Headlines

ಕುಕ್ಕಳಲೆ ಗ್ರಾಮದ ಪ್ರಗತಿಪರ ಕೃಷಿಕರಾದ ಪುಟ್ಟಸ್ವಾಮಿಗೌಡರು ನಿಧನ

ರಿಪ್ಪನ್ ಪೇಟೆ : ಇಲ್ಲಿಯ ಕುಕ್ಕಳಲೆ ಗ್ರಾಮದ ನಿವಾಸಿ ಕೃಷಿಕ ಪುಟ್ಟಸ್ವಾಮಿಗೌಡ (83) ವರ್ಷ ಇವರು ವಯೋಸಹಜ ಖಾಯಿಲೆಯಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಇವರು ಪತ್ನಿ,ಪುತ್ರರು ಹಾಗೂ ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.  ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಕ್ಕಳಲೆ ಗ್ರಾಮದ ಸ್ವಂತ ಜಮೀನಿನಲ್ಲಿ‌ ನೆರವೇರಲಿದೆ ಎಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಸಂತಾಪ: ಪುಟ್ಟಸ್ವಾಮಿಗೌಡರ ನಿಧನದ ಸುದ್ದಿ ತಿಳಿದ ಶಾಸಕ ಹಾಗೂ MSIL ಅಧ್ಯಕ್ಷರಾದ ಹರತಾಳು ಹಾಲಪ್ಪ ಮೃತರ ಮನೆಗೆ ತೆರಳಿ ಅಂತಿಮ…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

ಪಂಚಭೂತಗಳಲ್ಲಿ ಲೀನರಾದ ಗಾನಕೋಗಿಲೆ ಲತಾ ಮಂಗೇಶ್ಕರ್…

ಗಾನ ಕೋಗಿಲೆ ಭಾರತ ರತ್ನ ಲತಾ ಮಂಗೇಶ್ಕರ್  ಭಾನುವಾರ ಮುಂಜಾನೆ 8.12ರ ಸುಮಾರಿಗೆ ಇಹಲೋಕ ತ್ಯಜಿಸಿದ್ದು ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನೆರವೇರಿತು. ಲತಾ ಮಂಗೇಶ್ಕರ್ ಅವರಿಗೆ 92 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಅವರು ನಮ್ಮನ್ನಗಲಿದ್ದಾರೆ ಎಂದು ಅವರ ಆರೋಗ್ಯದ ಉಸ್ತುವಾರಿ ಹೊತ್ತಿದ್ದ ಡಾ.ಪ್ರತಿತ್ ಸಮ್ದಾನಿ ತಿಳಿಸಿದರು. ಲತಾ ಅವರ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಗೃಹ…

Read More

ಪದ್ಮ ಪ್ರಶಸ್ತಿಗಳು ಪ್ರಕಟ : ಜನರಲ್ ಬಿಪಿನ್ ರಾವತ್ ಗೆ ಮರಣೋತ್ತರ ಪದ್ಮ ವಿಭೂಷಣ : ಗುಲಾಂ ನಬಿ ಅಜಾದ್,ಸತ್ಯ ನಾದೆಲ್ಲಾ ಸೇರಿದಂತೆ ಅನೇಕರಿಗೆ ಒಲಿದ ಪದ್ಮ ಪ್ರಶಸ್ತಿ

