ಜಿಲ್ಲಾ ಸುದ್ದಿ:
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ
ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಕಾರ್ಯಕ್ರಮ ಸರ್ಕಾರಿ ಅಧಿಕಾರಿ, ನೌಕರರು ಕೇವಲ ಭ್ರಷ್ಟಾಚಾರ ರಹಿತವಾಗಿ ಮಾತ್ರವಲ್ಲ ಜೊತೆಗೆ ತಮ್ಮ ವೃತ್ತಿಪರವಾದ ಸಣ್ಣ ಸಣ್ಣ ವಿಷಯಗಳನ್ನು ಅರಿತುಕೊಂಡು ಉತ್ತಮ ನಡತೆಯೊಂದಿಗೆ ಕರ್ತವ್ಯ ನಿರ್ವಹಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ಎನ್ ಹೇಳಿದರು. ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಸೋಮವಾರ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ…
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ
RIPPONPETE | ಕೆರೆಹಳ್ಳಿಯಲ್ಲಿ ಗ್ರಾಮ ದೇವರುಗಳಿಗೆ ಕುರಿ,ಕೋಳಿ ಬಲಿ ನೀಡಿ ಸಂಭ್ರಮದ ನೋನಿ ಆಚರಣೆ ಮಲೆನಾಡಿನ ಪ್ರದೇಶದಲ್ಲಿ ದೀಪಾವಳಿಯಲ್ಲಿ ಗ್ರಾಮ ದೇವರುಗಳಿಗೆ ವಿಶೇಷವಾಗಿ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಆಚರಿಸುವುದು ಪುರಾತನ ಕಾಲದಿಂದಲೂ ನಡೆದುಕೊಂಡು ಬಂದಿದೆ. ರಿಪ್ಪನ್ಪೇಟೆ ಪಟ್ಟಣದ ಮೇಲಿನ ಕೆರೆಹಳ್ಳಿ ಹಾಗೂ ಕೆಳಗಿನ ಕೆರೆಹಳ್ಳಿ ಗ್ರಾಮಸ್ತ್ಗರು ತಮ್ಮ ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸಿ ಕುರಿಕೋಳಿ ಬಲಿ ನೀಡಿ ಸಂಭ್ರಮದೊಂದಿಗೆ ನೋನಿ ಹಬ್ಬವನ್ನು ಆಚರಿಸಿದರು. ರೈತರು ತಮ್ಮ ಕುಟುಂಬದ ನೇಮ ನಿಷ್ಠೆಯಂತೆ ವರ್ಷವೂ…
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ
