Headlines

ಯುವ ಸಾಹಿತಿ ರಫ಼ಿ ರಿಪ್ಪನ್ ಪೇಟೆ ರವರಿಗೆ ಒಲಿದ ರಾಜ್ಯ ಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ :

ರಿಪ್ಪನ್ ಪೇಟೆ : ತುಮಕೂರಿನ ಸಿದ್ದಗಂಗಾ ಮಠದ ಆವರಣದಲ್ಲಿ ಭಾನುವಾರ ನಡೆದ ರಾಜ್ಯಮಟ್ಟದ ಗುರುಕುಲ ಕಲಾ ಸಾಹಿತ್ಯ ಸಮ್ಮೇಳನದಲ್ಲಿ ರಿಪ್ಪನ್ ಪೇಟೆಯ ಯುವ ಸಾಹಿತಿ ಹಾಗೂ ಯುವ ಪತ್ರಕರ್ತ,ಸಮಾಜವಾದಿ ಚಿಂತಕ ರಫಿ ರಿಪ್ಪನ್ ಪೇಟೆ ಇವರಿಗೆ ರಾಜ್ಯಮಟ್ಟದ “ಗುರುಕುಲ ಕಲಾ ಕೀರ್ತಿ” ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ತುಮಕೂರಿನ ಸಿದ್ದಗಂಗಾ ಮಠದ ಪೂಜ್ಯ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ವಹಿಸಿದ್ದರು..  ಅಭೂತಪೂರ್ವ ಸಾಹಿತ್ಯ ಸಮ್ಮೇಳನದಲ್ಲಿ ಈಗಾಗಲೆ ರಾಜ್ಯ ಮಟ್ಟದ ಸಾಹಿತ್ಯ ಸಿರಿ ಹಾಗೂ ಗುರುಕುಲ ಶಿರೋಮಣಿ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಉಲ್ಲಾಸ್ ಆರ್ ಆಯ್ಕೆ :

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ರಿಪ್ಪನ್ ಪೇಟೆಯ ಯುವ ಮುಖಂಡ ಉಲ್ಲಾಸ್ ಆರ್ ರವರು ಆಯ್ಕೆಯಾಗಿದ್ದಾರೆ.  ಹೊಸನಗರ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹೆಚ್ಚು ಗುರುತಿಸಿಕೊಂಡು ಪಕ್ಷದ ಬಲವರ್ಧನೆಗೆ ಶ್ರಮಿಸುತ್ತಿರುವ ಯುವ ನಾಯಕರಿಗೆ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಲ್ಲಿ ಉತ್ತಮ ಹುದ್ದೆ ನೀಡುವಂತೆ ಹೊಸನಗರ ಯುವ ಕಾಂಗ್ರೆಸ್ ಸಮಿತಿಯಿಂದ ಶಿಪಾರಸು ಮಾಡಲಾಗಿತು. ಪಕ್ಷ ಸಂಘಟನೆಯ ಆದಾರದ ಮೇಲೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ರಕ್ಷಾ ರಾಮಯ್ಯ ರವರ ನಿರ್ದೇಶನದಂತೆ ಜಿಲ್ಲಾ ಯುವ ಕಾಂಗ್ರೆಸ್…

Read More

ಶಿವಮೊಗ್ಗ ಕೃಷಿ ಕಾಲೇಜಿನ ಪ್ರೊಫೆಸರ್ ಚಿಕ್ಕಬಾಸೂರು ಕೆರೆಯಲ್ಲಿ ಶವವಾಗಿ ಪತ್ತೆ :

