ಜಿಲ್ಲಾ ಸುದ್ದಿ:
ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ
ಶರಾವತಿ ಸಂತ್ರಸ್ತರ ತೋಟ ತೆರವು : ರೈತರ ಆಕ್ರೋಶ ಶಿವಮೊಗ್ಗ: ಶರಾವತಿ ಮುಳುಗಡೆ ಸಂತ್ರಸ್ಥ ರೈತರೊಬ್ಬರು ದಶಕಗಳಿಂದ ಸಾಗುವಳಿ ಮಾಡುತ್ತಿದ್ದ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಿರುವ ಘಟನೆ ತಾಲೂಕಿನ ಚಿತ್ರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಶರಾವತಿ ಮುಳುಗಡೆ ಸಂತ್ರಸ್ಥ ರೈತರಾದ ನಿಡುಗೋಡು ರಾಮಪ್ಪ ಹಾಗೂ ಹಾಡಿಕೇವಿ ಈಶ್ವರ ಎಂಬುವವರು ಸಾಗುವಳಿ ಮಾಡುತ್ತಿದ್ದ ಜಮೀನುಗಳನ್ನು ತೆರವು ಮಾಡಿದ್ದಾರೆ. ರೈತರಾದ ನಿಡುಗೋಡು ರಾಮಪ್ಪ ಎಂಬುವವರ ತಮ್ಮ ಸಾಗುವಳಿ ಭೂಮಿಯಲ್ಲಿ 350 ಅಡಿಕೆ ಗಿಡ,100 ಕಾಫಿ ಗಿಡ,25 ತಾಳೆ ಗಿಡ,50…
ರಿಪ್ಪನ್ ಪೇಟೆ – ರೋಟರಿ ಕ್ಲಬ್ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ
ರಿಪ್ಪನ್ ಪೇಟೆ – ರೋಟರಿ ಕ್ಲಬ್ನಲ್ಲಿ ಪದವಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ರಿಪ್ಪನ್ ಪೇಟೆ: ರಿಪ್ಪನ್ ಪೇಟೆ ರೋಟರಿ ಕ್ಲಬ್ ವತಿಯಿಂದ 2025–26ನೇ ಸಾಲಿನ ಪದವಿ ಸ್ವೀಕಾರ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ವಿತರಣಾ ಕಾರ್ಯಕ್ರಮವನ್ನು ಭವ್ಯವಾಗಿ ನಡೆಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಇಂಟರ್ನ್ಯಾಷನಲ್ ಡಿಸ್ಟ್ರಿಕ್ಟ್ 3182ರ ಗವರ್ನರ್ ರೋಟೇರಿಯನ್ ಬಿ.ಎಮ್. ಭಟ್ ಅವರು ಪದವಿ ಪ್ರಧಾನ ಅಧಿಕಾರಿಯಾಗಿ ಭಾಗವಹಿಸಿದರು. ಅವರು ಮಾತನಾಡಿ, “ರೋಟರಿ ಒಂದು ಸೇವಾ ಪರಂಪರೆ ಹೊಂದಿರುವ ಜಾಗತಿಕ ವೇದಿಕೆ. ಯುವ…
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಭೂಮಾರೆಡ್ಡಿ ವರ್ಗಾವಣೆ ಶಿವಮೊಗ್ಗ : ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಸೇವೆ ನಿರ್ವಹಿಸುತ್ತಿದ್ದ ಅನಿಲ್ ಕುಮಾರ್ ಭೂಮಾರೆಡ್ಡಿ ಇವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಗೊಳಿಸಿ ಇಲಾಖೆ ಆದೇಶಿಸಿದೆ. ಶಿವಮೊಗ್ಗ ಜಿಲ್ಲೆಗೆ 2023 ರಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ನೇಮಕರಾಗಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಲಿ ಇರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಹುದ್ದೆಗೆ ವರ್ಗಾವಣೆಗೊಂಡಿದ್ದಾರೆ. ಅನಿಲ್ ಕುಮಾರ್ 1994 ರಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಸೇರಿದ್ದರು. ಶಿವಮೊಗ್ಗ…
