Headlines

ಮಾಜಿ ಸಿಎಂ ಬಿಎಸ್​ವೈ ಒಡೆತನದ ಕಾಲೇಜು ಬಸ್​ಗಳಲ್ಲಿ ಡೀಸೆಲ್​ ಕದ್ದಿದ್ದ ಕಳ್ಳರ ಬಂಧನ

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಒಡೆತನದ ಖಾಸಗಿ ಕಾಲೇಜಿನ ನಾಲ್ಕು ಬಸ್ಸುಗಳಲ್ಲಿ 580 ಲೀಟರ್ ಡೀಸೆಲ್​ ಕಳ್ಳತನ ಮಾಡಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಕಳ್ಳತನ ಪ್ರಕರಣ ಬೆನ್ನತ್ತಿದ್ದ ವಿನೋಬಾನಗರ ಪೊಲೀಸರು ಟಿಪ್ಪುನಗರದ ಸೈಯದ್ ತಬರೇಕ್ (24)ಹಾಗೂ ಸೈಯದ್ ಜಾಫರ್ (24) ಎಂಬಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 90 ಲೀಟರ್ ಡೀಸೆಲ್​ ಹಾಗೂ ಕಳ್ಳತನಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ. *ಘಟನೆ ವಿವರ :* ಶಿವಮೊಗ್ಗದ ಸೋಮಿನಕೊಪ್ಪದ ಮೈತ್ರಿ ಅಪಾರ್ಟ್​ಮೆಂಟ್ ಬಳಿ…

Read More

ರಿಪ್ಪನ್ ಪೇಟೆ: ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ :ಬೈಕ್ ಸವಾರನ ಸ್ಥಿತಿ ಗಂಭೀರ

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯ ಜ್ಯೋತಿ ಮಾಂಗಲ್ಯ ಮಂಟಪ್ಪದ ಬಳಿಯಲ್ಲಿ ಬೈಕ್ ಹಾಗೂ ಕಾರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರನಿಗೆ ತೀವ್ರವಾದ ಪೆಟ್ಟಾಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆ ಮಾಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ರಿಪ್ಪನ್ ಪೇಟೆ ಮಾರ್ಗದಿಂದ ಬರುತ್ತಿದ್ದ ಮಾರುತಿ ಆಲ್ಟೋ ಕಾರ್ ತೀರ್ಥಹಳ್ಳಿ ಮಾರ್ಗದಿಂದ ಬರುತ್ತಿದ್ದ ಸ್ಕೂಟಿ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಜ್ಜುಗುಜ್ಜಾಗಿದ್ದು ಸ್ಕೂಟಿ ಸವಾರ ಮುಸ್ತಾಫಾ ಗೆ ತೀವ್ರತರನಾದ…

Read More

ಭದ್ರಾವತಿ : ಈಜಲು ಅಣೆಕಟ್ಟೆಗೆ ಹೋದ ಇಬ್ಬರು ಕಾಲೆಜು ವಿದ್ಯಾರ್ಥಿಗಳು ಸಾವು

ಭದ್ರಾವತಿ ಸಮೀಪದ ಗೊಂದಿ ಅಣೆಕಟ್ಟೆಯಲ್ಲಿ ಈಜಲು ಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವು ಕಂಡ ಹೃದಯ ವಿದ್ರಾವಕ ಘಟನೆ ಇಂದು ಮಧ್ನಾಹ್ನ ಗೊಂದಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ಗಾಡಿಕೊಪ್ಪ ಹಾಗೂ ಕೊಮ್ಮನಾಳ್‌ ಗ್ರಾಮದ ಕಿರಣ್‌ ಹಾಗೂ ಶಶಾಂಕ್‌ (19 ವರ್ಷ) ಎಂಬುವರೇ ಸಾವು ಕಂಡ ನತದೃಷ್ಟ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ. ಶಿವಮೊಗ್ಗದ ಎಡುಕೇರ್‌ ಕಾಲೇಜಿನಲ್ಲಿ ಪ್ರಥಮ ಬಿ.ಕಾಂ ವ್ಯಾಸಾಂಗ ಮಾಡುತ್ತಿದ್ದ ಈ ನತದೃಷ್ಟರು ಸ್ನೇಹಿತರೊಂದಿಗೆ ಗೊಂದಿ ಗ್ರಾಮದಲ್ಲಿರುವ ನೈಸರ್ಗಿಕ ಸೊಬಗನ್ನು ನೋಡಲು ಬಂದಿದ್ದಾರೆ, ಒಟ್ಟು ಐವರು ಕಾಲೇಜು ವಿದ್ಯಾರ್ಥಿಗಳಲ್ಲಿ…

