Headlines

ಭದ್ರಾವತಿ : ಕಡಜದ ಹುಳಗಳ ದಾಳಿಗೆ ಮತ್ತೋರ್ವ ರೈತ ಬಲಿ !

ಭದ್ರಾವತಿ: ಕಳೆದ ಕೆಲವು ದಿನಗಳ ಹಿಂದೆ ಕಡಜದ ಹುಳುಗಳ ದಾಳಿಯಿಂದ ಇಬ್ಬರು ಮೃತಪಟ್ಟಿದ್ದರು.ಇದೀಗ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿರುವ ಘಟನೆಸೋಮವಾರ ನಡೆದಿದೆ. ತಾಲೂಕಿನ ಉಕ್ಕುಂದ ಗ್ರಾಮದ ನಿವಾಸಿ ಕುಮಾರ್‌(38) ಮೃತಪಟ್ಟಿದ್ದು, ಇವರು ತಮ್ಮ ತೆಂಗಿನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಭಾನುವಾರ ಬೆಳಿಗ್ಗೆ ಕಡಜದ ಹುಳುಗಳು ದಾಳಿ ನಡೆಸಿವೆ. ತೀವ್ರ ಅಸ್ವಸ್ಥಗೊಂಡಿದ್ದ ಇವರನ್ನು ಶಿವಮೊಗ್ಗದ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Read More

ಅತ್ಯಾಚಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೈಕಲ್ ನಲ್ಲಿ 3,500 ಕಿ ಮೀ ಏಕಾಂಗಿ ಯಾತ್ರೆ

ಶಿವಮೊಗ್ಗ  : ಬೆಂಗಳೂರಿನ ಬನ್ನೇರುಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನಲ್ಲಿ ಪ್ರಥಮ ಬಿ.ಎ. ವಿದ್ಯಾರ್ಥಿಯಾಗಿರುವ 19 ವರ್ಷದ ಕಿರಣ್ ಕುಮಾರ್, ದೇಶದಲ್ಲಿ ಆಗುತ್ತಿರುವ ಅತ್ಯಾಚಾರಗಳನ್ನು ಖಂಡಿಸಿ, ಅತ್ಯಾಚಾರಿಗಳಿಗೆ ಕಠಿಣ ಕಾನೂನು ರೂಪಿಸುವಂತೆ ಆಗ್ರಹಿಸಿ 3500 ಕಿ ಮೀ  ಸೈಕಲ್ ಮುಖಾಂತರ ಸಂಚರಿಸಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳ ಭೇಟಿ ಮಾಡಿ ಮನವಿ ಸಲ್ಲಿಸುತ್ತಿದ್ದಾರೆ. ಬೆಂಗಳೂರು ನಗರ, ತುಮಕೂರು, ಬಳ್ಳಾರಿ, ಬೆಳಗಾವಿ, ಗದಗ, ರಾಯಚೂರು ಸೇರಿದಂತೆ 19 ಜಿಲ್ಲೆಗಳಲ್ಲಿ ಈಗಾಗಲೇ ಸೈಕಲ್ ಯಾತ್ರೆ ಮುಗಿಸಿದ್ದು, ನಾಳೆ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ…

Read More

ಸಮಾಜದಲ್ಲಿ ಪರಿವರ್ತನೆಯನ್ನು ತಂದ ಕೀರ್ತಿ ಹಾನಗಲ್ ಶಿವಕುಮಾರ ಸ್ವಾಮೀಜಿಗೆ ಸಲ್ಲುತ್ತದೆ : ಬಿ ಎಸ್ ಯಡಿಯೂರಪ್ಪ

ಶಿಕಾರಿಪುರ  : ಸಮಾಜದಲ್ಲಿನ ಮೂಢನಂಬಿಕೆ, ಅಸಮಾನತೆ ತೊಡೆದು ಪರಿವರ್ತನೆ ತಂದವರು ಹಾನಗಲ್ಲ ಶಿವಕುಮಾರ ಶ್ರೀಗಳು ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಶಿಕಾರಿಪುರ ತಾಲೂಕು ಘಟಕದ ವತಿಯಿಂದ ಹಾನಗಲ್ ಶಿವಕುಮಾರ ಸ್ವಾಮಿಗಳ 154ನೇ ಜಯಂತಿ ಕಾರ್ಯಕ್ರಮವನ್ನು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ‌ ಅವರು ಉದ್ಘಾಟಿಸಿ ಮಾತನಾಡಿದರು. ಅಂಧ ಶ್ರದ್ಧೆಯಿಂದ ಬಡವನಾಗಿದ್ದ ಸಮಾಜಕ್ಕೆ ಆಚಾರದ ಅರಿವು, ಶರಣ ಸಂಸ್ಕೃತಿ ನೆಲೆಯಲ್ಲಿ ಪುನಶ್ಚೇತನಗೊಳಿಸಿದ್ದಾರೆ ಎಂದು ಹೇಳಿದರು. ಶೈಕ್ಷಣಿಕವಾಗಿ ಹಿಂದುಳಿದ ಸಮಾಜದಲ್ಲಿ ಗುಲಾಮಗಿರಿ, ಅನಕ್ಷರತೆಯಯನ್ನು ಗಮನಿಸಿ,…

