Headlines

BREAKING NEWS : ಕೆ.ಎಸ್‌.ಈಶ್ವರಪ್ಪ ರಾಜೀನಾಮೆ ನೀಡುವಂತೆ ಹೈಕಮಾಂಡ್ ಸೂಚನೆ..! ಶಿವಮೊಗ್ಗ ಸುದ್ದಿಗೋಷ್ಠಿಯಲ್ಲೇ ರಾಜೀನಾಮೆ ಕೊಡ್ತಾರಾ ?

 ಬೆಳಗಾವಿ ಮೂಲಕ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಚ್ಚಿಸಿದ್ದು, ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಮತ್ತೊಂದೆಡೆ ಸಚಿವ ಈಶ್ವರಪ್ಪ ತಲೆದಂಡಕ್ಕೆ ಒತ್ತಡ ಹೆಚ್ಚಾಗತೊಡಗಿದೆ. ಇದರ ಬೆನ್ನಲ್ಲೇ ಸಚಿವ ಈಶ್ವರಪ್ಪ ಮಧ್ಯಾಹ್ನ 1 ಗಂಟೆಗೆ ಶಿವಮೊಗ್ಗ ಸುದ್ದಿಗೋಷ್ಠಿ ಕರೆದಿದ್ದಾರೆ. ಈ ಹಿನ್ನೆಲೆ ಮೈಸೂರಿನಿಂದ ಶಿವಮೊಗ್ಗಕ್ಕೆ ಈಶ್ವರಪ್ಪ ಹೊರಟಿದ್ದು, ಮಧ್ಯಾಹ್ನ 12.30ಕ್ಕೆ ಆಗಮಿಸುವ ಸಾಧ್ಯತೆಯಿದೆ ಬಳಿಕ ಶಿವಮೊಗ್ಗ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸಂತೋಷ್‌ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧವಿಲ್ಲ. ನಾನು ಯಾವುದೇ…

Read More

ಈಶ್ವರಪ್ಪನವರದ್ದು ಒಂದು ಜನ್ಮ ನಾ : ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ

‘ಎಲ್ಲ ವ್ಯವಸ್ಥೆ ಮಾಡಿ ಕೊಡ್ತೀನಿ ಅಂತ ಹೇಳಿದವನು- ಈಗ ಯಾರೆಂದೇ ಗೊತ್ತಿಲ್ಲ ಅಂತಿದ್ದಾನೆ. ಇಂಥವರೆಲ್ಲ ಸರ್ಕಾರ ನಡೆಸಿದರೆ ಹೆಂಗೆ ಸರ್‌?’’- ಹೀಗೆ ಮಾಧ್ಯಮದೊಂದಿಗೆ ಅಳುತ್ತಾ tv9 ಮಾಧ್ಯಮದೊಂದಿಗೆ ಮಾತನಾಡಿದ್ದಾರೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪತ್ನಿ ಜಯಶ್ರೀ. 40 ಪರ್ಸೆಂಟ್‌ ಕಮಿಷನ್‌ಗಾಗಿ ಸಚಿವ ಕೆ.ಎಸ್.ಈಶ್ವರಪ್ಪನವರು ಪೀಡಿಸುತ್ತಿದ್ದರು ಎಂದು ಆರೋಪಿಸಿ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಳಿಕ ಈಶ್ವರಪ್ಪನವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ‘ಸಂತೋಷ್ ಪಾಟೀಲ್‌ ಯಾರೆಂದೇ ಗೊತ್ತಿಲ್ಲ’ ಎಂದಿರುವುದು ನೋವಿನ ಕಡಲಲ್ಲಿರುವ ಕುಟುಂಬಕ್ಕೆ…

Read More

ಸಚಿವ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಆತ್ಮಹತ್ಯೆ:

ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ವಿರುದ್ದ ಶೇಕಡಾ 40ರಷ್ಟು ಕಮಿಷನ್‌ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು ಭಾರೀ ಸುದ್ದಿಯಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಇಂದು ಏಪ್ರಿಲ್ 12ರಂದು ಮಂಗಳವಾರ ಆತ್ಮಹತ್ಯೆಗೆ ಶರಣಾಗಿರುವ ಸ್ಥಿತಿಯಲ್ಲಿ ಅವರ ಮೃತದೇಹ ಸಿಕ್ಕಿದೆ.ಅಲ್ಲದೆ ನನ್ನ ಸಾವಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪನವರೇ ಕಾರಣ ಎಂದು ವಾಟ್ಸಾಪ್ ಸಂದೇಶ ರವಾನಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನು ಮಾಧ್ಯಮಗಳಿಗೂ ಕಳುಹಿಸಿದ್ದು, ನನ್ನ ಪತ್ನಿ ಮಕ್ಕಳಿಗೆ…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ರವರ ಕೈ ತಪ್ಪಬಹುದಾ ಸಚಿವ ಸ್ಥಾನ ??????:

ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುವ ಸಾಧ್ಯತೆ ಕಾಣುತ್ತಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್, ಹಲಾಲ್, ಮಸೀದಿಗಳಲ್ಲಿ ಧ್ವನಿವರ್ಧಕ ಒಂದಲ್ಲಾ ಒಂದು ಕೋಮು ವಿಚಾರಗಳು ಸರ್ಕಾರಕ್ಕೆ ತಲೆನೋವಾಗುತ್ತಿವೆ. ವಿರೋಧ ಪಕ್ಷಗಳು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಅಸಮರ್ಥರಾಗಿದ್ದಾರೆ. ಕೂಡಲೇ ರಾಜೀನಾಮೆ ನೀಡಬೇಕು ಎಂದು ನಿತ್ಯವೂ ಒತ್ತಾಯಿಸುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಮಧ್ಯೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತಲೆದಂಡವಾಗುತ್ತದೆ ಎಂಬ ಸುದ್ದಿ ಬುಧವಾರ ಸಂಜೆಯಿಂದ…

Read More

ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಲಿ: ಸಚಿವ ಕೆ ಎಸ್ ಈಶ್ವರಪ್ಪ

ಮಸೀದಿಯಲ್ಲಿ ಧ್ವನಿವರ್ಧಕ ತೆಗೆಸದಿದ್ದರೆ ನಾವೂ ಹನುಮಾನ್ ಚಾಳೀಸ್ ಕೇಳಿಸುತ್ತೇವೆ ಎಂದು ಕೆಲವರು ಹೇಳುತ್ತಿದ್ದಾರೆ.  ಹೀಗೆ ಬೇಕಾ ಬಿಟ್ಟಿ ಹೇಳುವದರಿಂದ ಕೋಮು ಸಂಘರ್ಷವಾಗಬಹುದು. ಧ್ವನಿವರ್ಧಕ ಬಳಸುವ ಬಗ್ಗೆ ಮುಸ್ಲಿಂ ಮುಖಂಡರೇ ನಿರ್ಧರಿಸಬೇಕು. ದೇವಸ್ಥಾನಗಳಲ್ಲಿ, ಚರ್ಚ್‌ಗಳಲ್ಲಿ ನಡೆಯುವ ರೀತಿ ಬೇರೆಯವರಿಗೆ ತೊಂದರೆಯಾಗದಂತೆ ಮಸೀದಿಯೊಳಗೇ ಧ್ವನಿವರ್ಧಕ ಬಳಸುವುದು ಸೂಕ್ತ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಕಾಂಗ್ರೆಸ್ ನವರು ಅಲ್ಲಾಹುವನ್ನು ಮರೆತರು. ಏಸುಕ್ರಿಸ್ತನನ್ನೂ ಮರೆತರು. ಬುದ್ಧ, ಬಸವ, ಅಂಬೇಡ್ಕರ್ ನೆಪ ಶುರು ಮಾಡಿದ್ದಾರೆ. ಭಗವಂತ ಅವರಿಗೆ ಒಳ್ಳೆಯದು…

Read More

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ತುಮಕೂರಿನ  ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ   115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

25 ವರ್ಷದ ಯುವತಿಯನ್ನು ಮದುವೆಯಾಗಿ ರಾಜ್ಯಾದ್ಯಂತ ಸಂಚಲನ ಮೂಡಿಸಿದ್ದ 45 ವರ್ಷದ ಶಂಕರಣ್ಣ ಆತ್ಯಹತ್ಯೆಗೆ ಶರಣು!

 25 ವರ್ಷದ ಯುವತಿಯನ್ನು ಮದುವೆಯಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿಯ ಅಕ್ಕಿಮರಿ ಪಾಳ್ಯದಲ್ಲಿ ಸಂಭವಿಸಿದೆ. ಸುಮಾರು 5 ತಿಂಗಳ ಹಿಂದೆ ಈ ಜೋಡಿ ರಾಜ್ಯಾದ್ಯಂತ ಬಾರಿ ಸಂಚಲನ ಮೂಡಿಸಿತ್ತು. 25 ವರ್ಷದ ಯುವತಿಯನ್ನು 45 ವರ್ಷದ ಶಂಕರಣ್ಣ ಮದುವೆಯಾಗಿದ್ದರು. ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಆಗಿತ್ತು. ಶಂಕರಣ್ಣ ಜೊತೆ ಮೇಘಾನ ಮದುವೆಯಾಗಿದ್ದರು. ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗದಲ್ಲಿ ಕಳೆದ 5…

Read More

ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಗೌರವ ಡಾಕ್ಟರೇಟ್​ ಪ್ರದಾನ :

ಮೈಸೂರು ವಿಶ್ವವಿದ್ಯಾಲಯದಿಂದ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್​​ಗೆ ಮರಣೋತ್ತರಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗಿದ್ದು, ಪುನೀತ್ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಸ್ವೀಕರಿಸಿದ್ದಾರೆ. ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದಿಂದ ಪವರ್​ ಸ್ಟಾರ್ ಪುನೀತ್ ರಾಜ್‍ಕುಮಾರ್​ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನು ಘಟಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು. ಪುನೀತ್ ಅವರ ಪತ್ನಿ ಅಶ್ವಿನಿ ಅವರು ಡಾಕ್ಟರೇಟ್ ಅನ್ನು ಸ್ವೀಕರಿಸಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಮೂರು ಜನ ಸಾಧಕರಿಗೆ ಡಾಕ್ಟರೇಟ್ ಪ್ರಶಸ್ತಿ ನೀಡಲಾಗಿದೆ. ಅದರಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ನಿಧನರಾದ ನಟ…

Read More

ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.  ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…

Read More