ರಿಪ್ಪನ್ಪೇಟೆಯಲ್ಲಿ ‘ಕನ್ನಡ ಜ್ಯೋತಿ ರಥಯಾತ್ರೆ’ಗೆ ಅದ್ದೂರಿ ಸ್ವಾಗತ, ಆತ್ಮೀಯ ಬೀಳ್ಕೊಡುಗೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್ಪೇಟೆ ಪಟ್ಟಣಕ್ಕೆ ಇಂದು “ಕನ್ನಡ ಜ್ಯೋತಿ ರಥಯಾತ್ರೆ” ಆಗಮಿಸಿತು. ಕನ್ನಡ ಸಾಹಿತ್ಯ ರಥವನ್ನು ಅದ್ಧೂರಿಯಾಗಿ ಸ್ವಾಗತಿಸಿದಂತಹ ಪಟ್ಟಣದ ಗ್ರಾಮಸ್ಥರು, ಆತ್ಮೀಯವಾಗಿ ಬೀಳ್ಕೊಡುಗೆ ಕೊಟ್ಟರು. ಪಟ್ಟಣಕ್ಕೆ 87ನೇ ಅಖಿಲ ಭಾರತ ಕನ್ನ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾಧ್ಯಂತ ಸಂಚರಿಸುತ್ತಿರುವಂತ “ಕನ್ನಡ ಜ್ಯೋತಿ ರಥ ಯಾತ್ರೆಗೆ ಆಗಮಿಸಿತು. ಈ ವೇಳೆ ಮಾತನಾಡಿದ ಹೊಸನಗರ ತಾಲೂಕ್ ಕಸಾಪ ಅಧ್ಯಕ್ಷ ತ ಮ ನರಸಿಂಹ ಕನ್ನಡ…
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ
ಒಂದೇ ಕುಟುಂಬದ ಮೇಲೆ ಎರೆಡೆರಡು ಬಾರಿ ಹೆಜ್ಜೇನು ದಾಳಿ – ಏಳು ಮಂದಿಗೆ ಗಾಯ , ಓರ್ವನ ಸ್ಥಿತಿ ಗಂಭೀರ ಹೊಸನಗರ : ಒಂದೇ ಕುಟುಂಬದ ಮೇಲೆ ಎರಡೆರಡು ಬಾರಿ ಹೆಜ್ಜೇನು ದಾಳಿಯಾಗಿ 7 ಮಂದಿ ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಹೊಸನಗರ ತಾಲೂಕಿನ ಚಿಕ್ಕಪೇಟೆ ನಗರದಲ್ಲಿ ಶನಿವಾರ ನಡೆದಿದೆ. ಶನಿವಾರ ಬೆಳಗ್ಗೆ ಚಿಕ್ಕಪೇಟೆ ಸೇತುವೆ ಬಳಿಯ ಬಾಷಾ ಎಂಬುವವರ ಮನೆ ಸಮೀಪ ಬಾಷಾ, ಅವರ ಪತ್ನಿ ಆಸ್ಮಾ, ಇಬ್ಬರು ಮಕ್ಕಳಾದ ಆರೀಫ್ ಮತ್ತು ಅನೀಫ್…
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು
ಕುಂಸಿ ಪೊಲೀಸ್ ಠಾಣೆಗೆ ದಿಡೀರ್ ಭೇಟಿ ನೀಡಿ ಗೃಹ ಸಚಿವರು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಕುಂಸಿ ಪೊಲೀಸ್ ಠಾಣೆಗೆ ದಿಢೀರ್ ಭೇಟಿ ನೀಡಿ ಠಾಣೆಯ ಸುತ್ತಲು ಓಡಾಡಿ, ಕಡತಗಳನ್ನು ಪರಿಶೀಲಿಸಿ ಪೊಲೀಸ್ ಸಿಬ್ಬಂದಿಗೆ ಸಲಹೆ ನೀಡುವುದರ ಜೊತೆಗೆ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಶಿವಮೊಗ್ಗದಿಂದ ಕಾಗೋಡು ತಿಮ್ಮಪ್ಪ ರವರನ್ನು ಭೇಟಿಯಾಗಲು ಸಾಗರಕ್ಕೆ ತೆರಳುವ ಮಾರ್ಗ ಮಧ್ಯೆ ಕುಂಸಿ ಪೊಲೀಸ್ ಠಾಣೆಗೆ ಗೃಹ ಸಚಿವ ಡಾ. ಪರಮೇಶ್ವರ್ ಹಠಾತ್ ಭೇಟಿ ನೀಡಿದ್ದರು. ಪೊಲೀಸ್ ಠಾಣೆಯ ಒಳಾಂಗಣವನ್ನು ಗೃಹ…
