ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್
ಬಿಜೆಪಿಯವರ ದುಂಡಾವರ್ತನೆಗೆ ಹೆದರುವುದಿಲ್ಲ : ಧನಲಕ್ಷ್ಮಿ ಗಂಗಾಧರ್ ರಿಪ್ಪನ್ ಪೇಟೆ: ಪಟ್ಟಣದ ಗ್ರಾಮ ಪಂಚಾಯಿತಿಯ ಬಿಜೆಪಿಯ ಸದಸ್ಯರು ಗಳು ಗ್ರಾಮ ಪಂಚಾಯಿತಿಯ ಸಾಮಾನ್ಯ ಸಭೆಯಲ್ಲಿ ಗ್ರಾಮದ ಅಭಿವೃದ್ಧಿಯ ಕುರಿತು ಚರ್ಚಿಸುವುದನ್ನು ಬಿಟ್ಟು, ದುಂಡಾ ವರ್ತನೆಯ ಮೂಲಕ ಗ್ರಾಮ ಸಭೆಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಧನಲಕ್ಷ್ಮಿ ಗಂಗಾಧರ್ ಹೇಳಿದರು. ಪಟ್ಟಣದ ಗ್ರಾಮ ಪಂಚಾಯಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಿಪ್ಪನ್ ಪೇಟೆ ಗ್ರಾಮ ಪಂಚಾಯತಿ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಯಾಗಿದ್ದು ಈ…