ಸಾಗರ : ಸಿಗಂದೂರಿನಲ್ಲಿ ಶರನ್ನವರಾತ್ರಿ : ಅವಧೂತ ವಿನಯ್ ಗುರೂಜಿಯಿಂದ ಆಶಿರ್ವಚನ
ಸಾಗರ: ತಾಲ್ಲೂಕಿನ ಶ್ರೀ ಕ್ಷೇತ್ರ ಸಿಗಂದೂರು ದೇವಸ್ಥಾನದಲ್ಲಿ ಅಕ್ಟೋಬರ್ 07 ರಿಂದ 15ರ ವರೆಗೆ ನವರಾತ್ರಿ ಉತ್ಸವ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಎಸ್ ರಾಮಪ್ಪನವರು ತಿಳಿಸಿದರು. ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರಕ್ಕೆ ಅಕ್ಟೋಬರ್ 07ರಂದು ಗೌರಿಗದ್ದೆಯ ಅರಿವಿನ ಗುರು ಅವದೂತ ಶ್ರೀ ವಿನಯ್ ಗುರೂಜಿ ಆಗಮಿಸಲಿದ್ದು ಅಂಧಕಾರದಿಂದ ಬೆಳಕಿನೆಡೆಗೆ ಎಂಬ ವಿಶೇಷ ಆಶೀರ್ವಚನ ನೀಡಲಿದ್ದಾರೆ. ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ದೇವಿಗೆ ವಿಶೇಷ ಪೂಜೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನವರಾತ್ರಿ ಹಿನ್ನೆಲೆಯಲ್ಲಿ…