ಜಿಲ್ಲಾ ಸುದ್ದಿ:
ಇಂದಿನಿಂದ (ಮಾ.19 ರಿಂದ 24 ರವರೆಗೆ) ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ
ಇಂದಿನಿಂದ (ಮಾ.19 ರಿಂದ 24 ರವರೆಗೆ) ಹೊಂಬುಜಾ ಅತಿಶಯ ಶ್ರೀಕ್ಷೇತ್ರದಲ್ಲಿ ವಾರ್ಷಿಕ ರಥಯಾತ್ರಾ ಮಹೋತ್ಸವ ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ ಯಕ್ಷಿ ಜಗನ್ಮಾತೆ ಶ್ರೀ ಪದ್ಮಾವತಿ ದೇವಿ ಜಿನಮಂದಿರಗಳಿಗೆ 1300 ವರ್ಷಗಳ ಅಪೂರ್ವ ಇತಿಹಾಸವಿದೆ. ಕಾಲಕಾಲಕ್ಕೆ ಪೀಠಧೀಶರಾಗಿದ್ದ ಭಟ್ಟಾರಕ ಪರಂಪರೆಯ ಮಹಾಸ್ವಾಮಿಗಳವರ ಕ್ಷೇತ್ರದಲ್ಲಿ ಜೀರ್ಣೋದ್ಧಾರ, ಸಂರಕ್ಷಣೆ ಮತ್ತು ಜೈನ ಧರ್ಮ ಪ್ರಸಾರದ…
RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ
RIPPONPETE | ವಿನಾಯಕ ಸರ್ಕಲ್ ನ್ನು ಸ್ಮಾರ್ಟ್ ಅಂಡ್ ಹೈಟೆಕ್ ಆಗಿ ಅಭಿವೃದ್ದಿಪಡಿಸಲಾಗುವುದು – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್ಪೇಟೆ;-ರಾಜ್ಯದ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಜೆಟ್ನಲ್ಲಿ 4.09 ಲಕ್ಷ ಒಂಬತ್ತು ಸಾವಿರ ಕೋಟಿ ಬಜೆಟ್ ಮಂಡಿಸಿದ್ದು ಇದರಿಂದ ಆಭಿವೃದ್ದಿಗೆ ಅನುದಾನದ ಹೊಳೆಯೇ ಹರಿದು ಬರಲಿದ್ದು ಶೀಘ್ರದಲ್ಲಿ ರಿಪ್ಪನ್ಪೇಟೆಯ ವಿನಾಯಕ ವೃತ್ತವನ್ನು ಸ್ಮಾರ್ಟ್ ಅಂಡ್ ಹೈಟೆಕ್ ಸರ್ಕಲ್ ಆಗಿ ಪರಿವರ್ತನೆ ಮಾಡುವುದಾಗಿ ಹೇಳಿದರು. ಖಾಸಗಿ ಕಾರ್ಯಕ್ರಮದ ನಿಮಿತ್ತ ಇಂದು ರಿಪ್ಪನ್ಪೇಟೆಗೆ ಭೇಟಿ ನೀಡಿ ಮಾಧ್ಯಮ ಪ್ರತಿನಿಧಿಯೊಂದಿಗೆ ಮಾತನಾಡಿ…
ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ
ಅಂಚೆ ಕಚೇರಿಯಲ್ಲಿ ರೈಲ್ವೆ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಆರಂಭ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತು ಉಡುಪಿ ಜಿಲ್ಲೆಯ ಕೊಲ್ಲೂರಿನ ಮುಖ್ಯ ಅಂಚೆ ಕಚೇರಿಯಲ್ಲಿ ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯವನ್ನು ಸಾರ್ವಜನಿಕರಿಗೆ ನೀಡಲಾಗಿದೆ. ಈ ಸೌಲಭ್ಯವು ತೀರ್ಥಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಜನರಿಗೆ ಅನುಕೂಲವಾಗಲಿದೆ. ರೈಲ್ವೆ ಪ್ರಯಾಣಿಕರು ತಮ್ಮ ಟಿಕೆಟ್ಗಳನ್ನು ಸುಲಭವಾಗಿ ಮತ್ತು ಅನುಕೂಲಕರವಾಗಿ ಬುಕ್ ಮಾಡಲು ಸಾಧ್ಯವಾಗುತ್ತದೆ. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಮನವಿ ಮಾಡಿದ್ದಾರೆ. ಒಂದು ವೇಳೆ…
ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು
ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…
ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು
ಮನೆಗೆ ನುಗ್ಗಿ ಚಿನ್ನದ ಓಲೆ, ಹಣ ತಗೊಂಡು ಹೋದ ಮೈಕ್ರೋ ಫೈನಾನ್ಸ್ ಸಿಬ್ಬಂದಿ | ದೂರು ದಾಖಲು ಕರ್ನಾಟಕದಲ್ಲಿ ಸುಗ್ರೀವಾಜ್ಞೆ ಜಾರಿಯಾದರೂ ಮೈಕ್ರೋ ಫೈನಾನ್ಸ್ (Micro Finance) ಕಿರುಕುಳ ನಿಲ್ಲುತ್ತಿಲ್ಲ. ಕಂತು ವಸೂಲಿಗೆ ಬಂದಿದ್ದ ಮೈಕ್ರೋ ಫೈನಾನ್ಸ್ ಸಿಬ್ಬಂದಿಯಿಂದ ಮನೆಯಲ್ಲಿದ್ದ ಚಿನ್ನದ ಓಲೆ, ಹಣ ತೆಗೆದುಕೊಂಡು ಹೋಗಿರುವಂತಹ ಘಟನೆ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. ಈ ಬಗ್ಗೆ ಫೈನಾನ್ಸ್ ಸಿಬ್ಬಂದಿ ವಿರುದ್ಧ ಸಾಲ (loan) ಮಾಡಿದ್ದ ಸಂಪವ್ವ ತಳಗಟ್ಟಿ ದೂರು ನೀಡಿದ್ದು, ರಟ್ಟಿಹಳ್ಳಿ ಠಾಣೆಯಲ್ಲಿ ಕೇಸ್ ದಾಖಲಾಗಿದೆ….
