ಹಣಗೆರೆಕಟ್ಟೆ : ತಹಶೀಲ್ದಾರ್ ಆದೇಶ ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ : ಸ್ಥಳೀಯರಿಂದಲೇ ವಾಹನ ತಪಾಸಣೆ
ತೀರ್ಥಹಳ್ಳಿ : ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನಿಷೇಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದರೂ ಅದನ್ನು ಉಲ್ಲಂಘಿಸಿ ಧಾರ್ಮಿಕ ಕ್ಷೇತ್ರದಲ್ಲಿ ಪ್ರಾಣಿ ಬಲಿ ನೀಡಲು ಬಂದ ಭಕ್ತರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯ ಕ್ಷೇತ್ರದಲ್ಲಿ ನಡೆದಿದೆ. ಹಣಗೆರೆಗೆ ರಸ್ತೆಯಲ್ಲಿ ಗ್ರಾಮಸ್ಥರು ತಪಾಸಣೆ ಆರಂಭಿಸಿದ್ದಾರೆ. ಪ್ರತಿ ವಾಹನವನ್ನು ತಡೆದು ಪರಿಶೀಲಿಸುತ್ತಿದ್ದಾರೆ. ವಾಹನದಲ್ಲಿ ಅಡುಗೆ ವಸ್ತುಗಳು, ಕೋಳಿ, ಕುರಿ ಇದ್ದರೆ ಅವುಗಳನ್ನು ವಶಕ್ಕೆ ಪಡೆದು, ಭಕ್ತರನ್ನು ಮಾತ್ರ ದೇವಸ್ಥಾನಕ್ಕೆ ಬಿಡುತ್ತಿದ್ದಾರೆ. ದೇಗುಲಕ್ಕೆ ತೆರಳಿ ಹಿಂತಿರುಗಿದ ಬಳಿಕ…