ಶಿವಮೊಗ್ಗ : ಇಲ್ಲಿನ ಕೃಷಿ ಕಾಲೇಜಿನ ಜಿ.ಪಿ.ಬಿ. ವಿಭಾಗದ ಮುಖ್ಯಸ್ಥರಾದ ಪ್ರೊ. ಗಂಗಾಪ್ರಸಾದ್ ಅವರ ಮೃತದೇಹ ಹೊನ್ನಾಳಿ ತಾಲೂಕಿನ ಸ ಸಾಸ್ವೆಹಳ್ಳಿ ಸಮೀಪದ ಚಿಕ್ಕಬಾಸೂರು ತಾಂಡದ (ವಿಜಯಪುರ) ಸಮೀಪದ ಕೆರೆಯಲ್ಲಿ ಪತ್ತೆಯಾಗಿದೆ. ಶಿವಮೊಗ್ಗ ಬಸವೇಶ್ವರ ನಗರದ ನಿವಾಸಿಯೂ, ಅಪಾರ ವಿದ್ಯಾರ್ಥಿಗಳ ಆಪ್ತ ಗುರುಗಳೂ ಆಗಿದ್ದ ಗಂಗಾಪ್ರಸಾದ್ (59) ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ.ಕೆರೆ ಮಗ್ಗುಲಲ್ಲಿ ಅವರ ಪ್ಯಾಂಟ್, ಚಪ್ಪಲಿ ಪತ್ತೆಯಾಗಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಚಿಕ್ಕಬಾಸೂರು ತಾಂಡ( ವಿಜಯಪುರ) ಬಳಿ ಪತ್ತೆಯಾಗಿರುವ ಇವರ ಶವವನ್ನು ಕಾಲೇಜಿನ ವಿದ್ಯಾರ್ಥಿಯೋರ್ವ…

Read More

ಆರ್​ಎಸ್​​ಎಸ್​​ ಬಾಂಬ್​ ಹಾಕುವವರನ್ನ ತಯಾರು ಮಾಡುವ ಸಂಸ್ಥೆಯಲ್ಲ : ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ : ಆರ್​​ಎಸ್​ಎಸ್​​​ ಸಂಘಟನೆ ದೇಶದ ಮೇಲೆ ಬಾಂಬ್ ಹಾಕುವವರನ್ನ ತಯಾರು ಮಾಡುವುದಿಲ್ಲ. ದೇಶವನ್ನು ಪ್ರೀತಿ ಮಾಡೋರನ್ನು ತಯಾರು ಮಾಡುತ್ತೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರು ವೋಟ್ ಬ್ಯಾಂಕಿಗಾಗಿ ಏನೇನೋ ಹೇಳುತ್ತಿದ್ದಾರೆ. ಅವರು ಅಧಿಕಾರದಿಂದ ಕೆಳಗಿಳಿದ ಮೇಲೆ ರಾಜ್ಯದಲ್ಲಿ ಉತ್ತಮ ಆಡಳಿತ ನಡೆಯುತ್ತಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್​ನವರು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿದ್ದಾರೆ, ಇದು ಸರಿಯಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಕಾಂಪಿಟೇಷನ್ ನಡೆಯುತ್ತಿದೆ ಎಂದರು. ಸಿಂದಗಿ, ಹಾನಗಲ್​ ಉಪ…

Read More

ಶಿವಮೊಗ್ಗದಲ್ಲಿ ಮತಾಂತರ ಆರೋಪ : ಹಿಂದೂ ಪರ ಸಂಘಟನೆಯ ಕಾರ್ಯಕರ್ತರಿಂದ ಆಕ್ರೋಶ

ಶಿವಮೊಗ್ಗ : ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಸ್ಥಳೀಯರು ನಗರದ ಮನೆಯೊಂದರ ಮುಂದೆ ಜಮಾಯಿಸಿದ ಘಟನೆ ನಗರದಲ್ಲಿ ನಡೆದಿದೆ. ಸಾಗರದ ಗೋಪಾಲಗೌಡ ನಗರದ 2ನೇ ತಿರುವಿನಲ್ಲಿರುವ ಮನೆಯೊಂದರಲ್ಲಿ ಮನೆಯ ಸದಸ್ಯರು ಮತಾಂತರ ಆಗುತ್ತಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಹಾಗೂ ಯುವಕರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು. ಮನೆಯವರಲ್ಲಿ ಓರ್ವರಿಗೆ ಇತ್ತೀಚಿಗೆ ಅನಾರೋಗ್ಯ ಉಂಟಾಗಿತ್ತು.‌ ಅವರು ಸಾಕಷ್ಟು ವೈದ್ಯರ ಬಳಿ ತೋರಿಸಿದ್ದರು. ಆದರೂ, ಗುಣಮುಖರಾಗಿರಲಿಲ್ಲ. ಹೀಗಾಗಿ, ಪೂಜೆ ನಡೆಸಿದ್ದಾರೆ. ಈ ವೇಳೆ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ…