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ
RIPPONPETE | ಈದ್ ಮಿಲಾದ್ ಸಮಿತಿಯ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ , ಕಾರ್ಯದರ್ಶಿಯಾಗಿ ಮಿಸ್ಸಾಬ್ ಆಯ್ಕೆ ರಿಪ್ಪನ್ ಪೇಟೆ : ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿಯ ಆಶ್ರಯದಲ್ಲಿ ಆಯೋಜಿಸಲಾಗುವ ಈದ್ ಮಿಲಾದ್ ಕಾರ್ಯಕ್ರಮದ 2025ನೇ ಸಾಲಿನ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಫ಼್ಜಲ್ ಬ್ಯಾರಿ ಮತ್ತು ಕಾರ್ಯದರ್ಶಿಯಾಗಿ ಮಿಸ್ಸಾಬ್ ಅವರನ್ನು ಆಯ್ಕೆ ಮಾಡಲಾಗಿದೆ. ಶುಕ್ರವಾರ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಆವರಣದಲ್ಲಿ ಮಸೀದಿ ಸಮಿತಿಯ ಅಧ್ಯಕ್ಷ ಹಸನಬ್ಬ ಬಾವಬ್ಯಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯ ಆಯ್ಕೆ ಪ್ರಕ್ರಿಯೆ…
ಹೋಟೆಲ್ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ
ಹೋಟೆಲ್ ಗೆ ಗೂಗಲ್ ರಿವ್ಯೂ ಹೆಸರಲ್ಲಿ ಯುವಕನಿಗೆ 26 ಲಕ್ಷ ರೂ. ವಂಚನೆ ಗೂಗಲ್ನಲ್ಲಿ ಹೊಟೇಲ್ಗಳಿಗೆ ರಿವ್ಯೂ ಬರೆದರೆ ಹಣ ಸಂಪಾದಿಸಬಹುದೆಂದು ನಂಬಿಸಿ ಯುವಕನಿಗೆ 25.92 ಲಕ್ಷ ರೂ. ವಂಚಿಸಿರುವ ಬಗ್ಗೆ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ಟೆಲಿಗ್ರಾಂ ಗ್ರೂಪೊಂದಕ್ಕೆ ಸೇರಿದ್ದ ಶಿವಮೊಗ್ಗದ ಯುವಕನಿಗೆ ಹೊಟೇಲ್ ರಿವಿವ್ಯೂ ಮಾಡಿದರೆ ಅಧಿಕ ಲಾಭಾಂಶ ಸಂಪಾದಿಸಬಹುದು ಎಂದು ನಂಬಿಸಲಾಗಿತ್ತು. ರಿವ್ಯೂ ಬರೆಯಲು ಸೇರಿ ನಾನಾ ಕಾರಣಕ್ಕೆ ಯುವಕನಿಂದ ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ಆರೋಪಿಸಲಾಗಿದೆ. ಜೂ.11ರಿಂದ ಜು.8ರ ವರೆಗೆ ಯುವಕ ತನ್ನ ಖಾತೆಯಿಂದ…
ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ
ಕಿಮ್ಮನೆ ರತ್ನಾಕರ್ 74 ನೇ ಹುಟ್ಟುಹಬ್ಬ – ಕೇಕ್ ಕತ್ತರಿಸಿ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಗುರುವಾರ ೭೪ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.ಈ ಹಿನ್ನೆಲೆಯಲ್ಲಿ ಹಾಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೇಕ್ ಕತ್ತರಿಸಿ ಕಿಮ್ಮನೆ ರತ್ನಾಕರ್ ಅವರಿಗೆ ಆತ್ಮೀಯವಾಗಿ ಶುಭಾಶಯ ಕೋರಿದರು. ಈ ಕುರಿತು ಕೇಕ್ ಕತ್ತರಿಸಿದ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವ ಮಧು ಬಂಗಾರಪ್ಪ,…
PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್ಪೇಟೆಯಲ್ಲಿ ಸನ್ಮಾನ
PUC ಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಗೆ ರಿಪ್ಪನ್ಪೇಟೆಯಲ್ಲಿ ಸನ್ಮಾನ ರಿಪ್ಪನ್ಪೇಟೆ – ಹೊಸನಗರ ತಾಲೂಕಿನಲ್ಲಿ ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ ಶೈಕ್ಷಣಿಕ ಸಾಧನೆ ಮಾಡಿರುವ ಶುಭಾ ಆರ್. ರಾವ್ ಎಂಬ ವಿದ್ಯಾರ್ಥಿನಿಯನ್ನು ರಿಪ್ಪನ್ಪೇಟೆಯಲ್ಲಿ ಬ್ರಾಹ್ಮಣ ಸಮಾಜದ ವತಿಯಿಂದ ಸನ್ಮಾನಿಸಲಾಯಿತು. ಈ ಕಾರ್ಯಕ್ರಮವನ್ನು ಪಟ್ಟಣದ ಶ್ರೀರಾಮ ಮಂದಿರದಲ್ಲಿ ಬ್ರಾಹ್ಮಣ ಸಮಾಜ ಆಯೋಜಿಸಿತ್ತು. ಅಧ್ಯಕ್ಷತೆ ವಹಿಸಿದ್ದ ಸಮಾಜದ ಅಧ್ಯಕ್ಷ ಎಚ್.ಪಿ. ಸುರೇಶ್ ಅವರು ಮಾತನಾಡಿ ಸಾಧನೆಯ ಹಿಂದಿರುವ ಶ್ರಮವನ್ನು ಸಮಾಜವು ಗುರುತಿಸಬೇಕು. ವಿದ್ಯಾರ್ಥಿಗಳು…
ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ
ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…
ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ
ವ್ಯಕ್ತಿ ನಾಪತ್ತೆ – ಮಾಹಿತಿಗಾಗಿ ಮನವಿ ರಿಪ್ಪನ್ ಪೇಟೆ : ಮನೆಯಿಂದ ಹೊರಗೆ ಹೋದ ವ್ಯಕ್ತಿ ಮೂರು ದಿನಗಳಿಂದ ನಾಪತ್ತೆಯಾಗಿರುವ ಘಟನೆ ನಡೆದಿದೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಹಾರೋಹಿತ್ತಲು ಸಮೀಪದ ಸಾರಗನಜಡ್ಡು ಗ್ರಾಮದ ನಿವಾಸಿ ಬಸಪ್ಪ(69) ಎಂಬುವವರು 12-07-2025 ರಂದು ಮನೆಯಿಂದ ಹೊರಗೆ ಹೋದವರು ನಾಪತ್ತೆಯಾಗಿರುತ್ತಾರೆ. ಇವರ ಬಗ್ಗೆ ಮಾಹಿತಿ ತಿಳಿದವರು ಸ್ಥಳೀಯ ಪೊಲೀಸ್ ಠಾಣೆಗೆ ಅಥವಾ ಈ ಕೆಳಕಂಡ ದೂರವಾಣಿ ಸಂಖ್ಯೆ ಗೆ ಕರೆ ಮಾಡಲು ಪೊಲೀಸ್ ಪ್ರಕಟಣೆ ತಿಳಿಸಿದೆ. ಇವರು ಸುಮಾರು…
ಕೋಣಂದೂರು – ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ – ಪ್ರಕರಣ ದಾಖಲು
ಕೋಣಂದೂರಿನ ಕಾಳುಮೆಣಸು ವ್ಯಾಪಾರಿಗೆ ೫ ಲಕ್ಷ ರೂ. ವಂಚನೆ ಶಿವಮೊಗ್ಗ: ಕಾಳುಮೆಣಸು ಪೂರೈಸುವುದಾಗಿ ನಂಬಿಸಿ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರಿನ ಅಡಿಕೆ ಮಂಡಿಯ ಮಾಲೀಕರೊಬ್ಬರಿಗೆ ₹5 ಲಕ್ಷ ವಂಚನೆ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೋಣಂದೂರಿನ ಬಸವನ ಬೀದಿಯಲ್ಲಿ ಅಡಿಕೆ ಮಂಡಿ ನಡೆಸುತ್ತಿರುವ ವ್ಯಕ್ತಿಯು ಕಳೆದ ಒಂದು ವರ್ಷದಿಂದ ಈ ಇಬ್ಬರು ಆರೋಪಿಗಳೊಂದಿಗೆ ವ್ಯಾಪಾರ ಸಂಬಂಧ ಹೊಂದಿದ್ದವರು. ಜುಲೈ 8 ರಂದು ಆರೋಪಿಗಳು ಕಾಳುಮೆಣಸು…