ರಿಪ್ಪನ್ ಪೇಟೆ : ಕೇಂದ್ರ ಗೃಹ ಸಚಿವ ಅಮಿತ್ ಷಾ ರನ್ನು ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸಿ ಜೆಡಿಎಸ್ ವತಿಯಿಂದ ರಾಷ್ಟ್ರಪತಿಗಳಿಗೆ ಮನವಿ:
ರಿಪ್ಪನ್ ಪೇಟೆ: ಶಿಕ್ಷಣ ಪಡೆಯದ ಜನರು ದೇಶಕ್ಕೆ ಹೊರೆಯಾಗುತ್ತಾರೆ ಎಂಬ ಬಾಲಿಷ ಹೇಳಿಕೆ ನೀಡಿರುವ ದೇಶದ ಗೃಹ ಮಂತ್ರಿ ಅಮಿತ್ ಷಾ ರವರನ್ನು ಸಂಪುಟದಿಂದ ವಜಾ ಮಾಡುವಂತೆ ಒತ್ತಾಯಿಸಿ ಜೆಡಿಎಸ್ ಪಕ್ಷದ ವತಿಯಿಂದ ರಾಷ್ಟ್ರಪತಿಗಳಿಗೆ ಉಪತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿದರು. ಇತ್ತೀಚೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಷಾ ಟಿವಿ ಸಂದರ್ಶನವೊಂದರ ವೇಳೆ ಅನಕ್ಷರಸ್ಥ ವ್ಯಕ್ತಿ ದೇಶಕ್ಕೆ ಹೊರೆ. ಆತನಿಗೆ ಸಂವಿಧಾನ ನೀಡಿದ ಹಕ್ಕುಗಳು ತಿಳಿಯುವುದಿಲ್ಲ. ಅಥವಾ ಆತನಿಗೆ ಮಾಡಬೇಕಾದ ಕರ್ತವ್ಯಗಳು ಗೊತ್ತಿರುವುದಿಲ್ಲ. ಅಂತಹ ವ್ಯಕ್ತಿಯು ಉತ್ತಮ…