Headlines

ವಸತಿ ಗೃಹಗಳಿಗೆ ಮೂಲಭೂತ ಸೌಲಭ್ಯ ಕಲ್ಪಿಸಲು 7.61ಕೋಟಿ ರೂ ಕ್ರಿಯಾ ಯೋಜನೆಗೆ ಅನುಮೋದನೆ : ಸಚಿವ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ : ಗೋಪಿಶೆಟ್ಟಿಕೊಪ್ಪ ಮತ್ತು ಗೋವಿಂದಾಪುರದಲ್ಲಿ ನಿರ್ಮಿಸಲಾಗುತ್ತಿರುವ ಜಿ ಪ್ಲಸ್ 2 ವಸತಿಗೃಹಗಳಿಗೆ ಮೂಲಸೌಲಭ್ಯ ಕಲ್ಪಿಸಲು 7.61 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನಗರೋತ್ಥಾನ (ಹಂತ 3) ಅನುದಾನದಲ್ಲಿ 100ಕೋಟಿ ರೂ. ಮಂಜೂರಾಗಿದ್ದು, 92.39 ಕೋಟಿ ರೂ. ವೆಚ್ಚ ಮಾಡಲಾಗಿದೆ. ಬಾಕಿ ಉಳಿದಿರುವ ಮೊತ್ತವನ್ನು ಮಾರ್ಗಸೂಚಿ ಪ್ರಕಾರ ವೆಚ್ಚ ಮಾಡಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ…

Read More

ಸೊರಬ: ತೀ ನಾ ಶ್ರೀನಿವಾಸ್ ಹೇಳಿಕೆಗೆ ಬಿಜೆಪಿ ಖಂಡನೆ

ಸೊರಬ: ಕಾಂಗ್ರೆಸ್ ಮುಖಂಡ ತೀನಾ ಶ್ರೀನಿವಾಸ್ ರವರು ನೀಡಿರುವ ಸೊರಬದಲ್ಲಿ ರೈತರನ್ನು ಒಕ್ಕಲೆಬ್ಬಿಸಲಾಗುತ್ತಿದೆ ಎಂಬ ಹೇಳಿಕೆಯನ್ನು ಖಂಡಿಸಿ ಸೊರಬ ಬಿಜೆಪಿ ಮುಖಂಡರು ಇಂದು ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು.  ಈ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಗರ್ ಹುಕುಂ ಸಮಿತಿಯ ಸದಸ್ಯರಾದ ದೇವೇಂದ್ರಪ್ಪ ಚನ್ನಾಪುರ ಅವರು ಸಾಗರದ ಕಾಂಗ್ರೆಸ್ ಮುಖಂಡರಾದ ತೀ ನಾ ಶ್ರೀನಿವಾಸ್ ರವರು ಸೊರಬ ತಾಲ್ಲೂಕಿನ ಬಗರ್ ಹುಕುಂ ಸಮಸ್ಯೆಯನ್ನು ಸಂಪೂರ್ಣವಾಗಿ ಪರಿಹರಿಸಿ ಬಿಡುತ್ತೇನೆ ಎಂಬ ವಿಚಾರವಾಗಿ  ಸೊರಬ ತಾಲ್ಲೂಕಿನ ಎಣ್ಣೆಕೊಪ್ಪ ಗುಡ್ಡೇಕೊಪ್ಪ ಹಾಯಾ ಬೆಟ್ಟದಕೂರ್ಲಿ ಸಿದ್ದಿಹಳ್ಳಿ …

Read More

ಪ್ರಧಾನಿಗೆ ಪೋಸ್ಟ್ ಕಾರ್ಡ್ ನಲ್ಲಿ ಪತ್ರ ಬರೆದು ಯುವಕಾಂಗ್ರೆಸ್ ವತಿಯಿಂದ ಅಂಚೆಕಚೇರಿ ಎದುರು ಬೃಹತ್ ಪ್ರತಿಭಟನೆ:

ಶಿವಮೊಗ್ಗ: ಜಿಲ್ಲೆಯಲ್ಲಿ ಸಾವಿರಾರು ಜನರಿಗೆ ಅನ್ನಕ್ಕೆ ದಾರಿದೀಪವಾಗಿದ್ದ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಗಳನ್ನ ಸರ್ಕಾರಿ ಖಾಸಗಿಯವರಿಗೆ ನೀಡಲು ಮುಂದಾಗಿದೆ ಈಗಾಗಲೆ ಇದನ್ನ ನಂಬಿಕೊಂಡಿದ್ದ ಸಾವಿರಾರು ಬಡಕಾರ್ಮಿಕರ ಕುಟುಂಭ ಬೀದಿಗೆ ಬಿದ್ದಿದೆ. ಈ ಕಾರಣ ಇದನ್ನ ಸರ್ಕಾರ ಪುನಸ್ಚೇತನ ಗೊಳಿಸುವುದರ ಬದಲೂ ಖಾಸರಿಗಯವರಿಗೆ ನೀಡುವು ಹುನ್ನಾರ ನಡೆಸಿದೆ. ಈ ಕೆಲಸವನ್ನ ಕೂಡಲೇ ಕೈ ಬಿಡಬೇಕು ಹಾಗೂ ವಿ.ಐ.ಎಸ್.ಎಲ್‌ ಹಾಗೂ ಎಂ.ಪಿ.ಎಂ ಕಾರ್ಖಾನೆಯನ್ನ ಉಳಿಸಬೇಕಿದೆ ಎಂದು ಒತ್ತಾಯಿಸಿ ಇಂದು ಯುವ ಕಾಂಗ್ರೆಸ್‌ ಮುಖಂಡ ಗಣೇಶ್‌ ನೇತೃತ್ವದಲ್ಲಿ ಪತ್ರಚಳುವಳಿಯನ್ನ ನಡೆಸಲಾಯಿತ್ತು. ಇಂದು…

Read More

ಚಂದ್ರಗುತ್ತಿ: ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹ

ಚಂದ್ರಗುತ್ತಿ:  ಅಂಗನವಾಡಿ ಕೇಂದ್ರದಲ್ಲಿ ಮಾತೃ ವಂದನಾ ಮತ್ತು ಪೌಷ್ಟಿಕ ಆಹಾರ ಸಪ್ತಾಹವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಪಿ ರತ್ನಾಕರ್ ಉದ್ಘಾಟನೆ ಮಾಡಿದರು. ಪೌಷ್ಟಿಕ ಆಹಾರದ ಬಳಕೆ ಹಾಗೂ ಉಪಯೋಗದ ಬಗ್ಗೆ ಮಾತನಾಡಿದ ಚಂದ್ರಗುತ್ತಿ ಸರ್ಕಾರಿ ಆಸ್ಪತ್ರೆಯ ನರ್ಸ್  ಮಲ್ಲಮ್ಮ ನುಗ್ಗೆ ಸೊಪ್ಪು ಪೇರಳೆ ಹಣ್ಣು ಕರಿಬೇವಿನ ಸೊಪ್ಪು ಲಿಂಬೆ ಹಾಗೂ ಏಕದಳ ದಾನ್ಯ ದ್ವಿದಳ ದಾನ್ಯ ಹಾಗೂ ಅಯೋಡಿನ್ ಯುಕ್ತ ಉಪ್ಪನ್ನೇ ಬಳಸಿ ಎಂದು  ಇವುಗಳ ಮಹತ್ವ ತಿಳಿಸಿದರು ನಂತರ ಮಾತನಾಡಿದ ಶಿಶು ಅಭಿವೃದ್ಧಿ ಅಧಿಕಾರಿ…

Read More

ಗಣೇಶ ಚತುರ್ಥಿ ಆಚರಣೆ ಮಾರ್ಗಸೂಚಿಗೆ ಶಿವಮೊಗ್ಗದ ಹಿಂದೂಪರ ಸಂಘಟನೆಗಳಿಂದ ತೀವ್ರ ವಿರೋಧ:

ಶಿವಮೊಗ್ಗ: ರಾಜ್ಯದಲ್ಲಿ ಕೋವಿಡ್ ಮೂರನೇ ಅಲೆಯ ಆತಂಕ ಹಿನ್ನೆಲೆಯಲ್ಲಿ ಸರ್ಕಾರವು ಗಣಪತಿ ಹಬ್ಬ ಆಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ತಜ್ಞರ ಸಲಹೆ ಸೂಚನೆ ಮೇರೆಗೆ ಕೆಲ ನಿರ್ಬಂಧ ವಿಧಿಸಲಾಗಿದೆ. ಆದರೆ, ಶಿವಮೊಗ್ಗದಲ್ಲಿ ಸರ್ಕಾರದ ಮಾರ್ಗಸೂಚಿಗೆ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಮನೆ, ದೇವಸ್ಥಾನ, ಸರ್ಕಾರಿ ಹಾಗೂ ಖಾಸಗಿ ಸಾರ್ವಜನಿಕ ಬಯಲು ಪ್ರದೇಶದಲ್ಲಿ ಗಣೇಶ ಪ್ರತಿಷ್ಠಾಪಿಸಿ, ಕನಿಷ್ಠ ಸಂಖ್ಯೆಯ ಜನರೊಂದಿಗೆ ಹಬ್ಬ ಅಚರಿಸಲು ಸರ್ಕಾರ ಸೂಚಿಸಿದೆ. ಇದರ ಜೊತೆಗೆ ನಗರ ಭಾಗದಲ್ಲಿ ವಾರ್ಡ್​ಗೆ ಒಂದು ಗಣೇಶನ ಪ್ರತಿಷ್ಠಾಪನೆಗೆ ಸರ್ಕಾರ…

