Headlines

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News

ತಂದೆಯ ಮಾತು ಕೇಳದೇ ಓಡಿ ಹೋಗಿ ಪ್ರಿಯಕರನನ್ನು ವರಿಸಿದ ಮಗಳು! ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ ಗೋಳಿಟ್ಟ ತಂದೆ | Viral News ತುಂಬಾ ಪ್ರೀತಿಯಿಂದ ಸಾಕು ಸಲುಹಿದ ಮಗಳು ತನ್ನ ಇಚ್ಛೆಗೆ ವಿರುದ್ಧವಾಗಿ ಮದುವೆಯಾಗಿದ್ದಕ್ಕೆ ತಂದೆ ಆಕ್ರೊಶ ವ್ಯಕ್ತಪಡಿಸಿದ ರೀತಿ ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಮಗಳು ಬದುಕಿರುವಾಗಲೇ ಆಕೆಯ ಶ್ರದ್ಧಾಂಜಲಿ ಫ್ಲೆಕ್ಸ್​ ಅಳವಡಿಸಿ, ಕುಟುಂಬವೇ ಕಣ್ಣೀರಿಟ್ಟಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್​ ಆಗಿದೆ. ಈ ಘಟನೆ ತೆಲಂಗಾಣದ ರಾಜಣ್ಣ ಸಿರಿಸಿಲ್ಲಾ ಜಿಲ್ಲೆಯಲ್ಲಿ ನಡೆದಿದೆ. ಇಷ್ಟವಿಲ್ಲದಿದ್ದರೂ ಮಗಳು ಚಿಲುವೆರಿ…

Read More

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News

ಕುಡಿದು ಶಾಲೆಗೆ ಬರುತಿದ್ದ ಶಿಕ್ಷಕನಿಗೆ ವಿದ್ಯಾರ್ಥಿಗಳಿಂದ ಚಪ್ಪಲಿ ಸೇವೆ | Viral News ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಕರು ಸಾಕಷ್ಟು ಜನ ಇರುತ್ತಾರೆ.. ಅವರು ಲಕ್ಷಾಂತರ ಮಕ್ಕಳನ್ನು ದೊಡ್ಡ ವ್ಯಕ್ತಿಗಳನ್ನಾಗಿ ಮಾಡಿದ್ದಾರೆ.. ಅವರ ಮಧ್ಯೆ ಕೆಲವರಿಗೆ ಸರ್ಕಾರಿ ಶಾಲೆಗಳೆಂದರೆ ಅದೇನೋ ನಿರ್ಲಕ್ಷ್ಯ.. ಶಿಕ್ಷಕರಿಗೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಶಕ್ತಿ ಇದ್ದರೂ ನಿರ್ಲಕ್ಷ್ಯ ತೋರುತ್ತಾರೆ. ಎಷ್ಟೋ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರು ನಿದ್ದೆ ಮಾಡಿ ಸಂಬಳ ತೆಗೆದುಕೊಳ್ಳುವವರಿದ್ದಾರೆ.. ಕಾಟಾಚಾರಕ್ಕೆ ಶಾಲೆಗೆ ಬರುವ ಶಿಕ್ಷಕರೂ ಇದ್ದಾರೆ.. ಇನ್ನೂ ಕೆಲವರು ಕುಡಿತದ…

Read More

ವಾಟ್ಸಾಪ್‌ನಲ್ಲಿ ಹೊಸ ಕ್ರಾಂತಿ – ವಾಟ್ಸಾಪ್ ಚಾನಲ್ಸ್ ಆರಂಭಿಸಿದ ಮೋದಿ, ಸಿದ್ದರಾಮಯ್ಯ!Whatsup channel