Read More

ಅರಣ್ಯ ಸಂಚಾರಿ ದಳದ ಮಿಂಚಿನ ಕಾರ್ಯಾಚರಣೆ ಅಕ್ರಮವಾಗಿ ಜಿಂಕೆ ಕೊಂಬುಗಳನ್ನು ಮಾರಾಟ ಮಾಡಲು ಯತ್ನಿಸಿದವನ ಬಂಧನ.

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಪೊಲೀಸ್ ಅರಣ್ಯ ಸಂಚಾರಿ ದಳ ಸಾಗರದ ಅಧಿಕಾರಿ ಮತ್ತು ಸಿಬ್ಬಂದಿಯವರು ಅಕ್ರಮವಾಗಿ  ಜಿಂಕೆ ಕೊಂಬುಗಳನ್ನು ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಶಿವಮೊಗ್ಗ ತಾಲೂಕು ಯರೇಕೊಪ್ಪ ವಾಸಿ ಟಿ ನಾಗೇಶ್ ನಾಯ್ಕ ಬಿನ್ ಟೀಕ್ಯಾ ನಾಯ್ಕ ಎಂಬಾತನನ್ನು  ಶಿವಮೊಗ್ಗದ ತ್ಯಾವರೆ ಕೊಪ್ಪದ ಬಳಿ ಮಾಲು ಸಮೇತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು  ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ದಾಳಿಯಲ್ಲಿ ಸಾಗರ ಪೊಲೀಸ್ ಅರಣ್ಯ ಸಂಚಾರಿ ದಳದ ಪಿಎಸ್ಐ ಮಲ್ಲಿಕಾರ್ಜುನ  ಬಿ ಮತ್ತು ದಫೆದಾರ್…

Read More

ಭದ್ರಾವತಿ : ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಸುಮಾರು 20 ಕೆ ಜಿ ಗಾಂಜಾ ವಶ

ಭದ್ರಾವತಿ : ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗೊಂದಿ ಚೆಕ್ ಪೋಸ್ಟ್ ನಲ್ಲಿ  ಭದ್ರಾವತಿ ಕಡೆಯಿಂದ ಬಂದ ಬುಲೆರೋ ಪಿಕಪ್ ವಾಹನ ಸಂಖ್ಯೆKA14C2174 ಗಾಡಿಯಲ್ಲಿ 20ಕೆಜಿ ಗಾಂಜಾವನ್ನು ವಶ ಪಡಿಸಿಕೊಳ್ಳಲಾಗಿದೆ.  ಗೊಂದಿ ಚೆಕ್ ಪೋಸ್ಟ್ ನಲ್ಲಿ ಪೊಲೀಸ್ ಸಿಬ್ಬಂದಿಗಳು ವಾಹನ ತಪಾಸಣೆ ಮಾಡುತ್ತಿರುವಾಗ ಭದ್ರಾವತಿ ಕಡೆಯಿಂದ ಬಂದ ಬೊಲೇರೊ ಪಿಕಪ್ ನಿಲ್ಲಿಸಲು ಸೂಚಿಸಿದರು ನಿಲ್ಲಿಸಿದೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆಸಿ ಗಲಾಟೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಆರೋಪಿಗಳನ್ನು ವಿಚಾರಿಸಿದಾಗ ಸದರಿ ವಾಹನದಲ್ಲಿ ಆಂಧ್ರಪ್ರದೇಶದ ತುಣಿ ಎಂಬ ಊರಿನ…

