ಜಿಲ್ಲಾ ಸುದ್ದಿ:
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಶನಿವಾರ ( ನಾಳೆ) ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜೂನ್ 05 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ…
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ
ಸಕಾಲದಲ್ಲಿ ಚಿಕಿತ್ಸೆ ಲಭಿಸದೇ ವ್ಯಕ್ತಿ ಸಾವು ಆರೋಪ – ಆಲುವಳ್ಳಿ ವೀರೇಶ್ ನೇತೃತ್ವದಲ್ಲಿ ಬಿಜೆಪಿ ಪಕ್ಷದ ವತಿಯಿಂದ ದಿಡೀರ್ ಪ್ರತಿಭಟನೆ ರಿಪ್ಪನ್ಪೇಟೆ;- ಪಟ್ಟಣದ ಪ್ರಾಥಮಿಕಆರೋಗ್ಯಕೇಂದ್ರದಲ್ಲಿ ಖಾಯಂ ವೈದ್ಯಾಧಿಕಾರಿಗಳು ಇಲ್ಲದೆ ಶುಕ್ರವಾರ ಬೆಳಗ್ಗೆ ಕಲ್ಲೂರು ಗ್ರಾಮದ ರಾಮಪ್ಪ ಎಂಬುವರಿಗೆ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ಲಭಿಸದೇ ಸಾವನ್ನಪ್ಪಿದ್ದಾರೆಂದು ಆರೋಪಿಸಿ ಬಿಜೆಪಿ ಪಕ್ಷದವರು ದಿಡೀರ್ ಪ್ರತಿಭಟನೆ ನಡೆಸಿದ ಘಟನೆ ನಡೆಯಿತು. ತಾಲ್ಲೂಕ್ ಪಂಚಾಯ್ತಿ ಮಾಜಿ ಅಧ್ಯಕ್ಷ ವಿರೇಶ್ ಆಲುವಳ್ಳಿ ನೇತೃತ್ವದಲ್ಲಿ ಆಸ್ಪತ್ರೆಗೆ ಬೇಟಿ ನೀಡಿ ಇರುವ ವೈದ್ಯರ ಬಳಿ ಚರ್ಚೆ ನಡೆಸಿ…
RIPPONPETE | ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು
ಭಾರಿ ಮಳೆಗೆ ಕುಸಿದ ಕೊಟ್ಟಿಗೆ – ಬಡ ವೃದ್ದೆಯ ಸ್ಥಿತಿ ಗಂಭೀರ , ಮೆಗ್ಗಾನ್ ಗೆ ದಾಖಲು ಗುರುವಾರ ಸಂಜೆ ಮನೆ ಹಿಂಭಾಗದಲ್ಲಿದ್ದ ದನದ ಕೊಟ್ಟಿಗೆಯಲ್ಲಿ ಕೆಲಸ ಮಾಡುತಿದ್ದಾಗ ಏಕಾಏಕಿ ಕೊಟ್ಟಿಗೆ ಕುಸಿದು ಬಿದ್ದ ಹಿನ್ನಲೆಯಲ್ಲಿ ವೃದ್ದೆ ಇಂದಿರಾ ಗಂಭೀರ ಗಾಯಗೊಂಡಿದ್ದಾರೆ.ರಸ್ತೆ ಸಂಪರ್ಕ ಸರಿಯಿಲ್ಲದ ಕಾರಣ ಸ್ಥಳೀಯರು ವೃದ್ದೆಯನ್ನು ಟ್ರ್ಯಾಕ್ಟರ್ ಮೂಲಕ ಆಸ್ಪತ್ರೆಗೆ ಕರೆ ತಂದಿದ್ದಾರೆ, ಶಿವಮೊಗ್ಗ ಜಿಲ್ಲಾದ್ಯಂತ ಭಾನುವಾರ ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಅಲ್ಲಲ್ಲಿ ಭಾರಿ ಅನಾಹುತಗಳಾಗಿವೆ.ಹೊಸನಗರ ತಾಲೂಕಿನ ನಂಜವಳ್ಳಿ ಗ್ರಾಮದಲ್ಲಿ ಭಾರಿ ಮಳೆಗೆ…
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…
RIPPONPETE | ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ
