ಜಿಲ್ಲಾ ಸುದ್ದಿ:
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬದ ಸಂಭ್ರಮ
ನಾಗರಹಳ್ಳಿ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ನಾಗರ ಪಂಚಮಿ ಹಬ್ಬ ಸಂಭ್ರಮ – ಭಕ್ತರ ದಂಡೆ, ಧಾರ್ಮಿಕ ವಿಧಿವಿಧಾನಗಳೊಂದಿಗೆ ಆಚರಣೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಾಗರಹಳ್ಳಿಯ ಪ್ರಸಿದ್ಧ ನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಇಂದು ನಾಗರ ಪಂಚಮಿ ಹಬ್ಬವನ್ನು ಭಕ್ತಿ ಭಾವನೆ ಮತ್ತು ಶ್ರದ್ಧೆಯಿಂದ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನಕ್ಕಾಗಿ ಉತ್ಸಾಹದಿಂದ ಆಗಮಿಸಿದ್ದರು. ಹಬ್ಬದ ಅಂಗವಾಗಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ವಿಧಿವಿಧಾನಗಳು ನಡೆಯಿತು. ನಾಗೇಂದ್ರಸ್ವಾಮಿಗೆ ವಿಶೇಷ ಅಭಿಷೇಕ, ಪಂಚಾಮೃತ ಸ್ನಾನ, ಹಾಲು-ಸಕ್ಕರೆಯಿಂದ ಆರಾಧನೆ, ನಾಗಬಲಿ, ಅಷ್ಟನಾಗಾರ್ಚನೆ,…
ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್
ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದು ಸಂಚಾರ ಬಂದ್ ಶಿವಮೊಗ್ಗ: ಮಲೆನಾಡಿನಲ್ಲಿ ಪುಷ್ಯಮಳೆ ಅಬ್ಬರ ಜೋರಾದ ಪರಿಣಾಮ ಹುಲಿಕಲ್ ಘಾಟಿಯಲ್ಲಿ ಭೂಕುಸಿತವಾಗಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಹುಲಿಕಲ್ ಘಾಟಿಯಲ್ಲಿ ಧರೆ ಕುಸಿದಿದೆ. ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಸಂಪರ್ಕ ಕಲ್ಪಿಸುವ ಘಾಟಿಯಾದ ಹುಲಿಕಲ್ ಘಾಟಿಯಲ್ಲಿ ರಾಜ್ಯ ಹೆದ್ದಾರಿ 52 ಹಾದು ಹೋಗಲಿದೆ. ಬಾಳೆಬರೆ ಫಾಲ್ಸ್ ಪಕ್ಕದಲ್ಲೇ ಧರೆ ಕುಸಿದಿದೆ. ರಸ್ತೆಯ ಮೇಲೆ ಕುಸಿದ ಮಣ್ಣು ಬಿದ್ದಿದೆ.ಮಣ್ಣಿನ ಜೊತೆ ಕುಸಿದ ಘಾಟಿಯಲ್ಲಿ ಇದ್ದ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಕಾರಣ …
ಟ್ರಾನ್ಸ್ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ
ಟ್ರಾನ್ಸ್ಫಾರ್ಮರ್ ಮೇಲೆಯೇ ಉರುಳಿಬಿದ್ದ ಬೃಹದಾಕಾರದ ಮರ ಶಿವಮೊಗ್ಗ , ಜು. 27: ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯಲ್ಲಿ ಬೃಹದಾಕಾರದ ಮರವೊಂದು, ವಿದ್ಯುತ್ ಟ್ರಾನ್ಸ್’ಫಾರ್ಮರ್ ಮೇಲೆಯೇ ಉರುಳಿಬಿದ್ದ ಘಟನೆ ಜುಲೈ 27 ರ ಮಧ್ಯಾಹ್ನ ನಡೆದಿದೆ. ಆದಾಯ ತೆರಿಗೆ ಇಲಾಖೆ ಕಚೇರಿ ಪಕ್ಕದ ರಸ್ತೆಯಲ್ಲಿ ಘಟನೆ ನಡೆದಿದೆ. ಗಾಳಿ – ಮಳೆಯಿಂದ ಮರ ಉರುಳಿ ಬಿದ್ದಿದೆ. ಟ್ರಾನ್ಸ್ಫಾರ್ಮರ್ ಸೇರಿದಂತೆ ಕೆಲ ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ. ಅದೃಷ್ಟಾವಶಾತ್ ಮರ ಬಿದ್ದ ವೇಳೆ ರಸ್ತೆಯಲ್ಲಿ ಜನ – ವಾಹನ ಸಂಚಾರದ ಪ್ರಮಾಣ…
