ಆರಗ ಬಳಿ ಮೃತದೇಹ ಸಮೇತ ಕಾರು ಸುಟ್ಟ ಪ್ರಕರಣ : ಮೃತ ವ್ಯಕ್ತಿಯ ಪತ್ನಿ ಸೇರಿ ಐವರ ಬಂಧನ
ತೀರ್ಥಹಳ್ಳಿ : ತಾಲೂಕಿನ ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರು ಮತ್ತು ಅಸ್ಥಿ ಪಂಜರ ಪತ್ತೆಯಾಗಿದ್ದ ಪ್ರಕರಣಕ್ಕೆ ಈಗ ರೋಚಕ ಟ್ವಿಸ್ಟ್ ಸಿಕ್ಕಿದೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಕೊಲೆಗಾರರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಮೃತನನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ವಿನೋದ್ ಅವರನ್ನು ಮನೆಯಲ್ಲಿಯೇ ಆತನ ಪತ್ನಿ ಮತ್ತು ಸಹಚರರು ಕೊಲೆಗೈದು ಮಿಟ್ಲಗೋಡು ಕಾಡಿನಲ್ಲಿ ಕಾರು ನಿಲ್ಲಿಸಿ ಬೆಂಕಿ ಹಚ್ಚಿರುವುದು ತನಿಖೆಯಿಂದ ಬೆಳಕಿಗೆ ಬಂದಿದೆ. ಸುಟ್ಟ ಕಾರು,…