ಪಿಎಚ್ ಡಿ ಪದವಿ ಪಡೆದ ಯುವ ಪ್ರತಿಭೆಗೆ ಬ್ರಾಹ್ಮಣ ಸಂಘದಿಂದ ಸನ್ಮಾನ ರಿಪ್ಪನ್ ಪೇಟೆ : ಗಣಿತ ಶಾಸ್ತ್ರದಲ್ಲಿ ಪಿಎಚ್ಡಿ ಪದವಿಯನ್ನು ಪಡೆದ ರಿಪ್ಪನ್ಪೇಟೆ ಪಟ್ಟಣದ ವಿದ್ಯಾರ್ಥಿನಿ ಡಾ. ಹರ್ಷಿತ ಎ ರವರಿಗೆ ಪಟ್ಟಣದ ಬ್ರಾಹ್ಮಣ ಮಹಾಸಂಘದ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು. ಪಟ್ಟಣದ ಶ್ರೀ ರಾಮಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣಿತ ಶಾಸ್ತ್ರದಲ್ಲಿನ “ಎ ಸ್ಟಡಿ ಆನ್ ಡಾಮಿನೇಷನ್ ಸ್ಟ್ರೈಕಾಮ್ ಹ್ಯಾಮಿಂಗ್ ಅಂಡ್ ಟೋಪಾಲಾಜಿಕಲ್ ಇಂಡಿಸಸ್” ಎಂಬ ಸಂಶೋಧನ ಮಹಾ ಪ್ರಬಂಧಕ್ಕೆ ಮಣಿಪಾಲ್ ಆಕಾಡೆಮಿ ಆಫ್ ಹೈಯರ್ ಎಜುಕೇಷನ್…
ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ
ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರ ಸ್ಥಾಪಿಸಲು ಅರ್ಜಿ ಆಹ್ವಾನ ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಿಪ್ಪನ್ ಪೇಟೆ ಸೇರಿದಂತೆ ಜಿಲ್ಲೆಯ ವಿವಿಧೆಡೆ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರ ವಿವಿಧ ಇಲಾಖೆಗಳ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ…
ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು
ಜಾತಿ ಮತ ಪಂಥಗಳ ಭೇದವನ್ನು ಮರೆತು ಸದ್ಭಾವನೆಯಿಂದ ಎಲ್ಲರಲ್ಲೂ ಬೆರೆಯಬೇಕು – ಮಳಲಿ ಶ್ರೀಗಳು ರಿಪ್ಪನ್ ಪೇಟೆಯಲ್ಲಿ SSF ವತಿಯಿಂದ ಸೌಹಾರ್ದ ನಡಿಗೆ ರಿಪ್ಪನ್ ಪೇಟೆ : ಮುಸಲ್ಮಾನರ ನಿಷ್ಟೆ , ಕ್ರೈಸ್ತರ ಕರುಣೆ , ಹಿಂದೂಗಳ ಭಾವೈಕ್ಯತಯಿಂದ ಸಮಾಜದಲ್ಲಿ ನಿಜವಾದ ಸೌಹಾರ್ದತೆಯ ಭಾವನೆ ಬೆಳಸಲು ಸಾಧ್ಯ ಎಂದು ಮಳಲಿ ಮಠದ ಪೀಠಾಧ್ಯಕ್ಷರಾದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ SSF ರಾಜ್ಯ ಘಟಕದ ವತಿಯಿಂದ ಆಯೋಜಿಸಲಾದ ಸೌಹಾರ್ದ ನಡಿಗೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ…
DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು
DCC ಬ್ಯಾಂಕ್ ಹಗರಣ – ಆರ್ ಎಂ ಮಂಜುನಾಥ್ ಗೌಡಗೆ ಜಾಮೀನು ಮಂಜೂರು ನಕಲಿ ಚಿನ್ನ ಅಡವಿಟ್ಟು 63 ಕೋಟಿ ರೂಪಾಯಿ ಸಾಲ ಕೊಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮಾಜಿ ಅಧ್ಯಕ್ಷ ಮಂಜುನಾಥ್ ಗೌಡಗೆ ನ್ಯಾಯಾಲಯ ಜಾಮೀನು ನೀಡಿದೆ. ಡಿಸಿಸಿ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ಐ.ಡಿ. (ಜಾರಿ ನಿರ್ದೇಶನಾಲಯ) ವಶದಲ್ಲಿದ್ದ ಕಾಂಗ್ರೆಸ್ ಮುಖಂಡ ಆರ್.ಎಂ. ಮಂಜುನಾಥ್ ಗೌಡ ಅವರಿಗೆ ಕೊನೆಗೂ ನ್ಯಾಯಾಲಯದ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ…
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ
ಪ್ರಾಮಾಣಿಕ ಶಿಕ್ಷಕ ವೃತ್ತಿಗೆ ನಿವೃತ್ತಿ ಇಲ್ಲ – ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಅರಸಾಳು ಪ್ರೌಢಶಾಲೆಯ ನಿವೃತ್ತ ಶಿಕ್ಷಕಿ ಅನ್ನಪೂರ್ಣ ರವರಿಗೆ ಸನ್ಮಾನ ಕಾರ್ಯಕ್ರಮ ರಿಪ್ಪನ್ ಪೇಟೆ : ಗುರುಗಳಿಗೆ ಈ ಸಮಾಜದಲ್ಲಿ ಉತ್ತಮ ಸ್ಥಾನ ಇದೆ. ಹರ ಮುನಿದರು ಗುರು ಹರಸುವನು, ಕಾಯುವವನು. ಗುರಿಯ ಮುಂದೆ, ಗುರು ಇದ್ದಾಗ ಆ ಕಾರ್ಯ ಸಫಲವಾಗುವುದು. ಹಾಗಾಗಿ ಶಿಕ್ಷಣ ಇಲಾಖೆಯ ಯಶಸ್ವಿ ಕಾರ್ಯಕ್ರಮದ ಹಿಂದೆ ಶಿಕ್ಷಕರ ಛಲ ಮತ್ತು ಆತ್ಮ ವಿಶ್ವಾಸ ಇದೆ ಎಂದು ಹೊಸನಗರ ತಾಲೂಕ್ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ ಹೇಳಿದರು….
ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ
ಸೋರುತಿದೆ ರಾಷ್ಟ್ರಕವಿ ಕುವೆಂಪು ಓದಿದ ಶಾಲೆ ತೀರ್ಥಹಳ್ಳಿ : ರಾಷ್ಟ್ರಕವಿ ಕುವೆಂಪು ಅವರು ಓದಿದ ಶಾಲೆ ಈಗ ನಿರ್ವಹಣೆ ಇಲ್ಲದೆ ಸೋರುತ್ತಿದೆ. ಶತಮಾನದ ಇತಿಹಾಸ ಇದ್ದಂತಹ ಶಾಲೆಯಲ್ಲಿ ಈಗ ಸಂಪೂರ್ಣ ನೀರಿನ ಹೊಳೆ ಹರಿಯುತ್ತಿದೆ. ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಅಂಚೆ ಕಛೇರಿ ಪಕ್ಕದಲ್ಲಿ ಇರುವ ಶತಮಾನದ ಇತಿಹಾಸ ಹೊಂದಿದ, ಅದರಲ್ಲೂ ರಾಷ್ಟ್ರ ಕವಿ ಕುವೆಂಪು ಅವರು ಓದಿದ್ದ ಶಾಲೆಯಲ್ಲಿ ಸರಿಯಾದ ನಿರ್ವಹಣೆ ಇಲ್ಲದೆ ಮಳೆಗಾಲದಲ್ಲಿ ಸೋರುತ್ತಿದೆ. ಶಾಲೆಯಲ್ಲಿ…