ಜಿಲ್ಲಾ ಸುದ್ದಿ:
ಶಿವಮೊಗ್ಗಕ್ಕೆ ಆಗಮಿಸಿದ್ದ ನಟ ರಮೇಶ್ ಅರವಿಂದ್ : ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್
ಶಿವಮೊಗ್ಗ : ನಟ, ನಿರ್ದೇಶಕ ರಮೇಶ್ ಅರವಿಂದ್ ಇಂದು ಶಿವಮೊಗ್ಗದ ಶೋ ರೂಂ ಉದ್ಘಾಟನೆಗಾಗಿ ಆಗಮಿಸಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ಅವರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ಫ್ಯಾನ್ಸ್ ಗಳು ಮುಗಿಬಿದ್ದರು. ಶೋ ರೂಂ ಉದ್ಘಾಟನೆ ನಂತರ ಮಾಧ್ಯಮದ ಜೊತೆ ಮಾತನಾಡಿ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಅತೀ ದೊಡ್ಡ ನಷ್ಟ ಅನುಭವಿಸುತ್ತಿದ್ದೇವೆ. ನಮ್ಮೆಲ್ಲರೊಂದಿಗೆ ಅವರ ನೆನಪುಗಳಿವೆ. ನ. 16 ರಂದು ಅಪ್ಪು ವಿಗೆ ವಾಣಿಜ್ಯ ಮಂಡಳಿಯಿಂದ ನಮನ ಸಲ್ಲಿಸುವ ಕಾರ್ಯಕ್ರಮ ಇದೆ ಎಂದರು. ಇನ್ನು ಬಿಡುಗಡೆಗೆ ಸಿದ್ದವಾಗಿರುವ…
ರಸ್ತೆ ಮತ್ತು ಸರ್ಕಲ್ ಗೆ ಪುನೀತ್ ರಾಜ್ಕುಮಾರ್ ಹೆಸರಿಟ್ಟು ಗೌರವ ಸಲ್ಲಿಸಿದ ಸಾರ್ವಜನಿಕರು :
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸುವ ಸಲುವಾಗಿ ರಸ್ತೆ ಮತ್ತು ಸರ್ಕಲ್’ಗೆ ಅವರ ಹೆಸರು ನಾಮಕರಣ ಮಾಡಲಾಗಿದೆ.ಸ್ವಯಂ ಸಾರ್ವಜನಿಕರೇ ರಸ್ತೆಗಳಿಗೆ ಪುನೀತ್ ರಾಜಕುಮಾರ್ ಎಂದು ಹೆಸರು ಹಾಕಿ ನಾಮಪಲಕ ಪ್ರತಿಷ್ಟಾಪಿಸಿದ್ದಾರೆ. ಶಿವಮೊಗ್ಗದ ಲಕ್ಷ್ಮೀ ಟಾಕೀಸ್ ಪಕ್ಕದ 1 ಕಿಮೀ ಚಾನಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ಸಾರ್ವಜನಿಕರೇ ನಾಮಕರಣ ಮಾಡಿದ್ದಾರೆ. ಇದೆ ಹೆಸರನ್ನು ಅಧಿಕೃತಗೊಳಿಸುವಂತೆ ಮಹಾನಗರ ಪಾಲಿಕೆಯನ್ನು ಒತ್ತಾಯಿಸಿದ್ದಾರೆ. ಇನ್ನೂ ಸಾಗರ ಸಮೀಪದ ಶಿರವಾಳ ಗ್ರಾಮದಲ್ಲಿ ವೃತ್ತಕ್ಕೆ ನಟ ಪುನೀತ್ ರಾಜಕುಮಾರ್ ಹೆಸರು…
ಶಿವಮೊಗ್ಗ ಜಿಲ್ಲೆಯ ನಾಲ್ವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ :
ಶಿವಮೊಗ್ಗ : ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನ ಘೋಷಿಸಲಾಗಿದ್ದು, ಶಿವಮೊಗ್ಗ ಜಿಲ್ಲೆಗೆ ನಾಲ್ವರಿಗೆ ಈ ಪ್ರಶಸ್ತಿ ಲಭಿಸಿದೆ. ವಿವಿಧ ಕ್ಷೇತ್ರದಲ್ಲಿ ಎಲೆಮರೆಕಾಯಿಂತೆ ಕೆಲಸ ಮಾಡಿರುವ ಕಲಾವಿಧರನ್ನ ಗುರುತಿಸಿ ಅವರಿಗೆ ಪ್ರತಿ ವರ್ಷದಂತೆ ಸರ್ಕಾರ ಪ್ರಶಸ್ತಿ ನೀಡಲಾಗುತ್ತದೆ. ಅದರಂತೆ ಈ ಬಾರಿಯೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಸೇವಾ ಸಿಂಧು ಮೂಲಕ ಸಾರ್ವಜನಿಕರು ಮಾಡಿದ ಶಿಫಾರಸುಗಳನ್ನ ಪರಿಶೀಲಿಸಿ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ರಚಿತವಾಗಿರುವ ಪ್ರಶಸ್ತಿ ಆಯ್ಕೆ ಸಮಿತಿ ಮತ್ತು ಪ್ರಶಸ್ತಿ ಸಲಹಾ ಸಮಿತಿಯ ಮನ್ನಣೆ ನೀಡಿದ ಹೆಸರುಗಳನ್ನ ಆಯ್ಕೆ…