ಜಿಲ್ಲಾ ಸುದ್ದಿ:
ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…
ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ
ರಿಪ್ಪನ್ಪೇಟೆ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವಕ್ಕೆ ಸಕಲ ಸಿದ್ದತೆ ರಿಪ್ಪನ್ಪೇಟೆ : ಪ್ರತಿಷ್ಠಿತ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಸಕಲ ಸಿದ್ದತೆಯನ್ನು ಕೈಗೊಳ್ಳಲಾಗಿದ್ದು,ಪಟ್ಟಣದಾದ್ಯಂತ ಕೇಸರಿಮಯವಾಗಿದೆ. ಇನ್ನು,ರಾಜಬೀದಿ ಉತ್ಸವ ಸಾಗುವ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯ ಮೇರೆಗೆ ರಾಜಬೀದಿ ಉತ್ಸವ ಸಾಗುವ ರಸ್ತೆಗಳಲ್ಲಿರುವ ಹೊಂಡಗುಂಡಿಗಳನ್ನು ಮುಚ್ಚಲು ದುರಸ್ತಿ ಕಾರ್ಯ ಈಗಾಗಲೇ ಪ್ರಾರಂಭಗೊಂಡಿದೆ. ತೀರ್ಥಹಳ್ಳಿ ರಸ್ತೆಯ ಬೈಪಾಸ್ ಮುಡುಬಾ ರಸ್ತೆಯ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪಟ್ಟಣದ ಕರ್ನಾಟಕ ಹಿಂದೂ ಪ್ರಾಂತೀಯ ರಾಷ್ಟ್ರಸೇನಾ ವತಿಯಿಂದ…
ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..!
ಅಂಗನವಾಡಿ ಹುದ್ದೆಗಾಗಿ ಮಧ್ಯವರ್ತಿಗಳ ಜಾಲಕ್ಕೆ ಬಲಿಯಾಗದಿರಿ..! ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ.ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ. ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ…
ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್
ಪಕ್ಷಪಾತ ಮಾಡದೇ ಎಲ್ಲರನ್ನೂ ಒಗ್ಗೂಡಿಸಿಕೊಂಡು ಜೇನುಕಲ್ಲಮ್ಮ ದೇವಸ್ಥಾನದ ಏಳಿಗೆಗೆ ಶ್ರಮಿಸಿದ್ದೇನೆ : ಕಲಗೋಡು ರತ್ನಾಕರ್ ಹೊಸನಗರ: ಸುಮಾರು 2012ರಿಂದ 2022ರವರೆವಿಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ತಾಪಕ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ಹಣ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ ನನ್ನ ಆಡಳಿತಾವಧಿಯಲ್ಲಿ ಯಾವುದೇ ಪಕ್ಷಪಾತ ಮಾಡದೇ ಎಲ್ಲ ಪಕ್ಷದವರನ್ನು ಎಲ್ಲ ಜಾತಿಯವರನ್ನು ಒಟ್ಟುಗೂಡಿಸಿಕೊಂಡು ದೇವಸ್ಥಾನದ ಏಳಿಗೆಗಾಗಿ ಕೆಲಸ ಮಾಡಿದ್ದೇನೆ ಎಂದು ಜೇನುಕಲ್ಲಮ್ಮ ವ್ಯವಸ್ಥಾಪಕ ಮಂಡಳಿಯ ಮಾಜಿ ಅಧ್ಯಕ್ಷ ಹಾಗೂ…
SHIVAMOGGA | ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನಲೆಯಲ್ಲಿ ವಾಹನ ಸಂಚಾರ ಮಾರ್ಗ ಬದಲಾವಣೆ
ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೊರಡಿಸಿದ್ದಾರೆ. ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್.ಪಿ.ಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್.ಎನ್ ಸರ್ಕಲ್, ಬಿ.ಹೆಚ್ ರಸ್ತೆ,…
HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ
HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಸಂಸದ ಬಿ ವೈ ರಾಘವೇಂದ್ರ ರಿಪ್ಪನ್ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಸಂಸದ ಬಿ ವೈ ರಾಘವೇಂದ್ರ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಪ್ರಮುಖರಾದ ದತ್ತಾತ್ರಿ , ಸುಬ್ರಮಣ್ಯ , ಎನ್.ಸತೀಶ್, ಎಂ.ಬಿ.ಮಂಜುನಾಥ, ರವೀಂದ್ರ ಕೆರೆಹಳ್ಳಿ , ಎಂ.ಸುರೇಶ್ಸಿಂಗ್, ಸುಧೀಂದ್ರ ಪೂಜಾರಿ,ಹಾಲಗದ್ದೆ ಉಮೇಶ್ ,…
ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ
ಸದಸ್ಯತ್ವ ಅಭಿಯಾನ – ಆಂದೋಲನದ ಅಭಿಯಾನವಾಗಬೇಕು – ಸಂಸದ ಬಿ ವೈ ರಾಘವೇಂದ್ರ ಹೊಸನಗರ : ಬಿಜೆಪಿ ಹೊಸನಗರ ಮಂಡಲದ ನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ನಗರ ಮತ್ತು ನಿಟ್ಟುರೂ ಹಾಗೂ ಹೊಸನಗರ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಮಾರುತಿಪುರ ಮತ್ತು ಕಸಬಾ ಹಾಗೂ ಕೆರೆಹಳ್ಳಿ ಭಾಗದಲ್ಲಿ ಸಂಸದ ಬಿ ವೈ ರಾಘವೇಂದ್ರ ಪ್ರವಾಸ ಕೈಗೊಂಡು “ಸದಸ್ಯತ್ವ ಅಭಿಯಾನ-2024” ರಲ್ಲಿ ಭಾಗಿಯಾದರು. ನಂತರ ಮಾತನಾಡಿ ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿ ದೊಡ್ಡ ಪಕ್ಷವಾಗಿ ವಿಶ್ವದಲ್ಲಿ ಗುರುತಿಸಿಕೊಂಡಿದೆ….
HUMCHA|ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ
HUMCHA | ತೋಟಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ನಾಗಭೂಷಣ್ ರಾವ್ ನಿಧನ ತೋಟಕ್ಕೆ ತೆರಳಿದ್ದ ವೇಳೆಯಲ್ಲಿ ಹೃದಯಾಘಾತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಗೇರ್ ಗಲ್ ನಲ್ಲಿ ನಡೆದಿದೆ. ಗೇರ್ ಗಲ್ ನಿವಾಸಿ ನಾಗಭೂಷಣ್ ರಾವ್ ಜಿ ಸಿ ಮೃತ ದುರ್ಧೈವಿಯಾಗಿದ್ದಾರೆ. ಮೃತರು ಪ್ರತಿಷ್ಠಿತ ಗೇರ್ ಗೇಲ್ ಕುಟುಂಬದವರು ಆಗಿದ್ದು ಪತ್ನಿ ಪುತ್ರ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ ಇಂದು ಸಂಜೆ ಗೇರ್ ಗಲ್ ನಲ್ಲಿರುವ ತಮ್ಮ…
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ
ಹಿಂದೂ ಮಹಾಸಭಾ ಗಣಪತಿಗೆ ಪೂಜೆ ಸಲ್ಲಿಸಿದ ಮಾಜಿ ಸಚಿವ ಹರತಾಳು ಹಾಲಪ್ಪ ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯ 57ನೇ ವರ್ಷದ ಗಣೇಶೋತ್ಸವದ ಅಂಗವಾಗಿ ಪ್ರತಿಷ್ಟಾಪಿಸಲಾಗಿರುವ ಗಣಪತಿಗೆ ಮಾಜಿ ಸಚಿವ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸೇವಾ ಸಮಿತಿಯ ಅಧ್ಯಕ್ಷ ರಾಮಚಂದ್ರ ಬಳೆಗಾರ್, ಎನ್.ಸತೀಶ್, ಎಂ.ಬಿ.ಮಂಜುನಾಥ,ಆನಂದ್ ಮೆಣಸೆ, ಎಂ.ಸುರೇಶ್ಸಿಂಗ್, ಸುಧೀಂದ್ರ ಪೂಜಾರಿ, ತಾ.ಪಂ.ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಆರ್.ಟಿ.ಗೋಪಾಲ, ಜಿಲ್ಲಾ ಪಂಚಾಯಿತಿ ಮಾಜಿ…