ಜಿಲ್ಲಾ ಸುದ್ದಿ:
ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ
ಕಾಡಾನೆ ದಾಳಿಗೆ ಭತ್ತದ ಬೆಳೆ ನಾಶ ತೀರ್ಥಹಳ್ಳಿ : ಕಾಡಾನೆ ದಾಳಿಯಿಂದ ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಗುರುವಾರ ರಾತ್ರಿ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ. ತಾಲೂಕಿನ ಆಗುಂಬೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ. ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ….
ಹಾವೇರಿ ಜಿಲ್ಲೆಯಲ್ಲಿ ಶಿಗ್ಗಾಂವ್ ನಲ್ಲಿ ಕಣ್ಮನ ಸೆಳೆಯುವ ಪಟ್ಟಣಗೊಂಬೆ ಪ್ರದರ್ಶನ
ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಬಂಕಾಪುರ ಪಟ್ಟಣದ ಮಾಜಿ ಪುರಸಭೆ ಸದಸ್ಯರಾದ ಎಂ ವಿ ಪದ್ಮಾ ರವರು ದಸರಾ ಗೊಂಬೆ ಕೂರಿಸುವ ಮೂಲಕ ಮೈಸೂರು ಭಾಗದಲ್ಲಿದ್ದ ಸಂಪ್ರದಾಯವನ್ನು ಹಾವೇರಿ ಜಿಲ್ಲೆಗೂ ವಿಸ್ತರಿಸಿದ್ದಾರೆ. ಹೌದು. ಸುಮಾರು 3 ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿರುವ ಇವರು ನವರಾತ್ರಿಯನ್ನು ವಿಶೇಷವಾಗಿ ಆಚರಿಸುತ್ತಾರೆ. ಇವರ ಮನೆಯಲ್ಲಿ ಮೂರು ಸಾವಿರಕ್ಕೂ ಅಧಿಕ ಗೊಂಬೆಗಳನ್ನು ಕೂರಿಸಿದ್ದು ಪ್ರತಿನಿತ್ಯ ಸಂಜೆ ಮುತ್ತೈದೆಯರಿಗೆ ಉಡಿ ತುಂಬಿ ಅರಿಷಿಣ ಕುಂಕುಮ ವಿನಿಮಯ ಮಾಡಿಕೊಳ್ಳಲಾಗುತ್ತದೆ. ವಿಷ್ಣುವಿನ ದಶಾವತಾರಗಳು, ರಾಮಾಯಣ, ಮಹಾಭಾರತ ಸಂಗೀತೋಪಕರಣಗಳು,…
RIPPONPETE |ನ.1 ರಂದು ಕಸ್ತೂರಿ ಕನ್ನಡ ಸಂಘದಿಂದ ಆದ್ದೂರಿ ಕನ್ನಡ ರಾಜ್ಯೋತ್ಸವ
ರಿಪ್ಪನ್ ಪೇಟೆಯಲ್ಲಿ ನ.01ಕ್ಕೆ ಆದ್ದೂರಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಕಲ ಸಿದ್ದತೆ ರಿಪ್ಪನ್ಪೇಟೆ;- ಪಟ್ಟಣದ ಕಸ್ತೂರಿ ಕನ್ನಡ ಸಂಘ ಮತ್ತು ದಿ.ಪುನೀತ್ರಾಜ್ ಆಭಿಮಾನಿ ಬಳಗದ 4 ನೇ ವರ್ಷದ ವಾರ್ಷೀಕೋತ್ಸವ ಮತ್ತು ನವಂಬರ್ 01 ರಂದು ಕನ್ನಡ ರಾಜ್ಯೋತ್ಸವವನ್ನು ಈ ಭಾರಿ ಆದ್ದೂರಿಯಾಗಿ ಆಚರಿಸುವ ಬಗ್ಗೆ ನಿರ್ಧರಿಸಲಾಗಿದ್ದು ಅದರನ್ವಯ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಇದರೊಂದಿಗೆ ದಿ.ಪುನೀತ್ರಾಜ್ ಪುಣ್ಯ ಸ್ಮರಣೆಯ ಕಾರ್ಯಕ್ರಮವು ಸಿದ್ದಿವಿನಾಯಕ ವೃತ್ತದಲ್ಲಿ ಏರ್ಪಡಿಸಲಾಗಿದೆ ಎಂದು ಕಸ್ತೂರಿ ಕನ್ನಡ ಸಂಘದ ಆಧ್ಯಕ್ಷರಾದ ಧನಲಕ್ಷ್ಮಿ ಗಂಗಾಧರ್ ಮತ್ತು ಆರ್.ಎ.ಚಾಬುಸಾಬ್…
ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ
ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ಕೊಚ್ಚಿಹೋದ ರೈಲ್ವೆ ಟ್ರ್ಯಾಕ್ ನ ಜಲ್ಲಿ – ರೈಲು ಸಂಚಾರ ವ್ಯತ್ಯಯ ರಿಪ್ಪನ್ಪೇಟೆ : ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಸೂಡೂರು ಬಳಿಯಲ್ಲಿ ರೈಲ್ವೆ ಹಳಿಯಡಿಯಲ್ಲಿ ಹಾಕಿದ್ದ ಜಲ್ಲಿಕಲ್ಲುಗಳು ಪೂರ್ತಿಯಾಗಿ ಕೊಚ್ಚಿಕೊಂಡು ಹೋಗಿ ರೈಲ್ವೆ ಸಂಚಾರಕ್ಕೆ ವ್ಯತ್ಯಯವುಂಟಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲಾದ್ಯಂತ ಮಂಗಳವಾರ ಸುರಿದ ಭಾರಿ ಮಳೆಗೆ ರೈಲು ಹಳಿಗಳ ಅಡಿಯಿರುವ ಜಲ್ಲಿ ಸಂಪೂರ್ಣ ಕೊಚ್ಚಿ ಹೋಗಿ, ತಾಳಗುಪ್ಪ-ಬೆಂಗಳೂರು, ತಾಳಗುಪ್ಪ-ಮೈಸೂರು ಟ್ರೈನ್ ಸಂಚಾರಕ್ಕೆ ಅಡ್ಡಿಯಾಗಿರುವ ಘಟನೆ ನಡೆದಿದೆ. ಕಳೆದ…
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ
RIPPONPETE | ಭಾರಿ ಮಳೆಗೆ ಮನೆ ಮೇಲೆ ಬಿದ್ದ ಮರ – ಸ್ಥಳಕ್ಕೆ ತಹಶೀಲ್ದಾರ್ ಭೇಟಿ ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಮಳೆ ಸುರಿಯುತಿದ್ದು ಕೆಲವೆಡೆ ಅನಾಹುತಗಳು ಸಂಭವಿಸಿವೆ.ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಮುತ್ತಲ ಗ್ರಾಮದ ಮನೆಯೊಣ್ದರ ಮೇಲೆ ಬೃಹತ್ ಮರ ಬಿದ್ದು ಭಾರಿ ಹಾನಿಯಾಗಿದೆ.ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಶೀಲ್ದಾರ್ ರಶ್ಮಿ ಹಾಲೇಶ್ , ಶಾಸಕ ಬೇಳೂರು ಗೋಪಾಲಕೃಷ್ಣ ರವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ಮುತ್ತಲ ಗ್ರಾಮದ…
ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು
ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿಗಳು ತೀರ್ಥಹಳ್ಳಿ : ಬಾವಿಗೆ ಬಿದ್ದಿದ್ದ ಮಹಿಳೆಯನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ ಘಟನೆ ತಾಲೂಕಿನ ಕುಡುಮಲ್ಲಿಗೆಯಲ್ಲಿ ಸೋಮವಾರ(ಅ.7) ನಡೆದಿದೆ. ಇಂದಿರಾನಗರದ ಚೌಡಿಕಟ್ಟಿ ಹತ್ತಿರದ ಸರ್ಕಾರಿ ಬಾವಿಗೆ ಗುಲಾಬಿ ಪೂಜಾರ್ತಿ (58) ಎಂಬ ಮಹಿಳೆ ಆಯತಪ್ಪಿ ಬಾವಿಗೆ ಬಿದ್ದಿದ್ದಾರೆ. ಬಾವಿಯಲ್ಲಿ ಇದ್ದಂತಹ ಗಟ್ಟಿ ಮುಟ್ಟಾದ ಗಿಡವನ್ನು ಹಿಡಿದು ಮಹಿಳೆ ಕುಳಿತಿದ್ದಾರೆ. ಸೋಮವಾರ ಮಧ್ಯಾಹ್ನ ಬಾವಿಗೆ ಬಿದ್ದಿದ್ದು ಸಂಜೆಯ ವೇಳೆ ಸ್ಥಳೀಯರಿಗೆ ವಿಷಯ ತಿಳಿದಿದೆ. ವಿಷಯ ತಿಳಿದು ತೀರ್ಥಹಳ್ಳಿ ಅಗ್ನಿಶಾಮಕ…
ಹೊಂಬುಜಾ ಪದ್ಮಾವತಿ ದೇವಿಗೆ ಬಳೆಗಳ ಅಲಂಕಾರ
ಧಾರ್ಮಿಕ ಕಂಕಣ ಬದ್ಧತೆಯ ಪ್ರತೀಕ ಬಳೆಗಳು, “ಸಮೃದ್ಧ ಸಂಸಾರಕ್ಕೆ ಸೋಪಾನವಾಗಲಿ” ; ಶ್ರೀಗಳು ರಿಪ್ಪನ್ಪೇಟೆ : ಜೀವನದಲ್ಲಿ ಧಾರ್ಮಿಕ ಪ್ರಜ್ಞೆಯಿಂದ ಕಂಕಣ ಬದ್ಧರಾಗಿ ನಿರ್ದಿಷ್ಟ ಕಾರ್ಯದಲ್ಲಿ ತಲ್ಲೀನರಾಗುವುದರಿಂದ ಯಶಸ್ಸು ನಿಶ್ಚಿತ. ಬಳೆಗಳನ್ನು ಅಭೀಷ್ಠವರಪ್ರದಾಯಿನಿ ಜಗದಾಂಬೆ ಯಕ್ಷಿ ಶ್ರೀ ಪದ್ಮಾವತಿ ದೇವಿಯ ಸನ್ನಿಧಿಯಲ್ಲಿ ಭಕ್ತಿಪೂರ್ವಕ ಸಮರ್ಪಿಸುವುದರಿಂದ ಭಕ್ತರಿಗೆ ಸಮೃದ್ಧ ಸಂಸಾರ ಸುಖ-ಶಾಂತಿ-ಆರೋಗ್ಯ ಲಭಿಸುವಂತಾಗುತ್ತದೆ ಎಂದು ಶ್ರೀ ಜೈನ ಮಠದ ಪೀಠಾಧೀಶರಾದ ಜಗದ್ಗುರು ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ತಿಳಿಸಿದರು. ಹೊಂಬುಜ ಅತಿಶಯ ಶ್ರೀಕ್ಷೇತ್ರದ ಅಧಿನಾಯಕ ಶ್ರೀ ಪಾರ್ಶ್ವನಾಥ…
ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ
ಅ.13 ಕ್ಕೆ ಚುಂಚಿನಕೊಪ್ಪದಲ್ಲಿ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ಶಿಕಾರಿಪುರ : ದಸರಾ ಹಬ್ಬದ ಪ್ರಯುಕ್ತವಾಗಿ ಚುಂಚಿನಕೊಪ್ಪ ಸ್ನೇಹಿತರ ಬಳಗ ಹಾಗೂ ಗ್ರಾಮಸ್ಥರು ಆಯೋಜಿಸಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯು ಅ.13 ಕ್ಕೆ ಚುಂಚಿನಕೊಪ್ಪದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ. ಚುಂಚಿನಕೊಪ್ಪದಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿಯಲ್ಲಿ ಗ್ರಾಮೀಣ ಫೋಲ್ ನಲ್ಲಿ ಪ್ರಥಮ ಬಹುಮಾನ 20 ಸಾವಿರ ದ್ವಿತೀಯ ಬಹುಮಾನ 15 ಸಾವಿರ ರೂ ಹಾಗೂ ನಗರ ಭಾಗದ ಫೋಲ್ ನಲ್ಲಿ ಪ್ರಥಮ25…
RIPPONPETE | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ
RIPPONPET | ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ ಬಿಜೂ ಮಾರ್ಕಸ್ ನಿಧನ ರಿಪ್ಪನ್ಪೇಟೆ : ಪಟ್ಟಣದ ಹೆಮ್ಮೆಯ ವಾಲಿಬಾಲ್ ಆಟಗಾರ ಬಿಜೂ ಮಾರ್ಕೋಸ್ (56) ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಹಾಲುಗುಡ್ಡೆ ನಿವಾಸಿಯಾಗಿದ್ದ ಬಿಜೂ ಮಾರ್ಕಸ್ (56) ಅಲ್ಪ ಕಾಲದ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸೋಮವಾರ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಮೃತರು ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಹೊಸನಗರ ತಾಲೂಕಿನಾದ್ಯಂತ ಅದೆಷ್ಟೋ ಯುವಕರಿಗೆ ವಾಲಿಬಾಲ್ ಕ್ರೀಡಾಸಕ್ತಿಯನ್ನು ಬೆಳೆಸುವ ಮೂಲಕ…
ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ
ಡ್ರೋಣ್ ಬಳಸಿ ನ್ಯಾನೊ ಯೂರಿಯ ಸಿಂಪಡಣೆ : ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಹೊಸನಗರ: ಡ್ರೋಣ್ ಮೂಲಕ ನ್ಯಾನೋ ಯೂರಿಯ ಸಿಂಪಡಣೆ ಕುರಿತು ರೈತರಿಗೆ ಉಚಿತ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ತಾಲೂಕಿನ ಕೆರೆಹಳ್ಳಿ ಹೋಬಳಿ ಬಾಳೂರು ಗ್ರಾಮದ ರೈತ ಧನಂಜಯ ಮತ್ತು ಮಂಜಪ್ಪ ಅವರ ಭತ್ತದ ಕೃಷಿ ಜಮೀನಿನಲ್ಲಿ ಹಮ್ಮಿಕೊಳ್ಳಲಾಗಿತ್ತು. ಕೃಷಿ ಇಲಾಖೆ ಆಯೋಜಿಸಿದ್ದ ಈ ಪ್ರಾತ್ಯಕ್ಷಿಕೆಯಲ್ಲಿ ತಾಲೂಕು ಕೃಷಿ ಸಹಾಯಕ ನಿರ್ದೇಶಕ ಸಚಿನ್ ಹೆಗಡೆ ರೈತರಿಗೆ ಡ್ರೋಣ್ ಬಳಸಿ ಔಷಧಿ ಸಿಂಪಡಣೆ, ಸದುಪಯೋಗ ಹಾಗೂ ಆಗುವ ಅನುಕೂಲ ಕುರಿತು…