Read More

ರಿಪ್ಪನ್ ಪೇಟೆ : ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಹಸುಗೂಸು : ಸಹಾಯಕ್ಕಾಗಿ ಯಾಚನೆ

ರಿಪ್ಪನ್ ಪೇಟೆ :ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದೆ. ಸದ್ಯ ಮಗುವಿಗೆ ಶಿವಮೊಗ್ಗದ ಸರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಲಕ್ಷಾಂತರ ರೂ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದೆ. ಈ ಕುಟುಂಬದಲ್ಲಿ  ಲಕ್ಷಾಂತರ ವೆಚ್ಚ ಪಾವತಿಸಲು…

Read More

ಅರ್ಧ ಲಕ್ಷ ರೂ. ದಾಟಿದ ಕೆಂಪಡಕೆ ದರ, ಹಬ್ಬಕ್ಕೂ ಮುನ್ನ ಅಡಕೆ ಬೆಳೆಗಾರರಿಗೆ ಭರ್ಜರಿ ಗಿಫ್ಟ್‌!

ಶಿವಮೊಗ್ಗ : ನಗರದ ಅಡಿಕೆ ಮಾರುಕಟ್ಟೆಯಲ್ಲಿ ಕೆಂಪಡಿಕೆ ಶುಕ್ರವಾರ ಪ್ರತಿ ಕ್ವಿಂಟಲ್‍ಗೆ ಸರಾಸರಿ ₹51 ಸಾವಿರ ದರ ಕಂಡಿದೆ. ಗಣೇಶ ಚತುರ್ಥಿ ಸಮೀಪಿಸುತ್ತಿದ್ದಂತೆ ಅಡಿಕೆ ದರ ಗಗನಮುಖಿಯಾಗಿರುವುದು ರೈತರಲ್ಲಿ ಸಂತಸ ಮೂಡಿಸಿದೆ. ಹೆಚ್ಚಿದ ದರದಿಂದಾಗಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಹೆಚ್ಚುತ್ತಿದೆ. ಅತೀ ಹೆಚ್ಚು ಅಡಿಕೆ ಬೆಳೆಯುವ ಹೊಸನಗರ,ತೀರ್ಥಹಳ್ಳಿ, ಸಾಗರ ಬಾಗದ ರೈತರ ಮನೆಯಲ್ಲಿ ಹಬ್ಬದ ವಾತಾವರಣವಾಗಿದೆ. ಕಳೆದ ಕೆಲ ತಿಂಗಳಿನಿಂದ ₹40 ಸಾವಿರ ಆಸುಪಾಸಿನಲ್ಲಿ ಅಡಿಕೆ ಖರೀದಿ ಆಗುತ್ತಿತ್ತು. ನಾಲ್ಕು ದಿನಗಳ…

Read More

ಸೊರಬ: ಚಲಿಸುತ್ತಿದ್ದಾಗ ಧಗ ಧಗನೇ ಹೊತ್ತಿ ಉರಿದ ಕಾರು

ಸೊರಬ :  ತಾಲೂಕಿನ ಚಿಕ್ಕಚೌಟಿಯಿಂದ ಆನವಟ್ಟಿಗೆ ಹೊರಟಿದ್ದ ಮಾರುತಿ ಸ್ವಿಫ್ಟ್ ಡಿಸೈರ್  ಕಾರಿನಲ್ಲಿ ದಟ್ಟನೆ ಹೊಗೆ ಕಾಣಿಸಿಕೊಂಡಿದೆ. ರಾಜು ಎಂಬುವರು ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದು ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿದ್ದಾರೆ. ನಿಲ್ಲಿಸಿದ ಕ್ಷಣ ಮಾತ್ರದಲ್ಲಿ ಇಡೀ ವಾಹನಕ್ಕೆ ಧಗ್ಗನೇ ಬೆಂಕಿ ಹೊತ್ತಿಕೊಂಡಿದೆ. ಧಗ ಧಗನೇ ಬೆಂಕಿಗೆ ವಾಹನ ಸಂಪೂರ್ಣ ಹೊತ್ತಿ ಉರಿದಿದೆ. ಅಕ್ಕ ಪಕ್ಕದ ತೋಟದ ಮನೆಯವರು ಬಂದು ಬೆಂಕಿ ಆರಿಸಲು ಯತ್ನಿಸಿದ್ದಾರೆ. ಚಲಿಸುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್‌ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಮೊದಲಿಗೆ ಬ್ಯಾನೆಟ್ ನಲ್ಲಿ…

