ಖಾಸಗಿ ಬಸ್ ಪಲ್ಟಿಯಾಗಿ ಐವರ ಧಾರುಣ ಸಾವು,35ಕ್ಕೂ ಹೆಚ್ಚು ಮಂದಿಗೆ ಗಾಯ : ಘಟನೆಯ ಬಗ್ಗೆ ಅಘಾತ ವ್ಯಕ್ತಪಡಿಸಿದ ಜಿಲ್ಲಾ ಉಸ್ತುವಾರಿ ಸಚಿವ ಆರಗ ಜ್ಞಾನೇಂದ್ರ
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಜನರಿಂದ ತುಂಬಿದ್ದ ಖಾಸಗಿ ಚಾಲಕನ ನಿಯಂತ್ರಣ ಮೀರಿ ರಸ್ತೆಯಲ್ಲಿ ಉರುಳಿ ಬಿದ್ದ ಪರಿಣಾಮ ಕನಿಷ್ಠ 5ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸುಮಾರು 35ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ಸಿನಲ್ಲಿ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಪ್ರಮಾಣದ ಪ್ರಯಾಣಿಕರು ಇದ್ದರು ಎನ್ನಲಾಗಿದ್ದು, ಬೆಳಗ್ಗೆ ಶಾಲಾ-ಕಾಲೇಜಿಗೆ ತೆರಳುವ ವಿದ್ಯಾರ್ಥಿಗಳು, ಕಚೇರಿ ಸಹಿತ ಇತರ ಕೆಲಸಗಳಿಗೆ ತೆರಳುವ ಜನ ಕೂಡಾ ಇದೇ ಬಸ್ಸನ್ನು ಅವಲಂಬಿಸಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಈ ಮಾರ್ಗದಲ್ಲಿ ಜನರ…