Read More

ರೋಚಕವಾಗಿದ್ದ ಆರ್​ಸಿಬಿ ಮ್ಯಾಚ್ ವೀಕ್ಷಿಸಿದ ಯಡಿಯೂರಪ್ಪ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ‌ ಎಸ್ ಯಡಿಯೂರಪ್ಪ ಅವರು ತಮ್ಮ ರಾಜಕೀಯ ಒತ್ತಡದ ನಡುವೆಯೂ ರೋಚಕವಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಐಪಿಎಲ್ ಪಂದ್ಯವನ್ನು ತಮ್ಮ ಕಾರಿನಲ್ಲಿ ಕುಳಿತು ವೀಕ್ಷಣೆ ಮಾಡಿದ್ದಾರೆ. ಸದ್ಯ ಈ ಫೋಟೋ ವೈರಲ್ ಆಗುತ್ತಿದ್ದು, ಯಡಿಯೂರಪ್ಪ ಅವರ ಐಪಿಎಲ್​ ಕ್ರೇಜ್​ ಅಚ್ಚರಿ ಮೂಡಿಸುತ್ತಿದೆ. ರಾಜ್ಯ ಮಟ್ಟದ ಕಾರ್ಯನಿರತ ಪತ್ರಕರ್ತರ ದತ್ತಿ ಪ್ರಶಸ್ತಿ ಕಾರ್ಯಕ್ರಮ ಮುಗಿಸಿ ಶಿಕಾರಿಪುರಕ್ಕೆ ತೆರಳುವ ವೇಳೆ ಮಾಜಿ ಮುಖ್ಯಮಂತ್ರಿ ಅವರು ಐಪಿಎಲ್ ಪಂದ್ಯವನ್ನು ವೀಕ್ಷಿಸಿದ್ದಾರೆ. ಸಿಎಂ…

Read More

ಶಿಕಾರಿಪುರ : ಮಹಿಳೆಯ ಕತ್ತು ಸೀಳಿ ಕೊಲೆ : ಅನೈತಿಕ ಸಂಬಂಧದ ಶಂಕೆ !!

ಶಿಕಾರಿಪುರ : ತಾಲೂಕಿನ ಕಪ್ಪನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಮಹಿಳೆಯೋರ್ವಳನ್ನ ಕತ್ತು ಸೀಳಿ ಕೊಲೆ ಮಾಡಲಾಗಿದೆ. ಕಪ್ಪನಹಳ್ಳಿ ಗ್ರಾಮದ ಹೇಮಾವತಿ ಕೊಲೆಯಾದ ದುರ್ಧೈವಿ. ಈಕೆ ಗಂಡನಿಂದ ದೂರವಾಗಿ ಅನೇಕ ವರ್ಷಗಳಾಗಿದ್ದವು.ಗ್ರಾಮದ ಪರಿಚಯಸ್ಥ ಅನಿಲ್ ಎಂಬುವವನೊಂದಿಗೆ ಮಹಿಳೆಗೆ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಪಂಚಾಯಿತಿ ನಡೆಸಿ ಇಬ್ಬರಿಗೂ ಬೇರೆ ಬೇರೆ  ಇರುವಂತೆ ತಾಕೀತು ಮಾಡಲಾಗಿತ್ತು. ಗ್ರಾಮಸ್ಥರು ಪಂಚಾಯಿತಿ ನಡೆಸಿ ನೀಡಿದ  ತೀರ್ಪು ಅನಿಲ್ ನ ಅಸಮಾಧಾನಕ್ಕೆ ಕಾರಣವಾಗಿತ್ತು.ಹೇಮಾವತಿ ನನ್ನೊಂದಿಗೆ ಬರದಿದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದನು. ಇಂದು…

Read More

ಆನಂದಪುರ : ಲಾರಿಯ ಸೈಡ್ ಡೋರ್ ಕಟ್ಟಾಗಿ ರೈಲ್ವೆ ಹಳಿಯ ಮೇಲೆ ಬಿದ್ದ ಮರದ ಪೋಲ್ಸ್ ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್.!

