆ’ ಅಂದರೆ ಒಂಭತ್ತು ದಿನಗಳ ಕಾಲ ನಿರಂತರವಾಗಿ ದೀಪವನ್ನು ಬೆಳಗಿಸುವುದು, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾಠ, ದೇವಿಭಾಗವತ, ಬ್ರಹ್ಮಾಂಡಪುರಾಣದಲ್ಲಿನ ಲಲಿತೋಪಾಖ್ಯಾನ ಪಾರಾಯಣ, ಲಲಿತಾಪೂಜೆ, ಸರಸ್ವತಿಪೂಜೆ,…

Read More

ಟೋಲ್‌ಗೇಟ್ ವಿವಾದ : ಅ.9 ಕ್ಕೆ ಶಿಕಾರಿಪುರ ಬಂದ್ ಗೆ ಕರೆ

ಟೋಲ್‌ಗೇಟ್ ವಿವಾದ : ಅ.9 ರಂದು ರಂದು ಶಿಕಾರಿಪುರ ಬಂದ್ ಗೆ ಕರೆ ಶಿಕಾರಿಪುರ, ಸೆಪ್ಟೆಂಬರ್ ೨೮ : ಕುಟ್ರಳ್ಳಿ ಟೋಲ್‌ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಅಕ್ಟೋಬರ್ ೯ರಂದು ಶಿಕಾರಿಪುರ ಪಟ್ಟಣ ಬಂದ್‌ ನಡೆಸಲು ಟೋಲ್‌ಗೇಟ್ ಹೋರಾಟ ಸಮಿತಿ ಕರೆ ನೀಡಿದೆ ಎಂದು ಸಮಿತಿ ಮುಖಂಡ, ನ್ಯಾಯವಾದಿ ಶಿವರಾಜ್ ತಿಳಿಸಿದ್ದಾರೆ. ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಒಂದು ವರ್ಷದಿಂದ ಟೋಲ್‌ಗೇಟ್ ತೆರವಿಗೆ ಹೋರಾಟ ನಡೆಸುತ್ತಿದ್ದೇವೆ. ಸಚಿವರು, ಸಂಸದರು, ಶಾಸಕರು ಎಲ್ಲರೂ ಬೆಂಬಲ ವ್ಯಕ್ತಪಡಿಸಿದರೂ, ಕಾಣದ ಶಕ್ತಿಯ ಕಾರಣದಿಂದ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು

ಚೌಡೇಶ್ವರಿ ದರ್ಶನಕ್ಕೆ ಬಂದ ಭಕ್ತರಿದ್ದ ಟಿಟಿ ವಾಹನ ಪಲ್ಟಿ – 12 ಜನರಿಗೆ ಗಾಯ , ಆಸ್ಪತ್ರೆಗೆ ದೌಡಾಯಿಸಿದ ಶಾಸಕ ಬೇಳೂರು ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕು ಸಿಗಂದೂರು ರಸ್ತೆಯಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿದೆ. ಪರಿಣಾಮ ಈ ಘಟನೆಯಲ್ಲಿ 13 ಮಂದಿಗೆ ಗಾಯವಾಗಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಾಳುಗಳ ಚಿಕಿತ್ಸೆಗೆ ವ್ಯವಸ್ಥೆ ಕಲ್ಪಿಸಿದ್ದಾರೆ. ಬೆಂಗಳೂರು ಮೂಲದ ಸಿಗಂದೂರು ಚೌಡೇಶ್ವರಿಯ ದರ್ಶನಕ್ಕಾಗಿ ಸಾಗರದವರೆಗೂ ಟ್ರೈನ್‌ನಲ್ಲಿ ಬಂದಿದ್ದರು….

Read More

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು

ವಿದ್ಯುತ್ ಸ್ಪರ್ಶ – ವಿದ್ಯಾರ್ಥಿ ಸಾವು ಶಿವಮೊಗ್ಗ: ಹಾಡೋನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶವಾಗಿ ಬಾಲಕನೊಬ್ಬ ಜೀವ ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ಹಾಡೋನಹಳ್ಳಿಯ ಅಂಬಾಭವಾನಿ ದೇವಸ್ಥಾನಕ್ಕೆ ನವರಾತ್ರಿಯ ಹಿನ್ನೆಲೆಯಲ್ಲಿ ವಿದ್ಯುತ್ ದೀಪದ ಅಲಂಕಾರ ಮಾಡಲಾಗಿದೆ. ದೇವಸ್ಥಾನಕ್ಕೆ ಹಾಕಿದ ಸೀರಿಯಲ್ ಸೆಟ್ ಅಲಂಕಾರವನ್ನ ದೇವಸ್ಥಾನದ ಗೇಟಿಗೆ ಸಹ ಹಾಕಲಾಗಿದೆ. ಈ ವೇಳೆ ಸೀರಿಯಲ್ ಸೆಟ್ ಸ್ಕಿನ್ ಆಗಿದ್ದರಿಂದ ಗೇಟ್ ಗೂ ವಿದ್ಯುತ್ ಚ್ಛಕ್ತಿ ಹರಿದಿದೆ. ಗ್ರಾಮದ ಬಾಲಕ ಸಮರ್ಥ (೧೪) ಗೇಟನ್ನು ಮುಟ್ಟುತ್ತಿದ್ದಂತೆ ಶಾಕ್ ಹೊಡೆದು ಅಸ್ವಸ್ಥನಾಗಿದ್ದಾನೆ. ಆಸ್ಪತ್ರೆಗೆ ತರುವಾಗ ಬಾಲಕ…

Read More

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ…

Read More