Read More

ಸಾಕು ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ! ಶಿಕ್ಷಕಿಯಿಂದ ಬೆಳಕಿಗೆ ಬಂತು ಪ್ರಕರಣ

ತೀರ್ಥಹಳ್ಳಿ: ಸಾಕು ತಂದೆಯೇ ಅಪ್ರಾಪ್ತ ಮಗಳ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಅಮಾನವೀಯ ಘಟನೆ ತಾಲೂಕಿನ ಗಬಡಿ ಗ್ರಾಮದಲ್ಲಿ ನಡೆದಿದೆ. ಲೈಂಗಿಕ ದೌರ್ಜನ್ಯ ನಡೆಸಿದ ಸಾಕು ತಂದೆ ಮಂಜುನಾಥ್ (36) ಹಾಗು ಮಂಜುನಾಥನ ಸಂಬಂಧಿ ಎದುರುಮನೆ ಯುವಕ ರಾಮು(43) ನನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಘಟನೆಯ ವಿವರ: ಮೊದಲ ಪತ್ನಿ ತೊರೆದಿದ್ದ ಮಂಜುನಾಥ್ ಕೂಲಿ ಕೆಲಸ ಮಾಡುತ್ತಿದ್ದು, ಕೆಲಸ ಮಾಡುವ ಸ್ಥಳದಲ್ಲಿ ಪರಿಚಯವಾದ ವಿಧವೆಯನ್ನು ಮದುವೆಯಾಗಿದ್ದ.ಎರಡನೇ ಪತ್ನಿಗೆ ಹೆಣ್ಣು ಮಗುವಿತ್ತು. ಆ ಅಪ್ರಾಪ್ತ…

Read More

ಬೀದಿ ನಾಯಿಗಳ ಮಾರಣಹೋಮ:: 150ಕ್ಕೂ ಹೆಚ್ಚು ನಾಯಿಗಳ ಜೀವಂತ ಸಮಾಧಿ

ಶಿವಮೊಗ್ಗ: ಸುಮಾರು 150ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಜೀವಂತವಾಗಿ ಹೂತಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಗ್ರಾಮ ಪಂಚಾಯಿತಿಯ ಕಂಬದಾಳು-ಹೊಸೂರು ವ್ಯಾಪ್ತಿಯ ರಂಗನಾಥಪುರದಲ್ಲಿ ನಡೆದಿದೆ.  ತಮ್ಮಡಿಹಳ್ಳಿ ಎಂಪಿಎಂ‌ ಅರಣ್ಯದ ಎಸ್‌ಎಲ್ ನಂಬರ್ 863, 864, 865, 858ರ ಪ್ರದೇಶದಲ್ಲಿ ನಾಯಿಗಳು ಪತ್ತೆಯಾಗಿದ್ದು, ಐದು ದಿನಗಳ ಹಿಂದೆ ನಾಯಿಗಳನ್ನು ಹೂತಿಡಲಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಬೀದಿ ನಾಯಿಗಳನ್ನು ಹಿಡಿದು ಜೀವಂತವಾಗಿ ಹೂತಿಡುವ ವೇಳೆ ನಾಯಿಗಳ ಚೀರಾಟ ಕೇಳಿದೆ. ಈ ಸಂದರ್ಭದಲ್ಲಿ ಶಿವಮೊಗ್ಗ ಎನಿಮಲ್ ರೆಸ್ಕ್ಯೂ ಕ್ಲಬ್​ಗೆ ಗ್ರಾಮದ ಯುವಕರು…

Read More

ಬಿಜೆಪಿ ಕಾರ್ಯಕರ್ತರ ಪಕ್ಷ ಎನ್ನುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ : ಶಾಸಕ ಹರತಾಳು ಹಾಲಪ್ಪ