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ಹೊಂಬುಜ ಜೈನ ಮಠದಲ್ಲಿ ಅದ್ದೂರಿಯ ವಿಜಯದಶಮಿ :

ರಿಪ್ಪನ್ ಪೇಟೆ : ಜೈನರ ದಕ್ಷಿಣದ ಕಾಶಿಯಾಗಿರುವ ಹೊಂಬುಜ ಕ್ಷೇತ್ರದಲ್ಲಿ ನವರಾತ್ರಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಪದ್ಮಾವತಿ ದೇವಿಗೆ ನವರಾತ್ರಿಯ ಒಂಬತ್ತು ದಿನಗಳು ಬೇರೆ ಬೇರೆ ರೀತಿಯಲ್ಲಿ ಅಲಂಕರಿಸಿ ಪ್ರತಿ ದಿನ ವೈಭವದಿಂದ ಆಚರಿಸಲಾಯಿತು. ಕೆಟ್ಟದ್ದರಿಂದ ನಮ್ಮನ್ನು ರಕ್ಷಿಸುವ ಮಾತೆಯಾಗಿ ದೇವಿಯನ್ನು ಈ ದಿನಗಳಲ್ಲಿ ಕಾಣಲಾಗುತ್ತದೆ.ನವರಾತ್ರಿಯ ಕೊನೆಯ ದಿನವಾದ ಶುಕ್ರವಾರದಂದು ಹೊಂಬುಜ ಕ್ಷೇತ್ರದಿಂದ ಆನೆ ಮತ್ತು ಅಶ್ವ ದೊಂದಿಗೆ ಪಲ್ಲಕ್ಕಿಯ ರಾಜಬೀದಿ ಉತ್ಸವವು ಬನ್ನಿ ಮಂಟಪಕ್ಕೆ ತೆರಳಿ   ಪೂಜಾ ಕೈಂಕರ್ಯಗಳನ್ನು ನೆರವೇರಿಸಿ, ಬನ್ನಿ ಮುರಿದು ಭಕ್ತರಿಗೆ ಪ್ರಸಾದ…

Read More

ರಿಪ್ಪನ್ ಪೇಟೆ : ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ತರಬೇತಿ ಕೇಂದ್ರ ಅಸ್ತಿತ್ವಕ್ಕೆ

ರಿಪ್ಪನ್ ಪೇಟೆ : ರೋಟರಿ ಕ್ಲಬ್ ರಿಪ್ಪನ್ ಪೇಟೆ ಮತ್ತು ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇವರ ಸಹಯೋಗದಲ್ಲಿ ಪಟ್ಟಣದ ರಾಷ್ಟೋತ್ಥಾನ  ಶಿಶು ಮಂದಿರದಲ್ಲಿ  ಇಂದು ಡೆಸ್ಟಿನಿ ಡ್ಯಾನ್ಸ್  ತರಬೇತಿ ಶಾಲೆಯನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮಂಜುಳಾ ಕೇತಾರ್ಜಿ ರಾವ್  ಮುಂದಿನ ದಿನಗಳಲ್ಲಿ ನೃತ್ಯ ತಂಡಗಳು ಉಳಿಯಬೇಕಾದರೆ ಕೊರಿಯೋಗ್ರಾಫರ್ ಗಳ ಸಹಕಾರ ಅತ್ಯಗತ್ಯ. ಫಿಟ್ನೆಸ್ ಗೆ ನೃತ್ಯ ಅತಿ ಅವಶ್ಯಕ ಆದ್ದರಿಂದ ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್ ಇದರ…

Read More

ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ

 ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್‌ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್‌ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…

Read More