Headlines

ಹೆದ್ದಾರಿಪುರ ಗ್ರಾಪಂ ಸದಸ್ಯ ಚೂಡಾಮಣಿ‌ ಕಗ್ಗಲಿ ನಿಧನ|Heddaripura

ಹೊಸನಗರ ತಾಲ್ಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯತಿ ಸದಸ್ಯ ಚೂಡಾಮಣಿ ಕಗ್ಗಲಿ (50) ಅನಾರೋಗ್ಯದಿಂದ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಇವರು ಬಿಜೆಪಿ ಪಕ್ಷದ ಸಕ್ರೀಯ ಕಾರ್ಯಕರ್ತರಾಗಿದ್ದರು.ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಇವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಮೃತರು ತಾಯಿ,ಪತ್ನಿ ಇರ್ವರು ಪುತ್ರರನ್ನು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ತಮ್ಮ ಸ್ವಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸಂತಾಪ :  ಬಿಜೆಪಿ ಪಕ್ಷದ…

Read More

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಮಾಜಿ ಅಧ್ಯಕ್ಷ ನಿತ್ಯಾನಂದ ಹೆಗಡೆ ನಿಧನ|hegade

ರಿಪ್ಪನ್‌ಪೇಟೆ : ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ  ಸಂಘದ ಮಾಜಿ ಅಧ್ಯಕ್ಷರಾದ ನಿತ್ಯಾನಂದ ಹೆಗಡೆ(57) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಪಟ್ಟಣದ ಕಲಾ ಕೌಸ್ತುಭ ಕನ್ನಡ ಸಂಘ ಹಾಗೂ ವಿವಿಧ ಸಂಸ್ಥೆಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸಿದ್ದ ನಿತ್ಯಾನಂದ ಹೆಗಡೆ ಕಳೆದ ಕೆಲ ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದರು.ಸೊರಬದ ಹರಿಷಿ ಗ್ರಾಮದ ತಮ್ಮ ಸ್ವಗೃಹದಲ್ಲಿ ಇಂದು ಸಂಜೆ ಮೃತಪಟ್ಟಿದ್ದಾರೆ. ಮೃತರು ಪತ್ನಿ ,ಓರ್ವ ಪುತ್ರನನ್ನು ಬಿಟ್ಟು ಅಗಲಿದ್ದಾರೆ.  ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಸೊರಬದ ಹರಿಷಿ ಗ್ರಾಮದಲ್ಲಿ ಅಂತ್ಯಕ್ರೀಯೆಯನ್ನು ನಡೆಸಲು…

Read More

ದಿ|| ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ್ಮ ನಿಧನ

ಹೆದ್ದಾರಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಿವಂಗತ ಕೂರಂಬಳ್ಳಿ ಯಲ್ಲನಾಯ್ಕ ರವರ ಧರ್ಮಪತ್ನಿ ಕಗಚಿ ಸಿದ್ದಮ(95) ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದಾರೆ. ಬುಧವಾರ ಸಂಜೆ ಕಗಚಿ ಗ್ರಾಮದ ತಮ್ಮ ಸ್ವಗೃಹದಲ್ಲೇ ನಿಧನರಾಗಿದ್ದಾರೆ. ಮೃತರು ಇಬ್ಬರು ಪುತ್ರರಾದ ಬೋರಪ್ಪನಾಯ್ಕ ಮತ್ತು ಯೋಗೇಂದ್ರ ಕೆ ವೈ ಹಾಗೂ ಮೂವರು ಪುತ್ರಿಯರು ಮತ್ತು ಅಪಾರ ಬಂಧುಬಳಗವನ್ನು ಬಿಟ್ಟು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು(ಗುರುವಾರ) ಕಗಚಿ ಗ್ರಾಮದಲ್ಲಿ ಈಡಿಗ ಸಂಪ್ರದಾಯದಂತೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಹೃದಯಾಘಾತದಿಂದ ನಿಧನ :

ಪ್ರಖ್ಯಾತ ಗಾಯಕ, ವಕೀಲ ಶಿವಮೊಗ್ಗ ಸುಬ್ಬಣ್ಣ( 84) ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸ್ಥಂಬನದಿಂದ ನಿಧನರಾಗಿದ್ದಾರೆ. ಗಾಯಕ ಶಿವಮೊಗ್ಗ ಸುಬ್ಬಣ್ಣರಿಗೆ 84 ವರ್ಷ ವಯಸ್ಸಾಗಿತ್ತು. ನಿನ್ನೆ ಸಂಜೆ ಹೃದಯಾಘಾತದಿಂದ ಜಯದೇವ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೆ ರಾತ್ರಿ 10.30 ರ ಸುಮಾರಿಗೆ  ನಿಧರಾಗಿದ್ದಾರೆ. ಶಿವಮೊಗ್ಗ ಸುಬ್ಬಣ್ಣರಿಗೆ ಭಾಗ್ಯಶ್ರಿ, ಶ್ರೀರಂಗ ಇಬ್ಬರು ಮಕ್ಕಳು. ಕಾಡು ಕುದುರೆ ಸಿನಿಮಾದ ಕಾಡು ಕುದುರೆ ಓಡಿಬಂದಿತ್ತಾ ಹಾಡಿಗೆ ರಾಷ್ಟ್ರ ಪ್ರಶಸ್ತಿಯನ್ನು ಗಾಯಕ ಶಿವಮೊಗ್ಗ ಸುಬ್ಬಣ್ಣ ಪಡೆದಿದ್ದರು. ರಜತ ಕಮಲ , ಶಿಶುನಾಳ ಷರೀಫ್…

