ಜಿಲ್ಲಾ ಸುದ್ದಿ:
RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ
RIPPONPETE | ರಾಜ್ಯ ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಶಮನಗೊಳಿಸುವಂತೆ ರಾಷ್ಟ್ರಾಧ್ಯಕ್ಷರಿಗೆ ಪತ್ರ ರಿಪ್ಪನ್ಪೇಟೆ : ರಾಜ್ಯ ಬಿಜೆಪಿ ಘಟಕದಲ್ಲಿ ಆಂತರಿಕ ಭಿನ್ನಮತವನ್ನು ಆದಷ್ ಶಮನಗೊಳಿಸಲು ಪಕ್ಷದ ವರಿಷ್ಠರು ಮುಂದಾಗಬೇಕು’ ಎಂದು ಆಗ್ರಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬಿಜೆಪಿ ಪಕ್ಷದ ಜಿಲ್ಲಾ ಹಾಗೂ ತಾಲೂಕ್ ಮಟ್ಟದ ಮುಖಂಡರು ಪತ್ರ ಬರೆಯಲು ಮುಂದಾಗಿದ್ದೇವೆ ಎಂದು ಮಹಾಶಕ್ತಿ ಕೇಂದ್ರದ ಮಾಜಿ ಅಧ್ಯಕ್ಷ ಎಂ ಬಿ ಮಂಜುನಾಥ್ ಹಾಗೂ ಜಿಲ್ಲಾ ಮುಖಂಡ ನಾಗೇಂದ್ರ ಕಲ್ಲೂರು ಜಂಟಿ ಪತ್ರೀಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ. ಭಾನುವಾರ ನಡೆದ ರಿಪ್ಪನ್ಪೇಟೆಯಲ್ಲಿ…
ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ,ಸಾಂತ್ವಾನ
ರಿಪ್ಪನ್ಪೇಟೆ : ಹಲವಾರು ದಿನಗಳ ಹಿಂದೆ ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಆಲವಳ್ಳಿ ಗ್ರಾಮದ ಕಮದೂರು ಬಳಿ ಸ.ನಂ. 115ರ ಜಮೀನಿನಲ್ಲಿ ಕಾಡಾನೆಗಳು ದಾಳಿ ಮಾಡಿ ಬಾಳೆ ಮತ್ತು ಅಡಿಕೆ ಬೆಳೆ ಧ್ವಂಸಗೊಳಿಸಿದ್ದು ಸ್ಥಳಕ್ಕೆ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ ನಡೆಸಿ ಜಮೀನಿನ ಮಾಲೀಕರಿಗೆ ವೈಯಕ್ತಿಕ ನೆರವು ನೀಡುವ ಮೂಲಕ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ಒಂದು ತಿಂಗಳುಗಳಿಂದ ಈ ಭಾಗದಲ್ಲಿ ಆನೆಗಳ ಉಪಟಳ ಹೆಚ್ಚಾಗಿದ್ದು ಒಂದು ಕಡೆಯಿಂದ ಮೊತ್ತೊಂದು ಭಾಗಕ್ಕೆ ಅನೆಗಳು…
ಅಡಿಕೆ ಬೆಳೆಗಾರರಿಗೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್
ಅಡಿಕೆ ಬೆಳೆಗಾರರಿಗೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಗುಡ್ ನ್ಯೂಸ್ ಅಡಿಕೆ ಆಮದು ತಡೆಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ನಡೆದ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಡಿಕೆಗೆ ವೈಜ್ಞಾನಿಕ ಬೆಲೆ ದೊರೆಯುವಂತೆ ಮಾಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ. ಬೆಳೆಗೆ ತಕ್ಕಂತೆ ಬೆಲೆ ನೀಡಬೇಕಿದ್ದು, ಬೆಳೆ ಹಾನಿಯಾದಾಗ ಪರಿಹಾರ ನೀಡಬೇಕು. ರೈತರು ಬೆಳೆದ…
ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ
