ಜಿಲ್ಲಾ ಸುದ್ದಿ:
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು
ಬೆಂಗಳೂರಿನಲ್ಲಿ ಮಳೆಯಿಂದ ಕಾರುಗಳಿಗೆ ಹಾನಿ: ಅರ್ಧ ರೇಟ್ ಗೆ ಕಾರು ಮಾರಾಟ ಮಾಡುತ್ತಿರುವ ಮಾಲೀಕರು ಗಳೂರು, ಮೇ 28: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸುತ್ತಿರುವ ಮುಂಗಾರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಬೆಂಗಳೂರಿನಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಆದರೆ, ಎರಡು ದಿನಗಳ ಹಿಂದೆ ಸುರಿದ ಮಳೆ ಮಹಾನಗರ ಬೆಂಗಳೂರಿನಲ್ಲಿ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿತ್ತು. ರಸ್ತೆಗಳ ಮೇಲೆ ನೀರು ನಿಂತಿತ್ತು. ವಾಹನ ಸವಾರರು ಪರದಾಡಿದ್ದರು. ಮನೆಯೊಳಗೆ ನೀರು ನುಗ್ಗಿತ್ತು. ಮನೆಗಳ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಸೇರಿದಂತೆ ಹಲವು…
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ
ರಿಪ್ಪನ್ ಪೇಟೆ ಪಟ್ಟಣದ ಸಮಗ್ರ ಅಭಿವೃದ್ದಿಗೆ ಪಣ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ಪಟ್ಟಣದ ಸಮಗ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ ಆ ನಿಟ್ಟಿನಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಿದ್ದು ಜನರು ಕೊಟ್ಟ ಅಧಿಕಾರದಿಂದ ಯಥೇಚ್ಛವಾಗಿ ಅನುದಾನ ತರಲು ಸಾಧ್ಯವಾಗಿದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಗ್ರಾಮ ಪಂಚಾಯತ್ ನಲ್ಲಿ ನಡೆಯುತಿದ್ದ ಸಾಮಾನ್ಯಸಭೆಗೆ ದಿಡೀರ್ ಭೇಟಿ ನೀಡಿದ ಅವರು ಜನಪ್ರತಿನಿಧಿಗಳ ಬಳಿ ಅಹವಾಲು ಕೇಳಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…
ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (29-05-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ…
ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ
ಎರಡು ವರ್ಷದ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾ.ಪಂ. ವ್ಯಾಪ್ತಿಯ ನಾಗರಹಳ್ಳಿಯ ಒಂದು ವರ್ಷದ ಹನ್ನೊಂದು ತಿಂಗಳಿನ ಪುಟಾಣಿ ಆರ್ಯನ್ ಇಂಡಿಯಾ ಬುಕ್ ಆಫ಼್ ರೆಕಾರ್ಡ್ ಗೆ ಸೇರ್ಪಡೆಯಾಗಿದ್ದಾನೆ. ಹುಂಚ ಗ್ರಾಪಂ ನ ನಾಗರಹಳ್ಳಿ ನಿವಾಸಿ ಚೇತನ್ ಕುಮಾರ್ ಮತ್ತು ದಿವ್ಯ ಅವರ ಪುತ್ರ 1.11 ವರ್ಷದ ಪುಟಾಣಿ ಆರ್ಯನ್ ಎನ್.ಸಿ. 38 ವಿವಿಧ ಬಗೆಯ ವಿಷಯಗಳನ್ನು ಗುರುತಿಸಿ ಜ್ಞಾಪಕ ಶಕ್ತಿಯಲ್ಲಿ ಇಂಡಿಯಾ ಬುಕ್…
