ದಲಿತ ರೈತರ ಮೇಲೆ ಅರಣ್ಯಾಧಿಕಾರಿಗಳಿಂದ ಹಲ್ಲೆ : ಗ್ರಾಮಸ್ಥರಿಂದ ತೀವ್ರ ಪ್ರತಿಭಟನೆ:
ಶಿವಮೊಗ್ಗ: ದರಕಾಸ್ತಿನಿಂದ ದಲಿತರಿಗೆ ಮಂಜೂರಾಗಿದ್ದ ಜಮೀನನ್ನು ವಶಕ್ಕೊಪ್ಪಿಸಲು ಬಿಡದ ಅರಣ್ಯಾಧಿಕಾರಿಗಳ ಅಧಿಕಾರಿಗಳು ದೌರ್ಜನ್ಯ ನಡೆಸಿ ಹಲ್ಲೆ ಮಾಡಿದ್ದಲ್ಲದೇ ನಾಲ್ವರ ಮೇಲೆ ಏಳೆಂಟು ಸುಳ್ಳು ಮೊಕದ್ದಮೆ ದಾಖಲಿಸಿರುವ ಬಗ್ಗೆ ತಾಲೂಕಿನ ದೇವಕಾತಿಕೊಪ್ಪ ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಇಂದು ಮದ್ಯಾಹ್ನದಿಂದ ಪ್ರತಿಭಟನೆಗಿಳಿದಿದ್ದಾರೆ. ದೇವಕಾತಿಕೊಪ್ಪ ಹೊರವಲಯದ ಸರ್ವೇ ನಂ115ರಿಂದ 126ರ ವರೆಗಿನ ಭೂಮಿಯಲ್ಲಿ 12ದಲಿತರಿಗೆ 1979ರಲ್ಲಿ ಅಂದಿನ ಸರ್ಕಾರ ತಲಾ 2ಎಕರೆಯಂತೆ 24 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಕಂದಾಯ ಇಲಾಖೆ ಈ ಭೂಮಿಗೆ ಪಹಣಿ ಹಾಗೂ ಖಾತೆ ಮಾಡಿ…