ಕೇಂದ್ರ ಸರ್ಕಾರದಿಂದ ಗಣರಾಜ್ಯೋತ್ಸವ ದಿನಾಚರಣೆಯಂದು ಪ್ರತಿ ವರ್ಷ ನೀಡಲಾಗುವ ಪದ್ಮ ವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದ್ದು, ಜನರಲ್ ಬಿಪಿನ್ ರಾವತ್ ಅವರಿಗೆ ಪದ್ಮವಿಭೂಷಣ ಸೇರಿದಂತೆ ಸುರಂಗ ಕೊರೆದು ಕೃಷಿ ಭೂಮಿಗೆ ನೀರು ಹರಿಸುವ ಸಾಧನೆ ತೋರಿದ್ದ ಬಂಟ್ವಾಳ ತಾಲೂಕಿನ ವಿಟ್ಲದ ಪ್ರಗತಿಪರ ಕೃಷಿಕ ಕೇಪು ಮಹಾಲಿಂಗ ನಾಯ್ಕ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. 2022ರ ಸಾಲಿನಲ್ಲಿ ನಾಲ್ವರು ಸಾಧಕರಿಗೆ ಪದ್ಮ ವಿಭೂಷಣ, 17 ಸಾಧಕರಿಗೆ ಪದ್ಮಭೂಷಣ ಹಾಗೂ 107 ವಿವಿಧ ಕ್ಷೇತ್ರದ ಸಾಧಕರಿಗೆ ಪದ್ಮಶ್ರೀ…

Read More

ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ ಸಂದೇಶಗಳು ಸಾರ್ವಕಾಲಿಕ ಪ್ರಸ್ತುತತೆಯನ್ನು ಪಡೆದಿದೆ : ಕನಕದಾಸ ಜಯಂತಿಯ ಶುಭಾಶಯಗಳು :

ದಾಸರಲ್ಲಿ ಕವಿ, ಕವಿಗಳಲ್ಲಿ ದಾಸರೆಂಬ ಹೆಗ್ಗಳಿಕೆಗೆ ಪಾತ್ರರಾದವರು ಕನಕದಾಸರು. ಕನಕದಾಸರದು ಕನ್ನಡ ಹರಿದಾಸ ಪರಂಪರೆಯಲ್ಲಿ ದಿಟ್ಟ ಹೆಜ್ಜೆ ಇಟ್ಟವರು. ಕೀರ್ತನೆ, ಮುಂಡಿಗೆ, ಉಗಾಭೋಗ, ಸುಳಾದಿ, ದಂಡಕಗಳು ಮಾತ್ರವಲ್ಲದೇ, ಮೋಹನತರಂಗಿಣಿ, ನಳಚರಿತ್ರೆ, ಹರಿಭಕ್ತಿಸಾರ ಎಂಬ ಕಾವ್ಯಗಳ ಮೂಲಕ ಜೀವನಪರ ಸಂದೇಶ, ನಿತ್ಯ ಬದುಕಿನಲ್ಲಿ ಅಳವಡಿಸಿಕೊಳ್ಳುವಂಥ ಉಪದೇಶಗಳನ್ನು ನೀಡಿದವರು. ನವೆಂಬರ್‌ 22ರಂದು ಇವರ ಜನ್ಮದಿನ, ಈ ದಿನದ ನಿಮಿತ್ತ ನಾಡಿನಲ್ಲಿ ಕನಕ ಜಯಂತಿಯನ್ನು ಆಚರಿಸಲಾಗುತ್ತದೆ. ಯಾವುದೇ ಒಂದು ಜಾತಿ, ಧರ್ಮ, ಪ್ರದೇಶ, ಭಾಷೆಗೆ ಸೀಮಿತವಾಗದ ಕನಕದಾಸರ ವಿಶ್ವ ಮಾನವ ಪರಿಕಲ್ಪನೆಯ…

Read More

ಸೈಕಲ್‌ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ :ಬಾಲಕ ಸ್ಥಳದಲ್ಲಿಯೇ ಸಾವು

ಸೊರಬ : ಸೈಕಲ್ ಗೆ ಯಮಸ್ವರೂಪಿ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಬಾಲಕನೊಬ್ಬ ಸ್ಥಳದಲ್ಲಿ ಮೃತಪಟ್ಟ ಘಟನೆ ತಾಲೂಕಿನ ಚಂದ್ರಗುತ್ತಿ ಸಮೀಪದ ತೋರಗೊಂಡನಕೊಪ್ಪ ಗ್ರಾಮದಲ್ಲಿ ಶನಿವಾರ ನಡೆದಿದೆ. ಕಾನುಗೋಡು ಗ್ರಾಮದ ಜೀವ (13) ಮೃತ ದುರ್ದೈವಿ. ಸಿದ್ದಾಪುರದಿಂದ ಚಂದ್ರಗುತ್ತಿಯಡೆಗೆ ತೆರಳುತ್ತಿದ್ದ ಯಮ ಸ್ವರೂಪಿ ಟಿಪ್ಪರ್ ಸೈಕಲ್ ಗೆ ಡಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಸೈಕಲ್ ನಲ್ಲಿದ್ದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸೈಕಲ್ ಸವಾರ ಕಾನುಗೋಡು ಗ್ರಾಮದ ಸಂದೀಪ (32) ಎಂಬ ವ್ಯಕ್ತಿಯು ತೀವ್ರವಾಗಿ ಗಾಯಗೊಂಡಿದ್ದು, ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ….