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ
ಆಯನೂರಿನಲ್ಲಿ “ಚೈತನ್ಯ ಅನ್ನ” ಕಾರ್ಯಕ್ರಮ ಶಿವಮೊಗ್ಗ: ನಗರದ ಆಲ್ಕೊಳದಲ್ಲಿರುವ ದಿ ಶಿವಮೊಗ್ಗ ಮಲ್ಟಿಪರ್ಪಸ್ ಸೋಶಿಯಲ್ ಸರ್ವಿಸ್ ಸೊಸೈಟಿ(ರಿ) ಹಾಗೂ ಸ್ತ್ರೀಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಆಯನೂರು ಇವರ ಸಹಯೋಗದಲ್ಲಿ ಒಕ್ಕೂಟ ವ್ಯಾಪ್ತಿಯ ಸಂಘಗಳ ಸದಸ್ಯರ ಹುಟ್ಟುಹಬ್ಬದ ಪ್ರಯುಕ್ತ ಆಯನೂರು ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕರಿಗಾಗಿ ಚೈತನ್ಯ ಅನ್ನ ಕಾರ್ಯಕ್ರಮವನ್ನು ನಡೆಸಲಾಯಿತು. ಆಯನೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಗಂಗಾ ನಾಯ್ಕ ಮಾತನಾಡಿ, ಹಸಿದವರಿಗಾಗಿ ಅನ್ನ ಕಾರ್ಯಕ್ರಮ ಏರ್ಪಡಿಸಿರುವುದು ವಿನೂತನ ಕಾರ್ಯಕ್ರಮವಾಗಿದೆ. ಬಡಮಹಿಳೆಯರು ಇಂಥ ಕಾರ್ಯಕ್ರಮ ಆಯೋಜಿಸಿರುವುದು ವಿಶೇಷವಾಗಿದೆ….
RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ
RIPPONPETE | ಬಾರ್ ಮುಂಭಾಗದಲ್ಲಿ ಬೇಕಾಬಿಟ್ಟಿ ವಾಹನ ನಿಲುಗಡೆ – ಸಂಚಾರಕ್ಕೆ ಅಡೆತಡೆ ರಿಪ್ಪನ್ ಪೇಟೆ : ಪಟ್ಟಣದ ಸಮಗ್ರ ಅಭಿವೃದ್ದಿಯ ಚಿಂತನೆಯಲ್ಲಿ ಜನಪ್ರತಿನಿಧಿಗಳು ಕೋಟ್ಯಾಂತರ ರೂ ಅನುದಾನವನ್ನು ತಂದು ರಸ್ತೆಗಳನ್ನು ಅಗಲೀಕರಣಗೊಳಿಸುವ ಮೂಲಕ ಪಟ್ಟಣದ ವಾಹನ ಪಾರ್ಕಿಂಗ್ ಸಮಸ್ಯೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ಮುಂದಡಿಯಿಟ್ಟಿದ್ದಾರೆ. ಆದರೆ ತೀರ್ಥಹಳ್ಳಿ ರಸ್ತೆಯಲ್ಲಿರುವ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು ಬೇಕಾಬಿಟ್ಟಿ ವಾಹನ ನಿಲ್ಲಿಸುವ ಮೂಲಕ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದಾರೆ. ಹೌದು ತೀರ್ಥಹಳ್ಳಿ ರಸ್ತೆಯ ಖಾಸಗಿ ಬಾರ್ ಮುಂಭಾಗದಲ್ಲಿ ಮದ್ಯ ಪ್ರಿಯರು…
ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – 5 ಕ್ರಸ್ಟ್ ಗೇಟುಗಳಿಂದ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
ಮುಂಗಾರು ಆರಂಭದಲ್ಲೇ ತುಂಬಿದ ತುಂಗೆ – ೫ ಕ್ರಸ್ಟ್ ಗೇಟುಗಳಿಂದ ೨ ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಶಿವಮೊಗ್ಗ: ಮುಂಗಾರುಪೂರ್ವ ಮಳೆಗೆ ತುಂಗಾ ಅಣೆಕಟ್ಟು ಭರ್ತಿಯಾಗಿದ್ದು, ೫ ಕ್ರಸ್ಟ್ ಗೇಟುಗಳ ಮೂಲಕ ನದಿಗೆ ೨ ಸಾವಿರ ಕ್ಯೂಸೆಕ್ ನೀರು ಬಿಡಲಾಗಿದೆ. ಇದು ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಅಣೆಕಟ್ಟಾಗಿದೆ. ಅಣೆಕಟ್ಟೆಗೆ ೭,೫೦೦ ಕ್ಯೂಸೆಕ್ ನೀರು ಒಳ ಹರಿವು ಇರುವ ಕಾರಣ ಐದು ಕ್ರಸ್ಟ್ ಗೇಟ್ಗಳ ಮೂಲಕ ೨ ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ. ಇನ್ನೂ ಒಂದು ವಾರದಲ್ಲಿ…
ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ
ಸಾಗರದಲ್ಲಿ ಮೂರು ಮಕ್ಕಳಿಗೆ ಜನ್ಮ ನೀಡಿದ ತಾಯಿ ಶಿವಮೊಗ್ಗ ಜಿಲ್ಲೆಯ ಸಾಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಿಯೊಬ್ಬಳು ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ತಾಯಿ-ಮಕ್ಕಳು ಆರೋಗ್ಯವಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೂವರು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸೊರಬ ತಾಲ್ಲೂಕಿನ ಆಯಿಷಾ ಅವರು ತವರು ಮನೆ ಸಾಗರವಾದ ಕಾರಣ ಸಾರ್ವಜನಿಕ ಆಸ್ಪತ್ರೆಗೆ ಹೆರಿಗೆಗಾಗಿ ದಾಖಲಾಗಿದ್ದರು. ಇಂದು ಡಾ.ಪ್ರತಿಮಾ ಅವರು ಸಿಜೇರಿಯನ್ ಮೂಲಕ ಆಯಿಷಾಗೆ ಹೆರಿಗೆ ಮಾಡಿಸಿದ್ದಾರೆ. ಮೂವರು ಮಕ್ಕಳಿಗೆ ಆಯಿಷಾ ಜನ್ಮ ನೀಡಿದ್ದಾರೆ. ಒಂದು…
ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್
ರಾಜ್ಯದಲ್ಲಿ ಕೊರೊನ ಪ್ರಕರಣ ಹೆಚ್ಚಳ ; ಆಸ್ಪತ್ರೆಗೆ ದಾಖಲಾದವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ – ದಿನೇಶ್ ಗುಂಡೂರಾವ್ ಕರ್ನಾಟಕದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಉಸಿರಾಟ ಮತ್ತು ಹೃದಯ ಸಂಬಂಧಿ ಸಮಸ್ಯೆ ಇರುವವರಿಗೆ ಕಡ್ಡಾಯ ಕೋವಿಡ್ ಪರೀಕ್ಷೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಒಂದು ತಿಂಗಳಿಗೆ ಸಾಕಾಗುವಷ್ಟು ಪರೀಕ್ಷಾ ಕಿಟ್ಗಳನ್ನು ಸಂಗ್ರಹಿಸಲು ಆಸ್ಪತ್ರೆಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವ ದಿನೇಶ್ ಗುಂಡೂರಾವ್, ಒಂದು…
ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ
ಅದ್ದೂರಿಯಾಗಿ ಜರುಗಿದ ಕೆಂಚನಾಲ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಕೆಂಚನಾಲ : ಇಲ್ಲಿನ ಹಜರತ್ ಸೈಯದ್ ಚಮನ್ ಷಾ ವಲಿಯೂಲ್ಲಾ ದರ್ಗಾದ ಉರೂಸ್ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ಜರುಗಿತು. ಕೆಂಚನಾಲ ಸುನ್ನಿ ಜಾಮೀಯಾ ಮಸೀದಿಯ ಖತೀಬ್ ರವರು ದುವಾ ಮಾಡುವ ಮೂಲಕ ಸಂದಲ್ ಮೆರವಣಿಗೆಗೆ ಚಾಲನೆ ನೀಡಿದರು. ಕೆಂಚನಾಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂದಲ್ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ದಫ಼್ ಬಾರಿಸುವ ಮೂಲಕ ಹಜರತ್ ಸೈಯದ್ ಚಮನ್ ಷಾ ರವರ ಸಂದಲ್…