ಜಿಲ್ಲಾ ಸುದ್ದಿ:
ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ
ವರ್ಗಾವಣೆಯಾದ ಅಧಿಕಾರಿಗಳಿಗೆ ಅಮೃತ ಗ್ರಾಪಂ ವತಿಯಿಂದ ಬೀಳ್ಕೊಡುಗೆ ರಿಪ್ಪನ್ ಪೇಟೆ : ಸಮೀಪದ ಅಮೃತ ಗ್ರಾಪಂ ವತಿಯಿಂದ ಆಯೋಜಿಸಿದ್ದ ವರ್ಗಾವಣೆ ಹೊಂದಿದ ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ಪಿ ಎಸ್ ಐ ಪ್ರವೀಣ್ ಎಸ್ ಪಿ ಹಾಗೂ ಉಪ ವಲಯ ಅರಣ್ಯಧಿಕಾರಿ ಅಕ್ಷಯ್ ಕುಮಾರ್ ರವರಿಗೆ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿ ಗೌರವಿಸಿದರು. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎಲ್ಲಾ ಜನರ ಜನ ಮಾನಸದಲ್ಲಿ ಉಳಿದ ದಕ್ಷ ಅಧಿಕಾರಿ ಪ್ರವೀಣ್ ಎಸ್ ಪಿ ಯವರು ಇಂದು ಅವರ…
ಜನಸ್ನೇಹಿ ದಕ್ಷ ಪೋಲಿಸ್ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ
ಜನಸ್ನೇಹಿ ದಕ್ಷ ಪೋಲಿಸ್ ಅಧಿಕಾರಿ ಪಿಎಸ್ ಐ ಪ್ರವೀಣ್ ಎಸ್ ಪಿ ರಿಪ್ಪನ್ ಪೇಟೆ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಜನಸ್ನೇಹಿ ಪೋಲಿಸ್ ಅಧಿಕಾರಿಯಾಗಿ ಕೆಲಸ ನಿರ್ವಹಿಸಿ ಶಹಬ್ಬಾಸಗಿರಿ ಪಡೆದು ಆನಂದಪುರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿರುವ ಸನ್ನಡತೆಯ ದಕ್ಷ ಅಧಿಕಾರಿ ಪಿಎಸ್ಐ ಪ್ರವೀಣ್ ಮಾದರಿ ಅಧಿಕಾರಿಯಾಗಿದ್ದಾರೆ. ಹೌದು ಮೂಲತಃ ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಮಾರಿಗುಡ್ಡ ನಿವಾಸಿಯಾಗಿರುವ ಪ್ರವೀಣ್ ಎಸ್ ಪಿ ಭಾರತೀಯ ಸೇನೆಯಲ್ಲಿ 17 ವರ್ಷಗಳ ಕಾಲ ಸುಧೀರ್ಘವಾಗಿ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿಗೊಂಡ ಇವರು ಕರ್ನಾಟಕ…
RIPPONPETE | ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್)
ಎಸ್ ಪಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರಿಂದ ಅಮ್ಮನಘಟ್ಟ ಗುಡ್ಡಕ್ಕೆ ಚಾರಣ (ಟ್ರೆಕ್ಕಿಂಗ್) ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೋಡೂರು ಗ್ರಾಪಂ ವ್ಯಾಪ್ತಿಯ ಅಮ್ಮನಘಟ್ಟ ಗುಡ್ಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮಿಥುನ್ ಕುಮಾರ್ ನೇತ್ರತ್ವದಲ್ಲಿ ಪೊಲೀಸರು ಚಾರಣ(ಟ್ರೆಕ್ಕಿಂಗ್) ಮಾಡುವ ಮೂಲಕ ಜೇನುಕಲ್ಲಮ್ಮ ದೇವಿ ಆಶೀರ್ವಾದ ಪಡೆದರು. ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ಪಕ್ಕದಲ್ಲಿರುವ ದೇವಿಯ ಮೂಲ ಸ್ಥಾನವಿರುವ ಗುಡ್ಡಕ್ಕೆ ಪೊಲೀಸ್ ಸಿಬ್ಬಂದಿಗಳು ಚಾರಣ ( ಟ್ರೆಕ್ಕಿಂಗ್) ಮೂಲಕ ಸಾಗಿ ಮೂಲ ದೇವಸ್ಥಾನದ ದರ್ಶನ ಪಡೆದು ಆ ನಂತರ ಶ್ರೀ…
ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ
ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA | ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್-ಉಲ್-ಅಧಾ ಅಂದರೆ ಬಕ್ರೀದ್ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…
ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ
ರಿಪ್ಪನ್ ಪೇಟೆಯ ಹರ್ಷಿತರವರಿಗೆ ಗಣಿತಶಾಸ್ತ್ರದಲ್ಲಿ ಪಿಹೆಚ್ ಡಿ ಪದವಿ ರಿಪ್ಪನ್ಪೇಟೆ : ಪಟ್ಟಣದ ವಿದ್ಯಾರ್ಥಿನಿ ಹರ್ಷಿತ.ಎ. ಗಣಿತ ಶಾಸ್ತ್ರದಲ್ಲಿ ಪಿಎಚ್ಡಿ ಪದವಿಯನ್ನು ಪಡೆದುಕೊಂಡಿದ್ದಾರೆ. ಹರ್ಷೀತ.ಎ.ಸಲ್ಲಿಸಿದ ಗಣಿತ ಶಾಸ್ತ್ರದಲ್ಲಿನ `ಎ ಸ್ಟಡಿ ಆನ್ ಡಾಮಿನೇಷನ್. ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್’ ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ಎಜುಕೇಷನ್ ಪಿಹೆಚ್ಡಿ ಪದವಿ ನೀಡಿದೆ. ಮಣಿಪಾಲ್ಇನ್ಸಿಟ್ಯೂಟ್ ಆಫ್ ಟೆಕ್ನಾಲಜಿಯ ಗಣಿತ ಪ್ರಾಧ್ಯಾಪಕಿ ಡಾ.ಸಬಿತಾರವರ ಮಾರ್ಗದರ್ಶನದಲ್ಲಿ ಸಂಶೋಧನೆಕೈಗೊಂಡಿದ್ದರು. ಪಟ್ಟಣದ ಸಾಗರ ರಸ್ತೆಯ ನಿವಾಸಿ ಮತ್ತು ಸಾಗರದ ಸರ್ಕಾರಿ…
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್ಐ ಗಳ ವರ್ಗಾವಣೆ
ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪಿಎಸ್ಐ ಗಳ ವರ್ಗಾವಣೆ ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಆನಂದಪುರ ಠಾಣೆಗೆ ವರ್ಗಾವಣೆ – ನೂತನ ಪಿಎಸ್ಐ ಯಾರು ಗೊತ್ತಾ.!? ಈ ಸುದ್ದಿ ನೋಡಿ ಶಿವಮೊಗ್ಗ ಜಿಲ್ಲೆಯ ವಿವಿಧ ಠಾಣೆಗಳ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆಗೊಳಿಸಿ ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್ ಪೇಟೆಯ ಜನಸ್ನೇಹಿ ಪಿಎಸ್ಐ ಪ್ರವೀಣ್ ಎಸ್ ಪಿ ಯವರನ್ನು ಅನಂದಪುರ ಪೊಲೀಸ್…
RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ
RIPPONPETE | ಮುಸ್ಲಿಂ ಬಾಂಧವರಿಂದ ಸಂಭ್ರಮದಿಂದ ಬಕ್ರಿದ್ ಆಚರಣೆ ರಿಪ್ಪನ್ ಪೇಟೆ : ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಅತ್ಯಂತ ಸಂಭ್ರಮದಿಂದ ಬಕ್ರಿದ್ ಹಬ್ಬವನ್ನು ಆಚರಿಸಿದರು. ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಮೆಕ್ಕಾ ಮಸೀದಿ, ಮದೀನಾ ಮಸೀದಿ ಗಳಲ್ಲಿ ಮುಸಲ್ಮಾನ ಭಾಂಧವರು ಬಕ್ರೀದ್ ಪ್ರಾರ್ಥನೆ ಸಲ್ಲಿಸಿದರು. ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಧರ್ಮಗುರು ಮುನೀರ್ ಸಖಾಫೀ ಮಾತನಾಡಿ, ಪ್ರತಿಯೊಂದು ಧರ್ಮವನ್ನು ಗೌರವಿಸುವ ಮೂಲಕ ಸಹೋದರತ್ವದಿಂದ ಬಾಳ್ವೆ ನಡೆಸಬೇಕು .ಯಾವುದೇ ಧರ್ಮವನ್ನು ಅವಹೇಳನ ಮಾಡುವುದನ್ನು ಇಸ್ಲಾಂ ಖಂಡಿಸುತ್ತದೆ ಎಂದರು. ರಿಪ್ಪನ್ ಪೇಟೆಯಲ್ಲಿ…
ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್
ಶಾಂತಿ ಕದಡುವವರ ವಿರುದ್ದ ನಿರ್ದಾಕ್ಷಿಣ್ಯ ಕ್ರಮ – ಪಿಎಸ್ಐ ಪ್ರವೀಣ್ ಎಸ್ ಪಿ ಖಡಕ್ ವಾರ್ನಿಂಗ್ ರಿಪ್ಪನ್ಪೇಟೆ : ಕಾನೂನು ಎಲ್ಲರಿಗೂ ಒಂದೇ ಅದನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ. ಸಮಾಜದಲ್ಲಿ ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಬೇಕಾಗುವುದೆಂದು ಪಿಎಸ್ಐ ಎಸ್.ಪಿ.ಪ್ರವೀಣ್ ಕುಮಾರ್ ಖಡಕ್ ಎಚ್ಚರಿಕೆ ನೀಡಿದರು. ಪಟ್ಟಣದ ಠಾಣೆಯಲ್ಲಿ ಇಂದು ಬಕ್ರೀದ್ ಹಬ್ಬದ ಅಂಗವಾಗಿ ಕರೆಯಲಾಗಿದ್ದ ಸೌಹಾರ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪದೇಪದೆ ಅಪರಾಧ ಎಸಗುವವರ ವಿರುದ್ಧ ಕಾನೂನು ಪ್ರಕಾರ ಶಿಕ್ಷೆಗೆ…
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ
ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…
ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ
ಹೊಸನಗರದಲ್ಲಿ ತ್ರೈಮಾಸಿಕ ಕೆಡಿಪಿ ಸಭೆ | ವಿದ್ಯುತ್ ಸಮಸ್ಯೆ ಬಗೆಹರಿಸಲು ತುರ್ತು ಕ್ರಮ ಕೈಗೊಳ್ಳಿ ; ಶಾಸಕ ಬೇಳೂರು ಗೋಪಾಲಕೃಷ್ಣ ಹೊಸನಗರ ; ತಾಲೂಕಿನಲ್ಲಿ ಪದೇ ಪದೇ ವಿದ್ಯುತ್ ವ್ಯತ್ಯಯ ಆಗುತ್ತಿದೆ. ಜನಸಾಮಾನ್ಯರು ರೋಸಿ ಹೋಗಿದ್ದಾರೆ. ಇಂತಹ ತಂತ್ರಜ್ಞಾನದ ಬೆಳವಣಿಗೆಯ ಕಾಲದಲ್ಲಿಯೂ ವಿದ್ಯುತ್ ಇಲ್ಲದೇ ಜನರು ಪರದಾಡುವಂತಾಗಿರುವುದು ವಿಪರ್ಯಾಸ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಮೆಸ್ಕಾಂ ಕಾರ್ಯವೈಖರಿ ಕುರಿತು ಅಸಮಧಾನ ವ್ಯಕ್ತಪಡಿಸಿದರು. ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿ,ಹೊಸನಗರಕ್ಕೆ…