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್ಐ ಪ್ರವೀಣ್ ಎಸ್ ಪಿ
ಪ್ಲಾಸ್ಟಿಕ್ ಬಳಕೆ ನಿಲ್ಲಿಸಿ ಪರಿಸರ ಉಳಿಸಿ – ಪಿಎಸ್ಐ ಪ್ರವೀಣ್ ಎಸ್ ಪಿ ರಿಪ್ಪನ್ಪೇಟೆ : ಪ್ಲಾಸ್ಟಿಕ್ ಬಳಕೆಯಿಂದಾಗಿ ಪರಿಸರ ಸಮತೋಲನ ಕಳೆದುಕೊಂಡು ಅಪಾಯದ ಮಟ್ಟ ತಲುಪಿದೆ. ಶುದ್ಧ ಪರಿಸರದಿಂದ ಮಾತ್ರ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ. ಆದ್ದರಿಂದ ಪ್ಲಾಸ್ಟಿಕ್ ಬಳಕೆ ತ್ಯಜಿಸುವಂತೆ ಪಿಎಸ್ಐ ಪ್ರವೀಣ್ ಎಸ್ ಪಿ ಹೇಳಿದರು. ಕೊಪ್ಪ ಸೈಕ್ಲಿಂಗ್ ಕ್ಲಬ್ ನವರು ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಉಳಿಸಿ ಅಭಿಯಾನದಡಿಯಲ್ಲಿ ಹಮ್ಮಿಕೊಂಡಿರುವ ಕೊಪ್ಪ – ಸೈಕಲ್ ಜಾಥಾ ರಿಪ್ಪನ್ಪೇಟೆ ಪಟ್ಟಣಕ್ಕೆ ಆಗಮಿಸುತಿದ್ದಂತೆ ಅವರನ್ನು ಸ್ವಾಗತಿಸಿ…
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ
RIPPONPETE | ಮಳೆಯಿಂದ ಸ್ಥಗಿತಗೊಂಡಿದ್ದ ದ್ವಿಪಥ ರಸ್ತೆ ಕಾಮಗಾರಿ ಚಾಲನೆಗೆ ಸೂಚನೆ ರಿಪ್ಪನ್ಪೇಟೆ : ಮಳೆಯಿಂದ ಸ್ಥಗಿತಗೊಂಡಿದ್ದ ಪಟ್ಟಣದ 5.13 ಕೋಟಿ ರೂ ವೆಚ್ಚದಲ್ಲಿ ಸಾಗರ – ತೀರ್ಥಹಳ್ಳಿ ರಸ್ತೆಯಲ್ಲಿ ದ್ವಿಪಥ ರಸ್ತೆ ಕಾಮಗಾರಿಯನ್ನು ಪುನರಾರಂಭಿಸುವ ಬಗ್ಗೆ ಶಾಸಕ ಬೇಳೂರು ಗೋಪಾಲಕೃಷ್ಣ ಸೂಚನೆ ಮೇರೆಗೆ ಅಧಿಕಾರಿಗಳು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಸಾಗರ ರಸ್ತೆಯ ಎಪಿಎಂಸಿ ಯಿಂದ ತೀರ್ಥಹಳ್ಳಿ ರಸ್ತೆಯ ಹಳೆಯ ಚಿತ್ರಮಂದಿರದವರೆಗೂ ದ್ವಿಪಥ ರಸ್ತೆ ಕಾಮಗಾರಿ ಈಗಾಗಲೇ 70% ಮುಕ್ತಾಯವಾಗಿದ್ದು ಮಳೆಯ ಕಾರಣ ಕಳೆದ ನಾಲ್ಕು…
ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು
ಅನಾರೋಗ್ಯ ಪೀಡಿತ ಒಂಟಿ ವೃದ್ದೆಯ ರಕ್ಷಣೆ – ಪೊಲೀಸರು ಹಾಗೂ ಪತ್ರಕರ್ತರಿಂದ ವೃದ್ದಾಶ್ರಮಕ್ಕೆ ದಾಖಲು ರಿಪ್ಪನ್ಪೇಟೆ : ಇಲ್ಲಿನ ಅರಸಾಳು ಗ್ರಾಮದಲ್ಲಿ ಹಲವಾರು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ವಾಸಿಸುತಿದ್ದ ವೃದ್ದೆಯನ್ನು ಪಿಎಸ್ಐ ಪ್ರವೀಣ್ ಹಾಗೂ ಪತ್ರಕರ್ತರು ವೃದ್ದಾಶ್ರಮಕ್ಕೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಭಾಗ್ಯಲಕ್ಷ್ಮಿ ಕೋಂ ನಾರಾಯಣಸ್ವಾಮಿ ಮೂಲತಃ ಅರಸಾಳಿನವರು. ಶಿಕ್ಷಕರಾಗಿದ್ದ ಇವರ ಪತಿ ಕಳೆದ ಕೆಲವು ವರ್ಷಗಳ ಹಿಂದೆ ತೀರಿಕೊಂಡಿದ್ದರು.ಮಕ್ಕಳಿಲ್ಲದ ಅವರು ಕಳೆದ ಎಂಟು ವರ್ಷಗಳಿಂದ ಅನಾರೋಗ್ಯ ಪೀಡಿತರಾಗಿ ಒಂಟಿಯಾಗಿ ದುಸ್ತರವಾಗಿರುವ ಈಗಲೋ ಆಗಲೋ…
ಸರ್ಕಾರಿ ಜಮೀನು ಒತ್ತುವರಿ ತೆರವು
ಸರ್ಕಾರಿ ಜಮೀನು ಒತ್ತುವರಿ ತೆರವು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಹೋಬಳಿಯ ಮಳಲಿಕೊಪ್ಪ ಗ್ರಾಮದ ಸರ್ವೆ ನಂಬರ್ 54 ರಲ್ಲಿ ಅಕ್ರಮವಾಗಿ ಒತ್ತುವರಿ ಮಾಡಿದ್ದ 4 ಎಕರೆ ಸರ್ಕಾರಿ ಜಮೀನನ್ನು ಕಂದಾಯ ಅಧಿಕಾರಿಗಳು ತೆರವುಗೊಳಿಸಿದರು. ಮಳಲಿಕೊಪ್ಪ ಗ್ರಾಮದ ಎಂ ಬಿ ದೇವಪ್ಪ , ಬೈರಪ್ಪ ಹಾಗೂ ಇನ್ನಿತರರು ಸರ್ವೆ ನಂ 54 ರಲ್ಲಿ ಸುಮಾರು ನಾಲ್ಕಕ್ಕೂ ಹೆಚ್ಚು ಎಕರೆ ಸರ್ಕಾರಿ ಜಮೀನನ್ನು ಅಕ್ರಮವಾಗಿ ಒತ್ತುವರಿ ಮಾಡಿದ್ದರು. ಹುಂಚ ಹೋಬಳಿಯ ರಾಜಸ್ವ ನಿರೀಕ್ಷಕರಾದ ಸೈಯದ್ ಅಪ್ರೋಜ್ ಅಹಮದ್…
ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು
ವಿದ್ಯುತ್ ಪ್ರವಹಿಸಿ ಕಟ್ಟಡ ಕಾರ್ಮಿಕ ಸಾವು ಆನಂದಪುರ ಸಮೀಪದ ಮಲಂದೂರಿನಲ್ಲಿ ಕಟ್ಟಡದ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಶಿವಮೊಗ್ಗ ಪಟ್ಟಣದ ನಿವಾಸಿ ಕೃಷ್ಣಮೂರ್ತಿ (46) ಸಾವಿಗೀಡಾದವರು. ಮಲ್ಲಂದೂರಿನ ಸಂತೋಷ್ ಅಗ್ರೋ ಕಂಪನಿಯ ಕಟ್ಟಡ ನಿರ್ಮಾಣ ಕಾರ್ಯ ನಡೆಸುತಿದ್ದಾಗ ಏಕಾಏಕಿ ವಿದ್ಯುತ್ ಪ್ರವಹಿಸಿದೆ ತಕ್ಷಣ ಕಾರ್ಮಿಕರು ಅವರನ್ನು ಆನಂದಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.