ನಮ್ಮ ಪೋಸ್ಟ್ ಮ್ಯಾನ್ ನ್ಯೂಸ್(POSTMAN NEWS) ನ ವಾಟ್ಸ್ಯಾಪ್​ ಚಾನಲ್​ ಫಾಲೋ ಮಾಡಿ! ಇಲ್ಲಿ ನೀವು ಸೇಫ್​,, ನಿಮ್ಮ ನಂಬರ್ ಕೂಡ ಸೇಫ್​! ಯಾರಿಗೂ ತಿಳಿಯದು ನಿಮ್ಮ ವಿವರ! ಯಾವಾಗ ಬೇಕಾದರು  ಸುದ್ದಿ ಓದಿ, ವಾಟ್ಸಾಪ್ ಆಪ್ ಅಪ್ಡೇಟ್ ಮಾಡಿದ್ದಲ್ಲಿ ಈ ಕೆಳಗಿನ ಲಿಂಕ್​ ಕ್ಲಿಕ್ ಮಾಡಿ – ಬಲಬದಿಯಲ್ಲಿರುವ follow ಬಟನ್ ಕ್ಲಿಕ್ ಮಾಡಿ.. https://whatsapp.com/channel/0029Va9PbPU4Y9ltDSrECN0A ವಾಟ್ಸಾಪ್‌ (Whatsapp) ಬಳಕೆದಾರರು ಈಗಾಗಲೇ ಸಾಕಷ್ಟು ವಿವಿಧ ಫೀಚರ್ಸ್ ಮೂಲಕ ಹೊಸ ಹೊಸ ಸೇವೆ ಪಡೆಯುತ್ತಿದ್ದಾರೆ. ಈ ನಡುವೆ…

Read More

ಚಲಾವಣೆಯಿಂದ 2000 ಮುಖಬೆಲೆಯ ನೋಟುಗಳನ್ನು ಹಿಂಪಡೆದ RBI

ನೋಟು ಅಮಾನ್ಯೀಕರಣದ ನಂತ್ರ ಹೊಸ ನೋಟುಗಳಾಗಿ 2000 ರೂ ಮುಖಬೆಲೆಯ ನೋಟನ್ನು ಭಾರತೀಯ ರಿಸರ್ವ್ ಬ್ಯಾಕ್ ಪರಿಚಯಿಸಿತ್ತು. ಇದೀಗ ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ ಬಿ ಐ ನಿರ್ಧಾರ ಕೈಗೊಂಡಿದೆ. ಚಲಾವಣೆಯಿಂದ 2,000 ಮುಖಬೆಲೆಯ ನೋಟುಗಳನ್ನು ಹಿಂಪಡೆಯಲು ಆರ್ಬಿಐ ನಿರ್ಧಾರ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧ ಟೆಂಡರ್ ಆಗಿ ಮುಂದುವರಿಯುತ್ತವೆ ಎಂದು ತಿಳಿಸಿದೆ.

Read More

ದೇಶಾದ್ಯಂತ ಯುಪಿಐ ಸರ್ವರ್ ಡೌನ್ – ಪೋನ್ ಪೇ ,ಗೂಗಲ್‌ಪೇ ,ಪೇಟಿಎಂ ಸರ್ವರ್ ಡೌನ್|phonepay

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡು ಬಳಕೆದಾರರಿಗೆ ತೊಂದರೆಯಾಗಿದೆ. ಹೊಸ ವರ್ಷ ಸ್ವಾಗತಿಸುವ ಉತ್ಸಾಹದಲ್ಲಿದ್ದವರಿಗೆ ಯುಪಿಐ ಸರ್ವರ್ ಡೌನ್ ನಿಂದ ತುಂಬಾ ತೊಂದರೆಯಾಗಿದೆ.ಈಗ ಹಣದ ವಹಿವಾಟಿಗಿಂತ ಸ್ಕ್ಯಾನರ್ ಪಡೆದು ಸ್ಕ್ಯಾನ್ ಮಾಡಿ ಹಣ ಪಾವತಿಸುವ ಕಾಲ ಇಂತಹ ಸಂಭ್ರಮದ ಸಮಯದಲ್ಲಿ ಸರ್ವರ್ ಡೌನ್ ಆಗಿರುವುದರಿಂದ ಗ್ರಾಹಕರು ತಮ್ಮ ಆಕ್ರೋಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು…

Read More

ಭಾರತ ತಂಡದ ಖ್ಯಾತ ಕ್ರಿಕೆಟಿಗ ರಿಷಬ್ ಪಂತ್ ಕಾರು ಅಪಘಾತ್ – ಗಂಭೀರ ಸ್ಥಿತಿಯಲ್ಲಿ ರಿಷಬ್ : ಕಾರು ಸಂಪೂರ್ಣ ಭಸ್ಮ|Rishab