Read More

ರಿಪ್ಪನ್ ಪೇಟೆಯಲ್ಲಿ ನಿರ್ಮಾಣವಾಗುತ್ತಿದೆ ನೂತನ ಸಾರ್ವಜನಿಕ ಹೈಟೆಕ್ ಶೌಚಾಲಯ:

ರಿಪ್ಪನ್ ಪೇಟೆ: ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ಸುಮಾರು ಹದಿನೈದು ಲಕ್ಷ ರೂಪಾಯಿ ಅನುದಾನದಲ್ಲಿ ನೂತನ ಹೈಟೆಕ್ ಶೌಚಾಲಯ ನಿರ್ಮಾಣಕ್ಕೆ ಸಿದ್ದವಾಗುತ್ತಿದ್ದು ಶೀಘ್ರದಲ್ಲಿ ಅತ್ಯಾಧುನಿಕ ಸುಸಜ್ಜಿತ ಶೌಚಾಲಯ ಸಾರ್ವಜನಿಕರ ಉಪಯೋಗಕ್ಕೆ ಮುಕ್ತವಾಗುತ್ತದೆ.ಈ ಹಿಂದೆ ಇದ್ದ ಶಿಥಿಲಗೊಂಡಿದ್ದ ಕಟ್ಟಡವನ್ನು ನೆಲಸಮಗೊಳಿಸಲಾಗಿದೆ.      { ….ನೂತನ ಹೈಟೆಕ್ ಶೌಚಾಲಯದ ನೀಲನಕ್ಷೆ…} ಸುತ್ತಮುತ್ತ ನೂರಾರು ಹಳ್ಳಿಗಳ  ಕೇಂದ್ರ ಬಿಂದುವಾಗಿರುವ ರಿಪ್ಪನ್ ಪೇಟೆಯಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿದ್ದ ಹಳೆಯ ಸಾರ್ವಜನಿಕ ಶೌಚಾಲಯ ಪಾಳು ಬಿದ್ದು ಸರಿಯಾದ ನಿರ್ವಹಣೆ ಇಲ್ಲದೆ ಶಿಥಿಲಾವಸ್ಥೆಯಲ್ಲಿದ್ದು…

Read More

ಶಿಕಾರಿಪುರದ ತಾಲೂಕ್ ಕ್ರೀಡಾಂಗಣದ ನೂತನ ಜಿಮ್ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ.

ಶಿಕಾರಿಪುರದ ವಿವಿಧ ಸಮಾರಂಭದಲ್ಲಿ ಭಾಗವಹಿಸಿದ ಶಿವಮೊಗ್ಗ ಸಂಸದ ಬಿ ವೈ ರಾಘವೇಂದ್ರ,ಇಂದು ಶಿಕಾರಿಪುರದ ತಾಲೂಕು ಕ್ರೀಡಾಂಗಣದಲ್ಲಿ ನೂತನವಾಗಿ ಆರಂಭವಾಗುತ್ತಿರುವ ಮಲ್ಟಿ ಜಿಮ್ ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಮಾತಾನಾಡಿದ ಸಂಸದ ಬಿ ವೈ ರಾಘವೇಂದ್ರ ಈ ಸುಸಜ್ಜಿತ ವ್ಯಾಯಾಮ ಶಾಲೆಯ ಉಪಯೋಗವನ್ನು ನಗರದ ಯುವಕರು ಪಡೆದುಕೊಳ್ಳಬೇಕು. ಯುವ ಶಕ್ತಿಯೇ ರಾಷ್ಟ್ರದ ಶಕ್ತಿ, ಯುವಜನತೆ ಸದೃಢರಾದರೆ ದೇಶವು ಎಂದಿಗೂ ಸದೃಢ.ದೇಶದ ಜನ ದೇಹವನ್ನು ಬಲಿಷ್ಠವಾಗಿ ಹಾಗು ಆರೋಗ್ಯಕರವಾಗಿ ಇದ್ದರೆ ಯಾವ ಅರೋಗ್ಯದ ಸಮಸ್ಯೆ ಇಲ್ಲದೆ ಬದುಕಬಹುದು ಎಂದು ಹೇಳಿದರು. ಶಿವಮೊಗ್ಗ…

Read More

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More