ರಿಪ್ಪನ್ ಪೇಟೆ : ದಯಾಮರಣದ ಮೊರೆ ಹೋದ ಎಂಬತ್ತರ ವೃದ್ದೆ :
ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಅರಸಾಳು ಎಂಬಲ್ಲಿ ವಯೋವೃದ್ಧೆಯೋರ್ವರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದು, ಜೀವನ ನಡೆಸಲು ಆಸರೆಯಾಗಬೇಕಿದ್ದ ಪತಿಯು ಇಹಲೋಕ ತ್ಯಜಿಸಿದ್ದಾರೆ. ಒಬ್ಬಂಟಿಯಾಗಿರುವ ಭಾಗ್ಯಲಕ್ಷ್ಮಿ ಎಂಬ ವೃದ್ದೆಯು ಸುಮಾರು 80 ವರ್ಷದವರಾಗಿದ್ದಾರೆ.ಹಳೆಯ ಜೋರಾಗಿ ಮಳೆ ಬಂದರೆ ಬಿದ್ದು ಹೋಗುವಂತಹ ಮನೆಯಲ್ಲಿ ವಾಸಿಸುತ್ತಿದ್ದಾರೆ.ಯಾರೂ ನೆರವಿಗೆ ಬಾರದೇ ಇರುವ ಕಾರಣ ದಯಮರಣಕ್ಕೆ ಸರ್ಕಾರದ ಬಳಿ ಮೊರೆಹೋಗುವತ್ತ ಚಿಂತಿಸಿದ್ದಾರೆ. ತಮ್ಮ ಪತಿಯು ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದು,ಕೆಲವು ಕೌಟುಂಬಿಕ ಸಮಸ್ಯೆಯಿಂದ ಬರಬೇಕಾಗಿದ್ದ ಸರ್ಕಾರದ ಪಿಂಚಣಿ ಹಣ ಈ ವಯೋವೃದ್ದೆಯ ಕೈ ಸೇರುತ್ತಿಲ್ಲ.ಈ ವೃದ್ದೆಯು…