ಭಾರತ ಕ್ರಿಕೆಟ್ ತಂಡದ ಪ್ರಮುಖ ಆಟಗಾರ ರಿಷಬ್ ಪಂತ್ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ಭಸ್ಮವಾಗಿದ್ದು ಪಂತ್ ಸ್ಥಿತಿ ಗಂಭೀರವಾಗಿದೆ. ಟೀಮ್ ಇಂಡಿಯಾ ಪ್ರಮುಖ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಅವರ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.  ದೆಹಲಿಯಲ್ಲಿ ಮನೆಗೆ ನಿರ್ಗಮಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಕಾರು ಸಂಪೂರ್ಣ ಭಸ್ಮವಾಗಿದೆ. ಘಟನೆಯಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ರಿಷಭ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿ ಆಸ್ಪತ್ರೆಗೆ ರವಾನಿಸಲಾಗಿದೆ. ರಿಷಭ್ ಪಂತ್ ಅವರ ಹಣೆ ಮತ್ತು ಕಾಲಿಗೆ…

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನ |Mulayam singh

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ತಮ್ಮ 82 ನೇ ವಯಸ್ಸಿನಲ್ಲಿ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನರಾದರು. ಅವರು ಇಂದು ಬೆಳಿಗ್ಗೆ 8 ರಿಂದ 8:30ರ ನಡುವೆ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷದ ಸ್ಥಾಪಕ-ಪೋಷಕರಾಗಿದ್ದರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಅವರು ಭಾರತ ಸರ್ಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಮುಲಾಯಂ ಅವರು ನವೆಂಬರ್ 22, 1939 ರಂದು ಇಂದಿನ ಉತ್ತರ ಪ್ರದೇಶದ ಇಟಾವಾ…

Read More

ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆ: ಈ ಹುದ್ದೆಗೇರಿದ ಮೊದಲ ಬುಡಕಟ್ಟು ಮಹಿಳೆ!

 ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಭಾರತದ 15ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದು ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಬುಡಕಟ್ಟು ಮಹಿಳೆಯೊಬ್ಬರು ಈ ಹುದ್ದೆಗೇರಿದ್ದಾರೆ. ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆಯಲ್ಲಿ ದ್ರೌಪದಿ ಮುರ್ಮು ಅವರು ವಿಪಕ್ಷ ಅಭ್ಯರ್ಥಿ ಯಶವಂತ್ ಸಿನ್ಹಾ ವಿರುದ್ಧ ಗೆಲುವು ಸಾಧಿಸಿದ್ದಾರೆ. ದ್ರೌಪದಿ ಮುರ್ಮು ಅವರಿಗೆ ಪ್ರಧಾನಿ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಹಲವರು ಶುಭಾಶಯ ಕೋರಿದ್ದು ಬಿಜೆಪಿ ಪಾಳಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ದ್ರೌಪದಿ ಮುರ್ಮು…

Read More

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ ಪೂಜ್ಯ ಶ್ರೀ ಡಾ|| ವೀರೇಂದ್ರ ಹೆಗಡೆ :

 ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಈ ತಿಂಗಳ ಆರಂಭದಲ್ಲಿ ವೀರೇಂದ್ರ ಹೆಗ್ಗಡೆ ಸೇರಿದಂತೆ ದಕ್ಷಿಣ ಭಾರತದ ನಾಲ್ವರು ಗಣ್ಯರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಈ ಪೈಕಿ ಇಳೆಯರಾಜಾ ಹಾಗೂ ಪಿ.ಟಿ. ಉಷಾ ಕೂಡಾ ರಾಜ್ಯಸಭೆಗೆ ನಾಮನಿರ್ದೇಶನ ಗೊಂಡಿದ್ದರು. ಕರ್ನಾಟಕದ ಕರಾವಳಿ ಭಾಗದಿಂದ ಪ್ರಸ್ತುತವಾಗಿ ರಾಜ್ಯಸಭೆಗೆ ಆಯ್ಕೆ ಯಾಗಿರುವ ಡಾ| ವೀರೇಂದ್ರ ಹೆಗ್ಗಡೆಯವರು ಇಂದು ರಾಜ್ಯಸಭೆಯ ಸ್ಪೀಕರ್ ವೆಂಕಯ್ಯ ನಾಯ್ಡು…

Read More