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ
ಕಾರ್ಗಿಲ್ ವಿಜಯ ದಿವಸ ಆಚರಣೆ: ಹುತಾತ್ಮ ಯೋಧರಿಗೆ ಗೌರವ ರಿಪ್ಪನ್ ಪೇಟೆ : ಕಾರ್ಗಿಲ್ ವಿಜಯ ದಿವಸದ ಅಂಗವಾಗಿ ಪಟ್ಟಣದ ಹಿಂದೂ ಸಂಘಟನೆಗಳ ವತಿಯಿಂದ ವಿನಾಯಕ ವೃತ್ತದಲ್ಲಿ ಹುತಾತ್ಮ ಯೋಧರಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಮುಖಂಡ ದೇವರಾಜ್ ಕೆರೆಹಳ್ಳಿ ಕಾರ್ಗಿಲ್ ವಿಜಯೋತ್ಸವವು ಇಡೀ ಭಾರತೀಯರಿಗೆ ಹೆಮ್ಮೆಯ ದಿನವೂ ಹೌದು. ಅದರ ಜೊತೆಗೆ ವೀರಯೋಧರನ್ನು ಕಳೆದುಕೊಂಡ ನೋವೂ ಇದೆ. ಈ ಯುದ್ಧದಲ್ಲಿ ಸೌರಭ್ ಕಾಲಿಯಾ, ವಿಕ್ರಮ್…
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು
ಹಾರೋಹಿತ್ಲು ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ : ವ್ಯಕ್ತಿ ವಿರುದ್ಧ ಪ್ರಕರಣ ದಾಖಲು ಶಿವಮೊಗ್ಗ ಜಿಲ್ಲೆ, ರಿಪ್ಪನ್ ಪೇಟೆ: ಅರಸಾಳು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಾರೋಹಿತ್ಲು ಗ್ರಾಮದಲ್ಲಿ ಕಿರಾಣಿ ಅಂಗಡಿಯ ಮುಂಭಾಗ ಸಾರ್ವಜನಿಕರಿಗೆ ಮದ್ಯ ಸೇವನೆಗೆ ಅವಕಾಶ ಕಲ್ಪಿಸಿದ್ದ ಆರೋಪದ ಮೇರೆಗೆ ವ್ಯಕ್ತಿಯೋರ್ವನ ವಿರುದ್ಧ ರಿಪ್ಪನ್ ಪೇಟೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಘಟನೆ ಜುಲೈ 25ರಂದು ನಡೆದಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಖಚಿತ ಮಾಹಿತಿ ಪಡೆದ ಸಬ್ಇನ್ಸ್ಪೆಕ್ಟರ್ ರಾಜುರೆಡ್ಡಿ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದಾಗ,ಹಾರೋಹಿತ್ಲು…
ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್ಲಿಫ್ಟ್ನಲ್ಲಿ ರವಾನೆ
Challenge to save the life of a young woman suffering from brain fever: ಮೆದುಳು ಜ್ವರ ಪೀಡಿತ ಯುವತಿಯ ಜೀವ ಉಳಿಸುವ ಸವಾಲು: ಶಿವಮೊಗ್ಗದಿಂದ ಮುಂಬೈಗೆ ಏರ್ಲಿಫ್ಟ್ನಲ್ಲಿ ರವಾನೆ Challenge to save the life of a young woman suffering from brain fever: Transportation from Shivamogga to Mumbai by airlift ಶಿವಮೊಗ್ಗ: ಶಿವಮೊಗ್ಗದಲ್ಲಿ ಇದೇ ಮೊದಲ ಬಾರಿಗೆ, ಗಂಭೀರ ಅಸ್ವಸ್ಥೆಯಾಗಿದ್ದ ಯುವತಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ವಿಮಾನದ…
ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ
ಮಳೆಯ ಗಾಳಿ ಅಬ್ಬರಕ್ಕೆ ಶಿವಮೊಗ್ಗ – ಆಯನೂರು ಮಾರ್ಗದಲ್ಲಿ ನೆಲಕ್ಕುರುಳಿದ ಮರ – ವಾಹನ ಸಂಚಾರಕ್ಕೆ ವ್ಯತ್ಯಯ ಶಿವಮೊಗ್ಗ: ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯ ಹಿನ್ನಲೆಯಲ್ಲಿ ಸಾರ್ವಜನಿಕ ಬದುಕು ಅಸ್ತವ್ಯಸ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆಯನೂರು-ಶಿವಮೊಗ್ಗ ರಾಜ್ಯ ಹೆದ್ದಾರಿಯ ಮಧ್ಯಭಾಗದಲ್ಲಿ ಗುರುವಾರ ಮಧ್ಯಾಹ್ನದ ವೇಳೆ ರಸ್ತೆಯ ಬದಿಯಲ್ಲಿದ್ದ ಬೃಹತ್ ಮರವೊಂದು ದಿಡೀರ್ ಎಂಬಂತೆ ಧರೆಗುರುಳಿದೆ. ಮರ ಧರೆಗುರುಳಿದ ವೇಳೆ ಅದೇ ರಸ್ತೆಯಲ್ಲಿ ಕೆಲವೊಂದು ವಾಹನಗಳು ಸಂಚರಿಸುತ್ತಿದ್ದರೂ, ಅಪಾಯದಿಂದ ತೀವ್ರ ಅನಾಹುತ ತಪ್ಪಿದೆ ಎಂಬುದು ಭಾಗ್ಯವೆನಿಸಿತು. ಆದರೆ ಈ…
ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್ ಮಟ್ಟು
ಪತ್ರಕರ್ತರಿಗೆ ಪ್ರಾಮಾಣಿಕತೆ ಮುಖ್ಯ : ದಿನೇಶ್ ಅಮೀನ್ ಮಟ್ಟು ಶಿವಮೊಗ್ಗ : ಮುದ್ರಣ ಮಾಧ್ಯಮ ವಿಶ್ವಾರ್ಸಹತೆ ಉಳಿಸಿಕೊಂಡಿದೆ. ಮಾಧ್ಯಮದ ಬಗ್ಗೆ ಸಮಾಜದಲ್ಲಿ ಒಳ್ಳೆಯ ಅಭಿಪ್ರಾಯವಿಲ್ಲ. ಮಾಧ್ಯಮದ ಬಗ್ಗೆ ಮಾತನಾಡುವ ಸಂದಿಗ್ಧ ಪರಿಸ್ಥಿತಿ ಇದೆ. ವಾಟ್ಸಾಪ್ ಯೂನಿವರ್ಸಿಟಿಗಳಿಂದ ಅನೇಕರಿಗೆ ಧ್ವನಿ ಬಂದಿದೆ ಎಂದು ಹಿರಿಯ ಪತ್ರಕರ್ತ ದಿನೇಶ್ ಅಮೀನ್ಮಟ್ಟು ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ ವತಿಯಿಂದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಭಾಗಿತ್ವದಲ್ಲಿ ಇಂದು ನಗರದ ಸರ್ಕಾರಿ ನೌಕರರ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ…
ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ
ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…
RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು
RIPPONPETE | ಹಿರಿಯ ಆಟೋ ಚಾಲಕ ದ್ಯಾವಪ್ಪಗೌಡ ರ 75ನೇ ಜನ್ಮದಿನೋತ್ಸವ ಆಚರಿಸಿ ಸಂಭ್ರಮಿಸಿದ ಯುವಕರು ರಿಪ್ಪನ್ ಪೇಟೆ, ಜುಲೈ 25: ಪಟ್ಟಣದ ಹಿರಿಯ ಆಟೋ ಚಾಲಕರಾಗಿರುವ ದ್ಯಾವಪ್ಪ ಗೌಡ ಅವರ 75ನೇ ಹುಟ್ಟುಹಬ್ಬವನ್ನು ರಿಪ್ಪನ್ ಪೇಟೆ ಆಟೋ ಚಾಲಕ ಮತ್ತು ಮಾಲೀಕರ ಸಂಘದ ವತಿಯಿಂದ ಶ್ರದ್ದಾ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸ್ಥಳೀಯ ಆಟೋ ನಿಲ್ದಾಣದಲ್ಲಿ ನಡೆದ ಈ ಸರಳ ಕಾರ್ಯಕ್ರಮದಲ್ಲಿ ಸಂಘದ ಸದಸ್ಯರು ಹಾಗೂ ಸಹಚರ ಚಾಲಕರು ಭಾಗವಹಿಸಿ, ದ್ಯಾವಪ್ಪ ಗೌಡರಿಗೆ ಸನ್ಮಾನ ಸಲ್ಲಿಸಿ ಗೌರವ…