ಶಿವಮೊಗ್ಗ : ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಎಡೆಹಳ್ಳಿಯ ರೈಲ್ವೆ ಕ್ರಾಸಿಂಗ್ 105 ಲೆವೆಲ್ ನಲ್ಲಿ ಬಟ್ಟೆಮಲ್ಲಪ್ಪ ದಿಂದ ದಾಂಡೇಲಿಗೆ ಹೋಗುತ್ತಿದ್ದ ಮರದ ಪೋಲ್ಸ್ ತುಂಬಿದ ಲಾರಿಯ ಸೈಡ್ ಡೋರ್ ಕಟ್ಟಾಗಿ ನೂರಾರು ಮರದ ಪೋಲ್ಸ್ ಗಳು ರೈಲ್ವೆ ಹಳಿ ಮೇಲೆ ಬಿದ್ದು 1ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.  ಸ್ಥಳಕ್ಕೆ ಆಗಮಿಸಿದ ರೈಲ್ವೆ ಸಿಬ್ಬಂದಿಗಳು ಹಾಗೂ ಆನಂದ ಪುರದ ಪೊಲೀಸ್ ಸಿಬ್ಬಂದಿಗಳು ಮತ್ತು ಸ್ಥಳೀಯ ನೂರಕ್ಕೂ ಹೆಚ್ಚು ಗ್ರಾಮಸ್ಥರ ನೆರವಿನಿಂದ ರೈಲ್ವೆ ಹಳಿಯ ಮೇಲೆ…

Read More

ಶಿವಮೊಗ್ಗ : ರೈಲಿಗೆ ಸಿಲುಕಿ ವ್ಯಕ್ತಿ ಆತ್ಮಹತ್ಯೆ, ದೇಹ ಸಂಪೂರ್ಣ ಛಿದ್ರ-ಛಿದ್ರ

ಶಿವಮೊಗ್ಗ : ಪಶುವೈದ್ಯಕೀಯ ಕಾಲೇಜಿನ ಬಳಿ ಯುವಕನೋರ್ವ ರೈಲಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾಶಿಪುರದ ನಿವಾಸಿ ರಾಕೇಶ್ ರಾವ್ ಎಂಬುವನು ಆತ್ಮಹತ್ಯೆ ಮಾಡಿಕೊಂಡಿದ್ದು ಆತನ ಮೃತ ದೇಹ ರೈಲ್ವೆ ಹಳಿಯ ಮೇಲೆ ಛಿದ್ರ- ಛಿದ್ರವಾಗಿ ಬಿದ್ದಿದೆ. ಹೆಂಡತಿ ಜೊತೆಗಿರಲಿಲ್ಲ ಹಾಗೂ ಮಾನಸಿಕ ಅಸ್ವಸ್ಥತೆಯ ಅಕ್ಕನನ್ನು ಹೊಂದಿದ್ದ ರಾಕೇಶ್ ರಾವ್ ಬೇಸತ್ತು ಈ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದು ಬಂದಿದೆ. ನಿನ್ನೆ ರಾತ್ರಿಯೇ ಮನೆಬಿಟ್ಟು ಹೋಗಿದ್ದ ರಾಕೇಶ್ ಇಂದು ಹೆಣವಾಗಿ ಪತ್ತೆಯಾಗಿದ್ದಾನೆ. ಇಂದು…

Read More

ಶಿಕಾರಿಪುರದಲ್ಲಿ ವಿಶ್ವಕರ್ಮ ಸಮುದಾಯ ಭವನ ಉಧ್ಘಾಟಿಸಿದ ಬಿ ಎಸ್ ಯಡಿಯೂರಪ್ಪ

ಶಿಕಾರಿಪುರದ : ನಗರದ ವಿನಾಯಕ ನಗರದಲ್ಲಿ ವಿಶ್ವಕರ್ಮ ಸಮುದಾಯ ಭವನವನ್ನು ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪನವರು ಮತ್ತು ಸಂಸದರಾದ ಬಿ. ವೈ ರಾಘವೇಂದ್ರ ಅವರು ಲೋಕಾರ್ಪಣೆಗೊಳಿಸಿದರು. ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಬಿ ಎಸ್ ಯಡಿಯೂರಪ್ಪ 50 ಲಕ್ಷ ವೆಚ್ಚದಲ್ಲಿ ನಿರ್ಮಾಣ ವಾಗಿರುವ ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಗಿದೆ. ಈ ಪುಣ್ಯ ಸಮಯ ನವರಾತ್ರಿ ಸಮಯದಲ್ಲಿ ನಮ್ಮ ಕೆಟ್ಟ ಗುಣವನ್ನು ದೂರಮಾಡಿ ಸಮಾಜಕ್ಕೆ ಪೂರಕವಾದ ಕೆಲಸವನ್ನು ಮಾಡೋಣ. ಹಿಂದು ಧರ್ಮಕ್ಕೆ ಅಪಾರ ಕೊಡುಗೆಯನ್ನು ವಿಶ್ವಕರ್ಮ…

Read More