ಅಬಾಕಸ್ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ರಿಪ್ಪನ್ಪೇಟೆ ವಿದ್ಯಾರ್ಥಿಗಳ ಅದ್ವಿತೀಯ ಸಾಧನೆ ರಿಪ್ಪನ್ಪೇಟೆ : ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಷ್ಟ್ರ ಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪಟ್ಟಣದ “ಐಡಿಯಲ್ ಪ್ಲೇ ಅಬಾಕಸ್ ” ಶಾಖೆಯ 17 ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಅನೇಕ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. 12- 01-2025 ರಂದು ಬೆಂಗಳೂರಿನ ವೈಟ್ ಫೆದರ್ ಹಾಲ್ ನಲ್ಲಿ ನಡೆದ ರಾಷ್ಟ್ರಮಟ್ಟದ ಅಬಾಕಸ್ ಕಾಂಪಿಟೇಶನ್ ನಲ್ಲಿ 15 ರಾಜ್ಯಗಳಿಂದ ಸುಮಾರು 3 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ರಿಪ್ಪನ್ ಪೇಟೆಯ…
ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರ ಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ
ಅಡಿಕೆ ಬೆಳೆಗಾರರ ಸಮಸ್ಯೆಗೆ ಪರಿಹಾರಕಲ್ಪಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ: ಹರತಾಳು ಹಾಲಪ್ಪ ಜನವರಿ 18ರಂದು ಸಾಗರದಲ್ಲಿ ಅಡಿಕೆ ಬೆಳೆಗಾರರ ಬೃಹತ್ ಸಮಾವೇಶ. ರಿಪ್ಪನ್ಪೇಟೆ;- ಜನವರಿ 18ರಂದು ಸಾಗರ ಸಂತೆ ಮೈದಾನದಲ್ಲಿಏರ್ಪಡಿಸಲಾಗಿದ್ದು ಆಡಿಕೆ ಬೆಳೆಗಾರರ ಸಮಾವೇಶಕ್ಕೆ ಸಾಗರ-ಹೊಸನಗರತಾಲ್ಲೂಕಿನಅಡಿಕೆ ಬೆಳೆಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಡಿಕೆ ಬೆಳೆಗಾರ ಸಮಸ್ಯೆ ಪರಿಹಾರಕ್ಕೆ ಬೆಂಬಲಿಸುವಂತೆ ಮಾಜಿ ಮಂತ್ರಿ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ಪಟ್ಟಣದ ರಾಮಮಂದಿರದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಲೆನಾಡಿನ ವ್ಯಾಪ್ತಿಯಲ್ಲಿ ಹವಾಮಾನ ವೈಪರಿತ್ಯದಿಂದಾಗಿಆಡಿಕೆ ಬೆಳೆಯಲ್ಲಿ…
ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ
ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…
ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ
ಗ್ರಾಮೀಣ ಪ್ರದೇಶದ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿದೆ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ಪೇಟೆ : ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಆದರೂ ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯಿತ್ ವ್ಯಾಪ್ತಿಯ ಚಂದವಳ್ಳಿ ಸರ್ಕಾರಿ ಪ್ರಾಥಮಿಕ…
ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ
ಸಿಗಂಧೂರಿನಲ್ಲಿ ಸಂಭ್ರಮದ ಸಂಕ್ರಮಣ: ಹರಿದು ಬಂದ ಜನಸಾಗರ ತುಮರಿ : ಸಮೀಪದ ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ಮಕರ ಸಂಕ್ರಮಣ ಜಾತ್ರಾ ಮಹೋತ್ಸವದ ಮೊದಲ ದಿನ ದಿನ ದೇವಿಗೆ ವಿಶೇಷ ಪೂಜೆ ನೇರವೇರಿತು. ಮಂಗಳವಾರ ಬೆಳಿಗ್ಗೆ 5ರಿಂದ ದೇವಿಗೆ ಪಂಚಾಮೃತ ಅಭಿಷೇಕ. ಮಹಾಭಿಷೇಕ. ಅರ್ಚನೆ ದೇವಿಯ ಮೂಲ ಸ್ಥಾನದಲ್ಲಿ ನವ ಚಂಡಿಕಾ ಹೋಮ ನೆರವೇರಿತು. ಹೋಮ ಹವನ ಪೂರ್ವಹುತಿಯಲ್ಲಿ ಧರ್ಮಾಧಿಕಾರಿ ಡಾ ಎಸ್ ರಾಮಪ್ಪನವರು ಕುಟುಂಬ ಸಮೇತರಾಗಿ ಭಾಗವಹಿಸಿ, ವಿವಿಧ ಧಾರ್ಮಿಕ ವಿಧಿ ವಿಧಾನಗಳಲ್ಲಿ ಭಾಗಿಯಾದರು. ಮೊದಲ ದಿನದ…
ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ
ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಬದಲಾವಣೆ – ಶಾಸಕ ಬೇಳೂರು ಗೋಪಾಲಕೃಷ್ಣ ಸಂಕ್ರಾಂತಿಯ ನಂತರ ಸಚಿವ ಸಂಪುಟದಲ್ಲಿ ಎರಡು ಮೂರು ಸ್ಥಾನ ಬದಲಾವಣೆಗಳು ಆಗುವ ನಿರೀಕ್ಷೆಯಿದೆ ಎಂದು ಶಾಸಕ ಗೋಪಾಲ ಕೃಷ್ಣ ಬೇಳೂರು ಹೇಳಿದರು. ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಿಗಂದೂರು ದೇವಿ ದರ್ಶನ ಮಾಡಿಕೊಂಡು ಬಂದ ಶಾಸಕರು ಮಾಧ್ಯಮಗಳ ಜೊತೆ ಮಾತನಾಡಿ, ಸಂಕ್ರಾಂತಿ ಹಬ್ಬದ ನಂತರ ಯಾವುದೇ ಬದಲಾವಣೆಗಳು ಇಲ್ಲ. ಬದಲಿಗೆ ನಾಗೇಂದ್ರ ಅವರ ಸ್ಥಾನ ಸೇರಿದಂತೆ ಎರಡು ಮೂರು ಸಚಿವರ ಸ್ಥಾನ ಬದಲಾಗುವ ನಿರೀಕ್ಷೆ ಇದೆ…
ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”.
ರಿಪ್ಪನ್ ಪೇಟೆಯಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ “ಸಂಕ್ರಾಂತಿ ಉತ್ಸಾಹ ಹಾಗೂ ಭಜನೆ”. ರಿಪ್ಪನ್ ಪೇಟೆ : ಪಟ್ಟಣದ ಶ್ರೀ ಕಾಲಭೈರವೇಶ್ವರ ಮಹಿಳಾ ಒಕ್ಕಲಿಗರ ವೇದಿಕೆ ಇವರ ಆಶ್ರಯದಲ್ಲಿ ಸಂಕ್ರಾಂತಿ ಹಬ್ಬದ ಪ್ರಯುಕ್ತ ಸಂಕ್ರಾಂತಿ ಉತ್ಸವ ಹಾಗೂ ಬಜನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ವೇದಿಕೆಯ ಅಧ್ಯಕ್ಷ ಸುಮಂಗಳ ಹರೀಶ್ ಹಾಗೂ ಕಾರ್ಯದರ್ಶಿ ರೂಪ ಶಂಕ್ರಪ್ಪ ತಿಳಿಸಿದ್ದಾರೆ. ಸೋಮವಾರ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಜನವರಿ 14 ಮಂಗಳವಾರ ಸಂಜೆ 4 ಗಂಟೆಗೆ ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ರಿಪ್ಪನ್ ಪೇಟೆ…