Read More

ಅಪ್ಪು ಅoತ್ಯ ಕ್ರಿಯೆಗೆ ಅಮೆರಿಕದಿಂದ ಬಂದ ಮಗಳು ಧೃತಿ ಯಾಕೆ ಕಣ್ಣೀರಿಟ್ಟಿಲ್ಲ ಗೊತ್ತಾ? ಅಸಲಿ ಕಾರಣ ಕೇಳಿದ್ರೆ ಭಾವುಕರಾಗ್ತೀರಾ

 46 ವರ್ಷಕ್ಕೆ ಪವರ್ ಸ್ಟಾರ್ ಅಪ್ಪು ಅವರು ಈ ಲೋಕ ಬಿಟ್ಟು ಹೋದ್ರು ಅನ್ನೋದನ್ನ ಇನ್ನು ನಂಬೋದಕ್ಕೆ ಸಾಧ್ಯ ಆಗ್ತಾ ಇಲ್ಲ. ಪುನೀತ್ ಅವರು ಇದ್ದಾಗ ಅವರನ್ನು ಒಬ್ಬ ನಟನಾಗಿ ಎಲ್ಲರೂ ಇಷ್ಟಪಟ್ಟರು. ಆದರೆ ಪುನೀತ್ ಅವರು ಇಲ್ಲವಾದ ನಂತರ ಅವರು ಮಾಡಿದ್ದ ಎಲ್ಲಾ ಸಮಾಜದ ಕಾರ್ಯಗಳು ಹೊರಬರುತ್ತಿದೆ. ಇಂತಹ ಅದ್ಭುತವಾದ ವ್ಯಕ್ತಿಯನ್ನ ನಾವೆಲ್ರು ಕಳೆದುಕೊಂಡಿದ್ದೇವೆ ಎನ್ನುವ ನೋವು ಇಡೀ ರಾಜ್ಯದ ಜನರಲ್ಲಿದೆ.. ಪುನೀತ್ ಅವರು ಇಲ್ಲವಾಗಿರುವುದು ಅಭಿಮಾನಿಗಳಿಗೆ ಬಹಳ ನೋವು ನೀಡಿರುವುದು ನಿಜ. ಆದರೆ ಇದರಿಂದ…

Read More

ಶಿವಮೊಗ್ಗ – ಆಯನೂರು ರಸ್ತೆಯಲ್ಲಿ ಭೀಕರ ಅಪಘಾತ : ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಸಾವು

ಶಿವಮೊಗ್ಗ : ಇಲ್ಲಿನ ಸಮೀಪದ ಮುದ್ದಿನ ಕೊಪ್ಪದ ಬಳಿ ಬೊಲೆರೋ ಗೂಡ್ಸ್ ವಾಹನವೊಂದು ರಸ್ತೆ ಕಾಮಗಾರಿ ನಡೆಸುತ್ತಿದ್ದ ಕಾರ್ಮಿಕನಿಗೆ ಡಿಕ್ಕಿ ಹೊಡೆದು ನಂತರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲೆ ಮೃತ ಪಟ್ಟಿದ್ದು ಬೈಕ್ ಸವಾರನ ಕಾಲು ಮುರಿದಿದೆ. ಈ ಅಪಘಾತದಲ್ಲಿ ರಸೆ ಕೆಲಸ ಮಾಡುತ್ತಿದ್ದ ಕಾರ್ಮಿಕ ಸ್ಥಳದಲ್ಲಿಯೇ ಸಾವುಕಂಡಿದ್ದು, ದ್ವಿಚಕ್ರ ವಾಹನ ಸವಾರನಿಗೆ ಕಾಲು ಮುರಿದಿದೆ.  ಮೃತಪಟ್ಟ ಕಾರ್ಮಿಕನನ್ನು ಚಂದ್ರಶೇಖರ್ ಎಂದು, ಅಪಘಾತದಲ್ಲಿ ಕಾಲುಮುರಿದುಕೊಂಡ ದ್ವಿಚಕ್ರ ವಾಹನ ಸವಾರ…