ರಿಪ್ಪನ್ ಪೇಟೆ : ಬಿಜೆಪಿ ಪಕ್ಷ ಸದೃಢವಾಗಿದ್ದು ಅಭಿವೃದ್ದಿ ಕಾರ್ಯದಲ್ಲಿ ಈ ಹಿಂದಿನ ಸರ್ಕಾರಗಳು ಮಾಡಲಾಗದಷ್ಟು ಅಭಿವೃದ್ದಿಯನ್ನು ಕೇವಲ ಬಿಜೆಪಿ ಸರ್ಕಾರ ತನ್ನ ಅಧಿಕಾರಾವಧಿಯಲ್ಲಿ ಮಾಡಿದೆ. ಎಲ್ಲ ಸಮುದಾಯದ ಅಭಿವೃದ್ದಿಗೆ ಹೆಚ್ಚು ಒತ್ತು ನೀಡಿದೆ ಎಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷರ ನಾಮಫಲಕ ಅನಾವರಣದ ನಿಮಿತ್ತ ಇಂದು ರಿಪ್ಪನ್ ಪೇಟೆ ಹೋಬಳಿಯ ಬೂತ್ ನ ಅಧ್ಯಕ್ಷರುಗಳಿಗೆ ಅಭಿನಂದಿಸಿ ನಾಮಫಲಕ ಅನಾವರಣ ಮಾಡಿದ ಅವರು ಬಿಜೆಪಿಯು “ಕಾರ್ಯಕರ್ತರ ಪಕ್ಷ” ಎನ್ನುವುದು ನಮ್ಮೆಲ್ಲರಿಗೂ ಗೌರವದ…

Read More

ಭದ್ರಾವತಿ: ಕೆಎಸ್ಆರ್ ಟಿಸಿ ನೌಕರ ಆತ್ಮಹತ್ಯೆಗೆ ಶರಣು

ಭದ್ರಾವತಿ : ಕೆಎಸ್ಆರ್ ಟಿಸಿ ನೌಕರರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಹೊಸ ಸಿದ್ದಾಪುರದಲ್ಲಿ ನಡೆದಿದೆ. ಕೆಎಸ್‌ಆರ್ ಟಿಸಿ ಚಾಲಕ ಗಂಗಾಧರ್ (46) ಎಂಬವರೇ ನೇಣಿಗೆ ಶರಣಾದ ವ್ಯಕ್ತಿ. ಹೊಸ ಸಿದ್ದಾಪುರದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ನೇಣಿಗೆ ಕೊರಳೊಡ್ಡುವ ಮುನ್ನ ಗಂಗಾಧರ್ ತಾನೇ ಹೂವಿನ ಹಾರ ಹಾಕಿಕೊಂಡಿದ್ದಾರೆ. ಹಾರದ ಜೊತೆಗೆ ಹೊಸ ಶರ್ಟ್ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕುಂಸಿ : ಅಪರಿಚಿತ ವ್ಯಕ್ತಿಯ ಶವ : ವಾರಸುದಾರರ ಪತ್ತೆಗೆ ಮನವಿ

ಶಿವಮೊಗ್ಗ:: ತಾಲ್ಲೂಕಿನ ಹಾರನಹಳ್ಳಿ ಸಂತೆ ಮೈದಾನದ ಬಳಿ ಸುಮಾರು 50 ರಿಂದ 55 ವರ್ಷ ವಯಸ್ಸಿನ ವ್ಯಕ್ತಿಯ ಶವ ಪತ್ತೆಯಾಗಿದ್ದು, ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹ ಇಡಲಾಗಿದೆ.     ಅಪರಿಚಿತ ವ್ಯಕ್ತಿಯು ಸುಮಾರು 5.4 ಅಡಿ ಎತ್ತರ ಇದ್ದು, ಬಿಳಿ ಮತ್ತು ಕಪ್ಪುಮಿಶ್ರಿತ ಗಡ್ಡ ಇರುತ್ತದೆ. ತಲೆಯಲ್ಲಿ 2 ಇಂಚು ಉದ್ದನೆಯ ಕಪ್ಪು ಮಿಶ್ರತ ಬಿಳಿ ಕೂದಲಿದ್ದು, ನೀಲಿ ಬಣ್ಣದ ಬಿಳಿ ಗೆರೆಯಿರುವ ತುಂಬು ತೋಳಿನ ಶರ್ಟ್ ಧರಿಸಿರುತ್ತಾರೆ. ಒಂದು ಸಿಮೆಂಟ್ ಮಿಶ್ರಿತ ಕೆಂಪು ಬಣ್ಣದ…

Read More