ಬಿಜೆಪಿಯವರಿಂದ ಹಲಾಲ್ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯವರಿಂದ ಹಲಾಲ್ಕೋರ್ ಬುದ್ದಿ ಪ್ರದರ್ಶನ : ಶಾಸಕ ಬೇಳೂರು ಸಾಗರ : ಕೆಜೆಪಿ ಕಟ್ಟಿದಾಗ ಯಡಿಯೂರಪ್ಪ ಅಲ್ಪಸಂಖ್ಯಾತರಿಗೆ ಹೆಚ್ಚು ಅನುದಾನ ಕೊಡುತ್ತೇನೆ ಎಂದು ಘೋಷಣೆ ಮಾಡಿರಲಿಲ್ಲವೇ. ಇದೀಗ ಬಜೆಟ್ನ ಶೇ. 1ರಷ್ಟನ್ನು ಅಲ್ಪಸಂಖ್ಯಾತರ ಶ್ರೇಯೋಭಿವೃದ್ದಿಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಿದರೆ ಬಿಜೆಪಿಯವರು ಹಲಾಲ್ ಬಜೆಟ್ ಎಂದು ಟೀಕಿಸುವ ಮೂಲಕ ತಮ್ಮ ಹಲಾಲ್ಕೋರ್ ಬುದ್ದಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲ್ಲೂಕಿನ ಬೆಳಂದೂರು-ಚನ್ನಾಪುರ ಗ್ರಾಮದ ಸಂಪರ್ಕ…
ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು
ತಂದೆ-ತಾಯಿಯ ಪಾದಪೂಜೆ ಮಾಡಿದರೆ ಸಾಕು ಪುಣ್ಯ ಪ್ರಾಪ್ತಿಯಾಗುವುದು ; ಮೂಲೆಗದ್ದೆ ಶ್ರೀಗಳು ರಿಪ್ಪನ್ಪೇಟೆ ; ಭಗವಂತನಲ್ಲಿ ಭಕ್ತಿಯಿಂದ ಪ್ರಾರ್ಥಿಸುವುದರೊಂದಿಗೆ ತಾಯಿ-ತಂದೆಯವರು ಸಂಸ್ಕಾರ ಭರಿತರಾದರೆ ಮಕ್ಕಳು ಸಹ ಸಂಸ್ಕಾರ ಭರಿತರಾಗಲು ಸಾಧ್ಯವೆಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಅಭಿನವ ಚನ್ನಬಸವ ಮಹಾಸ್ವಾಮೀಜಿ ಹೇಳಿದರು. ಕಾರಗೋಡು ಗ್ರಾಮದ ಶ್ರೀ ಕಲಾನಾಥೇಶ್ವರ ದೇವಸ್ಥಾನದ ಪ್ರಥಮ ವರ್ಷದ ಪ್ರತಿಷ್ಟಾ ವರ್ಧಂತೋತ್ಸವ ಧಾರ್ಮಿಕ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿ, ಇತ್ತೀಚೆಗೆ ಭಾರತ ದೇಶದಲ್ಲಿ ದೊಡ್ಡ ಕ್ರಾಂತಿಯಂತಾದ ಮಹಾನ್ ಕುಂಭ ಮೇಳದಲ್ಲಿ ಭಾಗವಹಿಸಿ ಗಂಗಾ, ಯಮುನಾ,…
ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ
ರಿಪ್ಪನ್ ಪೇಟೆಯಲ್ಲಿ ಹರತಾಳು ಹಾಲಪ್ಪರವರ ಹುಟ್ಟು ಹಬ್ಬದ ಸಂಭ್ರಮ ರಿಪ್ಪನ್ ಪೇಟೆ : ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಮಂತ್ರಿ ಹರತಾಳು ಹಾಲಪ್ಪರವರ 63ನೇ ಹುಟ್ಟು ಹಬ್ಬವನ್ನು ಶುಕ್ರವಾರ ಪಟ್ಟಣದ ಬಿಜೆಪಿ ಕಾರ್ಯಕರ್ತರು ಹಾಗೂ ಹರತಾಳು ಹಾಲಪ್ಪರ ಅಭಿಮಾನಿಗಳು ಸಡಗರ ಹಾಗೂ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ಸರ್ವ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಹರತಾಳು ಹಾಲಪ್ಪರ ಹುಟ್ಟು ಹಬ್ಬದ ಅಂಗವಾಗಿ ವಿಶೇಷ ಪೂಜೆಯನ್ನು ಏರ್ಪಡಿಸಲಾಗಿತ್ತು, ಸಂಜೆ ಹಿಂದೂ ಮಹಾಸಭಾ ವೇದಿಕೆಯಲ್ಲಿ ನಡೆದ ಹುಟ್ಟು ಹಬ್ಬದ ಸಮಾರಂಭದಲ್ಲಿ ಪೌರ…
ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ
ಪ್ರೋ. ಪದ್ಮಾಶೇಖರ್ ರವರ “ಸಿದ್ಧಾಂತ ಕೀರ್ತಿ” ಪ್ರಶಸ್ತಿ ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2025ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕುಲಪತಿ, ಸಾಹಿತಿ ಹಾಗೂ ಶಿಕ್ಷಣ ತಜ್ಞರಾದ ಪ್ರೋ. ಪದ್ಮಾಶೇಖರ್ ಇವರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿರುತ್ತಾರೆ. ಈ ಪ್ರಶಸ್ತಿಯನ್ನು ವಾರ್ಷಿಕ ಮಹಾರಥಯಾತ್ರಾ ಮಹೋತ್ಸವದ ಮುನ್ನಾ ದಿನವಾದ 21-03-2025ನೇ ಶುಕ್ರವಾರದಂದು ನಡೆಯುವ ಧಾರ್ಮಿಕ ಸಭೆಯಲ್ಲಿ ನೀಡಲಾಗುವುದು. ಇವರು ಕವಯತ್ರಿ, ಲೇಖಕಿ, ಸಂಶೋಧಕಿ, ಪ್ರಾಧ್ಯಾಪಕಿ, ದಕ್ಷ ಆಡಳಿತಗಾರ್ತಿ, ವಿಮರ್ಶಕಿ ಹಾಗೂ ಮಹಿಳಾಪರ ಹೋರಾಟಗಾರ್ತಿ ಆಗಿ ಬಹುಮುಖ…
ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ
ತೀರ್ಥಹಳ್ಳಿಯ ನೂತನ ಡಿವೈಎಸ್ ಪಿ ಆಗಿ ಅರವಿಂದ್ ಕಲಗುಜ್ಜಿ ಶಿವಮೊಹ್ಗ: ಡಿವೈಎಸ್ಪಿ ಗಜಾನನ ವಾಮನ ಸುತಾರ ವರ್ಗಾವಣೆಯಿಂದ ಖಾಲಿ ಇದ್ದ ತೀರ್ಥಹಳ್ಳಿ ಡಿವೈಎಸ್ ಪಿ ಸ್ಥಾನಕ್ಕೆ ಕಾರ್ಕಳದಲ್ಲಿ ಡಿವೈಎಸ್’ಪಿ ಯಾಗಿ ಕಾರ್ಯ ನಿರ್ವಹಿಸುತಿದ್ದ ಅರವಿಂದ್ ಕಲಗುಜ್ಜಿ ರವರನ್ನು ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತೀರ್ಥಹಳ್ಳಿಯಲ್ಲಿ ಈ ಹಿಂದೆ ಇದ್ದ ಡಿವೈಎಸ್ ಪಿ ಗಜಾನನ ವಾಮನ ಸುತಾರ ಅವರನ್ನು ತೀರ್ಥಹಳ್ಳಿಯಿಂದ ಬಾಗಲಕೋಟೆಗೆ ವರ್ಗಾವಣೆ ಮಾಡಿ ಸರ್ಕಾರ ಅದೇಶಿಸಿತ್ತು. ಸುಮಾರು ಮೂರು ತಿಂಗಳ ನಂತರ ನೂತನ ಡಿವೈಎಸ್’ಪಿ ಯನ್ನು ನೇಮಕಗೊಳಿಸಿ…