Headlines

ಚಲಿಸುತ್ತಿದ್ದ ಕಾರಿನ ಚಾಲಕ ಹೃದಯಾಘಾತದಿಂದ ಸಾವು : ನಿಯಂತ್ರಣ ತಪ್ಪಿ ಸರಣಿ ಅಪಘಾತ

ಕಾರು ಚಲಾಯಿಸುವಾಗಲೇ ಚಾಲಕ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಎದುರುಗಡೆ ಇದ್ದ ನಾಲ್ಕೈದು ವಾಹನಗಳಿಗೆ ಡಿಕ್ಕಿ ಹೊಡೆದಿದೆ.ನಂತರ ಕಾಂಪೌಂಡ್ ಗೋಡೆಗೆ ವಾಹನ ಅಪ್ಪಳಿಸಿ ನಿಂತಿದೆ.ಅಷ್ಟರಲ್ಲಾಗಲೇ ಕಾರು ಚಾಲಕ ಮೃತಪಟ್ಟಿದ್ದಾನೆ. ಶಿವಮೊಗ್ಗ ಗೋಪಾಳದ ಚಾಲುಕ್ಯನಗರದಲ್ಲಿ ಈ ಘಟನೆ ಸಂಭವಿಸಿದೆ. ಮಲವಗೊಪ್ಪ ನಿವಾಸಿ ಬಾಬು ಯಾನೆ ಕ್ರೇನ್ ಬಾಬು (58) ಎಂಬ ವ್ಯಕ್ತಿ ಸಾವಿಗೀಡಾಗಿದ್ದು, ಅವರು ಕಾರು ಚಲಾಯಿಸುತ್ತಿರುವಾಗಲೇ ಹೃದಯಾಘಾತವಾಗಿದ್ದರಿಂದ ಈ ದುರಂತ ಸಂಭವಿಸಿದೆ. ಚಾಲಕ ಚಲಿಸುತಿದ್ದ ಹೊಂಡಾ ಸಿಟಿ ಕಾರು ನಾಲ್ಕಾರು ವಾಹನಗಳಿಗೆ ಡಿಕ್ಕಿ ಹೊಡೆದು, ಗೋಡೆಯೊಂದಕ್ಕೆ ಡಿಕ್ಕಿಯಾಗಿ ನಿಂತಿದೆ. ಸ್ಥಳೀಯರು…

Read More

ರಿಪ್ಪನ್ ಪೇಟೆ : ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿರುವ ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಸಾಗರ – ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರು ಮತ್ತು ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ರವರು ಗುರುವಾರ ಕೆರೆಹಳ್ಳಿ ಹೋಬಳಿಯಾದ್ಯಂತ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಗಳ ಪಟ್ಟಿ : 10:00 AM:- ರಿಪ್ಪನಪೇಟೆ ಗ್ರಾ.ಪಂ, ಕುಕ್ಕಳಲೆ ರಸ್ತೆಯಿಂದ ನಿಂಗಪ್ಪ ಪುರುಷೋತ್ತಮ ಮನೆಯವರೆಗಿನ ಎಸ್.ಸಿ ಕಾಲೋನಿ ರಸ್ತೆ ಅಭಿವೃದ್ಧಿ ಕಾಮಗಾರಿ ವೀಕ್ಷಣೆ. (20 ಲಕ್ಷ) 10:30 AM:- ತಮ್ಮಡಿಕೊಪ್ಪ ಧನಂಜಯ್ ಇವರ ಮನೆ ಭೇಟಿ. 11:00…

Read More

ಮಾಂಸ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮ ಗೋ ಸಾಕಾಣಿಕೆ : ಇಬ್ಬರಬಂಧನ

  ಶಿವಮೊಗ್ಗ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ಗೋವಿನ‌ ಮಾರಾಟ ಮತ್ತು ಸಾಗಾಣಿಕ ವಿರುದ್ಧ ದಾಳಿ ನಡೆಸಲಾಗಿದ್ದು ಒಂದು ಕಡೆ ಗೋವುಗಳನ್ನ ರಕ್ಷಿಸಲಾದರೆ ಇನ್ನೊಂದೆಡೆ ಮನೆಯಲ್ಲಿಯೇ ಗೋವನ್ನ ಕಡಿದು ಮಾರಾಟ ಮಾಡುತ್ತಿದ್ದ ಪ್ರಕರಣ ಬೆಳಕಿದೆ ಬಂದಿದೆ. ಸಾಗರ ತಾಲೂಕಿನ ತಾಳಗುಪ್ಪ ಗ್ರಾಮದಲ್ಲಿ ಅಕ್ರಮವಾಗಿ ಮೂರು ಗೋವುಗಳನ್ನ ಟಾಟಾ‌ಏಸ್ ವಾಹನದಲ್ಲಿ ತುಂಬಿಸಿಕೊಂಡು ಹೋಗುವಾಗ ಪೊಲೀಸರು ತಡೆದು ತಪಾಸಣೆ ನಡೆಸಿದ್ದಾರೆ. ತಪಾಸಣೆ ವೇಳೆ ಆಟೋದಲ್ಲಿದ್ದ ಓರ್ವ ಪರಾರಿಯಾಗಿದ್ದಾನೆ. ಕಣಸೆ ಗ್ರಾಮದ ಗಣಪತಿ ಮತ್ತು ಆತನ ಪುತ್ರ ದೇವರಾಜ್ ನನ್ನ ಬಂಧಿಸಲಾಗಿದೆ. ಅದರಂತೆ…

Read More

ಕೂರಂಬಳ್ಳಿ ಗ್ರಾಮದ ಅಬಕಾರಿ ನಿರೀಕ್ಷಕ ಗಿರೀಶ್ ರವರಿಗೆ ಮಾತೃವಿಯೋಗ :

ರಿಪ್ಪನ್ ಪೇಟೆ : ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೂರಂಬಳ್ಳಿ ಗ್ರಾಮದ ಸೀತಮ್ಮ(64) ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಪತಿ ಚೂಡಪ್ಪ ಮಕ್ಕಳಾದ ಕೆ ಸಿ ಗಿರೀಶ್ , ಅಬಕಾರಿ ನಿರೀಕ್ಷಕರು ಉಡುಪಿ. ಮತ್ತೋರ್ವ ಮಗ ಪ್ರಕಾಶ್ ಪುತ್ರಿ ಚೇತನಾ ಹಾಗೂ ಸಹೋದರ ಸಹೋದರಿಯರನ್ನು ಬಿಟ್ಟು ಅಗಲಿದ್ದಾರೆ  ಮೃತರ ಅಂತ್ಯಕ್ರಿಯೆಯು ನಾಳೆ ಬೆಳಿಗ್ಗೆ ಹನ್ನೊಂದು ಗಂಟೆಗೆ ಕೂರಂಬಳ್ಳಿ ಗ್ರಾಮದ ಸ್ವಗೃಹದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದ್ದಾರೆ.

Read More

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್…

ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್  ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More