Read More

ರಿಪ್ಪನ್ ಪೇಟೆ : ನೂರು ಕೋಟಿ ಜನರಿಗೆ ಲಸಿಕೆ ನೀಡಿದ ವೈದ್ಯಕೀಯ ಸಿಬ್ಬಂದಿಗಳಿಗೆ ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ:

ರಿಪ್ಪನ್‌ಪೇಟೆ: ಜಗತ್ತನೆ ತಲ್ಲಣಗೊಳಿಸಿದ ಮಹಾಮಾರಿ ಕೋರೊನ ರೋಗಕ್ಕೆ ಭಾರತ ದೇಶ ಭಯಭೀತರಾಗದೆ ನೂರು ಕೋಟಿ ಜನರಿಗೆ ಉಚಿತ ಲಸಿಕೆ ನೀಡುವ ಮೂಲಕ ವೈದ್ಯಕೀಯ ಸಿಬ್ಬಂದಿಗಳ ಕಾರ್ಯವೈಖರಿಯನ್ನು ಬಿಜೆಪಿ ಪಕ್ಷದ ವತಿಯಿಂದ ಅಭಿನಂದಿಸುವ ಅಭಿಯಾನ ನಡೆಯಿತು. ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಬಿ.ಜೆ.ಪಿ ಮುಖಂಡ ದತ್ತಾತ್ರಿ ಉದ್ಘಾಟಿಸಿ, ಕೋವಿಡ್ ಸಂದಂರ್ಭದಲ್ಲಿ ದೇಶದ ಜನರ ಪ್ರಾಣ ರಕ್ಷಣೆಯಲ್ಲಿ ವೈದ್ಯಕೀಯ ಸಿಬ್ಬಂಧಿಗಳು ಹಗಲಿರುಳು ಶ್ರಮಿಸಿರುವುದು ಪ್ರಶಂಸನೀಯ ಎಂದರು. ಈ ಸಂಧರ್ಭದಲ್ಲಿ  ತಾಲ್ಲೂಕು ಬಿ.ಜೆ.ಪಿ ಅಧ್ಯಕ್ಷ ಬಿಳಗೋಡು ಗಣಪತಿ,…

Read More

ಆಗುಂಬೆ ಘಾಟಿಯಲ್ಲಿ ಭೀಕರ ಅಪಘಾತ : ನಾಲ್ವರು ಸಾವು , ಐವರ ಸ್ಥಿತಿ ಗಂಭೀರ

  ಆಗುಂಬೆ: ಇಲ್ಲಿನ ಘಾಟಿಯ 9 ನೇ ತಿರುವಿನಲ್ಲಿ ಲಾರಿ ನಿಯಂತ್ರಣ ತಪ್ಪಿ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಐದು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಲಾರಿ ಘಾಟಿಯನ್ನು ಇಳಿಯುವಾಗ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ. ಲಾರಿಯೂ ಪ್ರಪಾತಕ್ಕೆ ಮಗುಚಿ ಬಿದ್ದಿದ್ದು, ಮೃತದೇಹಗಳನ್ನು ಮೇಲೆತ್ತಲು ಸ್ಥಳೀಯರು ಹರಸಾಹಸ ಪಡುತ್ತಿದ್ದಾರೆ.  ಹೆಬ್ರಿ ಮತ್ತು ಆಗುಂಬೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ,ಚಿಂತಾಜನಕವಾಗಿದೆ.

Read More