Read More

ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಹೃದಯಘಾತದಿಂದ ನಿಧನ

ರಿಪ್ಪನ್ ಪೇಟೆ : ಅರಸಾಳು ಗ್ರಾಮ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅರಸಾಳು ಹೊನ್ನಪ್ಪ ಎಂ. ಬಿ.(76) ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾಗಿದ್ದಾರೆ. ಕಳೆದ ಕೆಲವು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಹೊನ್ನಪ್ಪ ರವರು ಪಕ್ಷದ ಕಾರ್ಯ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿದ್ದರು. ಮೃತರು ಪತ್ನಿ.ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಮಧ್ಯಾಹ್ನ ಅರಸಾಳು ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು…

Read More

ರಿಪ್ಪನ್ ಪೇಟೆಯ ರಿಂಗ್ ಸುಧಾಕರ್ ಹೃದಯಾಘಾತದಿಂದ ನಿಧನ.

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ ಹೊಸನಗರ, ಸಾಗರ, ತೀರ್ಥಹಳ್ಳಿ ತಾಲೂಕುಗಳಲ್ಲಿ  ಕಳೆದ ಕೆಲವು ದಶಕಗಳಿಂದ ರಿಂಗ್ ಬಾವಿ ನಿರ್ಮಾಣದಿಂದ ಖ್ಯಾತರಾಗಿದ್ದ ರಿಂಗ್ ಸುಧಾಕರ್ ರವರು ಇಂದು ಮಧ್ಯಾಹ್ನ ಕೇರಳದ ಕೊಲ್ಲಂ ಜಿಲ್ಲೆಯ ಅವರ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕೇರಳ ಮೂಲದ ರಿಂಗ್ ಸುಧಾಕರ್ ಅವರು ಮೂರು ದಶಕಗಳಿಂದ ರಿಪ್ಪನ್  ಪೇಟೆಯಲ್ಲಿ ನೆಲೆ ನಿಂತು ರಿಂಗ್ ಬಾವಿ ನಿರ್ಮಾಣ ಮಾಡುವುದರ ಮೂಲಕ ರಿಂಗ್ ಸುಧಾಕರ ಎಂದು ಜನಪ್ರಿಯರಾಗಿದ್ದರು. ವಿವಿಧ ಸಮಾಜಸೇವೆಯಲ್ಲಿ ತೊಡಗಿಕೊಂಡಿದ್ದ ಅವರು ವಿವಿಧ ಸಂಘ ಸಂಸ್ಥೆಗಳಿಗೆ…

Read More

ಹೃದಯಾಘಾತದಿಂದ ಗ್ರಾಮ ಪಂಚಾಯತ್ ಅಧ್ಯಕ್ಷ ವಿನಯ್ ಗೌಡ್ರು ನಿಧನ

ಸೈದೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಬಿಜೆಪಿ ಪ್ರಮುಖರಾಗಿದ್ದ ವಿನಯ್ ಗೌಡ್ರು (35) ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ವಿನಯ್ ಗೌಡ್ರು 12/05/21 ರಂದು ತಾಳಗುಪ್ಪ ಹೋಬಳಿಯ ಸೈದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆಯನ್ನು ಇಂದು ರಾತ್ರಿ 10 ಕ್ಕೆ ಅವರ ಸ್ವಗ್ರಾಮವಾದ ತಡಗಳಲೆ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Read More

ರಿಪ್ಪನ್ ಪೇಟೆಯ ರಾಧಾಬಾಯಿ ಪ್ರಭು ನಿಧನ :

ರಿಪ್ಪನ್ ಪೇಟೆ :ಪಟ್ಟಣದ ಶಿವಮೊಗ್ಗ ರಸ್ತೆಯ ನಿವಾಸಿ ಶ್ರೀಮತಿ ರಾಧಾಬಾಯಿ ಡಿ ಪ್ರಭು (80)  ಶುಕ್ರವಾರ ಸಂಜೆ ನಿಧನರಾದರು. ಇವರಿಗೆ ಇರ್ವರು ಪುತ್ರರು ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.  ಈ ದಿನ ರಾತ್ರಿ 9:30 ಕ್ಕೆ ಹಿಂದೂ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇವರ ನಿಧನಕ್ಕೆ ಜಿ ಎಸ್ ಬಿ ಸಮಾಜದ ಅಧ್ಯಕ್ಷ ಎನ್ ಮಂಜುನಾಥ್ ಕಾಮತ್, ಗಣೇಶ್ ಕಾಮತ್, ಜೆ ರಾಧಕೃಷ್ಣ ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

Read More

ರೈತ ಪರ ಹೋರಾಟಗಾರ ಕೆ ಸಿ ವೀರಭದ್ರಪ್ಪ ಗೌಡ ಕಗ್ಗಲಿ ನಿಧನ :

ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಹಿರಿಯರು,ರೈತ ಹೋರಾಟಗಾರರಾದ ಕೆ ಸಿ ವೀರಭದ್ರಪ್ಪ ಗೌಡ (88) ಮುಂಜಾನೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಮೃತರು 8 ಜನ ಮಕ್ಕಳು,12 ಜನ ಮೊಮ್ಮಕ್ಕಳು ,7 ಜನ ಮರಿ ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರು ರೈತ ಪರ ಸಂಘಟನೆಯ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು.ರೈತ ಪರ ಹೋರಾಟದಲ್ಲಿ ಇವರು ಬಳ್ಳಾರಿಯಲ್ಲಿ 21 ದಿನ ಜೈಲು ವಾಸ ಅನುಭವಿಸಿದ್ದರು. ಮೃತರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 2 ಗಂಟೆಗೆ ಕಗ್ಗಲಿ…

Read More